Homeಮುಖಪುಟಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

ಭಾರತೀಯ ಕುಸ್ತಿ ಒಕ್ಕೂಟದ ಮೇಲಿನ ನಿಷೇಧ ತೆರವುಗೊಳಿಸಿದ ಕ್ರೀಡಾ ಸಚಿವಾಲಯ

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮೇಲಿನ ನಿಷೇಧವನ್ನು ಕೇಂದ್ರ ಕ್ರೀಡಾ ಸಚಿವಾಲಯ ತೆಗೆದು ಹಾಕಿದೆ. ಕುಸ್ತಿಗೆ ಸಂಬಂಧಿಸಿದ ರಾಷ್ಟ್ರೀಯ ಕ್ರೀಡಾ ಒಕ್ಕೂಟ (ಎನ್‌ಎಸ್‌ಎಫ್) ಮಾನ್ಯತೆಯನ್ನು ಪುನಃ ಸ್ಥಾಪಿಸಿದೆ.

2023ರ ಡಿಸೆಂಬರ್‌ನಲ್ಲಿ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಂದಿನಿ ನಗರದಲ್ಲಿ ಅಂಡರ್ -15 ಮತ್ತು ಅಂಡರ್-20 ರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಹೊಸದಾಗಿ ಆಯ್ಕೆಯಾದ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಘೋಷಿಸಿದ ನಂತರ ಕ್ರೀಡಾ ಸಚಿವಾಲಯ ಸಂಸ್ಥೆಯನ್ನು ಅಮಾನತುಗೊಳಿಸಿತ್ತು.

2023ರಲ್ಲಿ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ, ದೇಶದ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ್, ವಿನೇಶ್ ಪೋಗಟ್ ಮತ್ತು ಭಜರಂಗ್ ಪುನಿಯಾ ಸೇರಿದಂತೆ ಹಲವರು, ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಮಾಡಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಿದ್ದರು.

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ರಾಜೀನಾಮೆ ನೀಡಬೇಕು, ಅವರ ವಿರುದ್ದ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಬಂಧಿಸಬೇಕು ಮತ್ತು ಡಬ್ಲ್ಯುಎಫ್‌ಐಗೆ ಚುನಾವಣೆ ನಡೆಸಿ ಹೊಸ ಸಮಿತಿ ಆಯ್ಕೆ ಮಾಡಬೇಕು ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಆಗ್ರಹಿಸಿದ್ದರು.

ಕುಸ್ತಿಪಟುಗಳ ಪ್ರತಿಭಟನೆ ಹಿನ್ನೆಲೆ, ನಿಗದಿತ ಸಮಯದೊಳಗೆ ಚುನಾವಣೆ ನಡೆಸಲು ವಿಫಲವಾದ ಕಾರಣ, ಡಬ್ಯುಎಫ್‌ಐಗೆ 2023ರ ಆಗಸ್ಟ್‌ನಲ್ಲಿ, ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ನಿಷೇಧ ಹೇರಿತ್ತು.

2023ರಲ್ಲಿ ಡಿಸೆಂಬರ್‌ನಲ್ಲಿ ಡಬ್ಯುಎಫ್‌ಐಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಡಬ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದನ್ನು ವಿರೋಧಿಸಿ ಕುಸ್ತಿಪಟುಗಳು ಪ್ರತಿಭಟಿಸಿದ್ದರು.

ಚುನಾವಣೆಯ ಕೆಲ ದಿನಗಳ ನಂತರ, ಕೇಂದ್ರ ಕ್ರೀಡಾ ಸಚಿವಾಲಯ ಕುಸ್ತಿ ಫೆಡರೇಶನ್ ಅನ್ನು ಅಮಾನತುಗೊಳಿಸಿತ್ತು. ಸಂಸ್ಥೆಯ ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.

ಡಬ್ಲ್ಯುಎಫ್‌ಐ ಮೇಲಿನ ನಿಷೇಧವನ್ನು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ (ಯುಡಬ್ಲ್ಯುಡಬ್ಲ್ಯು) ತೆಗೆದುಹಾಕಿದ್ದು, ಭವಿಷ್ಯದ ಸ್ಪರ್ಧೆಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಹೀಗಾಗಿ, ತಾತ್ಕಾಲಿಕ ಸಮಿತಿ ಅಗತ್ಯವಿಲ್ಲ ಎಂದು ಐಒಎ ಹೇಳಿದ ನಂತರ ಸಮಿತಿಯನ್ನು ವಿಸರ್ಜಿಸಲಾಗಿತ್ತು.

ಇದೀಗ ಕ್ರೀಡಾ ಸಚಿವಾಲಯ ಡಬ್ಲ್ಯುಎಫ್‌ಐಗೆ ರಾಷ್ಟ್ರೀಯ ಕ್ರೀಡಾ ಒಕ್ಕೂಟದ (ಎನ್‌ಎಸ್‌ಎಫ್) ಮಾನ್ಯತೆಯನ್ನು ಮರುಸ್ಥಾಪಿಸಿದೆ. ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ದದ ಲೈಂಗಿಕ ಕಿರುಕುಳ ಪ್ರಕರಣ ಪ್ರಸ್ತುತ ನ್ಯಾಯಾಲಯದಲ್ಲಿದೆ.

“ಪ್ರಸ್ತುತ, ನಮ್ಮ ಆಟಗಾರರು ಮಾರ್ಚ್ 25 ರಿಂದ 30 ರವರೆಗೆ ಜೋರ್ಡಾನ್‌ನಲ್ಲಿ ನಡೆಯಲಿರುವ ಸೀನಿಯರ್ಸ್ ಏಷ್ಯನ್ ಚಾಂಪಿಯನ್‌ಶಿಪ್‌ಗಾಗಿ ತರಬೇತಿ ಪಡೆಯುತ್ತಿದ್ದಾರೆ. ದೇಶದ ವಿವಿಧ ಕ್ರೀಡಾ ಪ್ರಾಧಿಕಾರದ ಕೇಂದ್ರಗಳಲ್ಲಿ ಅಭ್ಯಾಸ ನಡೆಯುತ್ತಿದೆ. ಪ್ರಸ್ತುತ ನಂದಿನಿ ನಗರದಲ್ಲಿ (ಗೊಂಡಾದಲ್ಲಿ) ಯಾವುದೇ ಸ್ಪರ್ಧೆಗಳು ನಡೆಯುತ್ತಿಲ್ಲ. ಆದರೆ, ಸಚಿವಾಲಯದಿಂದ ಅನುಮೋದನೆ ಪಡೆದ ನಂತರ ಭವಿಷ್ಯದಲ್ಲಿ ಗೊಂಡಾದಲ್ಲಿ ತರಬೇತಿ ತರಗತಿಗಳು ಮತ್ತು ಸ್ಪರ್ಧೆಗಳನ್ನು ನಡೆಸಬಹುದು” ಎಂದು ಡಬ್ಲ್ಯುಎಫ್‌ಐ ಹಾಲಿ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

“ನನ್ನ ವಿರುದ್ಧ ಪಿತೂರಿ ನಡೆಸಿದವರು ನೆಲ ಕಚ್ಚಿದ್ದಾರೆ” ಬ್ರಿಜ್ ಭೂಷಣ್ ಸಿಂಗ್

ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ ) ಅಮಾನತು ರದ್ದುಗೊಳಿಸಿದ ಕ್ರೀಡಾ ಸಚಿವಾಲಯದ ನಿರ್ಧಾರವನ್ನು ಶ್ಲಾಘಿಸಿರುವ ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್, “ನ್ಯಾಯ ದೊರಕಿದೆ ಮತ್ತು ನನ್ನ ವಿರುದ್ಧ ಪಿತೂರಿ ನಡೆಸಿದ ಜನರು ನೆಲ ಕಚ್ಚಿದ್ದಾರೆ” ಎಂದು ಹೇಳಿದ್ದಾರೆ.

“ಕುಸ್ತಿಪಟುಗಳು ಎಂದು ಕರೆಯಲ್ಪಡುವ ಕೆಲವರು ಡಬ್ಲ್ಯುಎಫ್‌ಐ ಅಧ್ಯಕ್ಷ ಸ್ಥಾನದಿಂದ ನನ್ನನ್ನು ತೆಗೆದುಹಾಕಿಸಿದರು. ಇದು ನನ್ನ ಮತ್ತು ಡಬ್ಲ್ಯುಎಫ್‌ಐನಲ್ಲಿ ಉತ್ತರ ಪ್ರದೇಶದ ಪ್ರಾಬಲ್ಯವನ್ನು ಕುಗ್ಗಿಸಲು ಮಾಡಿದ ಪಿತೂರಿಯಾಗಿತ್ತು. ಅವರ ಯೋಜನೆಗಳು ವಿಫಲವಾಗಿವೆ. ಕ್ರೀಡಾ ಸಚಿವಾಲಯ ಅಮಾನತು ತೆಗೆದು ಹಾಕಿರುವುದು ಹೋಳಿಗೆ ಮುನ್ನ ಕೊಟ್ಟ ಉಡುಗೊರೆಯಾಗಿದೆ” ಎಂದಿದ್ದಾರೆ.

ಜಮ್ಮು ಕಾಶ್ಮೀರದ ಎರಡು ಪಕ್ಷಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...