Homeಮುಖಪುಟಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

ಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

- Advertisement -
- Advertisement -

ಭಾರತದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿಯನ್ನು ‘ಆರ್ಟಿಕಲ್ 14’ ವೆಬ್‌‌ಸೈಟ್‌‌ ಶುಕ್ರವಾರ ಪ್ರಕಟಿಸಿದೆ. ‘ಒಂದು ಅಂಧಕಾರದ ದಶಕ’ ಎಂಬ ಶೀರ್ಷಿಕೆಯಿರುವ ವರದಿಯಲ್ಲಿ, 2010 ರಿಂದ 2021ರ ನಡುವೆ ದೇಶದಲ್ಲಿ ದಾಖಲಾದ ದೇಶದ್ರೋಹಕ್ಕೆ ಸಂಬಂಧಿಸಿದ ಸಮಗ್ರ ವಿವರಗಳನ್ನು ನೀಡಲಾಗಿದೆ.

ವೆಬ್‌ಸೈಟ್‌ ತನ್ನ ವರದಿಯ ಹೆಡ್‌ಲೈನ್‌ನಲ್ಲಿ, “ಒಂದು ಅಂಧಕಾರದ ದಶಕ: ನಮ್ಮ ಹೊಸ ಮಾಹಿತಿ ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ದುರುಪಯೋಗಪಡಿಸಿಕೊಳ್ಳುತ್ತದೆ ಎಂಬುದನ್ನು ಬಹಿರಂಗಪಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: 1947 ರಲ್ಲಿ ದೇಶಕ್ಕೆ ಸಿಕ್ಕಿದು ಸ್ವತಂತ್ರವಲ್ಲ ಭಿಕ್ಷೆ ಎಂಬ ಕಂಗನಾ ಹೇಳಿಕೆ: ಇದು ಹುಚ್ಚುತನವೋ..ದೇಶದ್ರೋಹವೋ- ವರುಣ್ ಗಾಂಧಿ ಪ್ರಶ್ನೆ

“151 ವರ್ಷಗಳಿಂದ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ವ್ಯಕ್ತಪಡಿಸುವ ಭಾರತೀಯರು ದೇಶದ್ರೋಹದ ಆರೋಪದ ಭಯವನ್ನು ಎದುರಿಸುತ್ತಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A ಅಡಿಯಲ್ಲಿ ದೇಶದ ಬಗ್ಗೆ ‘ಅಸಮಾಧಾನ’ ಹೊಂದಿದ್ದಾರೆ ಎಂದು ದೇಶದ್ರೋಹವನ್ನು ಹೊರಿಸಲಾಗುತ್ತಿದೆ. ನಮ್ಮ ಹೊಸ ಡೇಟಾಬೇಸ್ 2010-2021 ರ ನಡುವೆ ದೇಶದ್ರೋಹದ ಆರೋಪ ಹೊರಿಸಲಾದ 13,000 ಜನರನ್ನು ಎಣಿಕೆ ಮಾಡಿದ್ದೇವೆ” ಎಂದು ‘ಆರ್ಟಿಕಲ್‌‌ 14’ ಹೇಳಿದೆ.

ಇಷ್ಟೇ ಅಲ್ಲದೆ, ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ಬಳಕೆ ಮಾಡಲಾಗುತ್ತಿದೆ ಎಂಬ ಬಗ್ಗೆ ಅಭೂತಪೂರ್ವ ಒಳನೋಟವನ್ನು ಈ ವರದಿ ಒದಗಿಸುತ್ತದೆ. ಕಳೆದ ದಶಕದಲ್ಲಿ ಇದರ ಬಳಕೆಯು ತೀವ್ರವಾಗಿ ಏರಿದೆ. ತೀರಾ ಇತ್ತೀಚೆಗೆ ಸಾರ್ವಜನಿಕ ಪ್ರತಿಭಟನೆಗಳು, ಭಿನ್ನಾಭಿಪ್ರಾಯಗಳು, ಸಾಮಾಜಿಕ-ಮಾಧ್ಯಮ ಪೋಸ್ಟ್‌ಗಳು, ಸರ್ಕಾರದ ಟೀಕೆ ಮತ್ತು ಕ್ರಿಕೆಟ್ ಫಲಿತಾಂಶಗಳ ವಿರುದ್ಧವೂ ಸಹ ಇದನ್ನು ಬಳಸಲಾಗುತ್ತಿದೆ” ಎಂದು ಆರ್ಟಿಕಲ್‌ 14 ತನ್ನ ಉಪಶೀರ್ಷಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಸರ್ಕಾರ ಬದಲಾಗುತ್ತಿದ್ದಂತೆ ದೇಶದ್ರೋಹ ಪ್ರಕರಣಗಳು ದಾಖಲಿಸುವ ಬಗ್ಗೆ ಸುಪ್ರೀಂ ಆತಂಕ

‘ಆರ್ಟಿಕಲ್‌ 14’ ವೆಬ್‌ತಾಣದ ಸಂಪಾದಕೀಯ ಮಂಡಳಿಯು ವಕೀಲರು, ಪತ್ರಕರ್ತರು ಮತ್ತು ಶಿಕ್ಷಣ ತಜ್ಞರನ್ನು ಒಳಗೊಂಡಿದೆ. ಸಹಾಯಕ ಪ್ರಾಧ್ಯಾಪಕರಾದ ಮೊಹ್ಸಿನ್ ಅಲಂ ಭಟ್, ಅಪರ್ಣ ಚಂದ್ರ, ಪತ್ರಕರ್ತರಾದ ಚಿತ್ರಾಂಗದಾ ಚೌಧರಿ, ಪ್ರಿಯಾ ರಮಣಿ, ಮನೋಜ್ ಮಿತ್ತಾ, ಸುಪ್ರೀಂಕೋರ್ಟ್ ವಕೀಲ ಗೌತಮ್ ಭಾಟಿಯಾ, ಜಾವೇದ್ ಅನ್ಸಾರಿ, ನಿಖಿತಾ ಸೋನವಾನೆ, ಸಮರ್ ಹಲರ್ಕರ್ ಇತರರಿದ್ದಾರೆ.

ವೆಬ್‌ತಾಣದ ಸಲಹಾ ಸಮಿತಿಯಲ್ಲಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಆಫ್ತಬ್ ಅಲಂ, ಪ್ರೊ. ಸುನೀಲ್ ಕಿಲ್ನಾನಿ, ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಅಜಿತ್ ಪ್ರಕಾಶ್ ಶಾ ಇನ್ನಿತರರಿದ್ದಾರೆ. ಸಂಶೋಧನೆ ಮತ್ತು ವರದಿಗಾರಿಕೆ, ಮಾಹಿತಿ ಸಂಗ್ರಹ, ವೈವಿಧ್ಯಮಯ ದೃಷ್ಟಿಕೋನಗಳೊಂದಿಗೆ ತನಿಖಾ ವರದಿ ನೀಡುವ ಉದ್ದೇಶವನ್ನು ‘ಆರ್ಟಿಕಲ್ 14’ ಹೊಂದಿದೆ.

ಲೇಖನವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರ ಟೀಕಿಸಿದ್ದ ಮಾಜಿ ರಾಜ್ಯಪಾಲರ ಮೇಲೆ ದೇಶದ್ರೋಹ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....