Homeಮುಖಪುಟ'ಡಬ್ಲೂಎಫ್ಐ'ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ 'ಐಒಎ'ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

‘ಡಬ್ಲೂಎಫ್ಐ’ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ ‘ಐಒಎ’ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

- Advertisement -
- Advertisement -

ಕುಸ್ತಿ ಫೆಡರೇಷನ್ ನೂತನ ಆಡಳಿತ ಮಂಡಳಿಯನ್ನು ಅಮಾನತು ಮಾಡಿದ ನಂತರ, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ)ಗೆ ಪತ್ರ ಬರೆದಿರುವ ಕ್ರೀಡಾ ಸಚಿವಾಲಯ, ‘ಕುಸ್ತಿ ಸಂಸ್ಥೆಯನ್ನು ಮುನ್ನಡೆಸಲು ತಾತ್ಕಾಲಿಕ ಸಮಿತಿ’ ರಚಿಸುವಂತೆ ಸೂಚನೆ ನೀಡಿದೆ.

‘ತಾತ್ಕಾಲಿಕ ಸಮಿತಿಯು ಅಥ್ಲೀಟ್‌ಗಳ ಆಯ್ಕೆ ಸೇರಿದಂತೆ ಡಬ್ಲ್ಯುಎಫ್ಐನ ವ್ಯವಹಾರಗಳನ್ನು ನಿರ್ವಹಿಸಬಹುದು ಮತ್ತು ನಿಯಂತ್ರಿಸಬಹುದು’ ಎಂದು ಐಒಎ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕ್ರೀಡಾ ಸಚಿವಾಲಯವು ಹೇಳಿದೆ.

‘ಡಬ್ಲ್ಯುಎಫ್ಐನ ಮಾಜಿ ಪದಾಧಿಕಾರಿಗಳ ಪ್ರಭಾವ ಮತ್ತು ನಿಯಂತ್ರಣದಿಂದ ಉಂಟಾದ ಪರಿಸ್ಥಿತಿಯನ್ನು ಗಮನಿಸಿದರೆ, ಸಂಸ್ಥೆಯ ಆಡಳಿತ ಮತ್ತು ಸಮಗ್ರತೆಯ ಬಗ್ಗೆ ಗಂಭೀರ ಕಳವಳ ಹುಟ್ಟಿಕೊಂಡಿವೆ’ ಎಂದು ಕ್ರೀಡಾ ಇಲಾಖೆ ಅಧೀನ ಕಾರ್ಯದರ್ಶಿ ತರುಣ್ ಪರೀಕ್ ಅವರು ಸಹಿ ಹಾಕಿರುವ ಪತ್ರದಲ್ಲಿ ತಿಳಿಸಿದ್ದಾರೆ.

‘ಆದ್ದರಿಂದ, ಕ್ರೀಡಾ ಸಂಸ್ಥೆಗಳಲ್ಲಿ ಉತ್ತಮ ಆಡಳಿತದ ತತ್ವಗಳನ್ನು ಎತ್ತಿಹಿಡಿಯಲು ತಕ್ಷಣದ ಮತ್ತು ಕಟ್ಟುನಿಟ್ಟಾದ ಕ್ರಮಗಳ ಅಗತ್ಯವಿದೆ. ಡಬ್ಲ್ಯೂಎಫ್ಐನ ವ್ಯವಹಾರಗಳನ್ನು ನಿರ್ವಹಿಸಲು ಮಧ್ಯಂತರ ಅವಧಿಗೆ ಸೂಕ್ತವಾದ ವ್ಯವಸ್ಥೆಗಳನ್ನು ಮಾಡಲು ಐಒಎ ಸಂಸ್ಥೆಯು ಅಧಿಕಾರ ಹೊಂದಿದೆ. ಇದರಿಂದ ಕುಸ್ತಿಪಟುಗಳು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸುವುದಿಲ್ಲ ಮತ್ತು ಇನ್ನೂ ಉತ್ತಮ ಆಡಳಿತದ ತತ್ವವೆಂದರೆ, ಕ್ರೀಡಾ ಸಂಸ್ಥೆಯು ಅಪಾಯಕ್ಕೆ ಒಳಗಾಗುವುದಿಲ್ಲ’ ಎಂದು ಕ್ರೀಡಾ ಸಚಿವಾಲಯ ತನ್ನ ಪತ್ರದಲ್ಲಿ ತಿಳಿಸಿದೆ.

ಡಬ್ಲ್ಯುಎಫ್ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ, ನೂತನ ಚುನಾಯಿತ ಮುಖ್ಯಸ್ಥ ಸಂಜಯ್ ಸಿಂಗ್ ನೇತೃತ್ವದ ಇತ್ತೀಚಿನ ಆಡಳಿತ ಮಂಡಳಿಯನ್ನು ಕೇಂದ್ರ ಸರ್ಕಾರವು ಅಮಾನತುಗೊಳಿಸಿರುವುದರಿಂದ ಡಬ್ಲ್ಯೂಎಫ್ಐಗೆ ಮತ್ತೊಂದು ಸುತ್ತಿನ ಚುನಾವಣೆ ಶಿಘ್ರದಲ್ಲೇ ನಡೆಯುವ ಸಾಧ್ಯತೆ ಇದೆ.

ಐಒಎ ರಚಿಸುವ ತಾತ್ಕಾಲಿಕ ಸಮಿತಿಯು ಕುಸ್ತಿ ಫೆಡರೇಷನ್‌ನ ದಿನನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅಥ್ಲೀಟ್‌ಗಳು ಭಾಗವಹಿಸಲು ಅನುಮತಿ ನೀಡಿವುದು ಮತ್ತು ಕ್ರೀಡಾಕೂಟಗಳನ್ನು ಏರ್ಪಡಿಸುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡಬೇಕಾಗುತ್ತದೆ.

ಹಿರಿಯ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಮುಂಬರುವ ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ಬಗ್ಗೆ ನಿನ್ನೆ ಕಳವಳ ವ್ಯಕ್ತಪಡಿಸಿದ್ದರು. ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ‘ತರಾತುರಿ’ ಘೋಷಣೆಯನ್ನು ಕೇಂದ್ರವು ಗಮನಿಸಿದ್ದು, ಸಾಕ್ಷಿ ಈ ಕುರಿತು ಪೋಸ್ಟ್ ಮಾಡಿದ ನಂತರ ಕ್ರೀಡಾ ಸಚಿವಾಲಯವು ಹೊಸದಾಗಿ ಆಯ್ಕೆಯಾದ ಕುಸ್ತಿ ಫೆಡರೇಷನ್ ಆಡಳಿತ ಮಂಡಳಿಯು ಮುಂದಿನ ಆದೇಶದವರೆಗೆ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆದೇಶಿಸಿದೆ. ಕ್ರೀಡಾ ಸಚಿವಾಲಯವು ಹೇಳಿಕೆಯಲ್ಲಿ ಹೊಸದಾಗಿ ಚುನಾಯಿತ ಸಂಸ್ಥೆಯು ‘ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣಕ್ಕೆ ಒಳಪಟ್ಟಿದೆ’ ಎಂದು ಆರೋಪಿಸಿದೆ.

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಾಕ್ಷಿ ಮಲ್ಲಿಕ್ ಸೇರಿದಂತೆ ದೇಶದ ಹಲವು ಹಿರಿಯ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ತಮ್ಮ ಸ್ಥಾನದಿಂದ ದೂರ ಸರಿಯಬೇಕಾಯಿತು.

ಒಲಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನವರಿಯಲ್ಲಿ ಬೀದಿಗಿಳಿದಿದ್ದರು.

ಬ್ರಿಜ್ ಭೂಷಣ್ ವಿರುದ್ಧ ತನಿಖೆ ಆರಂಭಿಸಿದ ನಂತರ, ಸರ್ಕಾರದ ಭರವಸೆ ಮೇರೆಗೆ ಧರಣಿ ಹಿಂಪಡೆದಿದ್ದರು. ಇತ್ತೀಚಿನ ಡಬ್ಲ್ಯುಎಫ್ಐ ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೊರನ್ ವಿರುದ್ಧ ಅಮೋಘ ಜಯ ಸಾಧಿಸಿದರು, ಅವರನ್ನು ಪ್ರತಿಭಟನಾಕಾರ ಕುಸ್ತಿಪಟುಗಳು ಬೆಂಬಲಿಸಿದ್ದರು.

ಬ್ರಿಜ್ ಭೂಷಣ್ ಅವರ ಆಪ್ತರು ಮತ್ತು ಸಂಬಂಧಿಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ, ಸಂಜಯ್ ಸಿಂಗ್ ಅವರ ನಾಮನಿರ್ದೇಶನವನ್ನು ಸಿಂಧುಗೊಳಿಸಿದ್ದು ಕುಸ್ತಿಪಟುಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ; ಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...