Homeಕರ್ನಾಟಕವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ...

ವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ

- Advertisement -
- Advertisement -

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಗುರುವಾರ (ಜ.22) ಭಾರೀ ಹೈಡ್ರಾಮ ನಡೆಯಿತು. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟ ಭಾಷಣ ಓದದೆ, ತಮ್ಮದೇ ಆದ ಕೇವಲ ಎರಡೇ ಸಾಲಿನ ಭಾಷಣ ಓದಿ ಹೊರ ನಡೆದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಆರಂಭದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಕಾನೂನು ಸಚಿವರ ಹೆಚ್‌.ಕೆ ಪಾಟೀಲ್ ಸೇರಿದಂತೆ ಪ್ರಮುಖರು ಮನವೊಲಿಸಿದ ಬಳಿಕ ರಾಜ್ಯಪಾಲರು ಸದನಕ್ಕೆ ಆಗಮಿಸಿದ್ದರು.

ರಾಜ್ಯಪಾಲರು ಸದನಕ್ಕೆ ಬರಲು ಒಪ್ಪಿದರೂ, ಸರ್ಕಾರ ಬರೆದುಕೊಟ್ಟ ಭಾಷಣ ಓದುವುದಿಲ್ಲ. ಅವರೇ ಪ್ರತ್ಯೇಕ ಭಾಷಣ ಬರೆದುಕೊಂಡು ಬಂದಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ರಾಜ್ಯಪಾಲರು ಸದನಕ್ಕೆ ಆಗಮಿಸಿ ಕೇವಲ ಎರಡು ಸಾಲಿನ ಭಾಷಣ ಮಾಡಿ ತೆರಳಿದರು. ಈ ವೇಳೆ ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ರಾಜ್ಯಪಾಲರನ್ನು ತಡೆಯುವ ಪ್ರಯತ್ನ ಮಾಡಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರು ವರ್ಷದ ಆರಂಭದಲ್ಲಿ ಮತ್ತು ಹೊಸ ಸರ್ಕಾರ ಬಂದಾಗ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವುದು ವಾಡಿಕೆ. ಸಂವಿಧಾನದ ವಿಧಿ 176 ಮತ್ತು 163 ರಾಜ್ಯಪಾಲರು ಅವರು ತಯಾರು ಮಾಡಿದ ಭಾಷಣ ಓದುವಂತಿಲ್ಲ. ಸಚಿವ ಸಂಪುಟ ಸಿದ್ದಪಡಿಸಿಕೊಟ್ಟ ಭಾಷಣ ಓದಲೇಬೇಕು ಎಂದು ಹೇಳಿದೆ ಎಂದರು.

ಇವತ್ತು ಜಂಟಿ ಅಧಿವೇಶನ ಕರೆಯಲಾಗಿದೆ. ಏಕೆಂದರೆ ನರೇಗಾ ಕಾಯ್ದೆಯನ್ನು ರದ್ದು ಮಾಡಿ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಹೊಸದಾಗಿ ಮಾಡಿದ್ದಾರೆ. ಅದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧ ಇದೆ. ಹೊಸ ಕಾಯ್ದೆಯಲ್ಲಿ ಮಹಾತ್ಮ ಗಾಂಧಿಯವರ ಹೆಸರು ತೆಗೆದು ಹಾಕಲಾಗಿದೆ. ಹಲವು ಜನಪರ ನಿಯಮಗಳನ್ನು ಮಾರ್ಪಾಡು ಮಾಡಲಾಗಿದೆ. 20 ವರ್ಷಗಳ ಹಿಂದೆ, ಅಂದರೆ 2005ರಲ್ಲಿ ಡಾ. ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಸಂವಿಧಾನದ ಆದೇಶಗಳನ್ನು ಅನುಸರಿಸಿ ಜನರಿಗೆ ಕೆಲಸದ ಹಕ್ಕು, ಆಹಾರದ ಹಕ್ಕು, ಮಾಹಿತಿಯ ಹಕ್ಕು ಮತ್ತು ಶಿಕ್ಷಣದ ಹಕ್ಕು ನೀಡಿದ್ದರು ಎಂದು ಹೇಳಿದರು.

ಮುಂದುವರಿದು, ಕೆಲಸದ ಹಕ್ಕು ಎಂದರೆ ವರ್ಷದಲ್ಲಿ 100 ದಿನಗಳ ಕಾಲ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಕೊಡುವುದು. ಇದರಲ್ಲಿ ದಲಿತರು, ರೈತರು ಮಹಿಳೆಯರು ಇದ್ದಾರೆ. ವಿಶೇಷವಾಗಿ 50 ಶೇಕಡ ಮಹಿಳೆಯರು ಮತ್ತು 20 ಶೇಕಡ ದಲಿತರು ನರೇಗಾ ಯೋಜನೆಯ ಫಲಾನುಭವಿಗಳು. ನರೇಗಾ ಯೋಜನೆಯಲ್ಲಿ ಜನರು ಇಷ್ಟಪಟ್ಟಲ್ಲಿ ಕೆಲಸ ಮಾಡಬಹುದಿತ್ತು. ಆದರೆ, ಹೊಸ ಕಾಯ್ದೆಯಲ್ಲಿ ಕೇಂದ್ರ ಹೇಳಿದ್ದಲ್ಲಿ ಕೆಲಸ ಮಾಡಬೇಕು. ನರೇಗಾದಲ್ಲಿ 365 ದಿನ ಕೆಲಸ ಇತ್ತು. ಯೋಜನೆ ರೂಪಿಸುವುದು ಗ್ರಾಮ ಪಂಚಾಯತ್ ಆಗಿತ್ತು. ಇದನ್ನು ಹೊಸ ಕಾಯ್ದೆಯಲ್ಲಿ ತೆಗೆದು ಹಾಕಿದ್ದಾರೆ ಎಂದರು.

ಈ ಎಲ್ಲಾ ಕಾರಣಗಳಿಗೆ ಕೇಂದ್ರದ ಹೊಸ ಕಾಯ್ದೆಯನ್ನು ನಾವು ವಿರೋಧ ಮಾಡಿದ್ದೇವೆ. ಅದನ್ನು ಸಂಪುಟ ರಾಜ್ಯಪಾಲರ ಭಾಷಣದಲ್ಲಿ ಸೇರಿಸಿತ್ತು. ನಮ್ಮ ಆಗ್ರಹ ನರೇಗಾ ಯೋಜನೆ ಮರು ಸ್ಥಾಪಿಸಬೇಕು, ಹೊಸ ಕಾಯ್ದೆ ರದ್ದು ಮಾಡಬೇಕು ಎಂಬುವುದಾಗಿದೆ. ನರೇಗಾ ಮರುಸ್ಥಾಪನೆ ಆಗುವವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಇದು ನಮ್ಮ ಸರ್ಕಾರದ ತೀರ್ಮಾನ. ಕೇಂದ್ರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿದಂತೆ ನಾವು ಹೋರಾಟ ರೂಪಿಸುತ್ತೇವೆ ಎಂದರು ತಿಳಿಸಿದರು.

ರಾಜ್ಯಪಾಲರು ಅವರೇ ತಯಾರು ಮಾಡಿದ ಒಂದು ಪ್ಯಾರದ ಭಾಷಣ ಮಾತ್ರ ಓದಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಇದರಿಂದ ಜನ ಪ್ರತಿನಿಧಿಗಳ ಸಭೆಗೆ ಅವಮಾನ ಆಗಿದೆ. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡುವುದು ಸಂವಿಧಾನಾತ್ಮಕ ಪದ್ದತಿಯಾಗಿತ್ತು. ರಾಜ್ಯಪಾಲರ ನಡೆಯನ್ನು ನಮ್ಮ ಸರ್ಕಾರ, ಪಕ್ಷ ಪ್ರತಿಭಟಿಸುತ್ತದೆ ಎಂದು ಹೇಳಿದರು.

ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರದವರು ಅವರ ತಪ್ಪು ಮುಚ್ಚಿಕೊಳ್ಳಲು ರಾಜ್ಯಪಾಲರಲ್ಲಿ ಬೇರೆ ಭಾಷಣ ಓದಿಸಿದ್ದಾರೆ. ಇದು ಸಂವಿಧಾನಬಾಹಿರ, ಸಂವಿಧಾನದ ಉಲ್ಲಂಘನೆ. ರಾಜ್ಯಪಾಲರು ತಮ್ಮ ಕರ್ತವ್ಯ, ಜವಾಬ್ದಾರಿ ಪಾಲನೆ ಮಾಡಿಲ್ಲ. ನಾವು ತಯಾರಿಸಿದ ಭಾಷಣ ಎಲ್ಲಾ ಸದಸ್ಯರಿಗೆ ಕೊಟ್ಟಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...