Homeಮುಖಪುಟ'ಡಬ್ಲೂಎಫ್ಐ'ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ 'ಐಒಎ'ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

‘ಡಬ್ಲೂಎಫ್ಐ’ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ ‘ಐಒಎ’ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

- Advertisement -
- Advertisement -

ಕುಸ್ತಿ ಫೆಡರೇಷನ್ ನೂತನ ಆಡಳಿತ ಮಂಡಳಿಯನ್ನು ಅಮಾನತು ಮಾಡಿದ ನಂತರ, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ)ಗೆ ಪತ್ರ ಬರೆದಿರುವ ಕ್ರೀಡಾ ಸಚಿವಾಲಯ, ‘ಕುಸ್ತಿ ಸಂಸ್ಥೆಯನ್ನು ಮುನ್ನಡೆಸಲು ತಾತ್ಕಾಲಿಕ ಸಮಿತಿ’ ರಚಿಸುವಂತೆ ಸೂಚನೆ ನೀಡಿದೆ.

‘ತಾತ್ಕಾಲಿಕ ಸಮಿತಿಯು ಅಥ್ಲೀಟ್‌ಗಳ ಆಯ್ಕೆ ಸೇರಿದಂತೆ ಡಬ್ಲ್ಯುಎಫ್ಐನ ವ್ಯವಹಾರಗಳನ್ನು ನಿರ್ವಹಿಸಬಹುದು ಮತ್ತು ನಿಯಂತ್ರಿಸಬಹುದು’ ಎಂದು ಐಒಎ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕ್ರೀಡಾ ಸಚಿವಾಲಯವು ಹೇಳಿದೆ.

‘ಡಬ್ಲ್ಯುಎಫ್ಐನ ಮಾಜಿ ಪದಾಧಿಕಾರಿಗಳ ಪ್ರಭಾವ ಮತ್ತು ನಿಯಂತ್ರಣದಿಂದ ಉಂಟಾದ ಪರಿಸ್ಥಿತಿಯನ್ನು ಗಮನಿಸಿದರೆ, ಸಂಸ್ಥೆಯ ಆಡಳಿತ ಮತ್ತು ಸಮಗ್ರತೆಯ ಬಗ್ಗೆ ಗಂಭೀರ ಕಳವಳ ಹುಟ್ಟಿಕೊಂಡಿವೆ’ ಎಂದು ಕ್ರೀಡಾ ಇಲಾಖೆ ಅಧೀನ ಕಾರ್ಯದರ್ಶಿ ತರುಣ್ ಪರೀಕ್ ಅವರು ಸಹಿ ಹಾಕಿರುವ ಪತ್ರದಲ್ಲಿ ತಿಳಿಸಿದ್ದಾರೆ.

‘ಆದ್ದರಿಂದ, ಕ್ರೀಡಾ ಸಂಸ್ಥೆಗಳಲ್ಲಿ ಉತ್ತಮ ಆಡಳಿತದ ತತ್ವಗಳನ್ನು ಎತ್ತಿಹಿಡಿಯಲು ತಕ್ಷಣದ ಮತ್ತು ಕಟ್ಟುನಿಟ್ಟಾದ ಕ್ರಮಗಳ ಅಗತ್ಯವಿದೆ. ಡಬ್ಲ್ಯೂಎಫ್ಐನ ವ್ಯವಹಾರಗಳನ್ನು ನಿರ್ವಹಿಸಲು ಮಧ್ಯಂತರ ಅವಧಿಗೆ ಸೂಕ್ತವಾದ ವ್ಯವಸ್ಥೆಗಳನ್ನು ಮಾಡಲು ಐಒಎ ಸಂಸ್ಥೆಯು ಅಧಿಕಾರ ಹೊಂದಿದೆ. ಇದರಿಂದ ಕುಸ್ತಿಪಟುಗಳು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸುವುದಿಲ್ಲ ಮತ್ತು ಇನ್ನೂ ಉತ್ತಮ ಆಡಳಿತದ ತತ್ವವೆಂದರೆ, ಕ್ರೀಡಾ ಸಂಸ್ಥೆಯು ಅಪಾಯಕ್ಕೆ ಒಳಗಾಗುವುದಿಲ್ಲ’ ಎಂದು ಕ್ರೀಡಾ ಸಚಿವಾಲಯ ತನ್ನ ಪತ್ರದಲ್ಲಿ ತಿಳಿಸಿದೆ.

ಡಬ್ಲ್ಯುಎಫ್ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ, ನೂತನ ಚುನಾಯಿತ ಮುಖ್ಯಸ್ಥ ಸಂಜಯ್ ಸಿಂಗ್ ನೇತೃತ್ವದ ಇತ್ತೀಚಿನ ಆಡಳಿತ ಮಂಡಳಿಯನ್ನು ಕೇಂದ್ರ ಸರ್ಕಾರವು ಅಮಾನತುಗೊಳಿಸಿರುವುದರಿಂದ ಡಬ್ಲ್ಯೂಎಫ್ಐಗೆ ಮತ್ತೊಂದು ಸುತ್ತಿನ ಚುನಾವಣೆ ಶಿಘ್ರದಲ್ಲೇ ನಡೆಯುವ ಸಾಧ್ಯತೆ ಇದೆ.

ಐಒಎ ರಚಿಸುವ ತಾತ್ಕಾಲಿಕ ಸಮಿತಿಯು ಕುಸ್ತಿ ಫೆಡರೇಷನ್‌ನ ದಿನನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅಥ್ಲೀಟ್‌ಗಳು ಭಾಗವಹಿಸಲು ಅನುಮತಿ ನೀಡಿವುದು ಮತ್ತು ಕ್ರೀಡಾಕೂಟಗಳನ್ನು ಏರ್ಪಡಿಸುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡಬೇಕಾಗುತ್ತದೆ.

ಹಿರಿಯ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಮುಂಬರುವ ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ಬಗ್ಗೆ ನಿನ್ನೆ ಕಳವಳ ವ್ಯಕ್ತಪಡಿಸಿದ್ದರು. ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ‘ತರಾತುರಿ’ ಘೋಷಣೆಯನ್ನು ಕೇಂದ್ರವು ಗಮನಿಸಿದ್ದು, ಸಾಕ್ಷಿ ಈ ಕುರಿತು ಪೋಸ್ಟ್ ಮಾಡಿದ ನಂತರ ಕ್ರೀಡಾ ಸಚಿವಾಲಯವು ಹೊಸದಾಗಿ ಆಯ್ಕೆಯಾದ ಕುಸ್ತಿ ಫೆಡರೇಷನ್ ಆಡಳಿತ ಮಂಡಳಿಯು ಮುಂದಿನ ಆದೇಶದವರೆಗೆ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆದೇಶಿಸಿದೆ. ಕ್ರೀಡಾ ಸಚಿವಾಲಯವು ಹೇಳಿಕೆಯಲ್ಲಿ ಹೊಸದಾಗಿ ಚುನಾಯಿತ ಸಂಸ್ಥೆಯು ‘ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣಕ್ಕೆ ಒಳಪಟ್ಟಿದೆ’ ಎಂದು ಆರೋಪಿಸಿದೆ.

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಾಕ್ಷಿ ಮಲ್ಲಿಕ್ ಸೇರಿದಂತೆ ದೇಶದ ಹಲವು ಹಿರಿಯ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ತಮ್ಮ ಸ್ಥಾನದಿಂದ ದೂರ ಸರಿಯಬೇಕಾಯಿತು.

ಒಲಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನವರಿಯಲ್ಲಿ ಬೀದಿಗಿಳಿದಿದ್ದರು.

ಬ್ರಿಜ್ ಭೂಷಣ್ ವಿರುದ್ಧ ತನಿಖೆ ಆರಂಭಿಸಿದ ನಂತರ, ಸರ್ಕಾರದ ಭರವಸೆ ಮೇರೆಗೆ ಧರಣಿ ಹಿಂಪಡೆದಿದ್ದರು. ಇತ್ತೀಚಿನ ಡಬ್ಲ್ಯುಎಫ್ಐ ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೊರನ್ ವಿರುದ್ಧ ಅಮೋಘ ಜಯ ಸಾಧಿಸಿದರು, ಅವರನ್ನು ಪ್ರತಿಭಟನಾಕಾರ ಕುಸ್ತಿಪಟುಗಳು ಬೆಂಬಲಿಸಿದ್ದರು.

ಬ್ರಿಜ್ ಭೂಷಣ್ ಅವರ ಆಪ್ತರು ಮತ್ತು ಸಂಬಂಧಿಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ, ಸಂಜಯ್ ಸಿಂಗ್ ಅವರ ನಾಮನಿರ್ದೇಶನವನ್ನು ಸಿಂಧುಗೊಳಿಸಿದ್ದು ಕುಸ್ತಿಪಟುಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ; ಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...