Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ. 

- Advertisement -
- Advertisement -

ಅಮೆರಿಕ ಚುನಾವಣೆ ಆರಂಭವಾಗುತ್ತಿದ್ದಂತೆ ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಾಗಿ ಅವರ ಪೂರ್ವಜರಿದ್ದ ಹಳ್ಳಿಯಲ್ಲಿ ವಿಶೇಷ ಪೂಜೆ-ಪ್ರಾರ್ಥನೆಗಳು ನಡೆದಿವೆ. ಅವರ ಗೆಲುವಿಗಾಗಿ ಹಾರೈಸಿ ಹಳ್ಳಿಯ ರಸ್ತೆಗಳಲ್ಲಿ ಈ ಹಿಂದೆ ಬ್ಯಾನರ್‌ಗಳನ್ನು ಹಾಕಲಾಗಿತ್ತು. ಇಂದು ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆದಿದೆ.

ದಕ್ಷಿಣ ಭಾರತದ ತಮಿಳುನಾಡಿನ ತುಲಸೇಂದ್ರಪುರಂ ಗ್ರಾಮಸ್ಥರು ಕಮಲ ಹ್ಯಾರಿಸ್ ಅವರ ಬ್ಯಾನರ್‌ಗಳನ್ನು ಹಾಕಿ, ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತು ಪೂಜೆ ಮಾಡಿಸಿ ಆಕೆಯ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ.

ಚೆನ್ನೈಯಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ತುಲಸೇಂದ್ರಪುರಂ, ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ದಕ್ಷಿಣ ಏಷ್ಯಾದ ಮೊದಲ ಯುಎಸ್ ಸೆನೆಟರ್ ಎನಿಸಿಕೊಂಡಿರುವ ಕಮಲಾ ಹ್ಯಾರಿಸ್‌ ಅವರ ಸಾಧನೆ ಬಗ್ಗೆ ತುಲಸೇಂದ್ರಪುರಂ ನಿವಾಸಿಗಳು ಹೆಮ್ಮೆಯಿಂದ ಮಾತನಾಡುತ್ತಾರೆ. ಚುನಾವಣಾ ಫಲಿತಾಂಶಕ್ಕಾಗಿ ಅಮೆರಿಕನ್ನರಂತೆ ಇಲ್ಲಿನ ಜನರು ಕಾಯುತ್ತಿದ್ದಾರೆ.

ಕಮಲಾ

ತಮ್ಮ ಕುಟುಂಬದೊಂದಿಗೆ ಹಳ್ಳಿಯ ಸಂಬಂಧವನ್ನು ವಿವರಿಸಿದ ಎಂ.ಎಸ್. ಹ್ಯಾರಿಸ್ ಅವರ ಚಿಕ್ಕಮ್ಮ ಡಾ.ಸರಳಾ ಗೋಪಾಲನ್ “ತುಲಸೇಂದ್ರಪುರಂ ಗ್ರಾಮ ದೇವರು ನನ್ನ ತಂದೆಯ ಕುಟುಂಬ ದೇವತೆ. ಕುಟುಂಬದಲ್ಲಿ ಮದುವೆ ಅಥವಾ ವಿಶೇಷ ಸಂದರ್ಭ ಬಂದಾಗಲೆಲ್ಲಾ ನಾವು ದೇವಸ್ಥಾನಕ್ಕೆ ಭೇಟಿ ನೀಡುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಇಂದು ಗ್ರಾಮದಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ಪ್ರಾರ್ಥನೆಗಳ ಬಗ್ಗೆ ನನಗೆ ತಿಳಿದಿದೆ ಎಂದು ಡಾ.ಸರಳಾ ಹೇಳಿದರು. “ನಾನು ಪ್ರತಿವರ್ಷ ದೇವಸ್ಥಾನಕ್ಕೆ ಹೋಗಿ ನಮ್ಮ ಕುಟುಂಬದ ಪ್ರತಿಯೊಬ್ಬರಿಗಾಗಿ ಪ್ರಾರ್ಥಿಸುತ್ತೇನೆ. ಈ ವರ್ಷ, ಕೊರೊನಾದಿಂದಾಗಿ ನಾನು ಹೋಗಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದರು.

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ.

“ಅವರ ಸಾಧನೆಗಳ ಬಗ್ಗೆ ನಮಗೆ ಸಂತೋಷ ಮತ್ತು ಹೆಮ್ಮೆ ಇದೆ. ನಮ್ಮ ಗ್ರಾಮದ ಮೂಲವನ್ನು ಹೊಂದಿರುವ ಕಮಲಾ ಅವರು ಅಮೆರಿಕ ಉಪಾಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ಅವರ ಗೆಲುವಿಗಾಗಿ ಪೂಜೆ-ಪ್ರಾರ್ಥನೆ ನಡೆದಿದೆ” ಎಂದು ದೇವಾಲಯದ ಆಡಳಿತಾಧಿಕಾರಿ ರಮಣನ್ ತಿಳಿಸಿದ್ದಾರೆ.

Kamala Harris: Watch: US Vice presidential candidate Kamala Harris' posters pop up in Tamil Nadu - The Economic Times Video | ET Now

ಇತ್ತಿಚೆಗೆ ಕಮಲಾ ಹ್ಯಾರಿಸ್ ತನ್ನ ನೆಚ್ಚಿನ ಭಾರತೀಯ ತಿನಿಸುಗಳ ಬಗ್ಗೆ ಹೇಳುವಾಗ, ಇಡ್ಲಿ, ಒಳ್ಳೆಯ ಸಾಂಬಾರ್” ಮತ್ತು “ಯಾವುದೇ ರೀತಿಯ ಟಿಕ್ಕಾ” ಮೇಲಿನ ತನ್ನ ಪ್ರೀತಿಯನ್ನು ಹಂಚಿಕೊಂಡಿದ್ದರು. ಈ ಬಾರಿ ಜೋ ಬಿಡೆನ್ ಆಯ್ಕೆಯಾದರೆ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.

ಕಮಲಾ ಹ್ಯಾರಿಸ್ ತಮ್ಮ 5ನೇ ವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದರು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು. ಗ್ರಾಮದಲ್ಲಿ ಗೋಪಾಲನ್ ಅವರ ಮನೆ ಪಾಳು ಬಿದ್ದು ಹೋಗಿದ್ದು, ಅಸ್ತಿತ್ವದಲ್ಲಿಲ್ಲ.

ಹ್ಯಾರಿಸ್ ಅವರ ಅಜ್ಜ ಪಿ.ವಿ. ಗೋಪಾಲನ್ ಮತ್ತು ಅವರ ಕುಟುಂಬ ಸುಮಾರು 90 ವರ್ಷಗಳ ಹಿಂದೆ ತುಲಸೇಂದ್ರಪುರಂನಿಂದ ಚೆನ್ನೈಗೆ ವಲಸೆ ಹೋಗಿದ್ದರು. ಕಮಲಾ ಹ್ಯಾರಿಸ್‌ ಅವರ ತಾಯಿ ತಮಿಳುನಾಡಿನವರಾದರೇ, ಅವರ ತಂದೆ, ಜಮೈಕಾದವರು. ಈ ಇಬ್ಬರೂ ಅಧ್ಯಯನಕ್ಕಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದರು.


ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...