Homeಮುಖಪುಟ'ಡಬ್ಲೂಎಫ್ಐ'ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ 'ಐಒಎ'ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

‘ಡಬ್ಲೂಎಫ್ಐ’ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ ‘ಐಒಎ’ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

- Advertisement -
- Advertisement -

ಕುಸ್ತಿ ಫೆಡರೇಷನ್ ನೂತನ ಆಡಳಿತ ಮಂಡಳಿಯನ್ನು ಅಮಾನತು ಮಾಡಿದ ನಂತರ, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ)ಗೆ ಪತ್ರ ಬರೆದಿರುವ ಕ್ರೀಡಾ ಸಚಿವಾಲಯ, ‘ಕುಸ್ತಿ ಸಂಸ್ಥೆಯನ್ನು ಮುನ್ನಡೆಸಲು ತಾತ್ಕಾಲಿಕ ಸಮಿತಿ’ ರಚಿಸುವಂತೆ ಸೂಚನೆ ನೀಡಿದೆ.

‘ತಾತ್ಕಾಲಿಕ ಸಮಿತಿಯು ಅಥ್ಲೀಟ್‌ಗಳ ಆಯ್ಕೆ ಸೇರಿದಂತೆ ಡಬ್ಲ್ಯುಎಫ್ಐನ ವ್ಯವಹಾರಗಳನ್ನು ನಿರ್ವಹಿಸಬಹುದು ಮತ್ತು ನಿಯಂತ್ರಿಸಬಹುದು’ ಎಂದು ಐಒಎ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕ್ರೀಡಾ ಸಚಿವಾಲಯವು ಹೇಳಿದೆ.

‘ಡಬ್ಲ್ಯುಎಫ್ಐನ ಮಾಜಿ ಪದಾಧಿಕಾರಿಗಳ ಪ್ರಭಾವ ಮತ್ತು ನಿಯಂತ್ರಣದಿಂದ ಉಂಟಾದ ಪರಿಸ್ಥಿತಿಯನ್ನು ಗಮನಿಸಿದರೆ, ಸಂಸ್ಥೆಯ ಆಡಳಿತ ಮತ್ತು ಸಮಗ್ರತೆಯ ಬಗ್ಗೆ ಗಂಭೀರ ಕಳವಳ ಹುಟ್ಟಿಕೊಂಡಿವೆ’ ಎಂದು ಕ್ರೀಡಾ ಇಲಾಖೆ ಅಧೀನ ಕಾರ್ಯದರ್ಶಿ ತರುಣ್ ಪರೀಕ್ ಅವರು ಸಹಿ ಹಾಕಿರುವ ಪತ್ರದಲ್ಲಿ ತಿಳಿಸಿದ್ದಾರೆ.

‘ಆದ್ದರಿಂದ, ಕ್ರೀಡಾ ಸಂಸ್ಥೆಗಳಲ್ಲಿ ಉತ್ತಮ ಆಡಳಿತದ ತತ್ವಗಳನ್ನು ಎತ್ತಿಹಿಡಿಯಲು ತಕ್ಷಣದ ಮತ್ತು ಕಟ್ಟುನಿಟ್ಟಾದ ಕ್ರಮಗಳ ಅಗತ್ಯವಿದೆ. ಡಬ್ಲ್ಯೂಎಫ್ಐನ ವ್ಯವಹಾರಗಳನ್ನು ನಿರ್ವಹಿಸಲು ಮಧ್ಯಂತರ ಅವಧಿಗೆ ಸೂಕ್ತವಾದ ವ್ಯವಸ್ಥೆಗಳನ್ನು ಮಾಡಲು ಐಒಎ ಸಂಸ್ಥೆಯು ಅಧಿಕಾರ ಹೊಂದಿದೆ. ಇದರಿಂದ ಕುಸ್ತಿಪಟುಗಳು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸುವುದಿಲ್ಲ ಮತ್ತು ಇನ್ನೂ ಉತ್ತಮ ಆಡಳಿತದ ತತ್ವವೆಂದರೆ, ಕ್ರೀಡಾ ಸಂಸ್ಥೆಯು ಅಪಾಯಕ್ಕೆ ಒಳಗಾಗುವುದಿಲ್ಲ’ ಎಂದು ಕ್ರೀಡಾ ಸಚಿವಾಲಯ ತನ್ನ ಪತ್ರದಲ್ಲಿ ತಿಳಿಸಿದೆ.

ಡಬ್ಲ್ಯುಎಫ್ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ, ನೂತನ ಚುನಾಯಿತ ಮುಖ್ಯಸ್ಥ ಸಂಜಯ್ ಸಿಂಗ್ ನೇತೃತ್ವದ ಇತ್ತೀಚಿನ ಆಡಳಿತ ಮಂಡಳಿಯನ್ನು ಕೇಂದ್ರ ಸರ್ಕಾರವು ಅಮಾನತುಗೊಳಿಸಿರುವುದರಿಂದ ಡಬ್ಲ್ಯೂಎಫ್ಐಗೆ ಮತ್ತೊಂದು ಸುತ್ತಿನ ಚುನಾವಣೆ ಶಿಘ್ರದಲ್ಲೇ ನಡೆಯುವ ಸಾಧ್ಯತೆ ಇದೆ.

ಐಒಎ ರಚಿಸುವ ತಾತ್ಕಾಲಿಕ ಸಮಿತಿಯು ಕುಸ್ತಿ ಫೆಡರೇಷನ್‌ನ ದಿನನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅಥ್ಲೀಟ್‌ಗಳು ಭಾಗವಹಿಸಲು ಅನುಮತಿ ನೀಡಿವುದು ಮತ್ತು ಕ್ರೀಡಾಕೂಟಗಳನ್ನು ಏರ್ಪಡಿಸುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡಬೇಕಾಗುತ್ತದೆ.

ಹಿರಿಯ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಮುಂಬರುವ ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ಬಗ್ಗೆ ನಿನ್ನೆ ಕಳವಳ ವ್ಯಕ್ತಪಡಿಸಿದ್ದರು. ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ‘ತರಾತುರಿ’ ಘೋಷಣೆಯನ್ನು ಕೇಂದ್ರವು ಗಮನಿಸಿದ್ದು, ಸಾಕ್ಷಿ ಈ ಕುರಿತು ಪೋಸ್ಟ್ ಮಾಡಿದ ನಂತರ ಕ್ರೀಡಾ ಸಚಿವಾಲಯವು ಹೊಸದಾಗಿ ಆಯ್ಕೆಯಾದ ಕುಸ್ತಿ ಫೆಡರೇಷನ್ ಆಡಳಿತ ಮಂಡಳಿಯು ಮುಂದಿನ ಆದೇಶದವರೆಗೆ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆದೇಶಿಸಿದೆ. ಕ್ರೀಡಾ ಸಚಿವಾಲಯವು ಹೇಳಿಕೆಯಲ್ಲಿ ಹೊಸದಾಗಿ ಚುನಾಯಿತ ಸಂಸ್ಥೆಯು ‘ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣಕ್ಕೆ ಒಳಪಟ್ಟಿದೆ’ ಎಂದು ಆರೋಪಿಸಿದೆ.

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಾಕ್ಷಿ ಮಲ್ಲಿಕ್ ಸೇರಿದಂತೆ ದೇಶದ ಹಲವು ಹಿರಿಯ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ತಮ್ಮ ಸ್ಥಾನದಿಂದ ದೂರ ಸರಿಯಬೇಕಾಯಿತು.

ಒಲಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನವರಿಯಲ್ಲಿ ಬೀದಿಗಿಳಿದಿದ್ದರು.

ಬ್ರಿಜ್ ಭೂಷಣ್ ವಿರುದ್ಧ ತನಿಖೆ ಆರಂಭಿಸಿದ ನಂತರ, ಸರ್ಕಾರದ ಭರವಸೆ ಮೇರೆಗೆ ಧರಣಿ ಹಿಂಪಡೆದಿದ್ದರು. ಇತ್ತೀಚಿನ ಡಬ್ಲ್ಯುಎಫ್ಐ ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೊರನ್ ವಿರುದ್ಧ ಅಮೋಘ ಜಯ ಸಾಧಿಸಿದರು, ಅವರನ್ನು ಪ್ರತಿಭಟನಾಕಾರ ಕುಸ್ತಿಪಟುಗಳು ಬೆಂಬಲಿಸಿದ್ದರು.

ಬ್ರಿಜ್ ಭೂಷಣ್ ಅವರ ಆಪ್ತರು ಮತ್ತು ಸಂಬಂಧಿಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ, ಸಂಜಯ್ ಸಿಂಗ್ ಅವರ ನಾಮನಿರ್ದೇಶನವನ್ನು ಸಿಂಧುಗೊಳಿಸಿದ್ದು ಕುಸ್ತಿಪಟುಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ; ಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...