Homeಕರ್ನಾಟಕಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ; ಸತ್ಯ ಬರೆಯೋಕೆ ಪ್ರಯತ್ನಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ; ಸತ್ಯ ಬರೆಯೋಕೆ ಪ್ರಯತ್ನಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ಎಲ್ಲ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ; ತಿದ್ದಿಕೊಳ್ಳುತ್ತೇನೆ. ಆದರೆ, ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್’ ಎಂದು ನಿಷ್ಠುರವಾಗಿ ಮಾತನಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಕಿವಿಮಾತು ಹೇಳಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

“ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು ಘೋಷಿಸಿದ್ದಾರೆ. ಆದರೂ ಮಹಾರಾಷ್ಟ್ರ ಚುನಾವಣೆ ವೇಳೆ ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ ಎಂದು ಸುಳ್ಳು ಜಾಹಿರಾತು ನೀಡಿದರು” ಎಂದು ಸಿಎಂ ವ್ಯಂಗ್ಯವಾಡಿದರು.

“ಇವತ್ತು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ; ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ, ನೀವು ಜನರ ಧ್ವನಿಯಾಗಿ ಕೆಲಸ ಮಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಪ್ರಯತ್ನಿಸಿ ನೋಡೋಣ” ಎಂದರು.

“ಮನಸಾಕ್ಷಿಗೆ ತಕ್ಕಂತೆ ಮಾಧ್ಯಮಗಳು ವರದಿ ಮಾಡಿದರೆ ಸಮಾಜಕ್ಕೆ ಅದಕ್ಕಿಂತ ದೊಡ್ಡ ಸೇವೆ ಇಲ್ಲ. ಸುದ್ದಿಗಳನ್ನು ವೈಭವೀಕರಿಸುವುದು, ಮೂಡ ನಂಬಿಕೆಗಳನ್ನು ಬೆಂಬಲಿಸೋಕೆ ಹೋಗಬೇಡಿ. ನನ್ನ ಕಾರು ಮೇಲೆ ಕಾಗೆ ಕುಳಿತಿದ್ದಕ್ಕೆ ಜ್ಯೋತಿಷಿಗಳನ್ನು ಚಾನಲ್ ಗಳಿಗೆ ಕರೆಸಿ ಏನೆಲ್ಲಾ ಹೇಳಿಸಿದಿರಿ. ನಾನು 5 ವರ್ಷ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸಲ್ಲ ಎಂದು ತೋರಿಸಿದಿರಿ. ಆದರೆ, ನಾನು ಐದು ವರ್ಷ ಪೂರೈಸಿ ಎರಡನೇ ಬಾರಿ ಸಿಎಂ ಆದೆ. ಈಗ ಹೇಳಿ ಕಾಗೆ ಸುದ್ದಿಯಿಂದ ಮಾಧ್ಯಮಗಳ ವಿಶ್ವಾಸಾರ್ಹತೆ ಕಡಿಮೆ ಆಯ್ತೋ ಇಲ್ವೋ” ಎಂದು ಪ್ರಶ್ನಿಸಿದರು.

“ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನಿಭಾಯಿಸಿ” ಎಂದು ಸಲಹೆ ನೀಡಿದರು.

“ನಾವು ಊಟಕ್ಕೆ ಸೇರಿ ಏನೋ ಮಾತಾಡಿರ್ತೀವಿ. ಆದರೆ ಮಾಧ್ಯಮಗಳೇ ಡೈಲಾಗ್ ಬರೆದು ಬಿಡ್ತಾರೆ. ನಮಗೆ ಗೊತ್ತೇ ಇರದ ವಿಷಯವನ್ನು ಅವರೇ ಡೈಲಾಗ್ ಬರೆದು ತೋರಿಸಿದ್ದಾರೆ” ಎಂದು ಟೀಕಿಸಿದರು.

“ಬುದ್ದ, ಬಸವ, ಅಂಬೇಡ್ಕರ್ ಹೇಳಿದ ಸಮ ಸಮಾಜದ ಆಶಯ ಈಡೇರಿಸುವ ದಿಕ್ಕಿನಲ್ಲಿ ವೃತ್ತಿಪರತೆ ನಿರ್ವಹಿಸಿದರೆ ಅದು ಸಮಾಜಕ್ಕೆ ಉಪಯೋಗವಾಗುತ್ತದೆ. ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ” ಎಂದು ಹೇಳಿದರು.

ಇದನ್ನೂ ಓದಿ; ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಮಂಡನೆ – ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...