Homeಮುಖಪುಟಭಾಷಣಗಳಲ್ಲಿ ಹಿಂಸಾಚಾರಕ್ಕೆ ಕರೆ ನೀಡಿಲ್ಲ - ದೆಹಲಿ ಹೈಕೋರ್ಟ್‌ಗೆ ತಿಳಿಸಿದ ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್

ಭಾಷಣಗಳಲ್ಲಿ ಹಿಂಸಾಚಾರಕ್ಕೆ ಕರೆ ನೀಡಿಲ್ಲ – ದೆಹಲಿ ಹೈಕೋರ್ಟ್‌ಗೆ ತಿಳಿಸಿದ ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್

- Advertisement -
- Advertisement -

2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ವೇಳೆ ತಾನು ಮಾಡಿದ ಯಾವುದೇ ಭಾಷಣಗಳಲ್ಲಿ ಹಿಂಸಾಚಾರಕ್ಕೆ ಕರೆ ನೀಡಿಲ್ಲ ಎಂದು ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಹಿಂಸಾಚಾರಕ್ಕೆ ಕರೆ ನೀಡಿಲ್ಲ

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಯಾಗಿರುವ ಶಾರ್ಜಿಲ್ ಇಮಾಮ್, ತನ್ನ ಮೇಲಿನ ಆರೋಪಕ್ಕೆ ವಿರುದ್ಧವಾಗಿ, ಪ್ರತಿಭಟನೆಯು ಅಹಿಂಸಾತ್ಮಕವಾಗಿರಬೇಕಾದ ಅಗತ್ಯವನ್ನು ತಾನು ಒತ್ತಿಹೇಳಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಹಿಂಸಾಚಾರಕ್ಕೆ ಕರೆ ನೀಡಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶಾರ್ಜಿಲ್ ಅವರು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯಲ್ಲಿ, ಫೆಬ್ರವರಿ 2020ರ ವೇಳೆ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ ಗಲಭೆಗಳನ್ನು ಹುಟ್ಟುಹಾಕಲು ಸಂಚು ರೂಪಿಸಿದ ಇತರ ಆರೋಪಿಗಳೊಂದಿಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ತನ್ನ ಮತ್ತು ಸಹ-ಆರೋಪಿಗಳ ನಡುವೆ ಅಂತಹ ಯಾವುದೇ ಚಾಟ್‌ಗಳಿಲ್ಲದಿದ್ದರೂ ಕೂಡಾ, ಪ್ರಾಸಿಕ್ಯೂಷನ್ ತನ್ನ ಪ್ರಕರಣವನ್ನು ವಾಟ್ಸಾಪ್ ಚಾಟ್‌ಗಳನ್ನು ಆಧರಿಸಿದೆ ದಾಖಲಿಸಿದೆ ಎಂದು ಅವರ ವಕೀಲರು ವಾದಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ಜನವರಿ 28, 2020 ರಂದು ಶಾರ್ಜಿಲ್ ಇಮಾಮ್ ಅವರನ್ನು ಬಂಧಿಸಲಾಯಿತು. ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಪ್ರಕರಣಗಳು ಸೇರಿದಂತೆ ದೇಶದ್ರೋಹ ಮತ್ತು ಕಾನೂನುಬಾಹಿರ ಸಭೆ ನಡೆಸಿದರುವ ಬಗ್ಗೆ ಪ್ರಕರಣ ದಾಖಲಿಸಲಾಯಿತು.

ನಂತರ ಫೆಬ್ರವರಿ 2020ರಲ್ಲಿ ಸಂಭವಿಸಿದ ದೆಹಲಿ ಗಲಭೆಯಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ ದೊಡ್ಡ ಪಿತೂರಿಯಲ್ಲಿ ಶಾರ್ಜಿಲ್ ಇಮಾಮ್ ಕೂಡ ಇದ್ದಾರೆ ಎಂದು ಪೊಲೀಸರು ನಂತರ ಆರೋಪಿಸಿದ್ದರು. ರಾಜಕೀಯ ಪಕ್ಷಗಳು ಹಿಂಸಾಚಾರವನ್ನು ಪ್ರಚೋದಿಸುವ ಸಾಧ್ಯತೆಯ ಅತಂಕದಿಂದ ತಾನು ದೆಹಲಿಯ ಶಾಹೀನ್ ಬಾಗ್ ಪ್ರತಿಭಟನೆಯಿಂದ ದೂರ ಉಳಿದಿದ್ದೆ ಎಂದು ಅವರು ವಾದಿಸಿದ್ದಾರೆ. ಡಿಸೆಂಬರ್ 20 ರಂದು ಹೈಕೋರ್ಟ್ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಅದನ್ನು ವಿರೋಧಿಸುವವರ ನಡುವೆ ಘರ್ಷಣೆಗಳು ನಡೆದಿದ್ದವು. ಹಿಂಸಾಚಾರದಲ್ಲಿ 53 ಮಂದಿ ಸಾವನ್ನಪ್ಪಿದ್ದರು ಮತ್ತು ನೂರಾರು ಮಂದಿ ಗಾಯಗೊಂಡಿದ್ದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಇದನ್ನೂ ಓದಿ: ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ

ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...