Homeಮುಖಪುಟಮನೆ ತಲುಪಲಿದ್ದಾರೆ ವಲಸೆ ಕಾರ್ಮಿಕರು: ವಿಶೇಷ ರೈಲಿಗೆ ಕೇಂದ್ರ ಅಸ್ತು

ಮನೆ ತಲುಪಲಿದ್ದಾರೆ ವಲಸೆ ಕಾರ್ಮಿಕರು: ವಿಶೇಷ ರೈಲಿಗೆ ಕೇಂದ್ರ ಅಸ್ತು

- Advertisement -
- Advertisement -

ಕೊರೊನಾ ವೈರಸ್ ರೋಗಲಕ್ಷಣಗಳಿಲ್ಲದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರಿಗೆ ತಮ್ಮ ರಾಜ್ಯಗಳಿಗೆ ಮರಳಲು ಅವಕಾಶ ನೀಡಿದ ಎರಡು ದಿನಗಳ ನಂತರ, ದೇಶಾದ್ಯಂತ ಲಾಕ್ ಡೌನ್ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.

ಲಾಕ್‌ಡೌನ್‌ನಿಂದ ಸಿಕ್ಕಿಬಿದ್ದಿದ್ದ ವಲಸಿಗ ಕಾರ್ಮಿಕರನ್ನು ಸಾಗಿಸುವ ಮೊದಲ “ವಿಶೇಷ ರೈಲು” ಇಂದು ಬೆಳಿಗ್ಗೆ 4: 30 ರ ಸುಮಾರಿಗೆ ತೆಲಂಗಾಣದಿಂದ ಜಾರ್ಖಂಡ್‌ಗೆ ತೆರಳಿದೆ. ಈ ರೈಲು ತೆಲಂಗಾಣದ ಲಿಂಗಂಪಲ್ಲಿಯಿಂದ 1,200 ಜನರನ್ನು ಜಾರ್ಖಂಡ್‌ನ ಹತಿಯಾ ಜಿಲ್ಲೆಗೆ ಕರೆದೊಯ್ಯಿತು.

24 ಕೋಚ್‌ಗಳ ರೈಲು ಸಾಮಾನ್ಯವಾಗಿ 72 ಜನರನ್ನು ಒಂದು ವಿಭಾಗದಲ್ಲಿ ಕೂರಿಸುತ್ತದೆಯಾದರೂ ಸಾಮಾಜಿಕ ದೂರ ಮಾರ್ಗಸೂಚಿಗಳಿಗೆ ಅನುಸಾರವಾಗಿ ತಲಾ 54 ಜನರನ್ನು ಮಾತ್ರ ಅನುಮತಿಸುತ್ತದೆ. ರೈಲಿಗೆ ಏರುವ ಮೊದಲು ಮೊದಲು ಎಲ್ಲಾ ಪ್ರಯಾಣಿಕರನ್ನು ಸಹ ರೋಗಲಕ್ಷಣಗಳಿಗಾಗಿ ಪರೀಕ್ಷಿಸಲಾಯಿತು.

ಎರಡನೇ ರೈಲು ಕೇರಳದ ಎರ್ನಾಕುಲಂನಿಂದ ಇಂದು ಸಂಜೆ ಒಡಿಶಾದ ಭುವನೇಶ್ವರಕ್ಕೆ ಹೊರಡಲಿದೆ ಎಂದು ಕೇರಳ ಸಚಿವ ವಿ.ಎಸ್.ಸುನೀಲ್ ಕುಮಾರ್ ತಿಳಿಸಿದ್ದಾರೆ. ಸಂಜೆ 6 ಗಂಟೆಗೆ ಹೊರಡಲಿರುವ ಈ ರೈಲು 1,000 ಕ್ಕೂ ಹೆಚ್ಚು ಜನರನ್ನು ಕರೆದೊಯ್ಯುವ ನಿರೀಕ್ಷೆಯಿದೆ. ಈ ರೈಲು ಸಂಪೂರ್ಣ ಸೋಂಕುರಹಿತವಾಗಲಿದ್ದು, ರಾಜ್ಯದಿಂದ ನಿಲ್ದಾಣಕ್ಕೆ ಕರೆತರಲಾಗುವ ಎಲ್ಲ ಪ್ರಯಾಣಿಕರು ಸಾಮಾಜಿಕ ದೂರವನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ.

ಭಾರತೀಯ ರೈಲ್ವೆ ವಲಯ ಕಚೇರಿಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ರಾಜ್ಯ ಸರ್ಕಾರಗಳಿಂದ ಇಂತಹ ಹೆಚ್ಚಿನ ವಿನಂತಿಗಳು ಬಂದಿವೆ ಎನ್ನಲಾಗಿದೆ.

ಬಿಜೆಪಿ ಪಕ್ಷದಿಂದ ಬಿದ್ದ ಒತ್ತಡದ ನಂತರ ಸಿಕ್ಕಿಬಿದ್ದ ಜನರಿಗೆ ಪ್ರಯಾಣಿಸಲು ಅವಕಾಶ ನೀಡುವ ನಿರ್ಧಾರ ಬಂದಿದೆ ಎಂದು ಮೂಲಗಳು ತಿಳಿಸಿವೆ. ವಲಸೆಗಾರರ ​​ಬಿಕ್ಕಟ್ಟು ಪಕ್ಷವನ್ನು ರಾಜಕೀಯವಾಗಿ ಹಾನಿಗೊಳಿಸಬಹುದು ಎಂಬ ಆತಂಕಗಳು ಪಕ್ಷದೊಳಗೆ ಮೂಡಿಬಂದ ನಂತರ ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಅವರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಲಾಯಿತು.

ಮಾರ್ಚ್ 25 ರಂದು ರಾಷ್ಟ್ರವ್ಯಾಪಿ ಲಾಕ್ ಡೌನ್ ನಂತರ ಲಕ್ಷಾಂತರ ವಲಸೆ ಕಾರ್ಮಿಕರು ಹಾಗೂ ಇತರರು ಇತರ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದಾರೆ. ಕೇಂದ್ರವು ವಲಸಿಗರ ಬಗ್ಗೆ ಕಾಳಜಿ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರೂ ಭಾರತದಾದ್ಯಂತ ಹಸಿವಿನ ಬಗ್ಗೆ ವರದಿಗಳು ಬರತೊಡಗಿವೆ.

ಲಾಕ್ ಡೌನ್ ಸಮಯದಲ್ಲಿ ಆರ್ಥಿಕ ಚಟುವಟಿಕೆಗಳು ಹಠಾತ್ ನಿಲುಗಡೆಗೆ ಬರುತ್ತಿದ್ದಂತೆ, ಸಾವಿರಾರು ಜನರಿಗೆ ಉದ್ಯೋಗ, ಹಣ, ಆಹಾರ ಹಾಗೂ ಆಶ್ರಯವಿಲ್ಲದೆ ಕಷ್ಟಕ್ಕೊಳಗಾಗಿದ್ದರು. ಅಲ್ಲದೆ ಅಂತರರಾಜ್ಯ ಸಾರಿಗೆ ಸ್ಥಗಿತಗೊಂಡಿದ್ದರಿಂದ ಲಕ್ಷಾಂತರ ಜನರು ಸಾವಿರಾರು ಕಿಲೋಮೀಟರ್ ದೂರದ ಮನೆಗೆ ಕಾಲ್ನಡಿಗೆಯಲ್ಲೆ ನಡೆದದ್ದರಿಂದ ಊರು ತಲುಪುವುದಕ್ಕಿಂತಲೂ ಮೊದಲೆ ನೂರಾರು ಜನರು ಸಾವಿಗೀಡಾಗಿದ್ದು ವರದಿಯಾಗಿತ್ತು.

ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ಎರಡನೇ ಹಂತವು ಮೇ 3 ರಂದು ಕೊನೆಗೊಳ್ಳಲಿದೆ. ಕೇಂದ್ರ ಸರ್ಕಾರವು ಮತ್ತೊಂದು ಬಾರಿಗೆ ಲಾಕ್‌ಡೌನ್ ಅನ್ನು ವಿಸ್ತರಿಸುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.


ಇದನ್ನೂ ಓದಿ: ಕಾರ್ಮಿಕರ ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...