HomeUncategorizedದೆಹಲಿ ಗಲಭೆ ಪ್ರಕರಣ: ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀನಾಮೆ

ದೆಹಲಿ ಗಲಭೆ ಪ್ರಕರಣ: ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀನಾಮೆ

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ 2020ರ ಫೆಬ್ರವರಿಯಲ್ಲಿ ನಡೆದ ಕೋಮು ಹಿಂಸಾಚಾರ ಪ್ರಕರಣಗಳಲ್ಲಿ ದೆಹಲಿ ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಅವರು ರಾಜೀನಾಮೆ ನೀಡಿದ್ದು, ಈ ಕುರಿತ ಪತ್ರವನ್ನು ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ಸಲ್ಲಿಸಿದ್ದಾರೆ.

ನಾನು 202ರ ದೆಹಲಿ ಗಲಭೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡಿದ್ದೆ. ನನ್ನ ಕರ್ತವ್ಯವನ್ನು 3 ವರ್ಷಗಳಲ್ಲಿ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕರ್ತವ್ಯ ನಿಭಾಯಿಸಿದ್ದೇನೆ ಎಂದು ಪ್ರಸಾದ್ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿರುವ ಬಗ್ಗೆ ಲೈವ್ ಲಾ ವರದಿ ಮಾಡಿದೆ. ಈಗ ನಾನು ಪ್ರಾಸಿಕ್ಯೂಟರ್ ಆಗಿ ಮುಂದುವರಿಯಲು ಸಾಧ್ಯವಾಗುವುದಿಲ್ಲ ಮತ್ತು ಆದ್ದರಿಂದ ತಕ್ಷಣವೇ ಜಾರಿಗೆ ಬರುವಂತೆ ನನ್ನ ರಾಜೀನಾಮೆಯನ್ನು ನೀಡುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಕೂಡಲೇ ಅಂಗೀಕರಿಸಬೇಕು. ನನಗೆ ನೀಡಿದ ಅವಕಾಶಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬಾರ್ ಮತ್ತು ಬೆಂಚ್ ಪ್ರಕಾರ, ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಪ್ರಸಾದ್ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕಾರ್ಯನಿರ್ವಹಿಸುತ್ತಾರೆ. ಶ್ರದ್ಧಾ ವಾಕರ್ ಪ್ರಕರಣಕ್ಕೆ ಅವರಿಗೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ.

ದಿ ವೈರ್‌ ವರದಿ ಮಾಡಿದಂತೆ 2020ರ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿ ಅನೇಕ ಪ್ರಕರಣಗಳಿವೆ. ಇದರಲ್ಲಿ ನ್ಯಾಯಾಧೀಶರು ಪಕ್ಷಪಾತ, ಅಸಮರ್ಪಕ ತನಿಖೆಗಾಗಿ ದೆಹಲಿ ಪೊಲೀಸರನ್ನು ಟೀಕಿಸಿದ್ದಾರೆ. ನ್ಯಾಯಾಲಯಗಳು, ಹಲವಾರು ಪ್ರಕರಣಗಳಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸುವಾಗ ದೆಹಲಿ ಪೊಲೀಸರಲ್ಲಿ ಸಾಕ್ಷಾಧಾರಗಳ ಕೊರತೆ, ಸಾಕ್ಷಿಗಳ ಸೃಷ್ಟಿ, ವಾಸ್ತವತೆಯ ಬಗ್ಗೆ ತರಾಟೆಗೆ ತೆಗೆದುಕೊಂಡಿವೆ. ಕೆಲವು ಪ್ರಕರಣಗಳ ತನಿಖೆಯನ್ನು ಪೊಲೀಸರು ನಡೆಸಿದ ರೀತಿ ವಿಚಿತ್ರವಾಗಿದೆ ಎಂಬುದನ್ನು ಗಮನಿಸಿದೆ.

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿ 2020ರಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿ ಕನಿಷ್ಠ 758 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. 2020ರ ಫೆಬ್ರವರಿಯಲ್ಲಿ ನಡೆದ ದೆಹಲಿ ಹಿಂಸಾಚಾರದ ವೇಳೆ 53 ಜನರು ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹಿಂಸಾಚಾರವು ಫೆಬ್ರವರಿ 23 ರಿಂದ 27ರವರೆಗೆ ನಾಲ್ಕು ದಿನಗಳ ಕಾಲ ನಡೆದಿತ್ತು.

ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ನೇರಹೊಣೆ ಎಂದು ಸತ್ಯಶೋಧನ ಸಮಿತಿಯ ವರದಿ ಹೇಳಿತ್ತು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾಕ್ರ್ಸಿಸ್ಟ್) ಬಿಡುಗಡೆಗೊಳಿಸಿರುವ ಸತ್ಯಶೋಧನಾ ವರದಿಯು, 53 ಮಂದಿಯನ್ನು ಬಲಿ ಪಡೆದ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹೊಣೆಗಾರರನ್ನಾಗಿಸಿದೆ. ಹಿಂಸೆ ಉಲ್ಬಣಗೊಳ್ಳಲು ಹಾಗೂ ಈ ಕುರಿತಾದ ಪೊಲೀಸ್ ತನಿಖೆ ಪೂರ್ವಾಗ್ರಹಪೀಡಿತವಾಗಲು ಕೂಡ ಶಾ ಅವರೇ ಕಾರಣ ಎಂದು ಈ ವರದಿ ಆರೋಪಿಸಿತ್ತು.

ಬಿಜೆಪಿ ನಾಯಕರುಗಳಾದ ಕಪಿಲ್ ಮಿಶ್ರಾ ಮತ್ತು ಅನುರಾಗ್ ಠಾಕೂರ್ ಅವರ ಪ್ರಚೋದನಾತ್ಮಕ ಭಾಷಣಗಳು ಹಾಗೂ ಫೆಬ್ರವರಿ 21ರ ಶಿವರಾತ್ರಿ ಮೆರವಣಿಗೆಗಳ ವೇಳೆಯ ಪ್ರಚೋದನಾತ್ಮಕ ಘೋಷಣೆಗಳು ಕೂಡ ದೆಹಲಿ ಹಿಂಸೆಗೆ ಕಾರಣವಾಗಿತ್ತು ಎಂದು ಸತ್ಯಶೋಧನಾ ವರದಿ ತಿಳಿಸಿತ್ತು.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...