Homeಮುಖಪುಟಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

ಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

- Advertisement -
- Advertisement -

ಭಾರತದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿಯನ್ನು ‘ಆರ್ಟಿಕಲ್ 14’ ವೆಬ್‌‌ಸೈಟ್‌‌ ಶುಕ್ರವಾರ ಪ್ರಕಟಿಸಿದೆ. ‘ಒಂದು ಅಂಧಕಾರದ ದಶಕ’ ಎಂಬ ಶೀರ್ಷಿಕೆಯಿರುವ ವರದಿಯಲ್ಲಿ, 2010 ರಿಂದ 2021ರ ನಡುವೆ ದೇಶದಲ್ಲಿ ದಾಖಲಾದ ದೇಶದ್ರೋಹಕ್ಕೆ ಸಂಬಂಧಿಸಿದ ಸಮಗ್ರ ವಿವರಗಳನ್ನು ನೀಡಲಾಗಿದೆ.

ವೆಬ್‌ಸೈಟ್‌ ತನ್ನ ವರದಿಯ ಹೆಡ್‌ಲೈನ್‌ನಲ್ಲಿ, “ಒಂದು ಅಂಧಕಾರದ ದಶಕ: ನಮ್ಮ ಹೊಸ ಮಾಹಿತಿ ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ದುರುಪಯೋಗಪಡಿಸಿಕೊಳ್ಳುತ್ತದೆ ಎಂಬುದನ್ನು ಬಹಿರಂಗಪಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: 1947 ರಲ್ಲಿ ದೇಶಕ್ಕೆ ಸಿಕ್ಕಿದು ಸ್ವತಂತ್ರವಲ್ಲ ಭಿಕ್ಷೆ ಎಂಬ ಕಂಗನಾ ಹೇಳಿಕೆ: ಇದು ಹುಚ್ಚುತನವೋ..ದೇಶದ್ರೋಹವೋ- ವರುಣ್ ಗಾಂಧಿ ಪ್ರಶ್ನೆ

“151 ವರ್ಷಗಳಿಂದ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ವ್ಯಕ್ತಪಡಿಸುವ ಭಾರತೀಯರು ದೇಶದ್ರೋಹದ ಆರೋಪದ ಭಯವನ್ನು ಎದುರಿಸುತ್ತಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A ಅಡಿಯಲ್ಲಿ ದೇಶದ ಬಗ್ಗೆ ‘ಅಸಮಾಧಾನ’ ಹೊಂದಿದ್ದಾರೆ ಎಂದು ದೇಶದ್ರೋಹವನ್ನು ಹೊರಿಸಲಾಗುತ್ತಿದೆ. ನಮ್ಮ ಹೊಸ ಡೇಟಾಬೇಸ್ 2010-2021 ರ ನಡುವೆ ದೇಶದ್ರೋಹದ ಆರೋಪ ಹೊರಿಸಲಾದ 13,000 ಜನರನ್ನು ಎಣಿಕೆ ಮಾಡಿದ್ದೇವೆ” ಎಂದು ‘ಆರ್ಟಿಕಲ್‌‌ 14’ ಹೇಳಿದೆ.

ಇಷ್ಟೇ ಅಲ್ಲದೆ, ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ಬಳಕೆ ಮಾಡಲಾಗುತ್ತಿದೆ ಎಂಬ ಬಗ್ಗೆ ಅಭೂತಪೂರ್ವ ಒಳನೋಟವನ್ನು ಈ ವರದಿ ಒದಗಿಸುತ್ತದೆ. ಕಳೆದ ದಶಕದಲ್ಲಿ ಇದರ ಬಳಕೆಯು ತೀವ್ರವಾಗಿ ಏರಿದೆ. ತೀರಾ ಇತ್ತೀಚೆಗೆ ಸಾರ್ವಜನಿಕ ಪ್ರತಿಭಟನೆಗಳು, ಭಿನ್ನಾಭಿಪ್ರಾಯಗಳು, ಸಾಮಾಜಿಕ-ಮಾಧ್ಯಮ ಪೋಸ್ಟ್‌ಗಳು, ಸರ್ಕಾರದ ಟೀಕೆ ಮತ್ತು ಕ್ರಿಕೆಟ್ ಫಲಿತಾಂಶಗಳ ವಿರುದ್ಧವೂ ಸಹ ಇದನ್ನು ಬಳಸಲಾಗುತ್ತಿದೆ” ಎಂದು ಆರ್ಟಿಕಲ್‌ 14 ತನ್ನ ಉಪಶೀರ್ಷಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಸರ್ಕಾರ ಬದಲಾಗುತ್ತಿದ್ದಂತೆ ದೇಶದ್ರೋಹ ಪ್ರಕರಣಗಳು ದಾಖಲಿಸುವ ಬಗ್ಗೆ ಸುಪ್ರೀಂ ಆತಂಕ

‘ಆರ್ಟಿಕಲ್‌ 14’ ವೆಬ್‌ತಾಣದ ಸಂಪಾದಕೀಯ ಮಂಡಳಿಯು ವಕೀಲರು, ಪತ್ರಕರ್ತರು ಮತ್ತು ಶಿಕ್ಷಣ ತಜ್ಞರನ್ನು ಒಳಗೊಂಡಿದೆ. ಸಹಾಯಕ ಪ್ರಾಧ್ಯಾಪಕರಾದ ಮೊಹ್ಸಿನ್ ಅಲಂ ಭಟ್, ಅಪರ್ಣ ಚಂದ್ರ, ಪತ್ರಕರ್ತರಾದ ಚಿತ್ರಾಂಗದಾ ಚೌಧರಿ, ಪ್ರಿಯಾ ರಮಣಿ, ಮನೋಜ್ ಮಿತ್ತಾ, ಸುಪ್ರೀಂಕೋರ್ಟ್ ವಕೀಲ ಗೌತಮ್ ಭಾಟಿಯಾ, ಜಾವೇದ್ ಅನ್ಸಾರಿ, ನಿಖಿತಾ ಸೋನವಾನೆ, ಸಮರ್ ಹಲರ್ಕರ್ ಇತರರಿದ್ದಾರೆ.

ವೆಬ್‌ತಾಣದ ಸಲಹಾ ಸಮಿತಿಯಲ್ಲಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಆಫ್ತಬ್ ಅಲಂ, ಪ್ರೊ. ಸುನೀಲ್ ಕಿಲ್ನಾನಿ, ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಅಜಿತ್ ಪ್ರಕಾಶ್ ಶಾ ಇನ್ನಿತರರಿದ್ದಾರೆ. ಸಂಶೋಧನೆ ಮತ್ತು ವರದಿಗಾರಿಕೆ, ಮಾಹಿತಿ ಸಂಗ್ರಹ, ವೈವಿಧ್ಯಮಯ ದೃಷ್ಟಿಕೋನಗಳೊಂದಿಗೆ ತನಿಖಾ ವರದಿ ನೀಡುವ ಉದ್ದೇಶವನ್ನು ‘ಆರ್ಟಿಕಲ್ 14’ ಹೊಂದಿದೆ.

ಲೇಖನವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರ ಟೀಕಿಸಿದ್ದ ಮಾಜಿ ರಾಜ್ಯಪಾಲರ ಮೇಲೆ ದೇಶದ್ರೋಹ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...