Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ. 

- Advertisement -
- Advertisement -

ಅಮೆರಿಕ ಚುನಾವಣೆ ಆರಂಭವಾಗುತ್ತಿದ್ದಂತೆ ಡೆಮಾಕ್ರಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಾಗಿ ಅವರ ಪೂರ್ವಜರಿದ್ದ ಹಳ್ಳಿಯಲ್ಲಿ ವಿಶೇಷ ಪೂಜೆ-ಪ್ರಾರ್ಥನೆಗಳು ನಡೆದಿವೆ. ಅವರ ಗೆಲುವಿಗಾಗಿ ಹಾರೈಸಿ ಹಳ್ಳಿಯ ರಸ್ತೆಗಳಲ್ಲಿ ಈ ಹಿಂದೆ ಬ್ಯಾನರ್‌ಗಳನ್ನು ಹಾಕಲಾಗಿತ್ತು. ಇಂದು ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆದಿದೆ.

ದಕ್ಷಿಣ ಭಾರತದ ತಮಿಳುನಾಡಿನ ತುಲಸೇಂದ್ರಪುರಂ ಗ್ರಾಮಸ್ಥರು ಕಮಲ ಹ್ಯಾರಿಸ್ ಅವರ ಬ್ಯಾನರ್‌ಗಳನ್ನು ಹಾಕಿ, ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತು ಪೂಜೆ ಮಾಡಿಸಿ ಆಕೆಯ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ.

ಚೆನ್ನೈಯಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ತುಲಸೇಂದ್ರಪುರಂ, ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ದಕ್ಷಿಣ ಏಷ್ಯಾದ ಮೊದಲ ಯುಎಸ್ ಸೆನೆಟರ್ ಎನಿಸಿಕೊಂಡಿರುವ ಕಮಲಾ ಹ್ಯಾರಿಸ್‌ ಅವರ ಸಾಧನೆ ಬಗ್ಗೆ ತುಲಸೇಂದ್ರಪುರಂ ನಿವಾಸಿಗಳು ಹೆಮ್ಮೆಯಿಂದ ಮಾತನಾಡುತ್ತಾರೆ. ಚುನಾವಣಾ ಫಲಿತಾಂಶಕ್ಕಾಗಿ ಅಮೆರಿಕನ್ನರಂತೆ ಇಲ್ಲಿನ ಜನರು ಕಾಯುತ್ತಿದ್ದಾರೆ.

ಕಮಲಾ

ತಮ್ಮ ಕುಟುಂಬದೊಂದಿಗೆ ಹಳ್ಳಿಯ ಸಂಬಂಧವನ್ನು ವಿವರಿಸಿದ ಎಂ.ಎಸ್. ಹ್ಯಾರಿಸ್ ಅವರ ಚಿಕ್ಕಮ್ಮ ಡಾ.ಸರಳಾ ಗೋಪಾಲನ್ “ತುಲಸೇಂದ್ರಪುರಂ ಗ್ರಾಮ ದೇವರು ನನ್ನ ತಂದೆಯ ಕುಟುಂಬ ದೇವತೆ. ಕುಟುಂಬದಲ್ಲಿ ಮದುವೆ ಅಥವಾ ವಿಶೇಷ ಸಂದರ್ಭ ಬಂದಾಗಲೆಲ್ಲಾ ನಾವು ದೇವಸ್ಥಾನಕ್ಕೆ ಭೇಟಿ ನೀಡುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಇಂದು ಗ್ರಾಮದಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ಪ್ರಾರ್ಥನೆಗಳ ಬಗ್ಗೆ ನನಗೆ ತಿಳಿದಿದೆ ಎಂದು ಡಾ.ಸರಳಾ ಹೇಳಿದರು. “ನಾನು ಪ್ರತಿವರ್ಷ ದೇವಸ್ಥಾನಕ್ಕೆ ಹೋಗಿ ನಮ್ಮ ಕುಟುಂಬದ ಪ್ರತಿಯೊಬ್ಬರಿಗಾಗಿ ಪ್ರಾರ್ಥಿಸುತ್ತೇನೆ. ಈ ವರ್ಷ, ಕೊರೊನಾದಿಂದಾಗಿ ನಾನು ಹೋಗಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದರು.

ತುಲಸೇಂದ್ರಪುರಂ ದೇವಾಲಯದ ಫಲಕದಲ್ಲಿ ಇತರ ದಾನಿಗಳ ಜೊತೆಯಲ್ಲಿ, 2014 ರಲ್ಲಿ 5,000 ರೂಪಾಯಿ ದಾನ ನೀಡಿದ್ದ ಕಮಲಾ ಹ್ಯಾರಿಸ್ ಅವರ ಹೆಸರನ್ನು ಕೆತ್ತಲಾಗಿದೆ.

“ಅವರ ಸಾಧನೆಗಳ ಬಗ್ಗೆ ನಮಗೆ ಸಂತೋಷ ಮತ್ತು ಹೆಮ್ಮೆ ಇದೆ. ನಮ್ಮ ಗ್ರಾಮದ ಮೂಲವನ್ನು ಹೊಂದಿರುವ ಕಮಲಾ ಅವರು ಅಮೆರಿಕ ಉಪಾಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ಅವರ ಗೆಲುವಿಗಾಗಿ ಪೂಜೆ-ಪ್ರಾರ್ಥನೆ ನಡೆದಿದೆ” ಎಂದು ದೇವಾಲಯದ ಆಡಳಿತಾಧಿಕಾರಿ ರಮಣನ್ ತಿಳಿಸಿದ್ದಾರೆ.

Kamala Harris: Watch: US Vice presidential candidate Kamala Harris' posters pop up in Tamil Nadu - The Economic Times Video | ET Now

ಇತ್ತಿಚೆಗೆ ಕಮಲಾ ಹ್ಯಾರಿಸ್ ತನ್ನ ನೆಚ್ಚಿನ ಭಾರತೀಯ ತಿನಿಸುಗಳ ಬಗ್ಗೆ ಹೇಳುವಾಗ, ಇಡ್ಲಿ, ಒಳ್ಳೆಯ ಸಾಂಬಾರ್” ಮತ್ತು “ಯಾವುದೇ ರೀತಿಯ ಟಿಕ್ಕಾ” ಮೇಲಿನ ತನ್ನ ಪ್ರೀತಿಯನ್ನು ಹಂಚಿಕೊಂಡಿದ್ದರು. ಈ ಬಾರಿ ಜೋ ಬಿಡೆನ್ ಆಯ್ಕೆಯಾದರೆ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಲಿದ್ದಾರೆ.

ಕಮಲಾ ಹ್ಯಾರಿಸ್ ತಮ್ಮ 5ನೇ ವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದರು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು. ಗ್ರಾಮದಲ್ಲಿ ಗೋಪಾಲನ್ ಅವರ ಮನೆ ಪಾಳು ಬಿದ್ದು ಹೋಗಿದ್ದು, ಅಸ್ತಿತ್ವದಲ್ಲಿಲ್ಲ.

ಹ್ಯಾರಿಸ್ ಅವರ ಅಜ್ಜ ಪಿ.ವಿ. ಗೋಪಾಲನ್ ಮತ್ತು ಅವರ ಕುಟುಂಬ ಸುಮಾರು 90 ವರ್ಷಗಳ ಹಿಂದೆ ತುಲಸೇಂದ್ರಪುರಂನಿಂದ ಚೆನ್ನೈಗೆ ವಲಸೆ ಹೋಗಿದ್ದರು. ಕಮಲಾ ಹ್ಯಾರಿಸ್‌ ಅವರ ತಾಯಿ ತಮಿಳುನಾಡಿನವರಾದರೇ, ಅವರ ತಂದೆ, ಜಮೈಕಾದವರು. ಈ ಇಬ್ಬರೂ ಅಧ್ಯಯನಕ್ಕಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದರು.


ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...