Homeಮುಖಪುಟ'ಕುಸ್ತಿ ಚಾಂಪಿಯನ್‌ಶಿಪ್': WFI ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿದ ಸಂಜಯ್ ಸಿಂಗ್!

‘ಕುಸ್ತಿ ಚಾಂಪಿಯನ್‌ಶಿಪ್’: WFI ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿದ ಸಂಜಯ್ ಸಿಂಗ್!

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ನ ಅಮಾನತುಗೊಂಡಿರುವ ಸಮಿತಿಗೆ ‘ಸೀನಿಯರ್ ನ್ಯಾಷನಲ್ ಚಾಂಪಿಯನ್‌ಶಿಪ್’ ನಡೆಸಲು ಯಾವುದೇ ಅಧಿಕಾರವಿಲ್ಲ ಮತ್ತು ಸಂಸ್ಥೆಯು ನಡೆಸುವ ಯಾವುದೇ ಕಾರ್ಯಕ್ರಮವನ್ನು ‘ಅನುಮೋದಿತವಲ್ಲದ’ ಮತ್ತು ‘ಮಾನ್ಯತೆ ಪಡೆಯದ’ ಎಂದು ಪರಿಗಣಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಕಳೆದ ತಿಂಗಳು WFI ಗೆ ಚುನಾವಣೆ ನಡೆದು ಸಂಜಯ್ ಸಿಂಗ್ ಅವರನ್ನು ಭಾರತೀಯ ಕುಸ್ತಿ ಫೆಡರೇಷನ್‌ನ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿತ್ತು. ಬ್ರಿಜ್‌ ಭೂಷಣ್‌ ಆಪ್ತ ಸಂಜಯ್ ಸಿಂಗ್ ಆಯ್ಕೆಗೆ ಕುಸ್ತಿಪಟುಗಳು ವಿರೋಧಿಸಿದ್ದರು. ಇದರ ಬೆನ್ನಲ್ಲೇ ಸಚಿವಾಲಯವು ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಭಾರತೀಯ ಕುಸ್ತಿ ಫೆಡರೇಷನ್‌ನ ಸಮಿತಿಯನ್ನು ಅಮಾನತುಗೊಳಿಸಿತ್ತು. ಬಳಿಕ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಮೂರು ಸದಸ್ಯರ ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.

ಅಮಾನತುಗೊಂಡ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಅವರು ಶೀಘ್ರದಲ್ಲೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳನ್ನು ಆಯೋಜಿಸುವುದಾಗಿ ಹೇಳಿದ್ದರು. ಪುಣೆಯಲ್ಲಿ 2024ರ  ಜನವರಿ 29 ರಿಂದ31ರವರೆಗೆ ಸೀನಿಯರ್ ನ್ಯಾಶನಲ್ ವ್ರೆಸ್ಲಿಂಗ್ ಚಾಂಪಿಯನ್‌ಶಿಪ್ 2023ನ್ನು ಆಯೋಜಿಸುವ ಬಗ್ಗೆ ನೀವು 06.01.2024ರ ಲೆಟರ್‌ಹೆಡ್‌ನಲ್ಲಿ ಸುತ್ತೋಲೆಯನ್ನು ಹೊರಡಿಸಿದ್ದೀರಿ ಎಂದು ಸಚಿವಾಲಯದ ಗಮನಕ್ಕೆ ಬಂದಿದೆ. 24.12.2023ರ ಈ ಸಚಿವಾಲಯದ ಆದೇಶದ ಪ್ರಕಾರ, ಅಂತಹ ಸುತ್ತೋಲೆಯನ್ನು ನೀಡಲು ಅಥವಾ ರತದ ಕುಸ್ತಿ ಫೆಡರೇಶನ್‌ನ ಲೆಟರ್‌ಹೆಡ್‌ನ್ನು ಬಳಸಲು ನಿಮಗೆ ಯಾವುದೇ ಅಧಿಕಾರವಿಲ್ಲ ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಲೆಟರ್‌ಹೆಡ್‌ನ್ನು ಬಳಸುವುದನ್ನು ನಿಲ್ಲಿಸಬೇಕು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿಯ ನಿಬಂಧನೆಗಳನ್ನು ಉಲ್ಲಂಘಿಸಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಹೆಸರು, ಲೋಗೋಗಳು ಮತ್ತು ಚಿಹ್ನೆಗಳನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಸಂಜಯ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ಸಚಿವಾಲಯವು, ನೀವು ಅಥವಾ ಡಬ್ಲ್ಯುಎಫ್‌ಐನ ಅಮಾನತುಗೊಳಿಸಿದ ಕಾರ್ಯಕಾರಿ ಸಮಿತಿ ಸದಸ್ಯರು ಆಯೋಜಿಸುವ ಯಾವುದೇ ಚಾಂಪಿಯನ್‌ಶಿಪ್‌ ಸ್ಪರ್ಧೆಗಳನ್ನು ಅನುಮೋದಿತ ಮತ್ತು ಮಾನ್ಯತೆ ಪಡೆದ ಸ್ಪರ್ಧೆಗಳೆಂದು ಪರಿಗಣಿಸಲಾಗುವುದಿಲ್ಲ. ಡಬ್ಲ್ಯುಎಫ್‌ಐನ ಅಮಾನತುಗೊಂಡ ಸಮಿತಿ ನಡೆಸುವ ಚಾಂಪಿಯನ್‌ಶಿಪ್‌ ಸ್ಪರ್ಧೇಗಳಲ್ಲಿ ನೀಡುವ ಪ್ರಮಾಣಪತ್ರಗಳು ಮತ್ತು ಪದಕಗಳು ಯಾವುದನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ಯಾವುದೇ ಯೋಜನೆಯಡಿ ಅರ್ಹತೆಗಾಗಿ ಅಥವಾ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿಗಾಗಿ, ಕ್ರೀಡಾ ಪ್ರಶಸ್ತಿಗಳಿಗೆ ಅಥವಾ ಶಾಲಾ ಮತ್ತು ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಪರಿಗಣಿಸಲಾಗುವುದಿಲ್ಲ ಎಂದು ಸಚಿವಾಲಯವು ಹೇಳಿದೆ.

ಮುಂದಿನ ಆದೇಶದವರೆಗೆ ತಾತ್ಕಾಲಿಕ ಸಮಿತಿಯ ಮೇಲ್ವಿಚಾರಣೆಯಲ್ಲಿ ಆಯೋಜಿಸಲಾದ ವಿವಿಧ ವಯೋಮಾನದ ವಿಭಾಗಗಳಿಗೆ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗಳನ್ನು ಮಾತ್ರ ಕ್ರೀಡಾ ಸಂಹಿತೆಯ ಅಡಿಯಲ್ಲಿ ಪರಿಗಣಿಸಲಾಗುವುದು ಎಂದು ಇಲಾಖೆಯು ತಿಳಿಸಿದೆ. ಫೆಬ್ರವರಿ 2-5 ರಿಂದ ಜೈಪುರದಲ್ಲಿ ಹಿರಿಯ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳನ್ನು ಆಯೋಜಿಸುವುದಾಗಿ ತಾತ್ಕಾಲಿಕ ಸಮಿತಿಯು ಘೋಷಿಸಿದೆ.

ಭಾರತೀಯ ಕುಸ್ತಿ ಫೆಡರೇಷನ್‌ ಕಳೆದ ಒಂದು ವರ್ಷದಿಂದ ಭಾರೀ ಚರ್ಚೆಯಲ್ಲಿದೆ. ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್‌ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ಬ್ರಿಜ್ ಭೂಷಣ್ ಸಿಂಗ್‌ ಸಿಂಗ್‌ ವಿರುದ್ಧ ಪೋಕ್ಸ್‌ ಸೇರಿ ಹಲವು ಸೆಕ್ಸನ್‌ಗಳಡಿಯಲ್ಲಿ ಕೇಸ್‌ ದಾಖಲಾಗಿದೆ. ಆ ಬಳಿಕ ಇತ್ತೀಚೆಗೆ ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥರನ್ನಾಗಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿಕಟವರ್ತಿ ಸಂಜಯ್ ಸಿಂಗ್‌ನ್ನು ನೇಮಿಸಲಾಗಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶವನ್ನು ಕುಸ್ತಿಪಟುಗಳು ವ್ಯಕ್ತಪಡಿಸಿದ್ದರು. ಸಾಕ್ಷಿ ಮಲಿಕ್‌ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಘೋಷಿಸಿದ್ದರು.  ಭಜರಂಗ್ ಪುನಿಯಾ ಅವರು ಪದ್ಮಶ್ರೀ ಮತ್ತು ವಿನೇಶ್ ಫೋಗಟ್ ಅವರು ಅರ್ಜುನ ಪ್ರಶಸ್ತಿ ಮತ್ತು ಖೇಲ್ ರತ್ನವನ್ನು ಹಿಂದಿರುಗಿಸಿದರು. ಆ ಬಳಿಕ ನೂತನ ಸಮಿತಿಯನ್ನು ಅಮಾನತುಗೊಳಿಸಿ ಕ್ರೀಡಾ ಸಚಿವಾಲಯ ಆದೇಶಿಸಿತ್ತು.

ಇದನ್ನು ಓದಿ: ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...