Homeಕರ್ನಾಟಕಸಾಧ್ವಿಯ ಬಾಯಲ್ಲಿ ಹಿಂಸೆಯ ಮಾತು!

ಸಾಧ್ವಿಯ ಬಾಯಲ್ಲಿ ಹಿಂಸೆಯ ಮಾತು!

- Advertisement -
- Advertisement -

ಶಿವಮೊಗ್ಗದಲ್ಲಿ ಆ ದಿನ ಕ್ರಿಸ್‌ಮಸ್ ಹಬ್ಬ. ಎಂದಿನಂತೆ ಶಾಂತಿ ಸಮಾಧಾನದಿಂದ ಕ್ರಿಸ್‌ಮಸ್ ಆಚರಿಸುವ ಕ್ರಿಶ್ಚಿಯನ್ನರು, ಹಬ್ಬದ ದಿನ ಏರ್ಪಡಿಸುವ ಮೆರವಣಿಗೆ ನೋಡುವುದೇ ಚಂದ. ಅವರ ಪ್ರಯರ್ ಮತ್ತು ನಡಿಗೆ ಸಮ್ಮಿಳನಗೊಂಡಿರುತ್ತದೆ; ರಸ್ತೆ ಬದಿಯಲ್ಲಿ ನಿಂತು ನೋಡುವ ಧರ್ಮಸಹಿಷ್ಣು ಜನರಿಗೆ ತಾವೂ ಹೋಗಿ ಶಾಂತಿ ನಡಿಗೆಯಲ್ಲಿ ಭಾಗವಹಿಸಬೇಕೆಂಬ ಆಸೆ ಮೂಡಿದರೂ ಆಶ್ಚರ್ಯವಿಲ್ಲ. ಕ್ರಿಶ್ಚಿಯನ್ನರ ಈ ಹಬ್ಬದಲ್ಲಿ ತಮ್ಮ ಹಿಂದೂ ಗೆಳೆಯರನ್ನ ಕರೆದು ಮಾಂಸಾಹಾರ, ಪಾನೀಯಗಳ ನೀಡಿ ಉಪಚರಿಸುವುದನ್ನು ಅನುಭವಿಸಿ ನೋಡುವುದೇ ಚಂದ. ತಮ್ಮ ಈ ಸಂಭ್ರಮವನ್ನು ಚಾಚು ತಪ್ಪದೆ ನಡೆಸುತ್ತ ಬಂದ ಕ್ರಿಶ್ಚಿಯನ್ನರಿಗೆ ಪ್ರಥಮ ಬಾರಿಗೆ ಈ ವರ್ಷ ಮನಸ್ಸು ಕದಡಿಹೋಗಿತ್ತು. ಕಾರಣ, ಹಿಂದೂ ಜಾಗರಣ ವೇದಿಕೆಯವರು ಮಾಡಿದ ಸಮ್ಮೇಳನ ಮತ್ತು ಅಲ್ಲಿಗೆ ಬಂದಿದ್ದ ಪ್ರಜ್ಞಾ ಸಿಂಗ್ ಎಂಬ ಸಂಸದೆ ಮಾಡಿದ ಭಾಷಣ. ’ಕ್ರಿಶ್ಚಿಯನ್ನರ ಮಿಷನರಿ ಶಾಲೆಗೆ ನಿಮ್ಮ ಮಕ್ಕಳನ್ನ ಕಳುಹಿಸಬೇಡಿ, ಅಲ್ಲಿ ಕಲಿಯುವ ಮಕ್ಕಳು ಸ್ವಾರ್ಥಿಗಳಾಗಿ ತಂದೆ ತಾಯಿಗಳನ್ನ ವೃದ್ಧಾಶ್ರಮಕ್ಕೆ ಸೇರಿಸುತ್ತವೆ. ಆದ್ದರಿಂದ ನಮ್ಮ ಸಂಸ್ಕೃತಿ ಸಂಸ್ಕಾರ ಕಲಿಸುವ ಶಾಲೆಗೆ ಕಳಿಸಿ’ ಎಂದು ಅವರು ಕರೆಕೊಟ್ಟಿದ್ದರು.

ಮಿಷನರಿ ಶಾಲೆಯಲ್ಲಿ ಓದಿದ ಮಕ್ಕಳೆಲ್ಲಾ ತಂದೆ ತಾಯಿಗಳನ್ನು ವೃದ್ಧರ ಆಶ್ರಮಕ್ಕೆ ಸೇರಿಸುತ್ತಾರೆ ಎಂದು ಯಾವ ಸಮೀಕ್ಷೆ ಹೇಳಿದೆ ಎಂದು ಸಾದ್ವಿಯವರನ್ನು ಯಾರೂ ಕೇಳಲಿಲ್ಲ; ಅವರೂ ಹೇಳುವ ಗೋಜಿಗೆ ಹೋಗಲಿಲ್ಲ. ಹೇಳಿಕೇಳಿ ಕ್ರಿಸ್‌ಮಸ್ ಹಬ್ಬದ ಸಂಭ್ರಮವನ್ನು ಹಾಳುಮಾಡಲೆಂದೇ ಆಯೋಜಿಸಿದ್ದ ಶೋಭಯಾತ್ರೆ ಅಂಗವಾಗಿ ಇಡೀ ಊರನ್ನು ಕೇಸರಿಮಯಗೊಳಿಸಿದ್ದ ಜಾಗರಣ ವೇದಿಕೆ ಜನರು, ಚರ್ಚಿನ ಎದುರೇ ಹೆಚ್ಚಾಗಿ ಕೇಸರಿ ಧ್ವಜಗಳನ್ನು ಹರಡಿದ್ದರು. ಅಲ್ಲದೆ ಆ ದಿನ ಮದ್ಯಮಾರಟವನ್ನು ನಿಷೇಧಿಸಿದ್ದರು. ಇದಕ್ಕೆ ಪ್ರತಿಯಾಗಿ ಕ್ರಿಶ್ಚಿಯನ್ನರ ಕಡೆಯಿಂದ ಯಾವ ಪ್ರತಿರೋಧವಾಗಲಿ ಪ್ರತಿಕ್ರಿಯೆಯಾಗಲಿ ಇರಲಿಲ್ಲ. ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆಯೊಡ್ಡುವಂತೆ ಆದೇಶಿಸಿರುವ ಕ್ರಿಸ್ತನ ಬೋಧನೆಯನ್ನು ಒಂದು ಮಟ್ಟಕ್ಕಾದರೂ ಅನುಸರಿಸುವ ಈ ತೀರ ಅಲ್ಪಸಂಖ್ಯಾತ ಸಮುದಾಯ ಹೇಗೋ ಇಷ್ಟು ದಿನ ನೆಮ್ಮದಿಯನ್ನು ಅರಸಿ ಬದುಕುತ್ತಿದ್ದಾರೆ.

ಶಿವಮೊಗ್ಗದಲ್ಲಿ ಕ್ರಿಶ್ಚಿಯನ್ನರ ಹಬ್ಬಕ್ಕೆ ಹಿಂದೂ ಜಾಗರಣದವರು ತೋರಿದ ಅಸಹನೆ ಅವರಿಗೇ ತಿರುಗುಬಾಣವಾಗಿ ಪರಿಣಮಿಸಿತು. ಜನರಿಂದ ಟೀಕೆಗೆ ಗುರಿಯಾದರು; ಅದರಲ್ಲೂ ಕ್ರಿಶ್ಚಿಯನ್ನರ ಶಾಲೆಯಲ್ಲಿ ಓದಿ ಸತ್ಪ್ರಜೆಗಳಾಗಿರುವ ಹೆಣ್ಣುಮಕ್ಕಳ ಆಕ್ರೋಶಕ್ಕೆ ಗುರಿಯಾದರು. ಇಲ್ಲಿ ಮನುಷ್ಯರನ್ನು ಮನುಷ್ಯರಾಗಿ ನೋಡದ ಮನಸ್ಸುಗಳಲ್ಲಿ ದ್ವೇಷವೂ ಶ್ರೇಣೀಕರಣಗೊಂಡಿರುತ್ತದೆ. ಸದ್ಯಕ್ಕೆ ಮುಸ್ಲಿಮರನ್ನ ತನ್ನ ಪರಮವೈರಿ ಎಂದು ಪರಿಗಣಿಸಿರುವ ಪ್ರಜ್ಞಾಸಿಂಗ್ ಮನಸ್ಸು ಬಿಡುವು ಸಿಕ್ಕಾಗ ಕ್ರಿಶ್ಚಿಯನ್ನರ ಮೇಲೆ ಹರಿಹಾಯುತ್ತೆ; ಆ ನಂತರ ದಲಿತರ ಮೇಲೆರಗುತ್ತದೆ. ಸದ್ಯಕ್ಕೆ ಅವರ ಪರಮ ವೈರಿ ಮುಸ್ಲಿಮರಾಗಿರುವುದರಿಂದ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕ್ರಮದಲ್ಲಿ ನೇರವಾಗಿ ಮುಸ್ಲಿಂ ವಿರುದ್ಧ ಸಮರದ ಹೇಳಿಕೆ ಕೊಡುತ್ತಾರೆ. ಸಾಲದ್ದಕ್ಕೆ, ಭಾರತದ ಚೈತನ್ಯವಾದ ಮತ್ತು ಜಾತ್ಯತೀತ ಪರಿಕಲ್ಪನೆಯನ್ನ ಎತ್ತಿಹಿಡಿದ ಸಂವಿಧಾನದ ಅಡಿಯಲ್ಲಿ ಗೆದ್ದು ಬಂದು, ಸಂಸತ್ ಭವನದಲ್ಲಿ ಕುಳಿತ ಗೌರವಾನ್ವಿತ ಸಂಸದೆ ಬೇರೆ ಇವರು! (ಬಾಂಬ್ ಬ್ಲಾಸ್ಟ್ ಆಪಾದನೆಯಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ಇವರು, ಸದ್ಯ ಸಂಸದೆಯಾಗಿ ಅದರ ಸ್ಥಾನಮಾನಕ್ಕೂ ಬಿಡಿಗಾಸು ಗೌರವ ನೀಡುತ್ತಿಲ್ಲ!) ತಮ್ಮ ಸ್ಥಾನಮಾನದ ಘನತೆಯ ಅರಿವಿಲ್ಲದ ಇವರಿಂದ ಉದುರಿದ ಮಾತುಗಳು ಇಂತಿದ್ದವು: ’ಮುಂದೆ ಎಂತಹ ಸಂದರ್ಭ ಬರುತ್ತದೋ ಗೊತ್ತಿಲ್ಲ; ಆದ್ದರಿಂದ ನಮ್ಮ ಹೆಣ್ಣುಮಕ್ಕಳು ತರಕಾರಿ ಕತ್ತರಿಸುವ ಚಾಕುಗಳನ್ನು ಇನ್ನಷ್ಟು ಹರಿತ ಮಾಡಿಸಿ ಇಟ್ಟುಕೊಳ್ಳಿ. ನಮ್ಮ ಹೆಣ್ಣುಮಕ್ಕಳು ನಡೆದಾಡುವ ಅಟಂಬಾಂಬುಗಳಂತಿರಬೇಕು’ ಎಂದು ಕರೆಕೊಟ್ಟಿದ್ದಾರೆ. ಜೊತೆಗೆ ತನ್ನ ಇಡೀ ಭಾಷಣವನ್ನು ಹಿಂಸಾಪ್ರಚೋದಕವಾಗಿ ಮಾಡಿಮುಗಿಸಿದರು. ಈ ಸಾಧ್ವಿಯ ಮಾತು ನೆರೆದವರಲ್ಲಿ ರೋಮಾಂಚನವುಂಟು ಮಾಡಿ ಚಪ್ಪಾಳೆ ಗಿಟ್ಟಿಸಿತು! ಅಂದರೆ ಈ ಭಾಷಣ ಬರೀ ಪ್ರಜ್ಞಾಸಿಂಗ್ ಭಾಷಣ ಮಾತ್ರವಾಗಿರದೆ ಎಲ್ಲಾ ಬಿಜೆಪಿಗಳು ಚಪ್ಪರಿಸುತ್ತಿದ್ದಾರೆ!

ಇದನ್ನೂ ಓದಿ: ಚುನಾವಣಾ ಪರ್ವ: ಜನವರಿಯಲ್ಲಿ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಭಾರತದ ಸಂವಿಧಾನಕ್ಕೆ ಗೌರವ ಕೊಡುವ ಯಾವೊಬ್ಬ ಬಿಜೆಪಿಯವನೂ ಇಲ್ಲವೇ? ಇದ್ದರೆ ಸಾಧ್ವಿಯ ಭಾಷಣವನ್ನು ಖಂಡಿಸಬೇಕಿತ್ತು ಮತ್ತು ಅವರನ್ನು ಪ್ರಶ್ನಿಸಬೇಕಿತ್ತು. ಆದರೆ ಅದಾಗಲಿಲ್ಲ. ಎಂತಹ ನರಹತ್ಯೆಯ ಮಾತನ್ನಾಡಿದರೂ ಅದನ್ನು ಖಂಡಿಸುವ-ಪ್ರಶ್ನಿಸುವ ಮನುಷ್ಯರು ಬಿಜೆಪಿಯಲ್ಲಿ ಯಾರೂ ಇಲ್ಲ. ಅವರುಗಳ ಅಂತರಂಗದ ಮಾತುಗಳು ಪ್ರಜ್ಞಾಸಿಂಗ್ ಬಾಯಲ್ಲಿ ಉದುರತ್ತವಷ್ಟೇ. ಪ್ರಜ್ಞಾಸಿಂಗರ ಚಾಕು ಚೂರಿ ಮಾತಿಗೆ ಹರ್ಷನನ್ನು ಕೊಂದವರ ಕಡೆಯವರ್‍ಯಾರೂ ತಲೆಕೆಡಿಸಿಕೊಂಡಂತಿಲ್ಲ. ಈ ಶಿವಮೊಗ್ಗದ ಇತಿಹಾಸವನ್ನು ಕೆದಕಿದರೆ ಕೋಮು ರಾಡಿ ಹಬ್ಬಿಸಿದಾಗಲೆಲ್ಲಾ ಕೊಲೆಗಳಾಗಿವೆ. ಕೊಲೆಯಾದವನ ಶವವನ್ನು ಊರ ತುಂಬ ಮೆರವಣಿಗೆ ಮಾಡಿ ಈಶ್ವರಪ್ಪನಂತಹವರು ಗೆದ್ದು ಬರುತ್ತಿದ್ದಾರೆ. ಆದರೆ ಈ ಬಾರಿ ಅವರು ತೊಂದರೆಯಲ್ಲಿದ್ದಾರೆ. ಅದಕ್ಕಾಗಿ ಹರ್ಷನ ಕೊಲೆಯನ್ನು ಜೀವಂತವಾಗಿಟ್ಟಿದ್ದಾರೆ ಮತ್ತು ಸಾವರ್ಕರ್ ಸಾಮ್ರಾಜ್ಯ ಎಂಬ ಕಾರ್ಯಕ್ರಮ ಮಾಡಿದ್ದಾರೆ. ಜೊತೆಗೆ ಪ್ರಜ್ಞಾಸಿಂಗ್ ಕರೆಸಿ ಚಾಕು ಚೂರಿ ಸಾಣೆ ಹಿಡಿಸಲು ಸಲಹೆಕೊಡಿಸಿದ್ದಾರೆ. ಈಶ್ವರಪ್ಪನವರ ಕೆಲಸಗಳಿಗೆ ಪ್ರತಿಯಾಗಿ ಕೆಲವು ಮುಸ್ಲಿಂ ಮೂಲಭೂತವಾದಿಗಳು ಕೂಡ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗದ ಹಿಂದೂ ಮುಸ್ಲಿಂ ದ್ವೇಷಕ್ಕೆ ಶತಮಾನದ ಇತಿಹಾಸವಿದೆ. ಆದರೆ, ಇದರ ನಡುವೆ ರಂಜಾನ್ ಹಬ್ಬದಲ್ಲಿ ಬಿರಿಯಾನಿಗಾಗಿ ಹಂಬಲಿಸುವ ಹಿಂದೂಗಳಿದ್ದಾರೆ; ಹಾಗೆಯೇ ಕ್ರಿಸ್‌ಮಸ್ ಹಬ್ಬದ ಊಟಕ್ಕಾಗಿ ಕಾಯುವ ಕೆಲ ಹಿಂದೂಗಳು ಸದ್ದಿಲ್ಲದೆ ಧರ್ಮ ಸಾಮರಸ್ಯದ ಝರಿ ಬತ್ತದಂತೆ ಕಾಯ್ದುಕೊಂಡು ಹೋಗುತ್ತಿದ್ದಾರೆ. ಇವರ ನಡುವೆ ಪ್ರಜ್ಞಾ ಮತ್ತು ಈಶ್ವರಪ್ಪನ ದನಿ ಕರ್ಕಷವಾಗುತ್ತಿದೆಯಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...