Homeಕರ್ನಾಟಕವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ...

ವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ

- Advertisement -
- Advertisement -

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಗುರುವಾರ (ಜ.22) ಭಾರೀ ಹೈಡ್ರಾಮ ನಡೆಯಿತು. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟ ಭಾಷಣ ಓದದೆ, ತಮ್ಮದೇ ಆದ ಕೇವಲ ಎರಡೇ ಸಾಲಿನ ಭಾಷಣ ಓದಿ ಹೊರ ನಡೆದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಆರಂಭದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಕಾನೂನು ಸಚಿವರ ಹೆಚ್‌.ಕೆ ಪಾಟೀಲ್ ಸೇರಿದಂತೆ ಪ್ರಮುಖರು ಮನವೊಲಿಸಿದ ಬಳಿಕ ರಾಜ್ಯಪಾಲರು ಸದನಕ್ಕೆ ಆಗಮಿಸಿದ್ದರು.

ರಾಜ್ಯಪಾಲರು ಸದನಕ್ಕೆ ಬರಲು ಒಪ್ಪಿದರೂ, ಸರ್ಕಾರ ಬರೆದುಕೊಟ್ಟ ಭಾಷಣ ಓದುವುದಿಲ್ಲ. ಅವರೇ ಪ್ರತ್ಯೇಕ ಭಾಷಣ ಬರೆದುಕೊಂಡು ಬಂದಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ರಾಜ್ಯಪಾಲರು ಸದನಕ್ಕೆ ಆಗಮಿಸಿ ಕೇವಲ ಎರಡು ಸಾಲಿನ ಭಾಷಣ ಮಾಡಿ ತೆರಳಿದರು. ಈ ವೇಳೆ ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ರಾಜ್ಯಪಾಲರನ್ನು ತಡೆಯುವ ಪ್ರಯತ್ನ ಮಾಡಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರು ವರ್ಷದ ಆರಂಭದಲ್ಲಿ ಮತ್ತು ಹೊಸ ಸರ್ಕಾರ ಬಂದಾಗ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವುದು ವಾಡಿಕೆ. ಸಂವಿಧಾನದ ವಿಧಿ 176 ಮತ್ತು 163 ರಾಜ್ಯಪಾಲರು ಅವರು ತಯಾರು ಮಾಡಿದ ಭಾಷಣ ಓದುವಂತಿಲ್ಲ. ಸಚಿವ ಸಂಪುಟ ಸಿದ್ದಪಡಿಸಿಕೊಟ್ಟ ಭಾಷಣ ಓದಲೇಬೇಕು ಎಂದು ಹೇಳಿದೆ ಎಂದರು.

ಇವತ್ತು ಜಂಟಿ ಅಧಿವೇಶನ ಕರೆಯಲಾಗಿದೆ. ಏಕೆಂದರೆ ನರೇಗಾ ಕಾಯ್ದೆಯನ್ನು ರದ್ದು ಮಾಡಿ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಹೊಸದಾಗಿ ಮಾಡಿದ್ದಾರೆ. ಅದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧ ಇದೆ. ಹೊಸ ಕಾಯ್ದೆಯಲ್ಲಿ ಮಹಾತ್ಮ ಗಾಂಧಿಯವರ ಹೆಸರು ತೆಗೆದು ಹಾಕಲಾಗಿದೆ. ಹಲವು ಜನಪರ ನಿಯಮಗಳನ್ನು ಮಾರ್ಪಾಡು ಮಾಡಲಾಗಿದೆ. 20 ವರ್ಷಗಳ ಹಿಂದೆ, ಅಂದರೆ 2005ರಲ್ಲಿ ಡಾ. ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಸಂವಿಧಾನದ ಆದೇಶಗಳನ್ನು ಅನುಸರಿಸಿ ಜನರಿಗೆ ಕೆಲಸದ ಹಕ್ಕು, ಆಹಾರದ ಹಕ್ಕು, ಮಾಹಿತಿಯ ಹಕ್ಕು ಮತ್ತು ಶಿಕ್ಷಣದ ಹಕ್ಕು ನೀಡಿದ್ದರು ಎಂದು ಹೇಳಿದರು.

ಮುಂದುವರಿದು, ಕೆಲಸದ ಹಕ್ಕು ಎಂದರೆ ವರ್ಷದಲ್ಲಿ 100 ದಿನಗಳ ಕಾಲ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಕೊಡುವುದು. ಇದರಲ್ಲಿ ದಲಿತರು, ರೈತರು ಮಹಿಳೆಯರು ಇದ್ದಾರೆ. ವಿಶೇಷವಾಗಿ 50 ಶೇಕಡ ಮಹಿಳೆಯರು ಮತ್ತು 20 ಶೇಕಡ ದಲಿತರು ನರೇಗಾ ಯೋಜನೆಯ ಫಲಾನುಭವಿಗಳು. ನರೇಗಾ ಯೋಜನೆಯಲ್ಲಿ ಜನರು ಇಷ್ಟಪಟ್ಟಲ್ಲಿ ಕೆಲಸ ಮಾಡಬಹುದಿತ್ತು. ಆದರೆ, ಹೊಸ ಕಾಯ್ದೆಯಲ್ಲಿ ಕೇಂದ್ರ ಹೇಳಿದ್ದಲ್ಲಿ ಕೆಲಸ ಮಾಡಬೇಕು. ನರೇಗಾದಲ್ಲಿ 365 ದಿನ ಕೆಲಸ ಇತ್ತು. ಯೋಜನೆ ರೂಪಿಸುವುದು ಗ್ರಾಮ ಪಂಚಾಯತ್ ಆಗಿತ್ತು. ಇದನ್ನು ಹೊಸ ಕಾಯ್ದೆಯಲ್ಲಿ ತೆಗೆದು ಹಾಕಿದ್ದಾರೆ ಎಂದರು.

ಈ ಎಲ್ಲಾ ಕಾರಣಗಳಿಗೆ ಕೇಂದ್ರದ ಹೊಸ ಕಾಯ್ದೆಯನ್ನು ನಾವು ವಿರೋಧ ಮಾಡಿದ್ದೇವೆ. ಅದನ್ನು ಸಂಪುಟ ರಾಜ್ಯಪಾಲರ ಭಾಷಣದಲ್ಲಿ ಸೇರಿಸಿತ್ತು. ನಮ್ಮ ಆಗ್ರಹ ನರೇಗಾ ಯೋಜನೆ ಮರು ಸ್ಥಾಪಿಸಬೇಕು, ಹೊಸ ಕಾಯ್ದೆ ರದ್ದು ಮಾಡಬೇಕು ಎಂಬುವುದಾಗಿದೆ. ನರೇಗಾ ಮರುಸ್ಥಾಪನೆ ಆಗುವವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಇದು ನಮ್ಮ ಸರ್ಕಾರದ ತೀರ್ಮಾನ. ಕೇಂದ್ರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿದಂತೆ ನಾವು ಹೋರಾಟ ರೂಪಿಸುತ್ತೇವೆ ಎಂದರು ತಿಳಿಸಿದರು.

ರಾಜ್ಯಪಾಲರು ಅವರೇ ತಯಾರು ಮಾಡಿದ ಒಂದು ಪ್ಯಾರದ ಭಾಷಣ ಮಾತ್ರ ಓದಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಇದರಿಂದ ಜನ ಪ್ರತಿನಿಧಿಗಳ ಸಭೆಗೆ ಅವಮಾನ ಆಗಿದೆ. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡುವುದು ಸಂವಿಧಾನಾತ್ಮಕ ಪದ್ದತಿಯಾಗಿತ್ತು. ರಾಜ್ಯಪಾಲರ ನಡೆಯನ್ನು ನಮ್ಮ ಸರ್ಕಾರ, ಪಕ್ಷ ಪ್ರತಿಭಟಿಸುತ್ತದೆ ಎಂದು ಹೇಳಿದರು.

ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರದವರು ಅವರ ತಪ್ಪು ಮುಚ್ಚಿಕೊಳ್ಳಲು ರಾಜ್ಯಪಾಲರಲ್ಲಿ ಬೇರೆ ಭಾಷಣ ಓದಿಸಿದ್ದಾರೆ. ಇದು ಸಂವಿಧಾನಬಾಹಿರ, ಸಂವಿಧಾನದ ಉಲ್ಲಂಘನೆ. ರಾಜ್ಯಪಾಲರು ತಮ್ಮ ಕರ್ತವ್ಯ, ಜವಾಬ್ದಾರಿ ಪಾಲನೆ ಮಾಡಿಲ್ಲ. ನಾವು ತಯಾರಿಸಿದ ಭಾಷಣ ಎಲ್ಲಾ ಸದಸ್ಯರಿಗೆ ಕೊಟ್ಟಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...