Homeಮುಖಪುಟಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭ; ನಾಳೆಯಿಂದ ಹೊಸ ಕಟ್ಟಡದಲ್ಲಿ ಕಾರ್ಯಕಲಾಪ..

ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭ; ನಾಳೆಯಿಂದ ಹೊಸ ಕಟ್ಟಡದಲ್ಲಿ ಕಾರ್ಯಕಲಾಪ..

- Advertisement -
- Advertisement -

ಇಂದಿನಿಂದ ಐದು ದಿನಗಳ ಕಾಲ ಸಂಸತ್ತಿನ ‘ಅಮೃತ್ ಕಾಲ’ ಅಧಿವೇಶನ ಆರಂಭವಾಗಲಿದೆ. ಅಧಿವೇಶನದ ಕಾರ್ಯಸೂಚಿಯಲ್ಲಿ ಭಾರತದ ಸಂಸದೀಯ ಪ್ರಜಾಪ್ರಭುತ್ವದ ವಿಕಾಸದ ಚರ್ಚೆಗಳನ್ನು ಒಳಗೊಂಡಿದೆ. ವಿವಾದಾತ್ಮಕ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸೇರಿದಂತೆ ಎಂಟು ಮಸೂದೆಗಳನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ.

ಸಂಸತ್ತಿನ 75 ವರ್ಷಗಳ ಕುರಿತು ಸೋಮವಾರದ ಚರ್ಚೆಯನ್ನು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಪಿಯೂಷ್ ಗೋಯಲ್ ಅವರು ಆರಂಭಿಸುವ ಸಾಧ್ಯತೆಯಿದೆ.

“ಭಾರತದ ಸಂಸತ್ತಿನ ಶ್ರೀಮಂತ ಪರಂಪರೆಯನ್ನು ಸ್ಮರಿಸುವ ಮತ್ತು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪ” ಕಾರ್ಯಕ್ರಮಕ್ಕಾಗಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ, ಸೆಂಟ್ರಲ್ ಹಾಲ್ ನಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸಂಸದರ ಸಭೆಯು ನಡೆಯಲಿದೆ. ಅದರ ನಂತರ ಫೋಟೋ ಸೆಷನ್ ನಡೆಯಲಿದೆ.

ಅಧಿವೇಶನದಲ್ಲಿ ಎಂಟು ಮಸೂದೆಗಳನ್ನು ಮಂಡಿಸಲು ಕೇಂದ್ರವು ಯೋಜಿಸಿದೆ ಆದರೆ ಐದು ದಿನಗಳ ಅಧಿವೇಶನಕ್ಕಾಗಿ ಅಜೆಂಡಾದಲ್ಲಿ ಉಲ್ಲೇಖಿಸದ ವಿಷಯಗಳನ್ನು ಕೇಂದ್ರವು ಕೈಗೆತ್ತಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಸೋಮವಾರ ಸಂಸತ್ತಿನ 75 ವರ್ಷಗಳ ಪಯಣದ ಕುರಿತು ಚರ್ಚೆ ನಡೆಯಲಿದೆ.

ಶಾಸಕಾಂಗ ವ್ಯವಹಾರದಲ್ಲಿ ಉಲ್ಲೇಖಿಸಲಾದ ಮಸೂದೆಗಳಲ್ಲಿ ಒಂದು ಚುನಾವಣಾ ಆಯುಕ್ತರ ನೇಮಕಾತಿಗಾಗಿ ಆಯ್ಕೆ ಸಮಿತಿಯನ್ನು ರಚಿಸುವ ಗುರಿಯನ್ನು ಹೊಂದಿದೆ. ಆದರೆ, ಈ ಮಸೂದೆಯನ್ನು ಕಾರ್ಯಸೂಚಿಯಿಂದ ತೆಗೆದುಹಾಕಲಾಗಿದೆ ಎಂದು ಸೋಮವಾರ ಸುದ್ದಿ ವರದಿಗಳು ತಿಳಿಸಿವೆ.

ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನಿ ನಾಮನಿರ್ದೇಶನ ಮಾಡಿದ ಕೇಂದ್ರ ಸಂಪುಟ ಸಚಿವರನ್ನು ಒಳಗೊಂಡ ಸಮಿತಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದ ಮಸೂದೆಗೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ಹಿರಿಯ ನಾಗರಿಕರ ಕಲ್ಯಾಣ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂಬಂಧಿಸಿದ ಮೂರು ಮಸೂದೆಯನ್ನು ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಎಲ್ಲ ಸದಸ್ಯರಿಗೆ ತಿಳಿಸಲಾಯಿತು.

ಬಿಜು ಜನತಾ ದಳ ಮತ್ತು ಭಾರತ್ ರಾಷ್ಟ್ರ ಸಮಿತಿ ಸೇರಿದಂತೆ ವಿರೋಧ ಪಕ್ಷಗಳು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಂತಹ ಶಾಸನಸಭೆಗಳಲ್ಲಿ ಮಹಿಳೆಯರಿಗೆ ಕೋಟಾವನ್ನು ಖಚಿತಪಡಿಸಿಕೊಳ್ಳಲು ಮಸೂದೆಯನ್ನು ಕೈಗೆತ್ತಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿವೆ. ಭಾನುವಾರ ನಡೆದ ಹೈದರಾಬಾದ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಈ ವಿಷಯದ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದೆ. ಆದರೆ, ಮಸೂದೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಿಲ್ಲ. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸೆಂಟ್ರಲ್ ಹಾಲ್ ನಲ್ಲಿ ಮಂಗಳವಾರದ ಕಾರ್ಯಕ್ರಮದ ನಂತರ, ಸದನವನ್ನು ಹೊಸ ಸಂಸತ್ ಭವನಕ್ಕೆ ಸ್ಥಳಾಂತರಿಸಲಾಗುತ್ತದೆ.

ಇದನ್ನೂ ಓದಿ: ಪ್ರಜಾಪ್ರಭುತ್ವದ ಉಳಿವಿಗೆ ಒಗ್ಗಟ್ಟಾಗಿ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...