Homeಮುಖಪುಟ'ಕುಸ್ತಿ ಚಾಂಪಿಯನ್‌ಶಿಪ್': WFI ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿದ ಸಂಜಯ್ ಸಿಂಗ್!

‘ಕುಸ್ತಿ ಚಾಂಪಿಯನ್‌ಶಿಪ್’: WFI ಲೆಟರ್‌ಹೆಡ್‌ನಲ್ಲಿ ಸುತ್ತೋಲೆ ಹೊರಡಿಸಿದ ಸಂಜಯ್ ಸಿಂಗ್!

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ನ ಅಮಾನತುಗೊಂಡಿರುವ ಸಮಿತಿಗೆ ‘ಸೀನಿಯರ್ ನ್ಯಾಷನಲ್ ಚಾಂಪಿಯನ್‌ಶಿಪ್’ ನಡೆಸಲು ಯಾವುದೇ ಅಧಿಕಾರವಿಲ್ಲ ಮತ್ತು ಸಂಸ್ಥೆಯು ನಡೆಸುವ ಯಾವುದೇ ಕಾರ್ಯಕ್ರಮವನ್ನು ‘ಅನುಮೋದಿತವಲ್ಲದ’ ಮತ್ತು ‘ಮಾನ್ಯತೆ ಪಡೆಯದ’ ಎಂದು ಪರಿಗಣಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಕಳೆದ ತಿಂಗಳು WFI ಗೆ ಚುನಾವಣೆ ನಡೆದು ಸಂಜಯ್ ಸಿಂಗ್ ಅವರನ್ನು ಭಾರತೀಯ ಕುಸ್ತಿ ಫೆಡರೇಷನ್‌ನ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿತ್ತು. ಬ್ರಿಜ್‌ ಭೂಷಣ್‌ ಆಪ್ತ ಸಂಜಯ್ ಸಿಂಗ್ ಆಯ್ಕೆಗೆ ಕುಸ್ತಿಪಟುಗಳು ವಿರೋಧಿಸಿದ್ದರು. ಇದರ ಬೆನ್ನಲ್ಲೇ ಸಚಿವಾಲಯವು ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಭಾರತೀಯ ಕುಸ್ತಿ ಫೆಡರೇಷನ್‌ನ ಸಮಿತಿಯನ್ನು ಅಮಾನತುಗೊಳಿಸಿತ್ತು. ಬಳಿಕ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಮೂರು ಸದಸ್ಯರ ತಾತ್ಕಾಲಿಕ ಸಮಿತಿಯನ್ನು ರಚಿಸಿತ್ತು.

ಅಮಾನತುಗೊಂಡ ಡಬ್ಲ್ಯುಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಅವರು ಶೀಘ್ರದಲ್ಲೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳನ್ನು ಆಯೋಜಿಸುವುದಾಗಿ ಹೇಳಿದ್ದರು. ಪುಣೆಯಲ್ಲಿ 2024ರ  ಜನವರಿ 29 ರಿಂದ31ರವರೆಗೆ ಸೀನಿಯರ್ ನ್ಯಾಶನಲ್ ವ್ರೆಸ್ಲಿಂಗ್ ಚಾಂಪಿಯನ್‌ಶಿಪ್ 2023ನ್ನು ಆಯೋಜಿಸುವ ಬಗ್ಗೆ ನೀವು 06.01.2024ರ ಲೆಟರ್‌ಹೆಡ್‌ನಲ್ಲಿ ಸುತ್ತೋಲೆಯನ್ನು ಹೊರಡಿಸಿದ್ದೀರಿ ಎಂದು ಸಚಿವಾಲಯದ ಗಮನಕ್ಕೆ ಬಂದಿದೆ. 24.12.2023ರ ಈ ಸಚಿವಾಲಯದ ಆದೇಶದ ಪ್ರಕಾರ, ಅಂತಹ ಸುತ್ತೋಲೆಯನ್ನು ನೀಡಲು ಅಥವಾ ರತದ ಕುಸ್ತಿ ಫೆಡರೇಶನ್‌ನ ಲೆಟರ್‌ಹೆಡ್‌ನ್ನು ಬಳಸಲು ನಿಮಗೆ ಯಾವುದೇ ಅಧಿಕಾರವಿಲ್ಲ ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಲೆಟರ್‌ಹೆಡ್‌ನ್ನು ಬಳಸುವುದನ್ನು ನಿಲ್ಲಿಸಬೇಕು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿಯ ನಿಬಂಧನೆಗಳನ್ನು ಉಲ್ಲಂಘಿಸಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಹೆಸರು, ಲೋಗೋಗಳು ಮತ್ತು ಚಿಹ್ನೆಗಳನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಸಂಜಯ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ಸಚಿವಾಲಯವು, ನೀವು ಅಥವಾ ಡಬ್ಲ್ಯುಎಫ್‌ಐನ ಅಮಾನತುಗೊಳಿಸಿದ ಕಾರ್ಯಕಾರಿ ಸಮಿತಿ ಸದಸ್ಯರು ಆಯೋಜಿಸುವ ಯಾವುದೇ ಚಾಂಪಿಯನ್‌ಶಿಪ್‌ ಸ್ಪರ್ಧೆಗಳನ್ನು ಅನುಮೋದಿತ ಮತ್ತು ಮಾನ್ಯತೆ ಪಡೆದ ಸ್ಪರ್ಧೆಗಳೆಂದು ಪರಿಗಣಿಸಲಾಗುವುದಿಲ್ಲ. ಡಬ್ಲ್ಯುಎಫ್‌ಐನ ಅಮಾನತುಗೊಂಡ ಸಮಿತಿ ನಡೆಸುವ ಚಾಂಪಿಯನ್‌ಶಿಪ್‌ ಸ್ಪರ್ಧೇಗಳಲ್ಲಿ ನೀಡುವ ಪ್ರಮಾಣಪತ್ರಗಳು ಮತ್ತು ಪದಕಗಳು ಯಾವುದನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ಯಾವುದೇ ಯೋಜನೆಯಡಿ ಅರ್ಹತೆಗಾಗಿ ಅಥವಾ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿಗಾಗಿ, ಕ್ರೀಡಾ ಪ್ರಶಸ್ತಿಗಳಿಗೆ ಅಥವಾ ಶಾಲಾ ಮತ್ತು ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಪರಿಗಣಿಸಲಾಗುವುದಿಲ್ಲ ಎಂದು ಸಚಿವಾಲಯವು ಹೇಳಿದೆ.

ಮುಂದಿನ ಆದೇಶದವರೆಗೆ ತಾತ್ಕಾಲಿಕ ಸಮಿತಿಯ ಮೇಲ್ವಿಚಾರಣೆಯಲ್ಲಿ ಆಯೋಜಿಸಲಾದ ವಿವಿಧ ವಯೋಮಾನದ ವಿಭಾಗಗಳಿಗೆ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ಗಳನ್ನು ಮಾತ್ರ ಕ್ರೀಡಾ ಸಂಹಿತೆಯ ಅಡಿಯಲ್ಲಿ ಪರಿಗಣಿಸಲಾಗುವುದು ಎಂದು ಇಲಾಖೆಯು ತಿಳಿಸಿದೆ. ಫೆಬ್ರವರಿ 2-5 ರಿಂದ ಜೈಪುರದಲ್ಲಿ ಹಿರಿಯ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳನ್ನು ಆಯೋಜಿಸುವುದಾಗಿ ತಾತ್ಕಾಲಿಕ ಸಮಿತಿಯು ಘೋಷಿಸಿದೆ.

ಭಾರತೀಯ ಕುಸ್ತಿ ಫೆಡರೇಷನ್‌ ಕಳೆದ ಒಂದು ವರ್ಷದಿಂದ ಭಾರೀ ಚರ್ಚೆಯಲ್ಲಿದೆ. ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್‌ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ಬ್ರಿಜ್ ಭೂಷಣ್ ಸಿಂಗ್‌ ಸಿಂಗ್‌ ವಿರುದ್ಧ ಪೋಕ್ಸ್‌ ಸೇರಿ ಹಲವು ಸೆಕ್ಸನ್‌ಗಳಡಿಯಲ್ಲಿ ಕೇಸ್‌ ದಾಖಲಾಗಿದೆ. ಆ ಬಳಿಕ ಇತ್ತೀಚೆಗೆ ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥರನ್ನಾಗಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿಕಟವರ್ತಿ ಸಂಜಯ್ ಸಿಂಗ್‌ನ್ನು ನೇಮಿಸಲಾಗಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶವನ್ನು ಕುಸ್ತಿಪಟುಗಳು ವ್ಯಕ್ತಪಡಿಸಿದ್ದರು. ಸಾಕ್ಷಿ ಮಲಿಕ್‌ ಅವರು ಕುಸ್ತಿಯನ್ನು ತ್ಯಜಿಸುವುದಾಗಿ ಘೋಷಿಸಿದ್ದರು.  ಭಜರಂಗ್ ಪುನಿಯಾ ಅವರು ಪದ್ಮಶ್ರೀ ಮತ್ತು ವಿನೇಶ್ ಫೋಗಟ್ ಅವರು ಅರ್ಜುನ ಪ್ರಶಸ್ತಿ ಮತ್ತು ಖೇಲ್ ರತ್ನವನ್ನು ಹಿಂದಿರುಗಿಸಿದರು. ಆ ಬಳಿಕ ನೂತನ ಸಮಿತಿಯನ್ನು ಅಮಾನತುಗೊಳಿಸಿ ಕ್ರೀಡಾ ಸಚಿವಾಲಯ ಆದೇಶಿಸಿತ್ತು.

ಇದನ್ನು ಓದಿ: ‘ಭಾರತೀಯ ವಿಜ್ಞಾನ ಕಾಂಗ್ರೆಸ್‌’ಗೆ ನೆರವು ಸ್ಥಗಿತಗೊಳಿಸಿದ ಕೇಂದ್ರ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...