Homeಮುಖಪುಟಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

ಭಾರತದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿ ಪ್ರಕಟಿಸಿದ ‘ಆರ್ಟಿಕಲ್ 14’!

- Advertisement -
- Advertisement -

ಭಾರತದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ವಿಶೇಷ ವರದಿಯನ್ನು ‘ಆರ್ಟಿಕಲ್ 14’ ವೆಬ್‌‌ಸೈಟ್‌‌ ಶುಕ್ರವಾರ ಪ್ರಕಟಿಸಿದೆ. ‘ಒಂದು ಅಂಧಕಾರದ ದಶಕ’ ಎಂಬ ಶೀರ್ಷಿಕೆಯಿರುವ ವರದಿಯಲ್ಲಿ, 2010 ರಿಂದ 2021ರ ನಡುವೆ ದೇಶದಲ್ಲಿ ದಾಖಲಾದ ದೇಶದ್ರೋಹಕ್ಕೆ ಸಂಬಂಧಿಸಿದ ಸಮಗ್ರ ವಿವರಗಳನ್ನು ನೀಡಲಾಗಿದೆ.

ವೆಬ್‌ಸೈಟ್‌ ತನ್ನ ವರದಿಯ ಹೆಡ್‌ಲೈನ್‌ನಲ್ಲಿ, “ಒಂದು ಅಂಧಕಾರದ ದಶಕ: ನಮ್ಮ ಹೊಸ ಮಾಹಿತಿ ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ದುರುಪಯೋಗಪಡಿಸಿಕೊಳ್ಳುತ್ತದೆ ಎಂಬುದನ್ನು ಬಹಿರಂಗಪಡಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: 1947 ರಲ್ಲಿ ದೇಶಕ್ಕೆ ಸಿಕ್ಕಿದು ಸ್ವತಂತ್ರವಲ್ಲ ಭಿಕ್ಷೆ ಎಂಬ ಕಂಗನಾ ಹೇಳಿಕೆ: ಇದು ಹುಚ್ಚುತನವೋ..ದೇಶದ್ರೋಹವೋ- ವರುಣ್ ಗಾಂಧಿ ಪ್ರಶ್ನೆ

“151 ವರ್ಷಗಳಿಂದ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ವ್ಯಕ್ತಪಡಿಸುವ ಭಾರತೀಯರು ದೇಶದ್ರೋಹದ ಆರೋಪದ ಭಯವನ್ನು ಎದುರಿಸುತ್ತಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A ಅಡಿಯಲ್ಲಿ ದೇಶದ ಬಗ್ಗೆ ‘ಅಸಮಾಧಾನ’ ಹೊಂದಿದ್ದಾರೆ ಎಂದು ದೇಶದ್ರೋಹವನ್ನು ಹೊರಿಸಲಾಗುತ್ತಿದೆ. ನಮ್ಮ ಹೊಸ ಡೇಟಾಬೇಸ್ 2010-2021 ರ ನಡುವೆ ದೇಶದ್ರೋಹದ ಆರೋಪ ಹೊರಿಸಲಾದ 13,000 ಜನರನ್ನು ಎಣಿಕೆ ಮಾಡಿದ್ದೇವೆ” ಎಂದು ‘ಆರ್ಟಿಕಲ್‌‌ 14’ ಹೇಳಿದೆ.

ಇಷ್ಟೇ ಅಲ್ಲದೆ, ಇತರ ಪ್ರಜಾಪ್ರಭುತ್ವ ದೇಶಗಳು ತಿರಸ್ಕರಿಸಿದ ಕಾನೂನನ್ನು ಭಾರತದಲ್ಲಿ ಹೇಗೆ ಬಳಕೆ ಮಾಡಲಾಗುತ್ತಿದೆ ಎಂಬ ಬಗ್ಗೆ ಅಭೂತಪೂರ್ವ ಒಳನೋಟವನ್ನು ಈ ವರದಿ ಒದಗಿಸುತ್ತದೆ. ಕಳೆದ ದಶಕದಲ್ಲಿ ಇದರ ಬಳಕೆಯು ತೀವ್ರವಾಗಿ ಏರಿದೆ. ತೀರಾ ಇತ್ತೀಚೆಗೆ ಸಾರ್ವಜನಿಕ ಪ್ರತಿಭಟನೆಗಳು, ಭಿನ್ನಾಭಿಪ್ರಾಯಗಳು, ಸಾಮಾಜಿಕ-ಮಾಧ್ಯಮ ಪೋಸ್ಟ್‌ಗಳು, ಸರ್ಕಾರದ ಟೀಕೆ ಮತ್ತು ಕ್ರಿಕೆಟ್ ಫಲಿತಾಂಶಗಳ ವಿರುದ್ಧವೂ ಸಹ ಇದನ್ನು ಬಳಸಲಾಗುತ್ತಿದೆ” ಎಂದು ಆರ್ಟಿಕಲ್‌ 14 ತನ್ನ ಉಪಶೀರ್ಷಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಸರ್ಕಾರ ಬದಲಾಗುತ್ತಿದ್ದಂತೆ ದೇಶದ್ರೋಹ ಪ್ರಕರಣಗಳು ದಾಖಲಿಸುವ ಬಗ್ಗೆ ಸುಪ್ರೀಂ ಆತಂಕ

‘ಆರ್ಟಿಕಲ್‌ 14’ ವೆಬ್‌ತಾಣದ ಸಂಪಾದಕೀಯ ಮಂಡಳಿಯು ವಕೀಲರು, ಪತ್ರಕರ್ತರು ಮತ್ತು ಶಿಕ್ಷಣ ತಜ್ಞರನ್ನು ಒಳಗೊಂಡಿದೆ. ಸಹಾಯಕ ಪ್ರಾಧ್ಯಾಪಕರಾದ ಮೊಹ್ಸಿನ್ ಅಲಂ ಭಟ್, ಅಪರ್ಣ ಚಂದ್ರ, ಪತ್ರಕರ್ತರಾದ ಚಿತ್ರಾಂಗದಾ ಚೌಧರಿ, ಪ್ರಿಯಾ ರಮಣಿ, ಮನೋಜ್ ಮಿತ್ತಾ, ಸುಪ್ರೀಂಕೋರ್ಟ್ ವಕೀಲ ಗೌತಮ್ ಭಾಟಿಯಾ, ಜಾವೇದ್ ಅನ್ಸಾರಿ, ನಿಖಿತಾ ಸೋನವಾನೆ, ಸಮರ್ ಹಲರ್ಕರ್ ಇತರರಿದ್ದಾರೆ.

ವೆಬ್‌ತಾಣದ ಸಲಹಾ ಸಮಿತಿಯಲ್ಲಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಆಫ್ತಬ್ ಅಲಂ, ಪ್ರೊ. ಸುನೀಲ್ ಕಿಲ್ನಾನಿ, ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಅಜಿತ್ ಪ್ರಕಾಶ್ ಶಾ ಇನ್ನಿತರರಿದ್ದಾರೆ. ಸಂಶೋಧನೆ ಮತ್ತು ವರದಿಗಾರಿಕೆ, ಮಾಹಿತಿ ಸಂಗ್ರಹ, ವೈವಿಧ್ಯಮಯ ದೃಷ್ಟಿಕೋನಗಳೊಂದಿಗೆ ತನಿಖಾ ವರದಿ ನೀಡುವ ಉದ್ದೇಶವನ್ನು ‘ಆರ್ಟಿಕಲ್ 14’ ಹೊಂದಿದೆ.

ಲೇಖನವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರ ಟೀಕಿಸಿದ್ದ ಮಾಜಿ ರಾಜ್ಯಪಾಲರ ಮೇಲೆ ದೇಶದ್ರೋಹ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...