Homeಮುಖಪುಟಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

ಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮೇಲಿನ ನಿಷೇಧವನ್ನು ಕೇಂದ್ರ ಕ್ರೀಡಾ ಸಚಿವಾಲಯ ತೆಗೆದು ಹಾಕಿದೆ. ಕುಸ್ತಿಗೆ ಸಂಬಂಧಿಸಿದ ರಾಷ್ಟ್ರೀಯ ಕ್ರೀಡಾ ಒಕ್ಕೂಟ (ಎನ್‌ಎಸ್‌ಎಫ್) ಮಾನ್ಯತೆಯನ್ನು ಪುನಃ ಸ್ಥಾಪಿಸಿದೆ.

2023ರ ಡಿಸೆಂಬರ್‌ನಲ್ಲಿ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಂದಿನಿ ನಗರದಲ್ಲಿ ಅಂಡರ್ -15 ಮತ್ತು ಅಂಡರ್-20 ರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಹೊಸದಾಗಿ ಆಯ್ಕೆಯಾದ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಘೋಷಿಸಿದ ನಂತರ ಕ್ರೀಡಾ ಸಚಿವಾಲಯ ಸಂಸ್ಥೆಯನ್ನು ಅಮಾನತುಗೊಳಿಸಿತ್ತು.

2023ರಲ್ಲಿ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ, ದೇಶದ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ್, ವಿನೇಶ್ ಪೋಗಟ್ ಮತ್ತು ಭಜರಂಗ್ ಪುನಿಯಾ ಸೇರಿದಂತೆ ಹಲವರು, ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಮಾಡಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಿದ್ದರು.

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ರಾಜೀನಾಮೆ ನೀಡಬೇಕು, ಅವರ ವಿರುದ್ದ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಬಂಧಿಸಬೇಕು ಮತ್ತು ಡಬ್ಲ್ಯುಎಫ್‌ಐಗೆ ಚುನಾವಣೆ ನಡೆಸಿ ಹೊಸ ಸಮಿತಿ ಆಯ್ಕೆ ಮಾಡಬೇಕು ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆಗ್ರಹಿಸಿದ್ದರು.

ಕುಸ್ತಿಪಟುಗಳ ಪ್ರತಿಭಟನೆ ಹಿನ್ನೆಲೆ, ನಿಗದಿತ ಸಮಯದೊಳಗೆ ಚುನಾವಣೆ ನಡೆಸಲು ವಿಫಲವಾದ ಕಾರಣ, ಡಬ್ಯುಎಫ್‌ಐಗೆ 2023ರ ಆಗಸ್ಟ್‌ನಲ್ಲಿ, ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ನಿಷೇಧ ಹೇರಿತ್ತು.

2023ರಲ್ಲಿ ಡಿಸೆಂಬರ್‌ನಲ್ಲಿ ಡಬ್ಯುಎಫ್‌ಐಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಡಬ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದನ್ನು ವಿರೋಧಿಸಿ ಕುಸ್ತಿಪಟುಗಳು ಪ್ರತಿಭಟಿಸಿದ್ದರು.

ಚುನಾವಣೆಯ ಕೆಲ ದಿನಗಳ ನಂತರ, ಕೇಂದ್ರ ಕ್ರೀಡಾ ಸಚಿವಾಲಯ ಕುಸ್ತಿ ಫೆಡರೇಶನ್ ಅನ್ನು ಅಮಾನತುಗೊಳಿಸಿತ್ತು. ಸಂಸ್ಥೆಯ ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.

ಡಬ್ಲ್ಯುಎಫ್‌ಐ ಮೇಲಿನ ನಿಷೇಧವನ್ನು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ತೆಗೆದುಹಾಕಿದ್ದು, ಭವಿಷ್ಯದ ಸ್ಪರ್ಧೆಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಹೀಗಾಗಿ, ತಾತ್ಕಾಲಿಕ ಸಮಿತಿ ಅಗತ್ಯವಿಲ್ಲ ಎಂದು ಐಒಎ ಹೇಳಿದ ನಂತರ ಸಮಿತಿಯನ್ನು ವಿಸರ್ಜಿಸಲಾಗಿತ್ತು.

ಇದೀಗ ಕ್ರೀಡಾ ಸಚಿವಾಲಯ ಡಬ್ಲ್ಯುಎಫ್‌ಐಗೆ ರಾಷ್ಟ್ರೀಯ ಕ್ರೀಡಾ ಒಕ್ಕೂಟದ (ಎನ್‌ಎಸ್‌ಎಫ್) ಮಾನ್ಯತೆಯನ್ನು ಮರುಸ್ಥಾಪಿಸಿದೆ. ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ದದ ಲೈಂಗಿಕ ಕಿರುಕುಳ ಪ್ರಕರಣ ಪ್ರಸ್ತುತ ನ್ಯಾಯಾಲಯದಲ್ಲಿದೆ.

“ಪ್ರಸ್ತುತ, ನಮ್ಮ ಆಟಗಾರರು ಮಾರ್ಚ್ 25 ರಿಂದ 30 ರವರೆಗೆ ಜೋರ್ಡಾನ್‌ನಲ್ಲಿ ನಡೆಯಲಿರುವ ಸೀನಿಯರ್ಸ್ ಏಷ್ಯನ್ ಚಾಂಪಿಯನ್‌ಶಿಪ್‌ಗಾಗಿ ತರಬೇತಿ ಪಡೆಯುತ್ತಿದ್ದಾರೆ. ದೇಶದ ವಿವಿಧ ಕ್ರೀಡಾ ಪ್ರಾಧಿಕಾರದ ಕೇಂದ್ರಗಳಲ್ಲಿ ಅಭ್ಯಾಸ ನಡೆಯುತ್ತಿದೆ. ಪ್ರಸ್ತುತ ನಂದಿನಿ ನಗರದಲ್ಲಿ (ಗೊಂಡಾದಲ್ಲಿ) ಯಾವುದೇ ಸ್ಪರ್ಧೆಗಳು ನಡೆಯುತ್ತಿಲ್ಲ. ಆದರೆ, ಸಚಿವಾಲಯದಿಂದ ಅನುಮೋದನೆ ಪಡೆದ ನಂತರ ಭವಿಷ್ಯದಲ್ಲಿ ಗೊಂಡಾದಲ್ಲಿ ತರಬೇತಿ ತರಗತಿಗಳು ಮತ್ತು ಸ್ಪರ್ಧೆಗಳನ್ನು ನಡೆಸಬಹುದು” ಎಂದು ಡಬ್ಲ್ಯುಎಫ್‌ಐ ಹಾಲಿ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

“ನನ್ನ ವಿರುದ್ಧ ಪಿತೂರಿ ನಡೆಸಿದವರು ನೆಲ ಕಚ್ಚಿದ್ದಾರೆ” ಬ್ರಿಜ್ ಭೂಷಣ್ ಸಿಂಗ್

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ ) ಅಮಾನತು ರದ್ದುಗೊಳಿಸಿದ ಕ್ರೀಡಾ ಸಚಿವಾಲಯದ ನಿರ್ಧಾರವನ್ನು ಶ್ಲಾಘಿಸಿರುವ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್, “ನ್ಯಾಯ ದೊರಕಿದೆ ಮತ್ತು ನನ್ನ ವಿರುದ್ಧ ಪಿತೂರಿ ನಡೆಸಿದ ಜನರು ನೆಲ ಕಚ್ಚಿದ್ದಾರೆ” ಎಂದು ಹೇಳಿದ್ದಾರೆ.

“ಕುಸ್ತಿಪಟುಗಳು ಎಂದು ಕರೆಯಲ್ಪಡುವ ಕೆಲವರು ಡಬ್ಲ್ಯುಎಫ್‌ಐ ಅಧ್ಯಕ್ಷ ಸ್ಥಾನದಿಂದ ನನ್ನನ್ನು ತೆಗೆದುಹಾಕಿಸಿದರು. ಇದು ನನ್ನ ಮತ್ತು ಡಬ್ಲ್ಯುಎಫ್‌ಐನಲ್ಲಿ ಉತ್ತರ ಪ್ರದೇಶದ ಪ್ರಾಬಲ್ಯವನ್ನು ಕುಗ್ಗಿಸಲು ಮಾಡಿದ ಪಿತೂರಿಯಾಗಿತ್ತು. ಅವರ ಯೋಜನೆಗಳು ವಿಫಲವಾಗಿವೆ. ಕ್ರೀಡಾ ಸಚಿವಾಲಯ ಅಮಾನತು ತೆಗೆದು ಹಾಕಿರುವುದು ಹೋಳಿಗೆ ಮುನ್ನ ಕೊಟ್ಟ ಉಡುಗೊರೆಯಾಗಿದೆ” ಎಂದಿದ್ದಾರೆ.

ಜಮ್ಮು ಕಾಶ್ಮೀರದ ಎರಡು ಪಕ್ಷಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...