Homeಮುಖಪುಟ'ಕುಸ್ತಿ ಚಾಂಪಿಯನ್‌ಶಿಪ್': WFI ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿದ ಸಂಜಯ್ ಸಿಂಗ್!

‘ಕುಸ್ತಿ ಚಾಂಪಿಯನ್‌ಶಿಪ್’: WFI ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿದ ಸಂಜಯ್ ಸಿಂಗ್!

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ನ ಅಮಾನತುಗೊಂಡಿರುವ ಸಮಿತಿಗೆ ‘ಸೀನಿಯರ್ ನ್ಯಾಷನಲ್ ಚಾಂಪಿಯನ್‌ಶಿಪ್’ ನಡೆಸಲು ಯಾವುದೇ ಅಧಿಕಾರವಿಲ್ಲ ಮತ್ತು ಸಂಸ್ಥೆಯು ನಡೆಸುವ ಯಾವುದೇ ಕಾರ್ಯಕ್ರಮವನ್ನು ‘ಅನುಮೋದಿತವಲ್ಲದ’ ಮತ್ತು ‘ಮಾನ್ಯತೆ ಪಡೆಯದ’ ಎಂದು ಪರಿಗಣಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಕಳೆದ ತಿಂಗಳು WFI ಗೆ ಚುನಾವಣೆ ನಡೆದು ಸಂಜಯ್ ಸಿಂಗ್ ಅವರನ್ನು ಭಾರತೀಯ ಕುಸ್ತಿ ಫೆಡರೇಷನ್‌ನ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿತ್ತು. ಬ್ರಿಜ್‌ ಭೂಷಣ್‌ ಆಪ್ತ ಸಂಜಯ್ ಸಿಂಗ್ ಆಯ್ಕೆಗೆ ಕುಸ್ತಿಪಟುಗಳು ವಿರೋಧಿಸಿದ್ದರು. ಇದರ ಬೆನ್ನಲ್ಲೇ ಸಚಿವಾಲಯವು ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಭಾರತೀಯ ಕುಸ್ತಿ ಫೆಡರೇಷನ್‌ನ ಸಮಿತಿಯನ್ನು ಅಮಾನತುಗೊಳಿಸಿತ್ತು. ಬಳಿಕ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಮೂರು ಸದಸ್ಯರ ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.

ಅಮಾನತುಗೊಂಡ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಅವರು ಶೀಘ್ರದಲ್ಲೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳನ್ನು ಆಯೋಜಿಸುವುದಾಗಿ ಹೇಳಿದ್ದರು. ಪುಣೆಯಲ್ಲಿ 2024ರ  ಜನವರಿ 29 ರಿಂದ31ರವರೆಗೆ ಸೀನಿಯರ್ ನ್ಯಾಶನಲ್ ವ್ರೆಸ್ಲಿಂಗ್ ಚಾಂಪಿಯನ್‌ಶಿಪ್ 2023ನ್ನು ಆಯೋಜಿಸುವ ಬಗ್ಗೆ ನೀವು 06.01.2024ರ ಲೆಟರ್‌ಹೆಡ್‌ನಲ್ಲಿ ಸುತ್ತೋಲೆಯನ್ನು ಹೊರಡಿಸಿದ್ದೀರಿ ಎಂದು ಸಚಿವಾಲಯದ ಗಮನಕ್ಕೆ ಬಂದಿದೆ. 24.12.2023ರ ಈ ಸಚಿವಾಲಯದ ಆದೇಶದ ಪ್ರಕಾರ, ಅಂತಹ ಸುತ್ತೋಲೆಯನ್ನು ನೀಡಲು ಅಥವಾ ರತದ ಕುಸ್ತಿ ಫೆಡರೇಶನ್‌ನ ಲೆಟರ್‌ಹೆಡ್‌ನ್ನು ಬಳಸಲು ನಿಮಗೆ ಯಾವುದೇ ಅಧಿಕಾರವಿಲ್ಲ ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಲೆಟರ್‌ಹೆಡ್‌ನ್ನು ಬಳಸುವುದನ್ನು ನಿಲ್ಲಿಸಬೇಕು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿಯ ನಿಬಂಧನೆಗಳನ್ನು ಉಲ್ಲಂಘಿಸಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಹೆಸರು, ಲೋಗೋಗಳು ಮತ್ತು ಚಿಹ್ನೆಗಳನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಸಂಜಯ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ಸಚಿವಾಲಯವು, ನೀವು ಅಥವಾ ಡಬ್ಲ್ಯುಎಫ್‌ಐನ ಅಮಾನತುಗೊಳಿಸಿದ ಕಾರ್ಯಕಾರಿ ಸಮಿತಿ ಸದಸ್ಯರು ಆಯೋಜಿಸುವ ಯಾವುದೇ ಚಾಂಪಿಯನ್‌ಶಿಪ್‌ ಸ್ಪರ್ಧೆಗಳನ್ನು ಅನುಮೋದಿತ ಮತ್ತು ಮಾನ್ಯತೆ ಪಡೆದ ಸ್ಪರ್ಧೆಗಳೆಂದು ಪರಿಗಣಿಸಲಾಗುವುದಿಲ್ಲ. ಡಬ್ಲ್ಯುಎಫ್‌ಐನ ಅಮಾನತುಗೊಂಡ ಸಮಿತಿ ನಡೆಸುವ ಚಾಂಪಿಯನ್‌ಶಿಪ್‌ ಸ್ಪರ್ಧೇಗಳಲ್ಲಿ ನೀಡುವ ಪ್ರಮಾಣಪತ್ರಗಳು ಮತ್ತು ಪದಕಗಳು ಯಾವುದನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ಯಾವುದೇ ಯೋಜನೆಯಡಿ ಅರ್ಹತೆಗಾಗಿ ಅಥವಾ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿಗಾಗಿ, ಕ್ರೀಡಾ ಪ್ರಶಸ್ತಿಗಳಿಗೆ ಅಥವಾ ಶಾಲಾ ಮತ್ತು ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಪರಿಗಣಿಸಲಾಗುವುದಿಲ್ಲ ಎಂದು ಸಚಿವಾಲಯವು ಹೇಳಿದೆ.

ಮುಂದಿನ ಆದೇಶದವರೆಗೆ ತಾತ್ಕಾಲಿಕ ಸಮಿತಿಯ ಮೇಲ್ವಿಚಾರಣೆಯಲ್ಲಿ ಆಯೋಜಿಸಲಾದ ವಿವಿಧ ವಯೋಮಾನದ ವಿಭಾಗಗಳಿಗೆ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗಳನ್ನು ಮಾತ್ರ ಕ್ರೀಡಾ ಸಂಹಿತೆಯ ಅಡಿಯಲ್ಲಿ ಪರಿಗಣಿಸಲಾಗುವುದು ಎಂದು ಇಲಾಖೆಯು ತಿಳಿಸಿದೆ. ಫೆಬ್ರವರಿ 2-5 ರಿಂದ ಜೈಪುರದಲ್ಲಿ ಹಿರಿಯ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳನ್ನು ಆಯೋಜಿಸುವುದಾಗಿ ತಾತ್ಕಾಲಿಕ ಸಮಿತಿಯು ಘೋಷಿಸಿದೆ.

ಭಾರತೀಯ ಕುಸ್ತಿ ಫೆಡರೇಷನ್‌ ಕಳೆದ ಒಂದು ವರ್ಷದಿಂದ ಭಾರೀ ಚರ್ಚೆಯಲ್ಲಿದೆ. ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್‌ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ಬ್ರಿಜ್ ಭೂಷಣ್ ಸಿಂಗ್‌ ಸಿಂಗ್‌ ವಿರುದ್ಧ ಪೋಕ್ಸ್‌ ಸೇರಿ ಹಲವು ಸೆಕ್ಸನ್‌ಗಳಡಿಯಲ್ಲಿ ಕೇಸ್‌ ದಾಖಲಾಗಿದೆ. ಆ ಬಳಿಕ ಇತ್ತೀಚೆಗೆ ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥರನ್ನಾಗಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿಕಟವರ್ತಿ ಸಂಜಯ್ ಸಿಂಗ್‌ನ್ನು ನೇಮಿಸಲಾಗಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶವನ್ನು ಕುಸ್ತಿಪಟುಗಳು ವ್ಯಕ್ತಪಡಿಸಿದ್ದರು. ಸಾಕ್ಷಿ ಮಲಿಕ್‌ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಘೋಷಿಸಿದ್ದರು.  ಭಜರಂಗ್ ಪುನಿಯಾ ಅವರು ಪದ್ಮಶ್ರೀ ಮತ್ತು ವಿನೇಶ್ ಫೋಗಟ್ ಅವರು ಅರ್ಜುನ ಪ್ರಶಸ್ತಿ ಮತ್ತು ಖೇಲ್ ರತ್ನವನ್ನು ಹಿಂದಿರುಗಿಸಿದರು. ಆ ಬಳಿಕ ನೂತನ ಸಮಿತಿಯನ್ನು ಅಮಾನತುಗೊಳಿಸಿ ಕ್ರೀಡಾ ಸಚಿವಾಲಯ ಆದೇಶಿಸಿತ್ತು.

ಇದನ್ನು ಓದಿ: ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...