Homeಕರ್ನಾಟಕಸಾಧ್ವಿಯ ಬಾಯಲ್ಲಿ ಹಿಂಸೆಯ ಮಾತು!

ಸಾಧ್ವಿಯ ಬಾಯಲ್ಲಿ ಹಿಂಸೆಯ ಮಾತು!

- Advertisement -
- Advertisement -

ಶಿವಮೊಗ್ಗದಲ್ಲಿ ಆ ದಿನ ಕ್ರಿಸ್‌ಮಸ್ ಹಬ್ಬ. ಎಂದಿನಂತೆ ಶಾಂತಿ ಸಮಾಧಾನದಿಂದ ಕ್ರಿಸ್‌ಮಸ್ ಆಚರಿಸುವ ಕ್ರಿಶ್ಚಿಯನ್ನರು, ಹಬ್ಬದ ದಿನ ಏರ್ಪಡಿಸುವ ಮೆರವಣಿಗೆ ನೋಡುವುದೇ ಚಂದ. ಅವರ ಪ್ರಯರ್ ಮತ್ತು ನಡಿಗೆ ಸಮ್ಮಿಳನಗೊಂಡಿರುತ್ತದೆ; ರಸ್ತೆ ಬದಿಯಲ್ಲಿ ನಿಂತು ನೋಡುವ ಧರ್ಮಸಹಿಷ್ಣು ಜನರಿಗೆ ತಾವೂ ಹೋಗಿ ಶಾಂತಿ ನಡಿಗೆಯಲ್ಲಿ ಭಾಗವಹಿಸಬೇಕೆಂಬ ಆಸೆ ಮೂಡಿದರೂ ಆಶ್ಚರ್ಯವಿಲ್ಲ. ಕ್ರಿಶ್ಚಿಯನ್ನರ ಈ ಹಬ್ಬದಲ್ಲಿ ತಮ್ಮ ಹಿಂದೂ ಗೆಳೆಯರನ್ನ ಕರೆದು ಮಾಂಸಾಹಾರ, ಪಾನೀಯಗಳ ನೀಡಿ ಉಪಚರಿಸುವುದನ್ನು ಅನುಭವಿಸಿ ನೋಡುವುದೇ ಚಂದ. ತಮ್ಮ ಈ ಸಂಭ್ರಮವನ್ನು ಚಾಚು ತಪ್ಪದೆ ನಡೆಸುತ್ತ ಬಂದ ಕ್ರಿಶ್ಚಿಯನ್ನರಿಗೆ ಪ್ರಥಮ ಬಾರಿಗೆ ಈ ವರ್ಷ ಮನಸ್ಸು ಕದಡಿಹೋಗಿತ್ತು. ಕಾರಣ, ಹಿಂದೂ ಜಾಗರಣ ವೇದಿಕೆಯವರು ಮಾಡಿದ ಸಮ್ಮೇಳನ ಮತ್ತು ಅಲ್ಲಿಗೆ ಬಂದಿದ್ದ ಪ್ರಜ್ಞಾ ಸಿಂಗ್ ಎಂಬ ಸಂಸದೆ ಮಾಡಿದ ಭಾಷಣ. ’ಕ್ರಿಶ್ಚಿಯನ್ನರ ಮಿಷನರಿ ಶಾಲೆಗೆ ನಿಮ್ಮ ಮಕ್ಕಳನ್ನ ಕಳುಹಿಸಬೇಡಿ, ಅಲ್ಲಿ ಕಲಿಯುವ ಮಕ್ಕಳು ಸ್ವಾರ್ಥಿಗಳಾಗಿ ತಂದೆ ತಾಯಿಗಳನ್ನ ವೃದ್ಧಾಶ್ರಮಕ್ಕೆ ಸೇರಿಸುತ್ತವೆ. ಆದ್ದರಿಂದ ನಮ್ಮ ಸಂಸ್ಕೃತಿ ಸಂಸ್ಕಾರ ಕಲಿಸುವ ಶಾಲೆಗೆ ಕಳಿಸಿ’ ಎಂದು ಅವರು ಕರೆಕೊಟ್ಟಿದ್ದರು.

ಮಿಷನರಿ ಶಾಲೆಯಲ್ಲಿ ಓದಿದ ಮಕ್ಕಳೆಲ್ಲಾ ತಂದೆ ತಾಯಿಗಳನ್ನು ವೃದ್ಧರ ಆಶ್ರಮಕ್ಕೆ ಸೇರಿಸುತ್ತಾರೆ ಎಂದು ಯಾವ ಸಮೀಕ್ಷೆ ಹೇಳಿದೆ ಎಂದು ಸಾದ್ವಿಯವರನ್ನು ಯಾರೂ ಕೇಳಲಿಲ್ಲ; ಅವರೂ ಹೇಳುವ ಗೋಜಿಗೆ ಹೋಗಲಿಲ್ಲ. ಹೇಳಿಕೇಳಿ ಕ್ರಿಸ್‌ಮಸ್ ಹಬ್ಬದ ಸಂಭ್ರಮವನ್ನು ಹಾಳುಮಾಡಲೆಂದೇ ಆಯೋಜಿಸಿದ್ದ ಶೋಭಯಾತ್ರೆ ಅಂಗವಾಗಿ ಇಡೀ ಊರನ್ನು ಕೇಸರಿಮಯಗೊಳಿಸಿದ್ದ ಜಾಗರಣ ವೇದಿಕೆ ಜನರು, ಚರ್ಚಿನ ಎದುರೇ ಹೆಚ್ಚಾಗಿ ಕೇಸರಿ ಧ್ವಜಗಳನ್ನು ಹರಡಿದ್ದರು. ಅಲ್ಲದೆ ಆ ದಿನ ಮದ್ಯಮಾರಟವನ್ನು ನಿಷೇಧಿಸಿದ್ದರು. ಇದಕ್ಕೆ ಪ್ರತಿಯಾಗಿ ಕ್ರಿಶ್ಚಿಯನ್ನರ ಕಡೆಯಿಂದ ಯಾವ ಪ್ರತಿರೋಧವಾಗಲಿ ಪ್ರತಿಕ್ರಿಯೆಯಾಗಲಿ ಇರಲಿಲ್ಲ. ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆಯೊಡ್ಡುವಂತೆ ಆದೇಶಿಸಿರುವ ಕ್ರಿಸ್ತನ ಬೋಧನೆಯನ್ನು ಒಂದು ಮಟ್ಟಕ್ಕಾದರೂ ಅನುಸರಿಸುವ ಈ ತೀರ ಅಲ್ಪಸಂಖ್ಯಾತ ಸಮುದಾಯ ಹೇಗೋ ಇಷ್ಟು ದಿನ ನೆಮ್ಮದಿಯನ್ನು ಅರಸಿ ಬದುಕುತ್ತಿದ್ದಾರೆ.

ಶಿವಮೊಗ್ಗದಲ್ಲಿ ಕ್ರಿಶ್ಚಿಯನ್ನರ ಹಬ್ಬಕ್ಕೆ ಹಿಂದೂ ಜಾಗರಣದವರು ತೋರಿದ ಅಸಹನೆ ಅವರಿಗೇ ತಿರುಗುಬಾಣವಾಗಿ ಪರಿಣಮಿಸಿತು. ಜನರಿಂದ ಟೀಕೆಗೆ ಗುರಿಯಾದರು; ಅದರಲ್ಲೂ ಕ್ರಿಶ್ಚಿಯನ್ನರ ಶಾಲೆಯಲ್ಲಿ ಓದಿ ಸತ್ಪ್ರಜೆಗಳಾಗಿರುವ ಹೆಣ್ಣುಮಕ್ಕಳ ಆಕ್ರೋಶಕ್ಕೆ ಗುರಿಯಾದರು. ಇಲ್ಲಿ ಮನುಷ್ಯರನ್ನು ಮನುಷ್ಯರಾಗಿ ನೋಡದ ಮನಸ್ಸುಗಳಲ್ಲಿ ದ್ವೇಷವೂ ಶ್ರೇಣೀಕರಣಗೊಂಡಿರುತ್ತದೆ. ಸದ್ಯಕ್ಕೆ ಮುಸ್ಲಿಮರನ್ನ ತನ್ನ ಪರಮವೈರಿ ಎಂದು ಪರಿಗಣಿಸಿರುವ ಪ್ರಜ್ಞಾಸಿಂಗ್ ಮನಸ್ಸು ಬಿಡುವು ಸಿಕ್ಕಾಗ ಕ್ರಿಶ್ಚಿಯನ್ನರ ಮೇಲೆ ಹರಿಹಾಯುತ್ತೆ; ಆ ನಂತರ ದಲಿತರ ಮೇಲೆರಗುತ್ತದೆ. ಸದ್ಯಕ್ಕೆ ಅವರ ಪರಮ ವೈರಿ ಮುಸ್ಲಿಮರಾಗಿರುವುದರಿಂದ ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕ್ರಮದಲ್ಲಿ ನೇರವಾಗಿ ಮುಸ್ಲಿಂ ವಿರುದ್ಧ ಸಮರದ ಹೇಳಿಕೆ ಕೊಡುತ್ತಾರೆ. ಸಾಲದ್ದಕ್ಕೆ, ಭಾರತದ ಚೈತನ್ಯವಾದ ಮತ್ತು ಜಾತ್ಯತೀತ ಪರಿಕಲ್ಪನೆಯನ್ನ ಎತ್ತಿಹಿಡಿದ ಸಂವಿಧಾನದ ಅಡಿಯಲ್ಲಿ ಗೆದ್ದು ಬಂದು, ಸಂಸತ್ ಭವನದಲ್ಲಿ ಕುಳಿತ ಗೌರವಾನ್ವಿತ ಸಂಸದೆ ಬೇರೆ ಇವರು! (ಬಾಂಬ್ ಬ್ಲಾಸ್ಟ್ ಆಪಾದನೆಯಲ್ಲಿ ವಿಚಾರಣೆಯನ್ನು ಎದುರಿಸುತ್ತಿರುವ ಇವರು, ಸದ್ಯ ಸಂಸದೆಯಾಗಿ ಅದರ ಸ್ಥಾನಮಾನಕ್ಕೂ ಬಿಡಿಗಾಸು ಗೌರವ ನೀಡುತ್ತಿಲ್ಲ!) ತಮ್ಮ ಸ್ಥಾನಮಾನದ ಘನತೆಯ ಅರಿವಿಲ್ಲದ ಇವರಿಂದ ಉದುರಿದ ಮಾತುಗಳು ಇಂತಿದ್ದವು: ’ಮುಂದೆ ಎಂತಹ ಸಂದರ್ಭ ಬರುತ್ತದೋ ಗೊತ್ತಿಲ್ಲ; ಆದ್ದರಿಂದ ನಮ್ಮ ಹೆಣ್ಣುಮಕ್ಕಳು ತರಕಾರಿ ಕತ್ತರಿಸುವ ಚಾಕುಗಳನ್ನು ಇನ್ನಷ್ಟು ಹರಿತ ಮಾಡಿಸಿ ಇಟ್ಟುಕೊಳ್ಳಿ. ನಮ್ಮ ಹೆಣ್ಣುಮಕ್ಕಳು ನಡೆದಾಡುವ ಅಟಂಬಾಂಬುಗಳಂತಿರಬೇಕು’ ಎಂದು ಕರೆಕೊಟ್ಟಿದ್ದಾರೆ. ಜೊತೆಗೆ ತನ್ನ ಇಡೀ ಭಾಷಣವನ್ನು ಹಿಂಸಾಪ್ರಚೋದಕವಾಗಿ ಮಾಡಿಮುಗಿಸಿದರು. ಈ ಸಾಧ್ವಿಯ ಮಾತು ನೆರೆದವರಲ್ಲಿ ರೋಮಾಂಚನವುಂಟು ಮಾಡಿ ಚಪ್ಪಾಳೆ ಗಿಟ್ಟಿಸಿತು! ಅಂದರೆ ಈ ಭಾಷಣ ಬರೀ ಪ್ರಜ್ಞಾಸಿಂಗ್ ಭಾಷಣ ಮಾತ್ರವಾಗಿರದೆ ಎಲ್ಲಾ ಬಿಜೆಪಿಗಳು ಚಪ್ಪರಿಸುತ್ತಿದ್ದಾರೆ!

ಇದನ್ನೂ ಓದಿ: ಚುನಾವಣಾ ಪರ್ವ: ಜನವರಿಯಲ್ಲಿ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಭಾರತದ ಸಂವಿಧಾನಕ್ಕೆ ಗೌರವ ಕೊಡುವ ಯಾವೊಬ್ಬ ಬಿಜೆಪಿಯವನೂ ಇಲ್ಲವೇ? ಇದ್ದರೆ ಸಾಧ್ವಿಯ ಭಾಷಣವನ್ನು ಖಂಡಿಸಬೇಕಿತ್ತು ಮತ್ತು ಅವರನ್ನು ಪ್ರಶ್ನಿಸಬೇಕಿತ್ತು. ಆದರೆ ಅದಾಗಲಿಲ್ಲ. ಎಂತಹ ನರಹತ್ಯೆಯ ಮಾತನ್ನಾಡಿದರೂ ಅದನ್ನು ಖಂಡಿಸುವ-ಪ್ರಶ್ನಿಸುವ ಮನುಷ್ಯರು ಬಿಜೆಪಿಯಲ್ಲಿ ಯಾರೂ ಇಲ್ಲ. ಅವರುಗಳ ಅಂತರಂಗದ ಮಾತುಗಳು ಪ್ರಜ್ಞಾಸಿಂಗ್ ಬಾಯಲ್ಲಿ ಉದುರತ್ತವಷ್ಟೇ. ಪ್ರಜ್ಞಾಸಿಂಗರ ಚಾಕು ಚೂರಿ ಮಾತಿಗೆ ಹರ್ಷನನ್ನು ಕೊಂದವರ ಕಡೆಯವರ್‍ಯಾರೂ ತಲೆಕೆಡಿಸಿಕೊಂಡಂತಿಲ್ಲ. ಈ ಶಿವಮೊಗ್ಗದ ಇತಿಹಾಸವನ್ನು ಕೆದಕಿದರೆ ಕೋಮು ರಾಡಿ ಹಬ್ಬಿಸಿದಾಗಲೆಲ್ಲಾ ಕೊಲೆಗಳಾಗಿವೆ. ಕೊಲೆಯಾದವನ ಶವವನ್ನು ಊರ ತುಂಬ ಮೆರವಣಿಗೆ ಮಾಡಿ ಈಶ್ವರಪ್ಪನಂತಹವರು ಗೆದ್ದು ಬರುತ್ತಿದ್ದಾರೆ. ಆದರೆ ಈ ಬಾರಿ ಅವರು ತೊಂದರೆಯಲ್ಲಿದ್ದಾರೆ. ಅದಕ್ಕಾಗಿ ಹರ್ಷನ ಕೊಲೆಯನ್ನು ಜೀವಂತವಾಗಿಟ್ಟಿದ್ದಾರೆ ಮತ್ತು ಸಾವರ್ಕರ್ ಸಾಮ್ರಾಜ್ಯ ಎಂಬ ಕಾರ್ಯಕ್ರಮ ಮಾಡಿದ್ದಾರೆ. ಜೊತೆಗೆ ಪ್ರಜ್ಞಾಸಿಂಗ್ ಕರೆಸಿ ಚಾಕು ಚೂರಿ ಸಾಣೆ ಹಿಡಿಸಲು ಸಲಹೆಕೊಡಿಸಿದ್ದಾರೆ. ಈಶ್ವರಪ್ಪನವರ ಕೆಲಸಗಳಿಗೆ ಪ್ರತಿಯಾಗಿ ಕೆಲವು ಮುಸ್ಲಿಂ ಮೂಲಭೂತವಾದಿಗಳು ಕೂಡ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗದ ಹಿಂದೂ ಮುಸ್ಲಿಂ ದ್ವೇಷಕ್ಕೆ ಶತಮಾನದ ಇತಿಹಾಸವಿದೆ. ಆದರೆ, ಇದರ ನಡುವೆ ರಂಜಾನ್ ಹಬ್ಬದಲ್ಲಿ ಬಿರಿಯಾನಿಗಾಗಿ ಹಂಬಲಿಸುವ ಹಿಂದೂಗಳಿದ್ದಾರೆ; ಹಾಗೆಯೇ ಕ್ರಿಸ್‌ಮಸ್ ಹಬ್ಬದ ಊಟಕ್ಕಾಗಿ ಕಾಯುವ ಕೆಲ ಹಿಂದೂಗಳು ಸದ್ದಿಲ್ಲದೆ ಧರ್ಮ ಸಾಮರಸ್ಯದ ಝರಿ ಬತ್ತದಂತೆ ಕಾಯ್ದುಕೊಂಡು ಹೋಗುತ್ತಿದ್ದಾರೆ. ಇವರ ನಡುವೆ ಪ್ರಜ್ಞಾ ಮತ್ತು ಈಶ್ವರಪ್ಪನ ದನಿ ಕರ್ಕಷವಾಗುತ್ತಿದೆಯಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...