Homeಕರ್ನಾಟಕವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ...

ವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ

- Advertisement -
- Advertisement -

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಗುರುವಾರ (ಜ.22) ಭಾರೀ ಹೈಡ್ರಾಮ ನಡೆಯಿತು. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟ ಭಾಷಣ ಓದದೆ, ತಮ್ಮದೇ ಆದ ಕೇವಲ ಎರಡೇ ಸಾಲಿನ ಭಾಷಣ ಓದಿ ಹೊರ ನಡೆದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಆರಂಭದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ಕಾನೂನು ಸಚಿವರ ಹೆಚ್‌.ಕೆ ಪಾಟೀಲ್ ಸೇರಿದಂತೆ ಪ್ರಮುಖರು ಮನವೊಲಿಸಿದ ಬಳಿಕ ರಾಜ್ಯಪಾಲರು ಸದನಕ್ಕೆ ಆಗಮಿಸಿದ್ದರು.

ರಾಜ್ಯಪಾಲರು ಸದನಕ್ಕೆ ಬರಲು ಒಪ್ಪಿದರೂ, ಸರ್ಕಾರ ಬರೆದುಕೊಟ್ಟ ಭಾಷಣ ಓದುವುದಿಲ್ಲ. ಅವರೇ ಪ್ರತ್ಯೇಕ ಭಾಷಣ ಬರೆದುಕೊಂಡು ಬಂದಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ರಾಜ್ಯಪಾಲರು ಸದನಕ್ಕೆ ಆಗಮಿಸಿ ಕೇವಲ ಎರಡು ಸಾಲಿನ ಭಾಷಣ ಮಾಡಿ ತೆರಳಿದರು. ಈ ವೇಳೆ ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ರಾಜ್ಯಪಾಲರನ್ನು ತಡೆಯುವ ಪ್ರಯತ್ನ ಮಾಡಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರು ವರ್ಷದ ಆರಂಭದಲ್ಲಿ ಮತ್ತು ಹೊಸ ಸರ್ಕಾರ ಬಂದಾಗ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವುದು ವಾಡಿಕೆ. ಸಂವಿಧಾನದ ವಿಧಿ 176 ಮತ್ತು 163 ರಾಜ್ಯಪಾಲರು ಅವರು ತಯಾರು ಮಾಡಿದ ಭಾಷಣ ಓದುವಂತಿಲ್ಲ. ಸಚಿವ ಸಂಪುಟ ಸಿದ್ದಪಡಿಸಿಕೊಟ್ಟ ಭಾಷಣ ಓದಲೇಬೇಕು ಎಂದು ಹೇಳಿದೆ ಎಂದರು.

ಇವತ್ತು ಜಂಟಿ ಅಧಿವೇಶನ ಕರೆಯಲಾಗಿದೆ. ಏಕೆಂದರೆ ನರೇಗಾ ಕಾಯ್ದೆಯನ್ನು ರದ್ದು ಮಾಡಿ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಹೊಸದಾಗಿ ಮಾಡಿದ್ದಾರೆ. ಅದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧ ಇದೆ. ಹೊಸ ಕಾಯ್ದೆಯಲ್ಲಿ ಮಹಾತ್ಮ ಗಾಂಧಿಯವರ ಹೆಸರು ತೆಗೆದು ಹಾಕಲಾಗಿದೆ. ಹಲವು ಜನಪರ ನಿಯಮಗಳನ್ನು ಮಾರ್ಪಾಡು ಮಾಡಲಾಗಿದೆ. 20 ವರ್ಷಗಳ ಹಿಂದೆ, ಅಂದರೆ 2005ರಲ್ಲಿ ಡಾ. ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಸಂವಿಧಾನದ ಆದೇಶಗಳನ್ನು ಅನುಸರಿಸಿ ಜನರಿಗೆ ಕೆಲಸದ ಹಕ್ಕು, ಆಹಾರದ ಹಕ್ಕು, ಮಾಹಿತಿಯ ಹಕ್ಕು ಮತ್ತು ಶಿಕ್ಷಣದ ಹಕ್ಕು ನೀಡಿದ್ದರು ಎಂದು ಹೇಳಿದರು.

ಮುಂದುವರಿದು, ಕೆಲಸದ ಹಕ್ಕು ಎಂದರೆ ವರ್ಷದಲ್ಲಿ 100 ದಿನಗಳ ಕಾಲ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಕೊಡುವುದು. ಇದರಲ್ಲಿ ದಲಿತರು, ರೈತರು ಮಹಿಳೆಯರು ಇದ್ದಾರೆ. ವಿಶೇಷವಾಗಿ 50 ಶೇಕಡ ಮಹಿಳೆಯರು ಮತ್ತು 20 ಶೇಕಡ ದಲಿತರು ನರೇಗಾ ಯೋಜನೆಯ ಫಲಾನುಭವಿಗಳು. ನರೇಗಾ ಯೋಜನೆಯಲ್ಲಿ ಜನರು ಇಷ್ಟಪಟ್ಟಲ್ಲಿ ಕೆಲಸ ಮಾಡಬಹುದಿತ್ತು. ಆದರೆ, ಹೊಸ ಕಾಯ್ದೆಯಲ್ಲಿ ಕೇಂದ್ರ ಹೇಳಿದ್ದಲ್ಲಿ ಕೆಲಸ ಮಾಡಬೇಕು. ನರೇಗಾದಲ್ಲಿ 365 ದಿನ ಕೆಲಸ ಇತ್ತು. ಯೋಜನೆ ರೂಪಿಸುವುದು ಗ್ರಾಮ ಪಂಚಾಯತ್ ಆಗಿತ್ತು. ಇದನ್ನು ಹೊಸ ಕಾಯ್ದೆಯಲ್ಲಿ ತೆಗೆದು ಹಾಕಿದ್ದಾರೆ ಎಂದರು.

ಈ ಎಲ್ಲಾ ಕಾರಣಗಳಿಗೆ ಕೇಂದ್ರದ ಹೊಸ ಕಾಯ್ದೆಯನ್ನು ನಾವು ವಿರೋಧ ಮಾಡಿದ್ದೇವೆ. ಅದನ್ನು ಸಂಪುಟ ರಾಜ್ಯಪಾಲರ ಭಾಷಣದಲ್ಲಿ ಸೇರಿಸಿತ್ತು. ನಮ್ಮ ಆಗ್ರಹ ನರೇಗಾ ಯೋಜನೆ ಮರು ಸ್ಥಾಪಿಸಬೇಕು, ಹೊಸ ಕಾಯ್ದೆ ರದ್ದು ಮಾಡಬೇಕು ಎಂಬುವುದಾಗಿದೆ. ನರೇಗಾ ಮರುಸ್ಥಾಪನೆ ಆಗುವವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಇದು ನಮ್ಮ ಸರ್ಕಾರದ ತೀರ್ಮಾನ. ಕೇಂದ್ರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿದಂತೆ ನಾವು ಹೋರಾಟ ರೂಪಿಸುತ್ತೇವೆ ಎಂದರು ತಿಳಿಸಿದರು.

ರಾಜ್ಯಪಾಲರು ಅವರೇ ತಯಾರು ಮಾಡಿದ ಒಂದು ಪ್ಯಾರದ ಭಾಷಣ ಮಾತ್ರ ಓದಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಇದರಿಂದ ಜನ ಪ್ರತಿನಿಧಿಗಳ ಸಭೆಗೆ ಅವಮಾನ ಆಗಿದೆ. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡುವುದು ಸಂವಿಧಾನಾತ್ಮಕ ಪದ್ದತಿಯಾಗಿತ್ತು. ರಾಜ್ಯಪಾಲರ ನಡೆಯನ್ನು ನಮ್ಮ ಸರ್ಕಾರ, ಪಕ್ಷ ಪ್ರತಿಭಟಿಸುತ್ತದೆ ಎಂದು ಹೇಳಿದರು.

ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರದವರು ಅವರ ತಪ್ಪು ಮುಚ್ಚಿಕೊಳ್ಳಲು ರಾಜ್ಯಪಾಲರಲ್ಲಿ ಬೇರೆ ಭಾಷಣ ಓದಿಸಿದ್ದಾರೆ. ಇದು ಸಂವಿಧಾನಬಾಹಿರ, ಸಂವಿಧಾನದ ಉಲ್ಲಂಘನೆ. ರಾಜ್ಯಪಾಲರು ತಮ್ಮ ಕರ್ತವ್ಯ, ಜವಾಬ್ದಾರಿ ಪಾಲನೆ ಮಾಡಿಲ್ಲ. ನಾವು ತಯಾರಿಸಿದ ಭಾಷಣ ಎಲ್ಲಾ ಸದಸ್ಯರಿಗೆ ಕೊಟ್ಟಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...