Homeಮುಖಪುಟಜಮ್ಮು ಕಾಶ್ಮೀರದಂತೆ ಇನ್ನು ಹತ್ತು ರಾಜ್ಯಗಳಿಗೆ ಈಗಲೂ ವಿಶೇಷ ಸ್ಥಾನಮಾನ ಚಾಲ್ತಿಯಲ್ಲಿದೆ. ನಿಮಗಿದು ಗೊತ್ತೆ?

ಜಮ್ಮು ಕಾಶ್ಮೀರದಂತೆ ಇನ್ನು ಹತ್ತು ರಾಜ್ಯಗಳಿಗೆ ಈಗಲೂ ವಿಶೇಷ ಸ್ಥಾನಮಾನ ಚಾಲ್ತಿಯಲ್ಲಿದೆ. ನಿಮಗಿದು ಗೊತ್ತೆ?

- Advertisement -
- Advertisement -

370ನೇ ಕಲಂ ರದ್ದುಗೊಳಿಸು ಮೂಲಕ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಕಿತ್ತುಹಾಕಿರುವುದು ನಿಮಗೆಲ್ಲ ತಿಳಿದಿರುವ ವಿಚಾರ. ರಾಷ್ಟ್ರಪತಿಯವರ ಆದೇಶದ ಮೂಲಕ ಈ ಕ್ರಮವನ್ನು ಜರುಗಿಸಲಾಗಿದೆ. ಈ ಕ್ರಮ ಸಾಂವಿಧಾನಿಕವೇ ಇಲ್ಲವೇ ಎಂಬುದರ ಕುರಿತು ಸಾಕಷ್ಟು ಚರ್ಚೆಗಳು ಕೇಳಿಬರುತ್ತಿವೆ. ಕೆಲವರು ವಿಶೇಷ ಸ್ಥಾನಮಾನ ರದ್ದು ಮಾಡಿರುವುದಕ್ಕೆ ಭಾರೀ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಇದೇ ಸಮಯದಲ್ಲಿ ಜಮ್ಮು ಕಾಶ್ಮೀರ ಮಾತ್ರವಲ್ಲದೆ ಸಂವಿಧಾನದ ಮೂಲಕ ವಿಶೇಷ ಸ್ಥಾನಮಾನ ಪಡೆದ ಇನ್ನು ಹತ್ತು ರಾಜ್ಯಗಳಿವೆ ಎಂದರೆ ನೀವು ನಂಬಲೇಬೇಕು. ಇದರಲ್ಲಿ ಕೆಲವು ರಾಜ್ಯಗಳಲ್ಲಿ ಸಂಸದೀಯ ಕಾನೂನುಗಳು ಸಹ ನಿಯಂತ್ರಣಕ್ಕೊಳಪಟ್ಟಿವೆ. ಅವುಗಳೆಂದರೆ

ಕಲಂ 371: ಮಹಾರಾಷ್ಟ್ರ ಮತ್ತು ಗುಜರಾತ್

ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದ ರಾಜ್ಯಪಾಲರುಗಳಿಗೆ ಅಭಿವೃದ್ದಿಯ ಬೋರ್ಡ್ ಗಳನ್ನು ನೇಮಕ ಮಾಡುವ ವಿಶೇಷ ಅಧಿಕಾರವಿರುತ್ತದೆ. ವಿದರ್ಭ, ಮರಾಠವಾಡ, ಕಟಕ್ ಈ ರೀತಿಯಾಗಿ ರಚನೆಯಾಗಿರುವ ಕೆಲವು ಪ್ರಾಂತ್ಯಗಳಾಗಿವೆ.

ಕಲಂ 371ಎ: ನಾಗಾಲ್ಯಾಂಡ್

ನಾಗಾ ಜನರ ಧಾರ್ಮಿಕ ಮತ್ತು ಸಾಮಾಜಿಕ ಆಚರಣೆಗಳು, ನಾಗಾ ಕಾನೂನು ಮತ್ತು ಕಾರ್ಯವಿಧಾನ, ನಾಗಾ ಜನರ ಕ್ರಿಮಿನಲ್ ಮತ್ತು ಸಿವಿಲ್ ಕೇಸುಗಳು, ಅವರ ನೈಸರ್ಗಿಕ ಸಂಪತ್ತು ಮತ್ತು ಭೂಮಿಯನ್ನು ಕೊಳ್ಳುವುದು ಮಾರುವುದು ಇಷ್ಟು ವಿಚಾರಗಳಿಗೆ ಪಾರ್ಲಿಮೆಂಟ್ ನ ಕಾನೂನುಗಳು ಅನ್ವಯವಾಗುವುದಿಲ್ಲ. ಇದಕ್ಕೆ ನಾಗಾ ಜನರೇ ರೂಪಿಸಿಕೊಂಡಿರುವ ವಿಶೇಷ ಕಾನೂನುಗಳಿವೆ. ಈ ವಿಷಯಗಳಿಗೆ ಕೇಂದ್ರ ಸರ್ಕಾರದ ಕಾನೂನುಗಳು ಅನ್ವಯವಾಗಬೇಕಾದರೆ ನಾಗಾ ವಿಧಾನಸಭೆಯು ಒಪ್ಪಿ ನಿರ್ಣಯವನ್ನು ಪಾಸು ಮಾಡಬೇಕಿರುವುದು ಅಗತ್ಯವಾಗಿರುತ್ತದೆ.

ಕಲಂ 371ಬಿ: ಅಸ್ಸಾಂ

ಅಸ್ಸಾಂನ ಬುಡಕಟ್ಟು ಜನರಿಂದ ಆಯ್ಕೆಯಾದ ವಿಧಾನಸಭಾ ಸದಸ್ಯರ ಸಮಾಲೋಚನೆಯೊಂದಿಗೆ ಅಸ್ಸಾಂ ವಿಧಾನಸಭೆಯು ಅಲ್ಲಿನ ಬುಡಕಟ್ಟು ಜನರ ಸ್ವಾಯುತ್ತತ್ತೆ ಮತ್ತು ಹಿತಾಸಕ್ತಿಗಾಗಿ ವಿಶೇಷ ಕಾರ್ಯಚಟುವಟಿಕೆಗಳು ಮತ್ತು ಸಂವಿಧಾನವನ್ನು ರೂಪಿಸುವ ಅಧಿಕಾರ ರಾಷ್ಟ್ರಪತಿಯವರಿಗಿರುತ್ತದೆ.

ಕಲಂ 371ಸಿ: ಮಣಿಪುರ

ಇದು ಸಹ ಅಸ್ಸಾಂ ರೀತಿಯ ಅಧಿಕಾರವಾಗಿದೆ

ಕಲಂ 371ಡಿ ಮತ್ತು ಇ: ಆಂಧ್ರ ಪ್ರದೇಶ

ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಆಂಧ್ರ ಪ್ರದೇಶದ ಜನರ ಹಕ್ಕು, ಹಿತಾಸಕ್ತಿಗಳನ್ನು ಕಾಪಾಡಲು, ಅವರಿಗೆ ಸಮಾನ ಅವಕಾಶ ಮತ್ತು ಸೌಲಭ್ಯಗಳನ್ನು ಒದಗಿಸುವ ಉದ್ದೇಶಕ್ಕಾಗಿ ಕಲಂ 371ಡಿಯನ್ನು ಸಂವಿಧಾನಕ್ಕೆ 1974ರಲ್ಲಿ ಸೇರಿಸಲಾಯಿತು. ಇದರಂತೆ ಆಂಧ್ರ ಪ್ರದೇಶವು ಸ್ಥಳೀಯವಾಗಿ ಅಗತ್ಯಕ್ಕನುಗುಣವಾಗಿ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ನೇರ ನೇಮಕಾತಿ ಮಾಡಿಕೊಳ್ಳುವ ಅಧಿಕಾರ ಹೊಂದಿದೆ. ಕಲಂ 371ಇ ಆಂಧ್ರಪ್ರದೇಶವು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವುದಕ್ಕೆ ಪಾರ್ಲಿಮೆಂಟ್ ಅವಕಾಶ ನೀಡುವುದಾಗಿದೆ.

ಕಲಂ 371ಎಫ್: ಸಿಕ್ಕಿಂ

1975ರಲ್ಲಿ ಇದು ಸೇರ್ಪಡೆಯಾಯಿತು. ಇದರಂತೆ ಸಿಕ್ಕಿಂ ವಿಧಾನಸಭೆಯ ಸದಸ್ಯರ ಸಂಖ್ಯೆ 30ಕ್ಕಿಂತ ಕಡಿಮೆ ಇರಬಾರದು. ಸಿಕ್ಕಿಂ ನಲ್ಲಿರುವ ವಿವಿಧ ಗುಂಪುಗಳನ್ನು ಒಳಗೊಳ್ಳುವುದು ಮತ್ತು ವಿವಿಧ ಜನವಿಭಾಗಗಳಿಗೆ ಅವಕಾಶ ನೀಡುವುದಕ್ಕಾಗಿ ಈ ವಿಶೇಷ ಸ್ಥಾನಮಾನ ನೀಡಲಾಗಿದೆ.

ಕಲಂ 371ಜಿ: ಮಿಝೋರಾಂ

ಇದು ಕಲಂ 371ಎ ನಾಗಾಲ್ಯಾಂಡ ನಂತೆಯೂ ಮಿಝೋರಾಂ ನ ಜನತೆಗೂ ಅನ್ವಯಿಸುತ್ತವೆ.

ಕಲಂ 371ಎಚ್: ಅರುಣಚಲಪ್ರದೇಶ

ಇದು ಅಲ್ಲಿನ ಗವರ್ನರ್ ಗೆ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ವಿಶೇಷ ಅಧಿಕಾರವಿರುತ್ತದೆ. ಇದರನ್ವಯ ಇವರು ಅಲ್ಲಿನ ಮುಖ್ಯಮಂತ್ರಿಯ ನಿರ್ಧಾರಗಳನ್ನು ತಳ್ಳಿಹಾಕುವ ಅಧಿಕಾರ ಗವರ್ನರ್ ಗೆ ಇರುತ್ತದೆ.

ಕಲಂ 371ಐ: ಗೋವಾ

ಇದರಂತೆ ಗೋವಾ ವಿಧಾನಸಭೆಯ ಸದಸ್ಯರ ಸಂಖ್ಯೆ 30ಕ್ಕಿಂತ ಕಡಿಮೆ ಇರಬಾರದು.

ಕಲಂ 371ಜೆ: ಕರ್ನಾಟಕ

ಕಲಂ 371ಜೆ ಯು ಹೈದರಾಬಾದ್ ಕರ್ನಾಟಕದ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನವನ್ನು ನೀಡುತ್ತದೆ. ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಿಗಿರುವಂತೆ ಅಭಿವೃದ್ದಿಯ ಬೋರ್ಡ್ ಗಳನ್ನು ನೇಮಕ ಮಾಡುವ ವಿಶೇಷ ಅಧಿಕಾರವಿರುತ್ತದೆ. ಜೊತೆಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸ್ಥಳೀಯರಿಗೆ ಮೀಸಲಾತಿಯನ್ನು ಒದಗಿಸುತ್ತದೆ.

ಕೃಪೆ: ಲೈವ್ ಲಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

8 COMMENTS

  1. Nanu Gouri anta heli En Eno madoke ready ansute Gouri MadaM idare IdeLa Madta idaro ila adare avara name nali Matra En eno Barta ide Yardo name use Madodakinta Nanu mUrty anta use madi article publishe madi

    370 and 371J diffraction Enu anta frst odi amele Anuvad madi Sumane advertisement GE Madodu beda

  2. ಜಮ್ಮು ಕಾಶ್ಮೀರದಂತೆ ಇನ್ನು ಹತ್ತು ರಾಜ್ಯಗಳಿಗೆ ಈಗಲೂ ವಿಶೇಷ ಸ್ಥಾನಮಾನ DIFFERENCE ಪಟ್ಟಿ ಮಾಡಿ ?

  3. Hello Nanu Gouri
    HYDRABADA KARNTAKA DAILY ? HAKOLA
    ARMY ILAA YAVAGA BEKADRU HOGI BARBHUDU. KARNATAK DALI ILWA NIVU
    370 J YAKE ವಿಶೇಷ ಸ್ಥಾನಮಾನವನ್ನು Nididevi anta Gota Banaglre nali idare gotagola HK Hogi bani

    • Neevu heluva tharada vishesha sthaanamaana innoo halavaaru bhaagagalige kottiddaare. Aadare illi idee raajyakke vishesha sthaanamaana neediruvudu – bereyavaru aasti kolluva haagilla tharaddu, adara bagge bareyalaagide.

  4. ಜಮ್ಮು ಕಾಶ್ಮೀರಕ್ಕೆ ಇದ್ದ 370 ಕಾಯ್ದೆಗೂ ಇತರ ರಾಜ್ಯಗಳಿಗೆ ಇರುವ ಇದೇ ಕಾಯ್ದೆಯ ಸಬ್ ಕಾಯ್ದೆಗಳಿಗೂ ಬಹಳ ವ್ಯತ್ಯಾಸವಿದೆ.ಹಾಗೂ ಈ ಕಾಯ್ದೆಯನ್ನು ಜಮ್ಮು ವಿನಲ್ಲಿ ಕೆಲವು ರಾಜಕೀಯ ಪಕ್ಷಗಳು&ಕುಟುಂಬ ಗಳು ದುರುಪಯೋಗ ಮತ್ತು ಸ್ವಾರ್ಥ ಕ್ಕಾಗಿ ಬಳಸಿಕೊಂಡು, ಪಾಕ್ ಕುತಂತ್ರ ಗಳಿಗೆ ಹಾಗೂ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡಿದ್ದರಿಂದ ಕಾಯ್ದೆ ರದ್ದು ಮಾಡಲು ಕಾರಣವಾಯಿತು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...