Homeಮುಖಪುಟಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

ಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮೇಲಿನ ನಿಷೇಧವನ್ನು ಕೇಂದ್ರ ಕ್ರೀಡಾ ಸಚಿವಾಲಯ ತೆಗೆದು ಹಾಕಿದೆ. ಕುಸ್ತಿಗೆ ಸಂಬಂಧಿಸಿದ ರಾಷ್ಟ್ರೀಯ ಕ್ರೀಡಾ ಒಕ್ಕೂಟ (ಎನ್‌ಎಸ್‌ಎಫ್) ಮಾನ್ಯತೆಯನ್ನು ಪುನಃ ಸ್ಥಾಪಿಸಿದೆ.

2023ರ ಡಿಸೆಂಬರ್‌ನಲ್ಲಿ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಂದಿನಿ ನಗರದಲ್ಲಿ ಅಂಡರ್ -15 ಮತ್ತು ಅಂಡರ್-20 ರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಹೊಸದಾಗಿ ಆಯ್ಕೆಯಾದ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಘೋಷಿಸಿದ ನಂತರ ಕ್ರೀಡಾ ಸಚಿವಾಲಯ ಸಂಸ್ಥೆಯನ್ನು ಅಮಾನತುಗೊಳಿಸಿತ್ತು.

2023ರಲ್ಲಿ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ, ದೇಶದ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ್, ವಿನೇಶ್ ಪೋಗಟ್ ಮತ್ತು ಭಜರಂಗ್ ಪುನಿಯಾ ಸೇರಿದಂತೆ ಹಲವರು, ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಮಾಡಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಿದ್ದರು.

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ರಾಜೀನಾಮೆ ನೀಡಬೇಕು, ಅವರ ವಿರುದ್ದ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಬಂಧಿಸಬೇಕು ಮತ್ತು ಡಬ್ಲ್ಯುಎಫ್‌ಐಗೆ ಚುನಾವಣೆ ನಡೆಸಿ ಹೊಸ ಸಮಿತಿ ಆಯ್ಕೆ ಮಾಡಬೇಕು ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆಗ್ರಹಿಸಿದ್ದರು.

ಕುಸ್ತಿಪಟುಗಳ ಪ್ರತಿಭಟನೆ ಹಿನ್ನೆಲೆ, ನಿಗದಿತ ಸಮಯದೊಳಗೆ ಚುನಾವಣೆ ನಡೆಸಲು ವಿಫಲವಾದ ಕಾರಣ, ಡಬ್ಯುಎಫ್‌ಐಗೆ 2023ರ ಆಗಸ್ಟ್‌ನಲ್ಲಿ, ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ನಿಷೇಧ ಹೇರಿತ್ತು.

2023ರಲ್ಲಿ ಡಿಸೆಂಬರ್‌ನಲ್ಲಿ ಡಬ್ಯುಎಫ್‌ಐಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಡಬ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದನ್ನು ವಿರೋಧಿಸಿ ಕುಸ್ತಿಪಟುಗಳು ಪ್ರತಿಭಟಿಸಿದ್ದರು.

ಚುನಾವಣೆಯ ಕೆಲ ದಿನಗಳ ನಂತರ, ಕೇಂದ್ರ ಕ್ರೀಡಾ ಸಚಿವಾಲಯ ಕುಸ್ತಿ ಫೆಡರೇಶನ್ ಅನ್ನು ಅಮಾನತುಗೊಳಿಸಿತ್ತು. ಸಂಸ್ಥೆಯ ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.

ಡಬ್ಲ್ಯುಎಫ್‌ಐ ಮೇಲಿನ ನಿಷೇಧವನ್ನು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ತೆಗೆದುಹಾಕಿದ್ದು, ಭವಿಷ್ಯದ ಸ್ಪರ್ಧೆಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಹೀಗಾಗಿ, ತಾತ್ಕಾಲಿಕ ಸಮಿತಿ ಅಗತ್ಯವಿಲ್ಲ ಎಂದು ಐಒಎ ಹೇಳಿದ ನಂತರ ಸಮಿತಿಯನ್ನು ವಿಸರ್ಜಿಸಲಾಗಿತ್ತು.

ಇದೀಗ ಕ್ರೀಡಾ ಸಚಿವಾಲಯ ಡಬ್ಲ್ಯುಎಫ್‌ಐಗೆ ರಾಷ್ಟ್ರೀಯ ಕ್ರೀಡಾ ಒಕ್ಕೂಟದ (ಎನ್‌ಎಸ್‌ಎಫ್) ಮಾನ್ಯತೆಯನ್ನು ಮರುಸ್ಥಾಪಿಸಿದೆ. ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ದದ ಲೈಂಗಿಕ ಕಿರುಕುಳ ಪ್ರಕರಣ ಪ್ರಸ್ತುತ ನ್ಯಾಯಾಲಯದಲ್ಲಿದೆ.

“ಪ್ರಸ್ತುತ, ನಮ್ಮ ಆಟಗಾರರು ಮಾರ್ಚ್ 25 ರಿಂದ 30 ರವರೆಗೆ ಜೋರ್ಡಾನ್‌ನಲ್ಲಿ ನಡೆಯಲಿರುವ ಸೀನಿಯರ್ಸ್ ಏಷ್ಯನ್ ಚಾಂಪಿಯನ್‌ಶಿಪ್‌ಗಾಗಿ ತರಬೇತಿ ಪಡೆಯುತ್ತಿದ್ದಾರೆ. ದೇಶದ ವಿವಿಧ ಕ್ರೀಡಾ ಪ್ರಾಧಿಕಾರದ ಕೇಂದ್ರಗಳಲ್ಲಿ ಅಭ್ಯಾಸ ನಡೆಯುತ್ತಿದೆ. ಪ್ರಸ್ತುತ ನಂದಿನಿ ನಗರದಲ್ಲಿ (ಗೊಂಡಾದಲ್ಲಿ) ಯಾವುದೇ ಸ್ಪರ್ಧೆಗಳು ನಡೆಯುತ್ತಿಲ್ಲ. ಆದರೆ, ಸಚಿವಾಲಯದಿಂದ ಅನುಮೋದನೆ ಪಡೆದ ನಂತರ ಭವಿಷ್ಯದಲ್ಲಿ ಗೊಂಡಾದಲ್ಲಿ ತರಬೇತಿ ತರಗತಿಗಳು ಮತ್ತು ಸ್ಪರ್ಧೆಗಳನ್ನು ನಡೆಸಬಹುದು” ಎಂದು ಡಬ್ಲ್ಯುಎಫ್‌ಐ ಹಾಲಿ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

“ನನ್ನ ವಿರುದ್ಧ ಪಿತೂರಿ ನಡೆಸಿದವರು ನೆಲ ಕಚ್ಚಿದ್ದಾರೆ” ಬ್ರಿಜ್ ಭೂಷಣ್ ಸಿಂಗ್

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ ) ಅಮಾನತು ರದ್ದುಗೊಳಿಸಿದ ಕ್ರೀಡಾ ಸಚಿವಾಲಯದ ನಿರ್ಧಾರವನ್ನು ಶ್ಲಾಘಿಸಿರುವ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್, “ನ್ಯಾಯ ದೊರಕಿದೆ ಮತ್ತು ನನ್ನ ವಿರುದ್ಧ ಪಿತೂರಿ ನಡೆಸಿದ ಜನರು ನೆಲ ಕಚ್ಚಿದ್ದಾರೆ” ಎಂದು ಹೇಳಿದ್ದಾರೆ.

“ಕುಸ್ತಿಪಟುಗಳು ಎಂದು ಕರೆಯಲ್ಪಡುವ ಕೆಲವರು ಡಬ್ಲ್ಯುಎಫ್‌ಐ ಅಧ್ಯಕ್ಷ ಸ್ಥಾನದಿಂದ ನನ್ನನ್ನು ತೆಗೆದುಹಾಕಿಸಿದರು. ಇದು ನನ್ನ ಮತ್ತು ಡಬ್ಲ್ಯುಎಫ್‌ಐನಲ್ಲಿ ಉತ್ತರ ಪ್ರದೇಶದ ಪ್ರಾಬಲ್ಯವನ್ನು ಕುಗ್ಗಿಸಲು ಮಾಡಿದ ಪಿತೂರಿಯಾಗಿತ್ತು. ಅವರ ಯೋಜನೆಗಳು ವಿಫಲವಾಗಿವೆ. ಕ್ರೀಡಾ ಸಚಿವಾಲಯ ಅಮಾನತು ತೆಗೆದು ಹಾಕಿರುವುದು ಹೋಳಿಗೆ ಮುನ್ನ ಕೊಟ್ಟ ಉಡುಗೊರೆಯಾಗಿದೆ” ಎಂದಿದ್ದಾರೆ.

ಜಮ್ಮು ಕಾಶ್ಮೀರದ ಎರಡು ಪಕ್ಷಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...