Homeಮುಖಪುಟಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

ಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮೇಲಿನ ನಿಷೇಧವನ್ನು ಕೇಂದ್ರ ಕ್ರೀಡಾ ಸಚಿವಾಲಯ ತೆಗೆದು ಹಾಕಿದೆ. ಕುಸ್ತಿಗೆ ಸಂಬಂಧಿಸಿದ ರಾಷ್ಟ್ರೀಯ ಕ್ರೀಡಾ ಒಕ್ಕೂಟ (ಎನ್‌ಎಸ್‌ಎಫ್) ಮಾನ್ಯತೆಯನ್ನು ಪುನಃ ಸ್ಥಾಪಿಸಿದೆ.

2023ರ ಡಿಸೆಂಬರ್‌ನಲ್ಲಿ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಂದಿನಿ ನಗರದಲ್ಲಿ ಅಂಡರ್ -15 ಮತ್ತು ಅಂಡರ್-20 ರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಹೊಸದಾಗಿ ಆಯ್ಕೆಯಾದ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಘೋಷಿಸಿದ ನಂತರ ಕ್ರೀಡಾ ಸಚಿವಾಲಯ ಸಂಸ್ಥೆಯನ್ನು ಅಮಾನತುಗೊಳಿಸಿತ್ತು.

2023ರಲ್ಲಿ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ, ದೇಶದ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ್, ವಿನೇಶ್ ಪೋಗಟ್ ಮತ್ತು ಭಜರಂಗ್ ಪುನಿಯಾ ಸೇರಿದಂತೆ ಹಲವರು, ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಮಾಡಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಿದ್ದರು.

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ರಾಜೀನಾಮೆ ನೀಡಬೇಕು, ಅವರ ವಿರುದ್ದ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಬಂಧಿಸಬೇಕು ಮತ್ತು ಡಬ್ಲ್ಯುಎಫ್‌ಐಗೆ ಚುನಾವಣೆ ನಡೆಸಿ ಹೊಸ ಸಮಿತಿ ಆಯ್ಕೆ ಮಾಡಬೇಕು ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆಗ್ರಹಿಸಿದ್ದರು.

ಕುಸ್ತಿಪಟುಗಳ ಪ್ರತಿಭಟನೆ ಹಿನ್ನೆಲೆ, ನಿಗದಿತ ಸಮಯದೊಳಗೆ ಚುನಾವಣೆ ನಡೆಸಲು ವಿಫಲವಾದ ಕಾರಣ, ಡಬ್ಯುಎಫ್‌ಐಗೆ 2023ರ ಆಗಸ್ಟ್‌ನಲ್ಲಿ, ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ನಿಷೇಧ ಹೇರಿತ್ತು.

2023ರಲ್ಲಿ ಡಿಸೆಂಬರ್‌ನಲ್ಲಿ ಡಬ್ಯುಎಫ್‌ಐಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಡಬ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದನ್ನು ವಿರೋಧಿಸಿ ಕುಸ್ತಿಪಟುಗಳು ಪ್ರತಿಭಟಿಸಿದ್ದರು.

ಚುನಾವಣೆಯ ಕೆಲ ದಿನಗಳ ನಂತರ, ಕೇಂದ್ರ ಕ್ರೀಡಾ ಸಚಿವಾಲಯ ಕುಸ್ತಿ ಫೆಡರೇಶನ್ ಅನ್ನು ಅಮಾನತುಗೊಳಿಸಿತ್ತು. ಸಂಸ್ಥೆಯ ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.

ಡಬ್ಲ್ಯುಎಫ್‌ಐ ಮೇಲಿನ ನಿಷೇಧವನ್ನು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ತೆಗೆದುಹಾಕಿದ್ದು, ಭವಿಷ್ಯದ ಸ್ಪರ್ಧೆಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಹೀಗಾಗಿ, ತಾತ್ಕಾಲಿಕ ಸಮಿತಿ ಅಗತ್ಯವಿಲ್ಲ ಎಂದು ಐಒಎ ಹೇಳಿದ ನಂತರ ಸಮಿತಿಯನ್ನು ವಿಸರ್ಜಿಸಲಾಗಿತ್ತು.

ಇದೀಗ ಕ್ರೀಡಾ ಸಚಿವಾಲಯ ಡಬ್ಲ್ಯುಎಫ್‌ಐಗೆ ರಾಷ್ಟ್ರೀಯ ಕ್ರೀಡಾ ಒಕ್ಕೂಟದ (ಎನ್‌ಎಸ್‌ಎಫ್) ಮಾನ್ಯತೆಯನ್ನು ಮರುಸ್ಥಾಪಿಸಿದೆ. ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ದದ ಲೈಂಗಿಕ ಕಿರುಕುಳ ಪ್ರಕರಣ ಪ್ರಸ್ತುತ ನ್ಯಾಯಾಲಯದಲ್ಲಿದೆ.

“ಪ್ರಸ್ತುತ, ನಮ್ಮ ಆಟಗಾರರು ಮಾರ್ಚ್ 25 ರಿಂದ 30 ರವರೆಗೆ ಜೋರ್ಡಾನ್‌ನಲ್ಲಿ ನಡೆಯಲಿರುವ ಸೀನಿಯರ್ಸ್ ಏಷ್ಯನ್ ಚಾಂಪಿಯನ್‌ಶಿಪ್‌ಗಾಗಿ ತರಬೇತಿ ಪಡೆಯುತ್ತಿದ್ದಾರೆ. ದೇಶದ ವಿವಿಧ ಕ್ರೀಡಾ ಪ್ರಾಧಿಕಾರದ ಕೇಂದ್ರಗಳಲ್ಲಿ ಅಭ್ಯಾಸ ನಡೆಯುತ್ತಿದೆ. ಪ್ರಸ್ತುತ ನಂದಿನಿ ನಗರದಲ್ಲಿ (ಗೊಂಡಾದಲ್ಲಿ) ಯಾವುದೇ ಸ್ಪರ್ಧೆಗಳು ನಡೆಯುತ್ತಿಲ್ಲ. ಆದರೆ, ಸಚಿವಾಲಯದಿಂದ ಅನುಮೋದನೆ ಪಡೆದ ನಂತರ ಭವಿಷ್ಯದಲ್ಲಿ ಗೊಂಡಾದಲ್ಲಿ ತರಬೇತಿ ತರಗತಿಗಳು ಮತ್ತು ಸ್ಪರ್ಧೆಗಳನ್ನು ನಡೆಸಬಹುದು” ಎಂದು ಡಬ್ಲ್ಯುಎಫ್‌ಐ ಹಾಲಿ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

“ನನ್ನ ವಿರುದ್ಧ ಪಿತೂರಿ ನಡೆಸಿದವರು ನೆಲ ಕಚ್ಚಿದ್ದಾರೆ” ಬ್ರಿಜ್ ಭೂಷಣ್ ಸಿಂಗ್

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ ) ಅಮಾನತು ರದ್ದುಗೊಳಿಸಿದ ಕ್ರೀಡಾ ಸಚಿವಾಲಯದ ನಿರ್ಧಾರವನ್ನು ಶ್ಲಾಘಿಸಿರುವ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್, “ನ್ಯಾಯ ದೊರಕಿದೆ ಮತ್ತು ನನ್ನ ವಿರುದ್ಧ ಪಿತೂರಿ ನಡೆಸಿದ ಜನರು ನೆಲ ಕಚ್ಚಿದ್ದಾರೆ” ಎಂದು ಹೇಳಿದ್ದಾರೆ.

“ಕುಸ್ತಿಪಟುಗಳು ಎಂದು ಕರೆಯಲ್ಪಡುವ ಕೆಲವರು ಡಬ್ಲ್ಯುಎಫ್‌ಐ ಅಧ್ಯಕ್ಷ ಸ್ಥಾನದಿಂದ ನನ್ನನ್ನು ತೆಗೆದುಹಾಕಿಸಿದರು. ಇದು ನನ್ನ ಮತ್ತು ಡಬ್ಲ್ಯುಎಫ್‌ಐನಲ್ಲಿ ಉತ್ತರ ಪ್ರದೇಶದ ಪ್ರಾಬಲ್ಯವನ್ನು ಕುಗ್ಗಿಸಲು ಮಾಡಿದ ಪಿತೂರಿಯಾಗಿತ್ತು. ಅವರ ಯೋಜನೆಗಳು ವಿಫಲವಾಗಿವೆ. ಕ್ರೀಡಾ ಸಚಿವಾಲಯ ಅಮಾನತು ತೆಗೆದು ಹಾಕಿರುವುದು ಹೋಳಿಗೆ ಮುನ್ನ ಕೊಟ್ಟ ಉಡುಗೊರೆಯಾಗಿದೆ” ಎಂದಿದ್ದಾರೆ.

ಜಮ್ಮು ಕಾಶ್ಮೀರದ ಎರಡು ಪಕ್ಷಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...