Homeಕರ್ನಾಟಕಸಾಧ್ವಿಯ ಬಾಯಲ್ಲಿ ಹಿಂಸೆಯ ಮಾತು!

ಸಾಧ್ವಿಯ ಬಾಯಲ್ಲಿ ಹಿಂಸೆಯ ಮಾತು!

- Advertisement -
- Advertisement -

ಶಿವಮೊಗ್ಗದಲ್ಲಿ ಆ ದಿನ ಕ್ರಿಸ್‌ಮಸ್ ಹಬ್ಬ. ಎಂದಿನಂತೆ ಶಾಂತಿ ಸಮಾಧಾನದಿಂದ ಕ್ರಿಸ್‌ಮಸ್ ಆಚರಿಸುವ ಕ್ರಿಶ್ಚಿಯನ್ನರು, ಹಬ್ಬದ ದಿನ ಏರ್ಪಡಿಸುವ ಮೆರವಣಿಗೆ ನೋಡುವುದೇ ಚಂದ. ಅವರ ಪ್ರಯರ್ ಮತ್ತು ನಡಿಗೆ ಸಮ್ಮಿಳನಗೊಂಡಿರುತ್ತದೆ; ರಸ್ತೆ ಬದಿಯಲ್ಲಿ ನಿಂತು ನೋಡುವ ಧರ್ಮಸಹಿಷ್ಣು ಜನರಿಗೆ ತಾವೂ ಹೋಗಿ ಶಾಂತಿ ನಡಿಗೆಯಲ್ಲಿ ಭಾಗವಹಿಸಬೇಕೆಂಬ ಆಸೆ ಮೂಡಿದರೂ ಆಶ್ಚರ್ಯವಿಲ್ಲ. ಕ್ರಿಶ್ಚಿಯನ್ನರ ಈ ಹಬ್ಬದಲ್ಲಿ ತಮ್ಮ ಹಿಂದೂ ಗೆಳೆಯರನ್ನ ಕರೆದು ಮಾಂಸಾಹಾರ, ಪಾನೀಯಗಳ ನೀಡಿ ಉಪಚರಿಸುವುದನ್ನು ಅನುಭವಿಸಿ ನೋಡುವುದೇ ಚಂದ. ತಮ್ಮ ಈ ಸಂಭ್ರಮವನ್ನು ಚಾಚು ತಪ್ಪದೆ ನಡೆಸುತ್ತ ಬಂದ ಕ್ರಿಶ್ಚಿಯನ್ನರಿಗೆ ಪ್ರಥಮ ಬಾರಿಗೆ ಈ ವರ್ಷ ಮನಸ್ಸು ಕದಡಿಹೋಗಿತ್ತು. ಕಾರಣ, ಹಿಂದೂ ಜಾಗರಣ ವೇದಿಕೆಯವರು ಮಾಡಿದ ಸಮ್ಮೇಳನ ಮತ್ತು ಅಲ್ಲಿಗೆ ಬಂದಿದ್ದ ಪ್ರಜ್ಞಾ ಸಿಂಗ್ ಎಂಬ ಸಂಸದೆ ಮಾಡಿದ ಭಾಷಣ. ’ಕ್ರಿಶ್ಚಿಯನ್ನರ ಮಿಷನರಿ ಶಾಲೆಗೆ ನಿಮ್ಮ ಮಕ್ಕಳನ್ನ ಕಳುಹಿಸಬೇಡಿ, ಅಲ್ಲಿ ಕಲಿಯುವ ಮಕ್ಕಳು ಸ್ವಾರ್ಥಿಗಳಾಗಿ ತಂದೆ ತಾಯಿಗಳನ್ನ ವೃದ್ಧಾಶ್ರಮಕ್ಕೆ ಸೇರಿಸುತ್ತವೆ. ಆದ್ದರಿಂದ ನಮ್ಮ ಸಂಸ್ಕೃತಿ ಸಂಸ್ಕಾರ ಕಲಿಸುವ ಶಾಲೆಗೆ ಕಳಿಸಿ’ ಎಂದು ಅವರು ಕರೆಕೊಟ್ಟಿದ್ದರು.

ಮಿಷನರಿ ಶಾಲೆಯಲ್ಲಿ ಓದಿದ ಮಕ್ಕಳೆಲ್ಲಾ ತಂದೆ ತಾಯಿಗಳನ್ನು ವೃದ್ಧರ ಆಶ್ರಮಕ್ಕೆ ಸೇರಿಸುತ್ತಾರೆ ಎಂದು ಯಾವ ಸಮೀಕ್ಷೆ ಹೇಳಿದೆ ಎಂದು ಸಾದ್ವಿಯವರನ್ನು ಯಾರೂ ಕೇಳಲಿಲ್ಲ; ಅವರೂ ಹೇಳುವ ಗೋಜಿಗೆ ಹೋಗಲಿಲ್ಲ. ಹೇಳಿಕೇಳಿ ಕ್ರಿಸ್‌ಮಸ್ ಹಬ್ಬದ ಸಂಭ್ರಮವನ್ನು ಹಾಳುಮಾಡಲೆಂದೇ ಆಯೋಜಿಸಿದ್ದ ಶೋಭಯಾತ್ರೆ ಅಂಗವಾಗಿ ಇಡೀ ಊರನ್ನು ಕೇಸರಿಮಯಗೊಳಿಸಿದ್ದ ಜಾಗರಣ ವೇದಿಕೆ ಜನರು, ಚರ್ಚಿನ ಎದುರೇ ಹೆಚ್ಚಾಗಿ ಕೇಸರಿ ಧ್ವಜಗಳನ್ನು ಹರಡಿದ್ದರು. ಅಲ್ಲದೆ ಆ ದಿನ ಮದ್ಯಮಾರಟವನ್ನು ನಿಷೇಧಿಸಿದ್ದರು. ಇದಕ್ಕೆ ಪ್ರತಿಯಾಗಿ ಕ್ರಿಶ್ಚಿಯನ್ನರ ಕಡೆಯಿಂದ ಯಾವ ಪ್ರತಿರೋಧವಾಗಲಿ ಪ್ರತಿಕ್ರಿಯೆಯಾಗಲಿ ಇರಲಿಲ್ಲ. ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆಯೊಡ್ಡುವಂತೆ ಆದೇಶಿಸಿರುವ ಕ್ರಿಸ್ತನ ಬೋಧನೆಯನ್ನು ಒಂದು ಮಟ್ಟಕ್ಕಾದರೂ ಅನುಸರಿಸುವ ಈ ತೀರ ಅಲ್ಪಸಂಖ್ಯಾತ ಸಮುದಾಯ ಹೇಗೋ ಇಷ್ಟು ದಿನ ನೆಮ್ಮದಿಯನ್ನು ಅರಸಿ ಬದುಕುತ್ತಿದ್ದಾರೆ.

ಶಿವಮೊಗ್ಗದಲ್ಲಿ ಕ್ರಿಶ್ಚಿಯನ್ನರ ಹಬ್ಬಕ್ಕೆ ಹಿಂದೂ ಜಾಗರಣದವರು ತೋರಿದ ಅಸಹನೆ ಅವರಿಗೇ ತಿರುಗುಬಾಣವಾಗಿ ಪರಿಣಮಿಸಿತು. ಜನರಿಂದ ಟೀಕೆಗೆ ಗುರಿಯಾದರು; ಅದರಲ್ಲೂ ಕ್ರಿಶ್ಚಿಯನ್ನರ ಶಾಲೆಯಲ್ಲಿ ಓದಿ ಸತ್ಪ್ರಜೆಗಳಾಗಿರುವ ಹೆಣ್ಣುಮಕ್ಕಳ ಆಕ್ರೋಶಕ್ಕೆ ಗುರಿಯಾದರು. ಇಲ್ಲಿ ಮನುಷ್ಯರನ್ನು ಮನುಷ್ಯರಾಗಿ ನೋಡದ ಮನಸ್ಸುಗಳಲ್ಲಿ ದ್ವೇಷವೂ ಶ್ರೇಣೀಕರಣಗೊಂಡಿರುತ್ತದೆ. ಸದ್ಯಕ್ಕೆ ಮುಸ್ಲಿಮರನ್ನ ತನ್ನ ಪರಮವೈರಿ ಎಂದು ಪರಿಗಣಿಸಿರುವ ಪ್ರಜ್ಞಾಸಿಂಗ್ ಮನಸ್ಸು ಬಿಡುವು ಸಿಕ್ಕಾಗ ಕ್ರಿಶ್ಚಿಯನ್ನರ ಮೇಲೆ ಹರಿಹಾಯುತ್ತೆ; ಆ ನಂತರ ದಲಿತರ ಮೇಲೆರಗುತ್ತದೆ. ಸದ್ಯಕ್ಕೆ ಅವರ ಪರಮ ವೈರಿ ಮುಸ್ಲಿಮರಾಗಿರುವುದರಿಂದ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕ್ರಮದಲ್ಲಿ ನೇರವಾಗಿ ಮುಸ್ಲಿಂ ವಿರುದ್ಧ ಸಮರದ ಹೇಳಿಕೆ ಕೊಡುತ್ತಾರೆ. ಸಾಲದ್ದಕ್ಕೆ, ಭಾರತದ ಚೈತನ್ಯವಾದ ಮತ್ತು ಜಾತ್ಯತೀತ ಪರಿಕಲ್ಪನೆಯನ್ನ ಎತ್ತಿಹಿಡಿದ ಸಂವಿಧಾನದ ಅಡಿಯಲ್ಲಿ ಗೆದ್ದು ಬಂದು, ಸಂಸತ್ ಭವನದಲ್ಲಿ ಕುಳಿತ ಗೌರವಾನ್ವಿತ ಸಂಸದೆ ಬೇರೆ ಇವರು! (ಬಾಂಬ್ ಬ್ಲಾಸ್ಟ್ ಆಪಾದನೆಯಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ಇವರು, ಸದ್ಯ ಸಂಸದೆಯಾಗಿ ಅದರ ಸ್ಥಾನಮಾನಕ್ಕೂ ಬಿಡಿಗಾಸು ಗೌರವ ನೀಡುತ್ತಿಲ್ಲ!) ತಮ್ಮ ಸ್ಥಾನಮಾನದ ಘನತೆಯ ಅರಿವಿಲ್ಲದ ಇವರಿಂದ ಉದುರಿದ ಮಾತುಗಳು ಇಂತಿದ್ದವು: ’ಮುಂದೆ ಎಂತಹ ಸಂದರ್ಭ ಬರುತ್ತದೋ ಗೊತ್ತಿಲ್ಲ; ಆದ್ದರಿಂದ ನಮ್ಮ ಹೆಣ್ಣುಮಕ್ಕಳು ತರಕಾರಿ ಕತ್ತರಿಸುವ ಚಾಕುಗಳನ್ನು ಇನ್ನಷ್ಟು ಹರಿತ ಮಾಡಿಸಿ ಇಟ್ಟುಕೊಳ್ಳಿ. ನಮ್ಮ ಹೆಣ್ಣುಮಕ್ಕಳು ನಡೆದಾಡುವ ಅಟಂಬಾಂಬುಗಳಂತಿರಬೇಕು’ ಎಂದು ಕರೆಕೊಟ್ಟಿದ್ದಾರೆ. ಜೊತೆಗೆ ತನ್ನ ಇಡೀ ಭಾಷಣವನ್ನು ಹಿಂಸಾಪ್ರಚೋದಕವಾಗಿ ಮಾಡಿಮುಗಿಸಿದರು. ಈ ಸಾಧ್ವಿಯ ಮಾತು ನೆರೆದವರಲ್ಲಿ ರೋಮಾಂಚನವುಂಟು ಮಾಡಿ ಚಪ್ಪಾಳೆ ಗಿಟ್ಟಿಸಿತು! ಅಂದರೆ ಈ ಭಾಷಣ ಬರೀ ಪ್ರಜ್ಞಾಸಿಂಗ್ ಭಾಷಣ ಮಾತ್ರವಾಗಿರದೆ ಎಲ್ಲಾ ಬಿಜೆಪಿಗಳು ಚಪ್ಪರಿಸುತ್ತಿದ್ದಾರೆ!

ಇದನ್ನೂ ಓದಿ: ಚುನಾವಣಾ ಪರ್ವ: ಜನವರಿಯಲ್ಲಿ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಭಾರತದ ಸಂವಿಧಾನಕ್ಕೆ ಗೌರವ ಕೊಡುವ ಯಾವೊಬ್ಬ ಬಿಜೆಪಿಯವನೂ ಇಲ್ಲವೇ? ಇದ್ದರೆ ಸಾಧ್ವಿಯ ಭಾಷಣವನ್ನು ಖಂಡಿಸಬೇಕಿತ್ತು ಮತ್ತು ಅವರನ್ನು ಪ್ರಶ್ನಿಸಬೇಕಿತ್ತು. ಆದರೆ ಅದಾಗಲಿಲ್ಲ. ಎಂತಹ ನರಹತ್ಯೆಯ ಮಾತನ್ನಾಡಿದರೂ ಅದನ್ನು ಖಂಡಿಸುವ-ಪ್ರಶ್ನಿಸುವ ಮನುಷ್ಯರು ಬಿಜೆಪಿಯಲ್ಲಿ ಯಾರೂ ಇಲ್ಲ. ಅವರುಗಳ ಅಂತರಂಗದ ಮಾತುಗಳು ಪ್ರಜ್ಞಾಸಿಂಗ್ ಬಾಯಲ್ಲಿ ಉದುರತ್ತವಷ್ಟೇ. ಪ್ರಜ್ಞಾಸಿಂಗರ ಚಾಕು ಚೂರಿ ಮಾತಿಗೆ ಹರ್ಷನನ್ನು ಕೊಂದವರ ಕಡೆಯವರ್‍ಯಾರೂ ತಲೆಕೆಡಿಸಿಕೊಂಡಂತಿಲ್ಲ. ಈ ಶಿವಮೊಗ್ಗದ ಇತಿಹಾಸವನ್ನು ಕೆದಕಿದರೆ ಕೋಮು ರಾಡಿ ಹಬ್ಬಿಸಿದಾಗಲೆಲ್ಲಾ ಕೊಲೆಗಳಾಗಿವೆ. ಕೊಲೆಯಾದವನ ಶವವನ್ನು ಊರ ತುಂಬ ಮೆರವಣಿಗೆ ಮಾಡಿ ಈಶ್ವರಪ್ಪನಂತಹವರು ಗೆದ್ದು ಬರುತ್ತಿದ್ದಾರೆ. ಆದರೆ ಈ ಬಾರಿ ಅವರು ತೊಂದರೆಯಲ್ಲಿದ್ದಾರೆ. ಅದಕ್ಕಾಗಿ ಹರ್ಷನ ಕೊಲೆಯನ್ನು ಜೀವಂತವಾಗಿಟ್ಟಿದ್ದಾರೆ ಮತ್ತು ಸಾವರ್ಕರ್ ಸಾಮ್ರಾಜ್ಯ ಎಂಬ ಕಾರ್ಯಕ್ರಮ ಮಾಡಿದ್ದಾರೆ. ಜೊತೆಗೆ ಪ್ರಜ್ಞಾಸಿಂಗ್ ಕರೆಸಿ ಚಾಕು ಚೂರಿ ಸಾಣೆ ಹಿಡಿಸಲು ಸಲಹೆಕೊಡಿಸಿದ್ದಾರೆ. ಈಶ್ವರಪ್ಪನವರ ಕೆಲಸಗಳಿಗೆ ಪ್ರತಿಯಾಗಿ ಕೆಲವು ಮುಸ್ಲಿಂ ಮೂಲಭೂತವಾದಿಗಳು ಕೂಡ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗದ ಹಿಂದೂ ಮುಸ್ಲಿಂ ದ್ವೇಷಕ್ಕೆ ಶತಮಾನದ ಇತಿಹಾಸವಿದೆ. ಆದರೆ, ಇದರ ನಡುವೆ ರಂಜಾನ್ ಹಬ್ಬದಲ್ಲಿ ಬಿರಿಯಾನಿಗಾಗಿ ಹಂಬಲಿಸುವ ಹಿಂದೂಗಳಿದ್ದಾರೆ; ಹಾಗೆಯೇ ಕ್ರಿಸ್‌ಮಸ್ ಹಬ್ಬದ ಊಟಕ್ಕಾಗಿ ಕಾಯುವ ಕೆಲ ಹಿಂದೂಗಳು ಸದ್ದಿಲ್ಲದೆ ಧರ್ಮ ಸಾಮರಸ್ಯದ ಝರಿ ಬತ್ತದಂತೆ ಕಾಯ್ದುಕೊಂಡು ಹೋಗುತ್ತಿದ್ದಾರೆ. ಇವರ ನಡುವೆ ಪ್ರಜ್ಞಾ ಮತ್ತು ಈಶ್ವರಪ್ಪನ ದನಿ ಕರ್ಕಷವಾಗುತ್ತಿದೆಯಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...