Homeಮುಖಪುಟಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

ಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮೇಲಿನ ನಿಷೇಧವನ್ನು ಕೇಂದ್ರ ಕ್ರೀಡಾ ಸಚಿವಾಲಯ ತೆಗೆದು ಹಾಕಿದೆ. ಕುಸ್ತಿಗೆ ಸಂಬಂಧಿಸಿದ ರಾಷ್ಟ್ರೀಯ ಕ್ರೀಡಾ ಒಕ್ಕೂಟ (ಎನ್‌ಎಸ್‌ಎಫ್) ಮಾನ್ಯತೆಯನ್ನು ಪುನಃ ಸ್ಥಾಪಿಸಿದೆ.

2023ರ ಡಿಸೆಂಬರ್‌ನಲ್ಲಿ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಂದಿನಿ ನಗರದಲ್ಲಿ ಅಂಡರ್ -15 ಮತ್ತು ಅಂಡರ್-20 ರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಹೊಸದಾಗಿ ಆಯ್ಕೆಯಾದ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಘೋಷಿಸಿದ ನಂತರ ಕ್ರೀಡಾ ಸಚಿವಾಲಯ ಸಂಸ್ಥೆಯನ್ನು ಅಮಾನತುಗೊಳಿಸಿತ್ತು.

2023ರಲ್ಲಿ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ, ದೇಶದ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ್, ವಿನೇಶ್ ಪೋಗಟ್ ಮತ್ತು ಭಜರಂಗ್ ಪುನಿಯಾ ಸೇರಿದಂತೆ ಹಲವರು, ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಮಾಡಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಿದ್ದರು.

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ರಾಜೀನಾಮೆ ನೀಡಬೇಕು, ಅವರ ವಿರುದ್ದ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಬಂಧಿಸಬೇಕು ಮತ್ತು ಡಬ್ಲ್ಯುಎಫ್‌ಐಗೆ ಚುನಾವಣೆ ನಡೆಸಿ ಹೊಸ ಸಮಿತಿ ಆಯ್ಕೆ ಮಾಡಬೇಕು ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆಗ್ರಹಿಸಿದ್ದರು.

ಕುಸ್ತಿಪಟುಗಳ ಪ್ರತಿಭಟನೆ ಹಿನ್ನೆಲೆ, ನಿಗದಿತ ಸಮಯದೊಳಗೆ ಚುನಾವಣೆ ನಡೆಸಲು ವಿಫಲವಾದ ಕಾರಣ, ಡಬ್ಯುಎಫ್‌ಐಗೆ 2023ರ ಆಗಸ್ಟ್‌ನಲ್ಲಿ, ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ನಿಷೇಧ ಹೇರಿತ್ತು.

2023ರಲ್ಲಿ ಡಿಸೆಂಬರ್‌ನಲ್ಲಿ ಡಬ್ಯುಎಫ್‌ಐಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಡಬ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದನ್ನು ವಿರೋಧಿಸಿ ಕುಸ್ತಿಪಟುಗಳು ಪ್ರತಿಭಟಿಸಿದ್ದರು.

ಚುನಾವಣೆಯ ಕೆಲ ದಿನಗಳ ನಂತರ, ಕೇಂದ್ರ ಕ್ರೀಡಾ ಸಚಿವಾಲಯ ಕುಸ್ತಿ ಫೆಡರೇಶನ್ ಅನ್ನು ಅಮಾನತುಗೊಳಿಸಿತ್ತು. ಸಂಸ್ಥೆಯ ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.

ಡಬ್ಲ್ಯುಎಫ್‌ಐ ಮೇಲಿನ ನಿಷೇಧವನ್ನು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ತೆಗೆದುಹಾಕಿದ್ದು, ಭವಿಷ್ಯದ ಸ್ಪರ್ಧೆಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಹೀಗಾಗಿ, ತಾತ್ಕಾಲಿಕ ಸಮಿತಿ ಅಗತ್ಯವಿಲ್ಲ ಎಂದು ಐಒಎ ಹೇಳಿದ ನಂತರ ಸಮಿತಿಯನ್ನು ವಿಸರ್ಜಿಸಲಾಗಿತ್ತು.

ಇದೀಗ ಕ್ರೀಡಾ ಸಚಿವಾಲಯ ಡಬ್ಲ್ಯುಎಫ್‌ಐಗೆ ರಾಷ್ಟ್ರೀಯ ಕ್ರೀಡಾ ಒಕ್ಕೂಟದ (ಎನ್‌ಎಸ್‌ಎಫ್) ಮಾನ್ಯತೆಯನ್ನು ಮರುಸ್ಥಾಪಿಸಿದೆ. ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ದದ ಲೈಂಗಿಕ ಕಿರುಕುಳ ಪ್ರಕರಣ ಪ್ರಸ್ತುತ ನ್ಯಾಯಾಲಯದಲ್ಲಿದೆ.

“ಪ್ರಸ್ತುತ, ನಮ್ಮ ಆಟಗಾರರು ಮಾರ್ಚ್ 25 ರಿಂದ 30 ರವರೆಗೆ ಜೋರ್ಡಾನ್‌ನಲ್ಲಿ ನಡೆಯಲಿರುವ ಸೀನಿಯರ್ಸ್ ಏಷ್ಯನ್ ಚಾಂಪಿಯನ್‌ಶಿಪ್‌ಗಾಗಿ ತರಬೇತಿ ಪಡೆಯುತ್ತಿದ್ದಾರೆ. ದೇಶದ ವಿವಿಧ ಕ್ರೀಡಾ ಪ್ರಾಧಿಕಾರದ ಕೇಂದ್ರಗಳಲ್ಲಿ ಅಭ್ಯಾಸ ನಡೆಯುತ್ತಿದೆ. ಪ್ರಸ್ತುತ ನಂದಿನಿ ನಗರದಲ್ಲಿ (ಗೊಂಡಾದಲ್ಲಿ) ಯಾವುದೇ ಸ್ಪರ್ಧೆಗಳು ನಡೆಯುತ್ತಿಲ್ಲ. ಆದರೆ, ಸಚಿವಾಲಯದಿಂದ ಅನುಮೋದನೆ ಪಡೆದ ನಂತರ ಭವಿಷ್ಯದಲ್ಲಿ ಗೊಂಡಾದಲ್ಲಿ ತರಬೇತಿ ತರಗತಿಗಳು ಮತ್ತು ಸ್ಪರ್ಧೆಗಳನ್ನು ನಡೆಸಬಹುದು” ಎಂದು ಡಬ್ಲ್ಯುಎಫ್‌ಐ ಹಾಲಿ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

“ನನ್ನ ವಿರುದ್ಧ ಪಿತೂರಿ ನಡೆಸಿದವರು ನೆಲ ಕಚ್ಚಿದ್ದಾರೆ” ಬ್ರಿಜ್ ಭೂಷಣ್ ಸಿಂಗ್

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ ) ಅಮಾನತು ರದ್ದುಗೊಳಿಸಿದ ಕ್ರೀಡಾ ಸಚಿವಾಲಯದ ನಿರ್ಧಾರವನ್ನು ಶ್ಲಾಘಿಸಿರುವ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್, “ನ್ಯಾಯ ದೊರಕಿದೆ ಮತ್ತು ನನ್ನ ವಿರುದ್ಧ ಪಿತೂರಿ ನಡೆಸಿದ ಜನರು ನೆಲ ಕಚ್ಚಿದ್ದಾರೆ” ಎಂದು ಹೇಳಿದ್ದಾರೆ.

“ಕುಸ್ತಿಪಟುಗಳು ಎಂದು ಕರೆಯಲ್ಪಡುವ ಕೆಲವರು ಡಬ್ಲ್ಯುಎಫ್‌ಐ ಅಧ್ಯಕ್ಷ ಸ್ಥಾನದಿಂದ ನನ್ನನ್ನು ತೆಗೆದುಹಾಕಿಸಿದರು. ಇದು ನನ್ನ ಮತ್ತು ಡಬ್ಲ್ಯುಎಫ್‌ಐನಲ್ಲಿ ಉತ್ತರ ಪ್ರದೇಶದ ಪ್ರಾಬಲ್ಯವನ್ನು ಕುಗ್ಗಿಸಲು ಮಾಡಿದ ಪಿತೂರಿಯಾಗಿತ್ತು. ಅವರ ಯೋಜನೆಗಳು ವಿಫಲವಾಗಿವೆ. ಕ್ರೀಡಾ ಸಚಿವಾಲಯ ಅಮಾನತು ತೆಗೆದು ಹಾಕಿರುವುದು ಹೋಳಿಗೆ ಮುನ್ನ ಕೊಟ್ಟ ಉಡುಗೊರೆಯಾಗಿದೆ” ಎಂದಿದ್ದಾರೆ.

ಜಮ್ಮು ಕಾಶ್ಮೀರದ ಎರಡು ಪಕ್ಷಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...