Homeಮುಖಪುಟ'ಡಬ್ಲೂಎಫ್ಐ'ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ 'ಐಒಎ'ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

‘ಡಬ್ಲೂಎಫ್ಐ’ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ ‘ಐಒಎ’ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

- Advertisement -
- Advertisement -

ಕುಸ್ತಿ ಫೆಡರೇಷನ್ ನೂತನ ಆಡಳಿತ ಮಂಡಳಿಯನ್ನು ಅಮಾನತು ಮಾಡಿದ ನಂತರ, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ)ಗೆ ಪತ್ರ ಬರೆದಿರುವ ಕ್ರೀಡಾ ಸಚಿವಾಲಯ, ‘ಕುಸ್ತಿ ಸಂಸ್ಥೆಯನ್ನು ಮುನ್ನಡೆಸಲು ತಾತ್ಕಾಲಿಕ ಸಮಿತಿ’ ರಚಿಸುವಂತೆ ಸೂಚನೆ ನೀಡಿದೆ.

‘ತಾತ್ಕಾಲಿಕ ಸಮಿತಿಯು ಅಥ್ಲೀಟ್‌ಗಳ ಆಯ್ಕೆ ಸೇರಿದಂತೆ ಡಬ್ಲ್ಯುಎಫ್ಐನ ವ್ಯವಹಾರಗಳನ್ನು ನಿರ್ವಹಿಸಬಹುದು ಮತ್ತು ನಿಯಂತ್ರಿಸಬಹುದು’ ಎಂದು ಐಒಎ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕ್ರೀಡಾ ಸಚಿವಾಲಯವು ಹೇಳಿದೆ.

‘ಡಬ್ಲ್ಯುಎಫ್ಐನ ಮಾಜಿ ಪದಾಧಿಕಾರಿಗಳ ಪ್ರಭಾವ ಮತ್ತು ನಿಯಂತ್ರಣದಿಂದ ಉಂಟಾದ ಪರಿಸ್ಥಿತಿಯನ್ನು ಗಮನಿಸಿದರೆ, ಸಂಸ್ಥೆಯ ಆಡಳಿತ ಮತ್ತು ಸಮಗ್ರತೆಯ ಬಗ್ಗೆ ಗಂಭೀರ ಕಳವಳ ಹುಟ್ಟಿಕೊಂಡಿವೆ’ ಎಂದು ಕ್ರೀಡಾ ಇಲಾಖೆ ಅಧೀನ ಕಾರ್ಯದರ್ಶಿ ತರುಣ್ ಪರೀಕ್ ಅವರು ಸಹಿ ಹಾಕಿರುವ ಪತ್ರದಲ್ಲಿ ತಿಳಿಸಿದ್ದಾರೆ.

‘ಆದ್ದರಿಂದ, ಕ್ರೀಡಾ ಸಂಸ್ಥೆಗಳಲ್ಲಿ ಉತ್ತಮ ಆಡಳಿತದ ತತ್ವಗಳನ್ನು ಎತ್ತಿಹಿಡಿಯಲು ತಕ್ಷಣದ ಮತ್ತು ಕಟ್ಟುನಿಟ್ಟಾದ ಕ್ರಮಗಳ ಅಗತ್ಯವಿದೆ. ಡಬ್ಲ್ಯೂಎಫ್ಐನ ವ್ಯವಹಾರಗಳನ್ನು ನಿರ್ವಹಿಸಲು ಮಧ್ಯಂತರ ಅವಧಿಗೆ ಸೂಕ್ತವಾದ ವ್ಯವಸ್ಥೆಗಳನ್ನು ಮಾಡಲು ಐಒಎ ಸಂಸ್ಥೆಯು ಅಧಿಕಾರ ಹೊಂದಿದೆ. ಇದರಿಂದ ಕುಸ್ತಿಪಟುಗಳು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸುವುದಿಲ್ಲ ಮತ್ತು ಇನ್ನೂ ಉತ್ತಮ ಆಡಳಿತದ ತತ್ವವೆಂದರೆ, ಕ್ರೀಡಾ ಸಂಸ್ಥೆಯು ಅಪಾಯಕ್ಕೆ ಒಳಗಾಗುವುದಿಲ್ಲ’ ಎಂದು ಕ್ರೀಡಾ ಸಚಿವಾಲಯ ತನ್ನ ಪತ್ರದಲ್ಲಿ ತಿಳಿಸಿದೆ.

ಡಬ್ಲ್ಯುಎಫ್ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ, ನೂತನ ಚುನಾಯಿತ ಮುಖ್ಯಸ್ಥ ಸಂಜಯ್ ಸಿಂಗ್ ನೇತೃತ್ವದ ಇತ್ತೀಚಿನ ಆಡಳಿತ ಮಂಡಳಿಯನ್ನು ಕೇಂದ್ರ ಸರ್ಕಾರವು ಅಮಾನತುಗೊಳಿಸಿರುವುದರಿಂದ ಡಬ್ಲ್ಯೂಎಫ್ಐಗೆ ಮತ್ತೊಂದು ಸುತ್ತಿನ ಚುನಾವಣೆ ಶಿಘ್ರದಲ್ಲೇ ನಡೆಯುವ ಸಾಧ್ಯತೆ ಇದೆ.

ಐಒಎ ರಚಿಸುವ ತಾತ್ಕಾಲಿಕ ಸಮಿತಿಯು ಕುಸ್ತಿ ಫೆಡರೇಷನ್‌ನ ದಿನನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅಥ್ಲೀಟ್‌ಗಳು ಭಾಗವಹಿಸಲು ಅನುಮತಿ ನೀಡಿವುದು ಮತ್ತು ಕ್ರೀಡಾಕೂಟಗಳನ್ನು ಏರ್ಪಡಿಸುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡಬೇಕಾಗುತ್ತದೆ.

ಹಿರಿಯ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಮುಂಬರುವ ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ಬಗ್ಗೆ ನಿನ್ನೆ ಕಳವಳ ವ್ಯಕ್ತಪಡಿಸಿದ್ದರು. ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ‘ತರಾತುರಿ’ ಘೋಷಣೆಯನ್ನು ಕೇಂದ್ರವು ಗಮನಿಸಿದ್ದು, ಸಾಕ್ಷಿ ಈ ಕುರಿತು ಪೋಸ್ಟ್ ಮಾಡಿದ ನಂತರ ಕ್ರೀಡಾ ಸಚಿವಾಲಯವು ಹೊಸದಾಗಿ ಆಯ್ಕೆಯಾದ ಕುಸ್ತಿ ಫೆಡರೇಷನ್ ಆಡಳಿತ ಮಂಡಳಿಯು ಮುಂದಿನ ಆದೇಶದವರೆಗೆ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆದೇಶಿಸಿದೆ. ಕ್ರೀಡಾ ಸಚಿವಾಲಯವು ಹೇಳಿಕೆಯಲ್ಲಿ ಹೊಸದಾಗಿ ಚುನಾಯಿತ ಸಂಸ್ಥೆಯು ‘ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣಕ್ಕೆ ಒಳಪಟ್ಟಿದೆ’ ಎಂದು ಆರೋಪಿಸಿದೆ.

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಾಕ್ಷಿ ಮಲ್ಲಿಕ್ ಸೇರಿದಂತೆ ದೇಶದ ಹಲವು ಹಿರಿಯ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ತಮ್ಮ ಸ್ಥಾನದಿಂದ ದೂರ ಸರಿಯಬೇಕಾಯಿತು.

ಒಲಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನವರಿಯಲ್ಲಿ ಬೀದಿಗಿಳಿದಿದ್ದರು.

ಬ್ರಿಜ್ ಭೂಷಣ್ ವಿರುದ್ಧ ತನಿಖೆ ಆರಂಭಿಸಿದ ನಂತರ, ಸರ್ಕಾರದ ಭರವಸೆ ಮೇರೆಗೆ ಧರಣಿ ಹಿಂಪಡೆದಿದ್ದರು. ಇತ್ತೀಚಿನ ಡಬ್ಲ್ಯುಎಫ್ಐ ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೊರನ್ ವಿರುದ್ಧ ಅಮೋಘ ಜಯ ಸಾಧಿಸಿದರು, ಅವರನ್ನು ಪ್ರತಿಭಟನಾಕಾರ ಕುಸ್ತಿಪಟುಗಳು ಬೆಂಬಲಿಸಿದ್ದರು.

ಬ್ರಿಜ್ ಭೂಷಣ್ ಅವರ ಆಪ್ತರು ಮತ್ತು ಸಂಬಂಧಿಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ, ಸಂಜಯ್ ಸಿಂಗ್ ಅವರ ನಾಮನಿರ್ದೇಶನವನ್ನು ಸಿಂಧುಗೊಳಿಸಿದ್ದು ಕುಸ್ತಿಪಟುಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ; ಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...