Homeಮುಖಪುಟಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

ಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

- Advertisement -
- Advertisement -

ಭಾರತದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿಯನ್ನು ‘ಆರ್ಟಿಕಲ್ 14’ ವೆಬ್‌‌ಸೈಟ್‌‌ ಶುಕ್ರವಾರ ಪ್ರಕಟಿಸಿದೆ. ‘ಒಂದು ಅಂಧಕಾರದ ದಶಕ’ ಎಂಬ ಶೀರ್ಷಿಕೆಯಿರುವ ವರದಿಯಲ್ಲಿ, 2010 ರಿಂದ 2021ರ ನಡುವೆ ದೇಶದಲ್ಲಿ ದಾಖಲಾದ ದೇಶದ್ರೋಹಕ್ಕೆ ಸಂಬಂಧಿಸಿದ ಸಮಗ್ರ ವಿವರಗಳನ್ನು ನೀಡಲಾಗಿದೆ.

ವೆಬ್‌ಸೈಟ್‌ ತನ್ನ ವರದಿಯ ಹೆಡ್‌ಲೈನ್‌ನಲ್ಲಿ, “ಒಂದು ಅಂಧಕಾರದ ದಶಕ: ನಮ್ಮ ಹೊಸ ಮಾಹಿತಿ ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ದುರುಪಯೋಗಪಡಿಸಿಕೊಳ್ಳುತ್ತದೆ ಎಂಬುದನ್ನು ಬಹಿರಂಗಪಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: 1947 ರಲ್ಲಿ ದೇಶಕ್ಕೆ ಸಿಕ್ಕಿದು ಸ್ವತಂತ್ರವಲ್ಲ ಭಿಕ್ಷೆ ಎಂಬ ಕಂಗನಾ ಹೇಳಿಕೆ: ಇದು ಹುಚ್ಚುತನವೋ..ದೇಶದ್ರೋಹವೋ- ವರುಣ್ ಗಾಂಧಿ ಪ್ರಶ್ನೆ

“151 ವರ್ಷಗಳಿಂದ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ವ್ಯಕ್ತಪಡಿಸುವ ಭಾರತೀಯರು ದೇಶದ್ರೋಹದ ಆರೋಪದ ಭಯವನ್ನು ಎದುರಿಸುತ್ತಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A ಅಡಿಯಲ್ಲಿ ದೇಶದ ಬಗ್ಗೆ ‘ಅಸಮಾಧಾನ’ ಹೊಂದಿದ್ದಾರೆ ಎಂದು ದೇಶದ್ರೋಹವನ್ನು ಹೊರಿಸಲಾಗುತ್ತಿದೆ. ನಮ್ಮ ಹೊಸ ಡೇಟಾಬೇಸ್ 2010-2021 ರ ನಡುವೆ ದೇಶದ್ರೋಹದ ಆರೋಪ ಹೊರಿಸಲಾದ 13,000 ಜನರನ್ನು ಎಣಿಕೆ ಮಾಡಿದ್ದೇವೆ” ಎಂದು ‘ಆರ್ಟಿಕಲ್‌‌ 14’ ಹೇಳಿದೆ.

ಇಷ್ಟೇ ಅಲ್ಲದೆ, ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ಬಳಕೆ ಮಾಡಲಾಗುತ್ತಿದೆ ಎಂಬ ಬಗ್ಗೆ ಅಭೂತಪೂರ್ವ ಒಳನೋಟವನ್ನು ಈ ವರದಿ ಒದಗಿಸುತ್ತದೆ. ಕಳೆದ ದಶಕದಲ್ಲಿ ಇದರ ಬಳಕೆಯು ತೀವ್ರವಾಗಿ ಏರಿದೆ. ತೀರಾ ಇತ್ತೀಚೆಗೆ ಸಾರ್ವಜನಿಕ ಪ್ರತಿಭಟನೆಗಳು, ಭಿನ್ನಾಭಿಪ್ರಾಯಗಳು, ಸಾಮಾಜಿಕ-ಮಾಧ್ಯಮ ಪೋಸ್ಟ್‌ಗಳು, ಸರ್ಕಾರದ ಟೀಕೆ ಮತ್ತು ಕ್ರಿಕೆಟ್ ಫಲಿತಾಂಶಗಳ ವಿರುದ್ಧವೂ ಸಹ ಇದನ್ನು ಬಳಸಲಾಗುತ್ತಿದೆ” ಎಂದು ಆರ್ಟಿಕಲ್‌ 14 ತನ್ನ ಉಪಶೀರ್ಷಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಸರ್ಕಾರ ಬದಲಾಗುತ್ತಿದ್ದಂತೆ ದೇಶದ್ರೋಹ ಪ್ರಕರಣಗಳು ದಾಖಲಿಸುವ ಬಗ್ಗೆ ಸುಪ್ರೀಂ ಆತಂಕ

‘ಆರ್ಟಿಕಲ್‌ 14’ ವೆಬ್‌ತಾಣದ ಸಂಪಾದಕೀಯ ಮಂಡಳಿಯು ವಕೀಲರು, ಪತ್ರಕರ್ತರು ಮತ್ತು ಶಿಕ್ಷಣ ತಜ್ಞರನ್ನು ಒಳಗೊಂಡಿದೆ. ಸಹಾಯಕ ಪ್ರಾಧ್ಯಾಪಕರಾದ ಮೊಹ್ಸಿನ್ ಅಲಂ ಭಟ್, ಅಪರ್ಣ ಚಂದ್ರ, ಪತ್ರಕರ್ತರಾದ ಚಿತ್ರಾಂಗದಾ ಚೌಧರಿ, ಪ್ರಿಯಾ ರಮಣಿ, ಮನೋಜ್ ಮಿತ್ತಾ, ಸುಪ್ರೀಂಕೋರ್ಟ್ ವಕೀಲ ಗೌತಮ್ ಭಾಟಿಯಾ, ಜಾವೇದ್ ಅನ್ಸಾರಿ, ನಿಖಿತಾ ಸೋನವಾನೆ, ಸಮರ್ ಹಲರ್ಕರ್ ಇತರರಿದ್ದಾರೆ.

ವೆಬ್‌ತಾಣದ ಸಲಹಾ ಸಮಿತಿಯಲ್ಲಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಆಫ್ತಬ್ ಅಲಂ, ಪ್ರೊ. ಸುನೀಲ್ ಕಿಲ್ನಾನಿ, ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಅಜಿತ್ ಪ್ರಕಾಶ್ ಶಾ ಇನ್ನಿತರರಿದ್ದಾರೆ. ಸಂಶೋಧನೆ ಮತ್ತು ವರದಿಗಾರಿಕೆ, ಮಾಹಿತಿ ಸಂಗ್ರಹ, ವೈವಿಧ್ಯಮಯ ದೃಷ್ಟಿಕೋನಗಳೊಂದಿಗೆ ತನಿಖಾ ವರದಿ ನೀಡುವ ಉದ್ದೇಶವನ್ನು ‘ಆರ್ಟಿಕಲ್ 14’ ಹೊಂದಿದೆ.

ಲೇಖನವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರ ಟೀಕಿಸಿದ್ದ ಮಾಜಿ ರಾಜ್ಯಪಾಲರ ಮೇಲೆ ದೇಶದ್ರೋಹ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...