Homeಕರ್ನಾಟಕವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ...

ವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ

- Advertisement -
- Advertisement -

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಗುರುವಾರ (ಜ.22) ಭಾರೀ ಹೈಡ್ರಾಮ ನಡೆಯಿತು. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟ ಭಾಷಣ ಓದದೆ, ತಮ್ಮದೇ ಆದ ಕೇವಲ ಎರಡೇ ಸಾಲಿನ ಭಾಷಣ ಓದಿ ಹೊರ ನಡೆದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಆರಂಭದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಕಾನೂನು ಸಚಿವರ ಹೆಚ್‌.ಕೆ ಪಾಟೀಲ್ ಸೇರಿದಂತೆ ಪ್ರಮುಖರು ಮನವೊಲಿಸಿದ ಬಳಿಕ ರಾಜ್ಯಪಾಲರು ಸದನಕ್ಕೆ ಆಗಮಿಸಿದ್ದರು.

ರಾಜ್ಯಪಾಲರು ಸದನಕ್ಕೆ ಬರಲು ಒಪ್ಪಿದರೂ, ಸರ್ಕಾರ ಬರೆದುಕೊಟ್ಟ ಭಾಷಣ ಓದುವುದಿಲ್ಲ. ಅವರೇ ಪ್ರತ್ಯೇಕ ಭಾಷಣ ಬರೆದುಕೊಂಡು ಬಂದಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ರಾಜ್ಯಪಾಲರು ಸದನಕ್ಕೆ ಆಗಮಿಸಿ ಕೇವಲ ಎರಡು ಸಾಲಿನ ಭಾಷಣ ಮಾಡಿ ತೆರಳಿದರು. ಈ ವೇಳೆ ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ರಾಜ್ಯಪಾಲರನ್ನು ತಡೆಯುವ ಪ್ರಯತ್ನ ಮಾಡಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರು ವರ್ಷದ ಆರಂಭದಲ್ಲಿ ಮತ್ತು ಹೊಸ ಸರ್ಕಾರ ಬಂದಾಗ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವುದು ವಾಡಿಕೆ. ಸಂವಿಧಾನದ ವಿಧಿ 176 ಮತ್ತು 163 ರಾಜ್ಯಪಾಲರು ಅವರು ತಯಾರು ಮಾಡಿದ ಭಾಷಣ ಓದುವಂತಿಲ್ಲ. ಸಚಿವ ಸಂಪುಟ ಸಿದ್ದಪಡಿಸಿಕೊಟ್ಟ ಭಾಷಣ ಓದಲೇಬೇಕು ಎಂದು ಹೇಳಿದೆ ಎಂದರು.

ಇವತ್ತು ಜಂಟಿ ಅಧಿವೇಶನ ಕರೆಯಲಾಗಿದೆ. ಏಕೆಂದರೆ ನರೇಗಾ ಕಾಯ್ದೆಯನ್ನು ರದ್ದು ಮಾಡಿ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಹೊಸದಾಗಿ ಮಾಡಿದ್ದಾರೆ. ಅದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧ ಇದೆ. ಹೊಸ ಕಾಯ್ದೆಯಲ್ಲಿ ಮಹಾತ್ಮ ಗಾಂಧಿಯವರ ಹೆಸರು ತೆಗೆದು ಹಾಕಲಾಗಿದೆ. ಹಲವು ಜನಪರ ನಿಯಮಗಳನ್ನು ಮಾರ್ಪಾಡು ಮಾಡಲಾಗಿದೆ. 20 ವರ್ಷಗಳ ಹಿಂದೆ, ಅಂದರೆ 2005ರಲ್ಲಿ ಡಾ. ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಸಂವಿಧಾನದ ಆದೇಶಗಳನ್ನು ಅನುಸರಿಸಿ ಜನರಿಗೆ ಕೆಲಸದ ಹಕ್ಕು, ಆಹಾರದ ಹಕ್ಕು, ಮಾಹಿತಿಯ ಹಕ್ಕು ಮತ್ತು ಶಿಕ್ಷಣದ ಹಕ್ಕು ನೀಡಿದ್ದರು ಎಂದು ಹೇಳಿದರು.

ಮುಂದುವರಿದು, ಕೆಲಸದ ಹಕ್ಕು ಎಂದರೆ ವರ್ಷದಲ್ಲಿ 100 ದಿನಗಳ ಕಾಲ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಕೊಡುವುದು. ಇದರಲ್ಲಿ ದಲಿತರು, ರೈತರು ಮಹಿಳೆಯರು ಇದ್ದಾರೆ. ವಿಶೇಷವಾಗಿ 50 ಶೇಕಡ ಮಹಿಳೆಯರು ಮತ್ತು 20 ಶೇಕಡ ದಲಿತರು ನರೇಗಾ ಯೋಜನೆಯ ಫಲಾನುಭವಿಗಳು. ನರೇಗಾ ಯೋಜನೆಯಲ್ಲಿ ಜನರು ಇಷ್ಟಪಟ್ಟಲ್ಲಿ ಕೆಲಸ ಮಾಡಬಹುದಿತ್ತು. ಆದರೆ, ಹೊಸ ಕಾಯ್ದೆಯಲ್ಲಿ ಕೇಂದ್ರ ಹೇಳಿದ್ದಲ್ಲಿ ಕೆಲಸ ಮಾಡಬೇಕು. ನರೇಗಾದಲ್ಲಿ 365 ದಿನ ಕೆಲಸ ಇತ್ತು. ಯೋಜನೆ ರೂಪಿಸುವುದು ಗ್ರಾಮ ಪಂಚಾಯತ್ ಆಗಿತ್ತು. ಇದನ್ನು ಹೊಸ ಕಾಯ್ದೆಯಲ್ಲಿ ತೆಗೆದು ಹಾಕಿದ್ದಾರೆ ಎಂದರು.

ಈ ಎಲ್ಲಾ ಕಾರಣಗಳಿಗೆ ಕೇಂದ್ರದ ಹೊಸ ಕಾಯ್ದೆಯನ್ನು ನಾವು ವಿರೋಧ ಮಾಡಿದ್ದೇವೆ. ಅದನ್ನು ಸಂಪುಟ ರಾಜ್ಯಪಾಲರ ಭಾಷಣದಲ್ಲಿ ಸೇರಿಸಿತ್ತು. ನಮ್ಮ ಆಗ್ರಹ ನರೇಗಾ ಯೋಜನೆ ಮರು ಸ್ಥಾಪಿಸಬೇಕು, ಹೊಸ ಕಾಯ್ದೆ ರದ್ದು ಮಾಡಬೇಕು ಎಂಬುವುದಾಗಿದೆ. ನರೇಗಾ ಮರುಸ್ಥಾಪನೆ ಆಗುವವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಇದು ನಮ್ಮ ಸರ್ಕಾರದ ತೀರ್ಮಾನ. ಕೇಂದ್ರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿದಂತೆ ನಾವು ಹೋರಾಟ ರೂಪಿಸುತ್ತೇವೆ ಎಂದರು ತಿಳಿಸಿದರು.

ರಾಜ್ಯಪಾಲರು ಅವರೇ ತಯಾರು ಮಾಡಿದ ಒಂದು ಪ್ಯಾರದ ಭಾಷಣ ಮಾತ್ರ ಓದಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಇದರಿಂದ ಜನ ಪ್ರತಿನಿಧಿಗಳ ಸಭೆಗೆ ಅವಮಾನ ಆಗಿದೆ. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡುವುದು ಸಂವಿಧಾನಾತ್ಮಕ ಪದ್ದತಿಯಾಗಿತ್ತು. ರಾಜ್ಯಪಾಲರ ನಡೆಯನ್ನು ನಮ್ಮ ಸರ್ಕಾರ, ಪಕ್ಷ ಪ್ರತಿಭಟಿಸುತ್ತದೆ ಎಂದು ಹೇಳಿದರು.

ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರದವರು ಅವರ ತಪ್ಪು ಮುಚ್ಚಿಕೊಳ್ಳಲು ರಾಜ್ಯಪಾಲರಲ್ಲಿ ಬೇರೆ ಭಾಷಣ ಓದಿಸಿದ್ದಾರೆ. ಇದು ಸಂವಿಧಾನಬಾಹಿರ, ಸಂವಿಧಾನದ ಉಲ್ಲಂಘನೆ. ರಾಜ್ಯಪಾಲರು ತಮ್ಮ ಕರ್ತವ್ಯ, ಜವಾಬ್ದಾರಿ ಪಾಲನೆ ಮಾಡಿಲ್ಲ. ನಾವು ತಯಾರಿಸಿದ ಭಾಷಣ ಎಲ್ಲಾ ಸದಸ್ಯರಿಗೆ ಕೊಟ್ಟಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...