Homeಮುಖಪುಟ'ಡಬ್ಲೂಎಫ್ಐ'ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ 'ಐಒಎ'ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

‘ಡಬ್ಲೂಎಫ್ಐ’ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ ‘ಐಒಎ’ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

- Advertisement -
- Advertisement -

ಕುಸ್ತಿ ಫೆಡರೇಷನ್ ನೂತನ ಆಡಳಿತ ಮಂಡಳಿಯನ್ನು ಅಮಾನತು ಮಾಡಿದ ನಂತರ, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ)ಗೆ ಪತ್ರ ಬರೆದಿರುವ ಕ್ರೀಡಾ ಸಚಿವಾಲಯ, ‘ಕುಸ್ತಿ ಸಂಸ್ಥೆಯನ್ನು ಮುನ್ನಡೆಸಲು ತಾತ್ಕಾಲಿಕ ಸಮಿತಿ’ ರಚಿಸುವಂತೆ ಸೂಚನೆ ನೀಡಿದೆ.

‘ತಾತ್ಕಾಲಿಕ ಸಮಿತಿಯು ಅಥ್ಲೀಟ್‌ಗಳ ಆಯ್ಕೆ ಸೇರಿದಂತೆ ಡಬ್ಲ್ಯುಎಫ್ಐನ ವ್ಯವಹಾರಗಳನ್ನು ನಿರ್ವಹಿಸಬಹುದು ಮತ್ತು ನಿಯಂತ್ರಿಸಬಹುದು’ ಎಂದು ಐಒಎ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕ್ರೀಡಾ ಸಚಿವಾಲಯವು ಹೇಳಿದೆ.

‘ಡಬ್ಲ್ಯುಎಫ್ಐನ ಮಾಜಿ ಪದಾಧಿಕಾರಿಗಳ ಪ್ರಭಾವ ಮತ್ತು ನಿಯಂತ್ರಣದಿಂದ ಉಂಟಾದ ಪರಿಸ್ಥಿತಿಯನ್ನು ಗಮನಿಸಿದರೆ, ಸಂಸ್ಥೆಯ ಆಡಳಿತ ಮತ್ತು ಸಮಗ್ರತೆಯ ಬಗ್ಗೆ ಗಂಭೀರ ಕಳವಳ ಹುಟ್ಟಿಕೊಂಡಿವೆ’ ಎಂದು ಕ್ರೀಡಾ ಇಲಾಖೆ ಅಧೀನ ಕಾರ್ಯದರ್ಶಿ ತರುಣ್ ಪರೀಕ್ ಅವರು ಸಹಿ ಹಾಕಿರುವ ಪತ್ರದಲ್ಲಿ ತಿಳಿಸಿದ್ದಾರೆ.

‘ಆದ್ದರಿಂದ, ಕ್ರೀಡಾ ಸಂಸ್ಥೆಗಳಲ್ಲಿ ಉತ್ತಮ ಆಡಳಿತದ ತತ್ವಗಳನ್ನು ಎತ್ತಿಹಿಡಿಯಲು ತಕ್ಷಣದ ಮತ್ತು ಕಟ್ಟುನಿಟ್ಟಾದ ಕ್ರಮಗಳ ಅಗತ್ಯವಿದೆ. ಡಬ್ಲ್ಯೂಎಫ್ಐನ ವ್ಯವಹಾರಗಳನ್ನು ನಿರ್ವಹಿಸಲು ಮಧ್ಯಂತರ ಅವಧಿಗೆ ಸೂಕ್ತವಾದ ವ್ಯವಸ್ಥೆಗಳನ್ನು ಮಾಡಲು ಐಒಎ ಸಂಸ್ಥೆಯು ಅಧಿಕಾರ ಹೊಂದಿದೆ. ಇದರಿಂದ ಕುಸ್ತಿಪಟುಗಳು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸುವುದಿಲ್ಲ ಮತ್ತು ಇನ್ನೂ ಉತ್ತಮ ಆಡಳಿತದ ತತ್ವವೆಂದರೆ, ಕ್ರೀಡಾ ಸಂಸ್ಥೆಯು ಅಪಾಯಕ್ಕೆ ಒಳಗಾಗುವುದಿಲ್ಲ’ ಎಂದು ಕ್ರೀಡಾ ಸಚಿವಾಲಯ ತನ್ನ ಪತ್ರದಲ್ಲಿ ತಿಳಿಸಿದೆ.

ಡಬ್ಲ್ಯುಎಫ್ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ, ನೂತನ ಚುನಾಯಿತ ಮುಖ್ಯಸ್ಥ ಸಂಜಯ್ ಸಿಂಗ್ ನೇತೃತ್ವದ ಇತ್ತೀಚಿನ ಆಡಳಿತ ಮಂಡಳಿಯನ್ನು ಕೇಂದ್ರ ಸರ್ಕಾರವು ಅಮಾನತುಗೊಳಿಸಿರುವುದರಿಂದ ಡಬ್ಲ್ಯೂಎಫ್ಐಗೆ ಮತ್ತೊಂದು ಸುತ್ತಿನ ಚುನಾವಣೆ ಶಿಘ್ರದಲ್ಲೇ ನಡೆಯುವ ಸಾಧ್ಯತೆ ಇದೆ.

ಐಒಎ ರಚಿಸುವ ತಾತ್ಕಾಲಿಕ ಸಮಿತಿಯು ಕುಸ್ತಿ ಫೆಡರೇಷನ್‌ನ ದಿನನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅಥ್ಲೀಟ್‌ಗಳು ಭಾಗವಹಿಸಲು ಅನುಮತಿ ನೀಡಿವುದು ಮತ್ತು ಕ್ರೀಡಾಕೂಟಗಳನ್ನು ಏರ್ಪಡಿಸುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡಬೇಕಾಗುತ್ತದೆ.

ಹಿರಿಯ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಮುಂಬರುವ ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ಬಗ್ಗೆ ನಿನ್ನೆ ಕಳವಳ ವ್ಯಕ್ತಪಡಿಸಿದ್ದರು. ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ‘ತರಾತುರಿ’ ಘೋಷಣೆಯನ್ನು ಕೇಂದ್ರವು ಗಮನಿಸಿದ್ದು, ಸಾಕ್ಷಿ ಈ ಕುರಿತು ಪೋಸ್ಟ್ ಮಾಡಿದ ನಂತರ ಕ್ರೀಡಾ ಸಚಿವಾಲಯವು ಹೊಸದಾಗಿ ಆಯ್ಕೆಯಾದ ಕುಸ್ತಿ ಫೆಡರೇಷನ್ ಆಡಳಿತ ಮಂಡಳಿಯು ಮುಂದಿನ ಆದೇಶದವರೆಗೆ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆದೇಶಿಸಿದೆ. ಕ್ರೀಡಾ ಸಚಿವಾಲಯವು ಹೇಳಿಕೆಯಲ್ಲಿ ಹೊಸದಾಗಿ ಚುನಾಯಿತ ಸಂಸ್ಥೆಯು ‘ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣಕ್ಕೆ ಒಳಪಟ್ಟಿದೆ’ ಎಂದು ಆರೋಪಿಸಿದೆ.

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಾಕ್ಷಿ ಮಲ್ಲಿಕ್ ಸೇರಿದಂತೆ ದೇಶದ ಹಲವು ಹಿರಿಯ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ತಮ್ಮ ಸ್ಥಾನದಿಂದ ದೂರ ಸರಿಯಬೇಕಾಯಿತು.

ಒಲಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನವರಿಯಲ್ಲಿ ಬೀದಿಗಿಳಿದಿದ್ದರು.

ಬ್ರಿಜ್ ಭೂಷಣ್ ವಿರುದ್ಧ ತನಿಖೆ ಆರಂಭಿಸಿದ ನಂತರ, ಸರ್ಕಾರದ ಭರವಸೆ ಮೇರೆಗೆ ಧರಣಿ ಹಿಂಪಡೆದಿದ್ದರು. ಇತ್ತೀಚಿನ ಡಬ್ಲ್ಯುಎಫ್ಐ ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೊರನ್ ವಿರುದ್ಧ ಅಮೋಘ ಜಯ ಸಾಧಿಸಿದರು, ಅವರನ್ನು ಪ್ರತಿಭಟನಾಕಾರ ಕುಸ್ತಿಪಟುಗಳು ಬೆಂಬಲಿಸಿದ್ದರು.

ಬ್ರಿಜ್ ಭೂಷಣ್ ಅವರ ಆಪ್ತರು ಮತ್ತು ಸಂಬಂಧಿಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ, ಸಂಜಯ್ ಸಿಂಗ್ ಅವರ ನಾಮನಿರ್ದೇಶನವನ್ನು ಸಿಂಧುಗೊಳಿಸಿದ್ದು ಕುಸ್ತಿಪಟುಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ; ಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...