Homeಕರ್ನಾಟಕವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ...

ವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ

- Advertisement -
- Advertisement -

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಗುರುವಾರ (ಜ.22) ಭಾರೀ ಹೈಡ್ರಾಮ ನಡೆಯಿತು. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟ ಭಾಷಣ ಓದದೆ, ತಮ್ಮದೇ ಆದ ಕೇವಲ ಎರಡೇ ಸಾಲಿನ ಭಾಷಣ ಓದಿ ಹೊರ ನಡೆದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಆರಂಭದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಕಾನೂನು ಸಚಿವರ ಹೆಚ್‌.ಕೆ ಪಾಟೀಲ್ ಸೇರಿದಂತೆ ಪ್ರಮುಖರು ಮನವೊಲಿಸಿದ ಬಳಿಕ ರಾಜ್ಯಪಾಲರು ಸದನಕ್ಕೆ ಆಗಮಿಸಿದ್ದರು.

ರಾಜ್ಯಪಾಲರು ಸದನಕ್ಕೆ ಬರಲು ಒಪ್ಪಿದರೂ, ಸರ್ಕಾರ ಬರೆದುಕೊಟ್ಟ ಭಾಷಣ ಓದುವುದಿಲ್ಲ. ಅವರೇ ಪ್ರತ್ಯೇಕ ಭಾಷಣ ಬರೆದುಕೊಂಡು ಬಂದಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ರಾಜ್ಯಪಾಲರು ಸದನಕ್ಕೆ ಆಗಮಿಸಿ ಕೇವಲ ಎರಡು ಸಾಲಿನ ಭಾಷಣ ಮಾಡಿ ತೆರಳಿದರು. ಈ ವೇಳೆ ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ರಾಜ್ಯಪಾಲರನ್ನು ತಡೆಯುವ ಪ್ರಯತ್ನ ಮಾಡಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರು ವರ್ಷದ ಆರಂಭದಲ್ಲಿ ಮತ್ತು ಹೊಸ ಸರ್ಕಾರ ಬಂದಾಗ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವುದು ವಾಡಿಕೆ. ಸಂವಿಧಾನದ ವಿಧಿ 176 ಮತ್ತು 163 ರಾಜ್ಯಪಾಲರು ಅವರು ತಯಾರು ಮಾಡಿದ ಭಾಷಣ ಓದುವಂತಿಲ್ಲ. ಸಚಿವ ಸಂಪುಟ ಸಿದ್ದಪಡಿಸಿಕೊಟ್ಟ ಭಾಷಣ ಓದಲೇಬೇಕು ಎಂದು ಹೇಳಿದೆ ಎಂದರು.

ಇವತ್ತು ಜಂಟಿ ಅಧಿವೇಶನ ಕರೆಯಲಾಗಿದೆ. ಏಕೆಂದರೆ ನರೇಗಾ ಕಾಯ್ದೆಯನ್ನು ರದ್ದು ಮಾಡಿ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಹೊಸದಾಗಿ ಮಾಡಿದ್ದಾರೆ. ಅದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧ ಇದೆ. ಹೊಸ ಕಾಯ್ದೆಯಲ್ಲಿ ಮಹಾತ್ಮ ಗಾಂಧಿಯವರ ಹೆಸರು ತೆಗೆದು ಹಾಕಲಾಗಿದೆ. ಹಲವು ಜನಪರ ನಿಯಮಗಳನ್ನು ಮಾರ್ಪಾಡು ಮಾಡಲಾಗಿದೆ. 20 ವರ್ಷಗಳ ಹಿಂದೆ, ಅಂದರೆ 2005ರಲ್ಲಿ ಡಾ. ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಸಂವಿಧಾನದ ಆದೇಶಗಳನ್ನು ಅನುಸರಿಸಿ ಜನರಿಗೆ ಕೆಲಸದ ಹಕ್ಕು, ಆಹಾರದ ಹಕ್ಕು, ಮಾಹಿತಿಯ ಹಕ್ಕು ಮತ್ತು ಶಿಕ್ಷಣದ ಹಕ್ಕು ನೀಡಿದ್ದರು ಎಂದು ಹೇಳಿದರು.

ಮುಂದುವರಿದು, ಕೆಲಸದ ಹಕ್ಕು ಎಂದರೆ ವರ್ಷದಲ್ಲಿ 100 ದಿನಗಳ ಕಾಲ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಕೊಡುವುದು. ಇದರಲ್ಲಿ ದಲಿತರು, ರೈತರು ಮಹಿಳೆಯರು ಇದ್ದಾರೆ. ವಿಶೇಷವಾಗಿ 50 ಶೇಕಡ ಮಹಿಳೆಯರು ಮತ್ತು 20 ಶೇಕಡ ದಲಿತರು ನರೇಗಾ ಯೋಜನೆಯ ಫಲಾನುಭವಿಗಳು. ನರೇಗಾ ಯೋಜನೆಯಲ್ಲಿ ಜನರು ಇಷ್ಟಪಟ್ಟಲ್ಲಿ ಕೆಲಸ ಮಾಡಬಹುದಿತ್ತು. ಆದರೆ, ಹೊಸ ಕಾಯ್ದೆಯಲ್ಲಿ ಕೇಂದ್ರ ಹೇಳಿದ್ದಲ್ಲಿ ಕೆಲಸ ಮಾಡಬೇಕು. ನರೇಗಾದಲ್ಲಿ 365 ದಿನ ಕೆಲಸ ಇತ್ತು. ಯೋಜನೆ ರೂಪಿಸುವುದು ಗ್ರಾಮ ಪಂಚಾಯತ್ ಆಗಿತ್ತು. ಇದನ್ನು ಹೊಸ ಕಾಯ್ದೆಯಲ್ಲಿ ತೆಗೆದು ಹಾಕಿದ್ದಾರೆ ಎಂದರು.

ಈ ಎಲ್ಲಾ ಕಾರಣಗಳಿಗೆ ಕೇಂದ್ರದ ಹೊಸ ಕಾಯ್ದೆಯನ್ನು ನಾವು ವಿರೋಧ ಮಾಡಿದ್ದೇವೆ. ಅದನ್ನು ಸಂಪುಟ ರಾಜ್ಯಪಾಲರ ಭಾಷಣದಲ್ಲಿ ಸೇರಿಸಿತ್ತು. ನಮ್ಮ ಆಗ್ರಹ ನರೇಗಾ ಯೋಜನೆ ಮರು ಸ್ಥಾಪಿಸಬೇಕು, ಹೊಸ ಕಾಯ್ದೆ ರದ್ದು ಮಾಡಬೇಕು ಎಂಬುವುದಾಗಿದೆ. ನರೇಗಾ ಮರುಸ್ಥಾಪನೆ ಆಗುವವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಇದು ನಮ್ಮ ಸರ್ಕಾರದ ತೀರ್ಮಾನ. ಕೇಂದ್ರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿದಂತೆ ನಾವು ಹೋರಾಟ ರೂಪಿಸುತ್ತೇವೆ ಎಂದರು ತಿಳಿಸಿದರು.

ರಾಜ್ಯಪಾಲರು ಅವರೇ ತಯಾರು ಮಾಡಿದ ಒಂದು ಪ್ಯಾರದ ಭಾಷಣ ಮಾತ್ರ ಓದಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಇದರಿಂದ ಜನ ಪ್ರತಿನಿಧಿಗಳ ಸಭೆಗೆ ಅವಮಾನ ಆಗಿದೆ. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡುವುದು ಸಂವಿಧಾನಾತ್ಮಕ ಪದ್ದತಿಯಾಗಿತ್ತು. ರಾಜ್ಯಪಾಲರ ನಡೆಯನ್ನು ನಮ್ಮ ಸರ್ಕಾರ, ಪಕ್ಷ ಪ್ರತಿಭಟಿಸುತ್ತದೆ ಎಂದು ಹೇಳಿದರು.

ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರದವರು ಅವರ ತಪ್ಪು ಮುಚ್ಚಿಕೊಳ್ಳಲು ರಾಜ್ಯಪಾಲರಲ್ಲಿ ಬೇರೆ ಭಾಷಣ ಓದಿಸಿದ್ದಾರೆ. ಇದು ಸಂವಿಧಾನಬಾಹಿರ, ಸಂವಿಧಾನದ ಉಲ್ಲಂಘನೆ. ರಾಜ್ಯಪಾಲರು ತಮ್ಮ ಕರ್ತವ್ಯ, ಜವಾಬ್ದಾರಿ ಪಾಲನೆ ಮಾಡಿಲ್ಲ. ನಾವು ತಯಾರಿಸಿದ ಭಾಷಣ ಎಲ್ಲಾ ಸದಸ್ಯರಿಗೆ ಕೊಟ್ಟಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...