Homeಕರ್ನಾಟಕಸಾಧ್ವಿಯ ಬಾಯಲ್ಲಿ ಹಿಂಸೆಯ ಮಾತು!

ಸಾಧ್ವಿಯ ಬಾಯಲ್ಲಿ ಹಿಂಸೆಯ ಮಾತು!

- Advertisement -
- Advertisement -

ಶಿವಮೊಗ್ಗದಲ್ಲಿ ಆ ದಿನ ಕ್ರಿಸ್‌ಮಸ್ ಹಬ್ಬ. ಎಂದಿನಂತೆ ಶಾಂತಿ ಸಮಾಧಾನದಿಂದ ಕ್ರಿಸ್‌ಮಸ್ ಆಚರಿಸುವ ಕ್ರಿಶ್ಚಿಯನ್ನರು, ಹಬ್ಬದ ದಿನ ಏರ್ಪಡಿಸುವ ಮೆರವಣಿಗೆ ನೋಡುವುದೇ ಚಂದ. ಅವರ ಪ್ರಯರ್ ಮತ್ತು ನಡಿಗೆ ಸಮ್ಮಿಳನಗೊಂಡಿರುತ್ತದೆ; ರಸ್ತೆ ಬದಿಯಲ್ಲಿ ನಿಂತು ನೋಡುವ ಧರ್ಮಸಹಿಷ್ಣು ಜನರಿಗೆ ತಾವೂ ಹೋಗಿ ಶಾಂತಿ ನಡಿಗೆಯಲ್ಲಿ ಭಾಗವಹಿಸಬೇಕೆಂಬ ಆಸೆ ಮೂಡಿದರೂ ಆಶ್ಚರ್ಯವಿಲ್ಲ. ಕ್ರಿಶ್ಚಿಯನ್ನರ ಈ ಹಬ್ಬದಲ್ಲಿ ತಮ್ಮ ಹಿಂದೂ ಗೆಳೆಯರನ್ನ ಕರೆದು ಮಾಂಸಾಹಾರ, ಪಾನೀಯಗಳ ನೀಡಿ ಉಪಚರಿಸುವುದನ್ನು ಅನುಭವಿಸಿ ನೋಡುವುದೇ ಚಂದ. ತಮ್ಮ ಈ ಸಂಭ್ರಮವನ್ನು ಚಾಚು ತಪ್ಪದೆ ನಡೆಸುತ್ತ ಬಂದ ಕ್ರಿಶ್ಚಿಯನ್ನರಿಗೆ ಪ್ರಥಮ ಬಾರಿಗೆ ಈ ವರ್ಷ ಮನಸ್ಸು ಕದಡಿಹೋಗಿತ್ತು. ಕಾರಣ, ಹಿಂದೂ ಜಾಗರಣ ವೇದಿಕೆಯವರು ಮಾಡಿದ ಸಮ್ಮೇಳನ ಮತ್ತು ಅಲ್ಲಿಗೆ ಬಂದಿದ್ದ ಪ್ರಜ್ಞಾ ಸಿಂಗ್ ಎಂಬ ಸಂಸದೆ ಮಾಡಿದ ಭಾಷಣ. ’ಕ್ರಿಶ್ಚಿಯನ್ನರ ಮಿಷನರಿ ಶಾಲೆಗೆ ನಿಮ್ಮ ಮಕ್ಕಳನ್ನ ಕಳುಹಿಸಬೇಡಿ, ಅಲ್ಲಿ ಕಲಿಯುವ ಮಕ್ಕಳು ಸ್ವಾರ್ಥಿಗಳಾಗಿ ತಂದೆ ತಾಯಿಗಳನ್ನ ವೃದ್ಧಾಶ್ರಮಕ್ಕೆ ಸೇರಿಸುತ್ತವೆ. ಆದ್ದರಿಂದ ನಮ್ಮ ಸಂಸ್ಕೃತಿ ಸಂಸ್ಕಾರ ಕಲಿಸುವ ಶಾಲೆಗೆ ಕಳಿಸಿ’ ಎಂದು ಅವರು ಕರೆಕೊಟ್ಟಿದ್ದರು.

ಮಿಷನರಿ ಶಾಲೆಯಲ್ಲಿ ಓದಿದ ಮಕ್ಕಳೆಲ್ಲಾ ತಂದೆ ತಾಯಿಗಳನ್ನು ವೃದ್ಧರ ಆಶ್ರಮಕ್ಕೆ ಸೇರಿಸುತ್ತಾರೆ ಎಂದು ಯಾವ ಸಮೀಕ್ಷೆ ಹೇಳಿದೆ ಎಂದು ಸಾದ್ವಿಯವರನ್ನು ಯಾರೂ ಕೇಳಲಿಲ್ಲ; ಅವರೂ ಹೇಳುವ ಗೋಜಿಗೆ ಹೋಗಲಿಲ್ಲ. ಹೇಳಿಕೇಳಿ ಕ್ರಿಸ್‌ಮಸ್ ಹಬ್ಬದ ಸಂಭ್ರಮವನ್ನು ಹಾಳುಮಾಡಲೆಂದೇ ಆಯೋಜಿಸಿದ್ದ ಶೋಭಯಾತ್ರೆ ಅಂಗವಾಗಿ ಇಡೀ ಊರನ್ನು ಕೇಸರಿಮಯಗೊಳಿಸಿದ್ದ ಜಾಗರಣ ವೇದಿಕೆ ಜನರು, ಚರ್ಚಿನ ಎದುರೇ ಹೆಚ್ಚಾಗಿ ಕೇಸರಿ ಧ್ವಜಗಳನ್ನು ಹರಡಿದ್ದರು. ಅಲ್ಲದೆ ಆ ದಿನ ಮದ್ಯಮಾರಟವನ್ನು ನಿಷೇಧಿಸಿದ್ದರು. ಇದಕ್ಕೆ ಪ್ರತಿಯಾಗಿ ಕ್ರಿಶ್ಚಿಯನ್ನರ ಕಡೆಯಿಂದ ಯಾವ ಪ್ರತಿರೋಧವಾಗಲಿ ಪ್ರತಿಕ್ರಿಯೆಯಾಗಲಿ ಇರಲಿಲ್ಲ. ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆಯೊಡ್ಡುವಂತೆ ಆದೇಶಿಸಿರುವ ಕ್ರಿಸ್ತನ ಬೋಧನೆಯನ್ನು ಒಂದು ಮಟ್ಟಕ್ಕಾದರೂ ಅನುಸರಿಸುವ ಈ ತೀರ ಅಲ್ಪಸಂಖ್ಯಾತ ಸಮುದಾಯ ಹೇಗೋ ಇಷ್ಟು ದಿನ ನೆಮ್ಮದಿಯನ್ನು ಅರಸಿ ಬದುಕುತ್ತಿದ್ದಾರೆ.

ಶಿವಮೊಗ್ಗದಲ್ಲಿ ಕ್ರಿಶ್ಚಿಯನ್ನರ ಹಬ್ಬಕ್ಕೆ ಹಿಂದೂ ಜಾಗರಣದವರು ತೋರಿದ ಅಸಹನೆ ಅವರಿಗೇ ತಿರುಗುಬಾಣವಾಗಿ ಪರಿಣಮಿಸಿತು. ಜನರಿಂದ ಟೀಕೆಗೆ ಗುರಿಯಾದರು; ಅದರಲ್ಲೂ ಕ್ರಿಶ್ಚಿಯನ್ನರ ಶಾಲೆಯಲ್ಲಿ ಓದಿ ಸತ್ಪ್ರಜೆಗಳಾಗಿರುವ ಹೆಣ್ಣುಮಕ್ಕಳ ಆಕ್ರೋಶಕ್ಕೆ ಗುರಿಯಾದರು. ಇಲ್ಲಿ ಮನುಷ್ಯರನ್ನು ಮನುಷ್ಯರಾಗಿ ನೋಡದ ಮನಸ್ಸುಗಳಲ್ಲಿ ದ್ವೇಷವೂ ಶ್ರೇಣೀಕರಣಗೊಂಡಿರುತ್ತದೆ. ಸದ್ಯಕ್ಕೆ ಮುಸ್ಲಿಮರನ್ನ ತನ್ನ ಪರಮವೈರಿ ಎಂದು ಪರಿಗಣಿಸಿರುವ ಪ್ರಜ್ಞಾಸಿಂಗ್ ಮನಸ್ಸು ಬಿಡುವು ಸಿಕ್ಕಾಗ ಕ್ರಿಶ್ಚಿಯನ್ನರ ಮೇಲೆ ಹರಿಹಾಯುತ್ತೆ; ಆ ನಂತರ ದಲಿತರ ಮೇಲೆರಗುತ್ತದೆ. ಸದ್ಯಕ್ಕೆ ಅವರ ಪರಮ ವೈರಿ ಮುಸ್ಲಿಮರಾಗಿರುವುದರಿಂದ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕ್ರಮದಲ್ಲಿ ನೇರವಾಗಿ ಮುಸ್ಲಿಂ ವಿರುದ್ಧ ಸಮರದ ಹೇಳಿಕೆ ಕೊಡುತ್ತಾರೆ. ಸಾಲದ್ದಕ್ಕೆ, ಭಾರತದ ಚೈತನ್ಯವಾದ ಮತ್ತು ಜಾತ್ಯತೀತ ಪರಿಕಲ್ಪನೆಯನ್ನ ಎತ್ತಿಹಿಡಿದ ಸಂವಿಧಾನದ ಅಡಿಯಲ್ಲಿ ಗೆದ್ದು ಬಂದು, ಸಂಸತ್ ಭವನದಲ್ಲಿ ಕುಳಿತ ಗೌರವಾನ್ವಿತ ಸಂಸದೆ ಬೇರೆ ಇವರು! (ಬಾಂಬ್ ಬ್ಲಾಸ್ಟ್ ಆಪಾದನೆಯಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ಇವರು, ಸದ್ಯ ಸಂಸದೆಯಾಗಿ ಅದರ ಸ್ಥಾನಮಾನಕ್ಕೂ ಬಿಡಿಗಾಸು ಗೌರವ ನೀಡುತ್ತಿಲ್ಲ!) ತಮ್ಮ ಸ್ಥಾನಮಾನದ ಘನತೆಯ ಅರಿವಿಲ್ಲದ ಇವರಿಂದ ಉದುರಿದ ಮಾತುಗಳು ಇಂತಿದ್ದವು: ’ಮುಂದೆ ಎಂತಹ ಸಂದರ್ಭ ಬರುತ್ತದೋ ಗೊತ್ತಿಲ್ಲ; ಆದ್ದರಿಂದ ನಮ್ಮ ಹೆಣ್ಣುಮಕ್ಕಳು ತರಕಾರಿ ಕತ್ತರಿಸುವ ಚಾಕುಗಳನ್ನು ಇನ್ನಷ್ಟು ಹರಿತ ಮಾಡಿಸಿ ಇಟ್ಟುಕೊಳ್ಳಿ. ನಮ್ಮ ಹೆಣ್ಣುಮಕ್ಕಳು ನಡೆದಾಡುವ ಅಟಂಬಾಂಬುಗಳಂತಿರಬೇಕು’ ಎಂದು ಕರೆಕೊಟ್ಟಿದ್ದಾರೆ. ಜೊತೆಗೆ ತನ್ನ ಇಡೀ ಭಾಷಣವನ್ನು ಹಿಂಸಾಪ್ರಚೋದಕವಾಗಿ ಮಾಡಿಮುಗಿಸಿದರು. ಈ ಸಾಧ್ವಿಯ ಮಾತು ನೆರೆದವರಲ್ಲಿ ರೋಮಾಂಚನವುಂಟು ಮಾಡಿ ಚಪ್ಪಾಳೆ ಗಿಟ್ಟಿಸಿತು! ಅಂದರೆ ಈ ಭಾಷಣ ಬರೀ ಪ್ರಜ್ಞಾಸಿಂಗ್ ಭಾಷಣ ಮಾತ್ರವಾಗಿರದೆ ಎಲ್ಲಾ ಬಿಜೆಪಿಗಳು ಚಪ್ಪರಿಸುತ್ತಿದ್ದಾರೆ!

ಇದನ್ನೂ ಓದಿ: ಚುನಾವಣಾ ಪರ್ವ: ಜನವರಿಯಲ್ಲಿ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಭಾರತದ ಸಂವಿಧಾನಕ್ಕೆ ಗೌರವ ಕೊಡುವ ಯಾವೊಬ್ಬ ಬಿಜೆಪಿಯವನೂ ಇಲ್ಲವೇ? ಇದ್ದರೆ ಸಾಧ್ವಿಯ ಭಾಷಣವನ್ನು ಖಂಡಿಸಬೇಕಿತ್ತು ಮತ್ತು ಅವರನ್ನು ಪ್ರಶ್ನಿಸಬೇಕಿತ್ತು. ಆದರೆ ಅದಾಗಲಿಲ್ಲ. ಎಂತಹ ನರಹತ್ಯೆಯ ಮಾತನ್ನಾಡಿದರೂ ಅದನ್ನು ಖಂಡಿಸುವ-ಪ್ರಶ್ನಿಸುವ ಮನುಷ್ಯರು ಬಿಜೆಪಿಯಲ್ಲಿ ಯಾರೂ ಇಲ್ಲ. ಅವರುಗಳ ಅಂತರಂಗದ ಮಾತುಗಳು ಪ್ರಜ್ಞಾಸಿಂಗ್ ಬಾಯಲ್ಲಿ ಉದುರತ್ತವಷ್ಟೇ. ಪ್ರಜ್ಞಾಸಿಂಗರ ಚಾಕು ಚೂರಿ ಮಾತಿಗೆ ಹರ್ಷನನ್ನು ಕೊಂದವರ ಕಡೆಯವರ್‍ಯಾರೂ ತಲೆಕೆಡಿಸಿಕೊಂಡಂತಿಲ್ಲ. ಈ ಶಿವಮೊಗ್ಗದ ಇತಿಹಾಸವನ್ನು ಕೆದಕಿದರೆ ಕೋಮು ರಾಡಿ ಹಬ್ಬಿಸಿದಾಗಲೆಲ್ಲಾ ಕೊಲೆಗಳಾಗಿವೆ. ಕೊಲೆಯಾದವನ ಶವವನ್ನು ಊರ ತುಂಬ ಮೆರವಣಿಗೆ ಮಾಡಿ ಈಶ್ವರಪ್ಪನಂತಹವರು ಗೆದ್ದು ಬರುತ್ತಿದ್ದಾರೆ. ಆದರೆ ಈ ಬಾರಿ ಅವರು ತೊಂದರೆಯಲ್ಲಿದ್ದಾರೆ. ಅದಕ್ಕಾಗಿ ಹರ್ಷನ ಕೊಲೆಯನ್ನು ಜೀವಂತವಾಗಿಟ್ಟಿದ್ದಾರೆ ಮತ್ತು ಸಾವರ್ಕರ್ ಸಾಮ್ರಾಜ್ಯ ಎಂಬ ಕಾರ್ಯಕ್ರಮ ಮಾಡಿದ್ದಾರೆ. ಜೊತೆಗೆ ಪ್ರಜ್ಞಾಸಿಂಗ್ ಕರೆಸಿ ಚಾಕು ಚೂರಿ ಸಾಣೆ ಹಿಡಿಸಲು ಸಲಹೆಕೊಡಿಸಿದ್ದಾರೆ. ಈಶ್ವರಪ್ಪನವರ ಕೆಲಸಗಳಿಗೆ ಪ್ರತಿಯಾಗಿ ಕೆಲವು ಮುಸ್ಲಿಂ ಮೂಲಭೂತವಾದಿಗಳು ಕೂಡ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗದ ಹಿಂದೂ ಮುಸ್ಲಿಂ ದ್ವೇಷಕ್ಕೆ ಶತಮಾನದ ಇತಿಹಾಸವಿದೆ. ಆದರೆ, ಇದರ ನಡುವೆ ರಂಜಾನ್ ಹಬ್ಬದಲ್ಲಿ ಬಿರಿಯಾನಿಗಾಗಿ ಹಂಬಲಿಸುವ ಹಿಂದೂಗಳಿದ್ದಾರೆ; ಹಾಗೆಯೇ ಕ್ರಿಸ್‌ಮಸ್ ಹಬ್ಬದ ಊಟಕ್ಕಾಗಿ ಕಾಯುವ ಕೆಲ ಹಿಂದೂಗಳು ಸದ್ದಿಲ್ಲದೆ ಧರ್ಮ ಸಾಮರಸ್ಯದ ಝರಿ ಬತ್ತದಂತೆ ಕಾಯ್ದುಕೊಂಡು ಹೋಗುತ್ತಿದ್ದಾರೆ. ಇವರ ನಡುವೆ ಪ್ರಜ್ಞಾ ಮತ್ತು ಈಶ್ವರಪ್ಪನ ದನಿ ಕರ್ಕಷವಾಗುತ್ತಿದೆಯಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...