Homeಮುಖಪುಟರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ...

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ತಿರುಚಿದ್ದ ಸುದ್ದಿ ಪ್ರಸಾರ ಮಾಡಿದ್ದ ಝೀ ನ್ಯೂಸ್‌ ನಿರೂಪಕ ರೋಹಿತ್ ರಂಜನ್ ರನ್ನು ನೋಯ್ಡಾ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಮೊದಲು ಛತ್ತೀಸ್‌ಘಡ ರಾಜ್ಯದಲ್ಲಿ ಝೀ ನ್ಯೂಸ್ ಮತ್ತು ಅದರ ನಿರೂಪಕನ ವಿರುದ್ಧ ದೂರು ದಾಖಲಾಗಿತ್ತು. ಹಾಗಾಗಿ ಛತ್ತೀಸ್‌ಘಡ ಪೊಲೀಸರು ಆತನ ಬಂಧನಕ್ಕೆ ಮುಂದಾಗಿದ್ದರು. ಆದರೆ ಆ ಬಂಧನವನ್ನು ತಪ್ಪಿಸಲು ಉತ್ತರ ಪ್ರದೇಶದ ಪೊಲೀಸರು ವಶಕ್ಕೆ ಪಡೆದು ರಕ್ಷಣೆ ನೀಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ನಡೆದ ಹತ್ಯೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮಿಸಿದ್ದು, ಹಂತಕರನ್ನು ‘ಮಕ್ಕಳು’ ಎಂದು ಹೇಳಿದ್ದಾರೆ ಎಂದು ತಿರುಚಿದ ಸುಳ್ಳು ಸುದ್ದಿಯನ್ನು ಝೀ ನ್ಯೂಸ್ ಪ್ರಸಾರ್ ಮಾಡಿತ್ತು. ನಿರೂಪಕ ರೋಹಿತ್ ರಂಜನ್ “ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೊ ಅಥವಾ ಆತಂಕವಾದಿಗಳೊ” ಎಂದು ಹೇಳಿ ದುರುದ್ದೇಶಪೂರಿತವಾಗಿ ಕೇರಳದ ವಯನಾಡ್‌ನ ಸುದ್ದಿಯನ್ನು ಲಿಂಕ್ ಮಾಡಿ ಮಾಧ್ಯಮದಲ್ಲಿ ತಪ್ಪಾಗಿ ವರದಿ ಮಾಡಿದ್ದರು.

ಕನೌಜ್‌ನ ಬಿಜೆಪಿ ಸಂಸದ ಸುಬ್ರತಾ ಪಾಠಕ್, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರಾಜವರ್ಧನ್ ರಾಥೋಡ್, ಬಿಜ್ನೋರ್‌ನ ಚಂದ್‌ಪುರ ವಿಧಾನಸಭೆಯ ಶಾಸಕ ಕಮಲೇಶ್ ಸೈನಿ ಸೇರಿದಂತೆ ಹಲವರು ಈ ವಿಡಿಯೋವನ್ನು ಹಂಚಿಕೊಂಡಿದ್ದರು.

ಇದರ ನಂತರ ಕಾಂಗ್ರೆಸ್‌ ಪಕ್ಷದ ನಾಯಕರು ಮತ್ತು ಸಮಾಜಿಕ ಮಾಧ್ಯಮಗಳ ಬಳಕೆದಾರರು ಝೀ ನ್ಯೂಸ್ ತಪ್ಪಾಗಿ ವರದಿ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೆ ಅಲ್ಲದೆ, ಛತ್ತೀಸ್‌ಗಡದ ರಾಯಪುರದಲ್ಲಿ ಝೀ ನ್ಯೂಸ್ ಮತ್ತು ನಿರೂಪಕ ರಂಜಿತ್ ರಂಜನ್ ವಿರುದ್ಧ ಎಫ್‌ಐಆರ್‌ ಕೂಡಾ ದಾಖಲಾಗಿತ್ತು.

ವಾಸ್ತವದಲ್ಲಿ ರಾಹುಲ್ ಗಾಂಧಿ ಉದಯಪುರದ ಹಂತಕರನ್ನು ಎಲ್ಲಿಯೂ ಮಕ್ಕಳು ಎಂದು ಕರೆದಿಲ್ಲ ಮತ್ತು ಅವರನ್ನು ಕ್ಷಮಿಸಿಲ್ಲ. ಬದಲಿಗೆ “ಉದಯಪುರದಲ್ಲಿ ನಡೆದ ಭೀಕರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ ಕ್ರೌರ್ಯದಿಂದ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಶಿಕ್ಷೆಯಾಗಬೇಕು.ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ದಯವಿಟ್ಟು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಿ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

ತಮ್ಮ ತಪ್ಪಿಗೆ ಝೀ ನ್ಯೂಸ್ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದು, ತಪ್ಪಿಗೆ ಕಾರಣರಾದ ಇಬ್ಬರು ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾ ಮಾಡಿದ್ದೇವೆ ಎಂದು ಹೇಳಿದೆ.

ಈ ತಿರುಚಿದ ಸುದ್ದಿಯನ್ನು ಪದೇ ಪದೇ ಪ್ರಸಾರ ಮಾಡಿದ ಆರೋಪಕ್ಕಾಗಿ ಅವರನ್ನು ಛತ್ತೀಸ್‌ಗಡ ಪೊಲೀಸರು ಬಂಧಿಸಲು ಉತ್ತರ ಪ್ರದೇಶದ ಪೊಲೀಸರ ಅಡ್ಡಗಾಲು ಹಾಕಿದ್ದಾರೆ. 2018ರಲ್ಲಿ ಚಲನಚಿತ್ರದ ಫೋಟೊವೊಂದನ್ನು ಟ್ವೀಟ್ ಮಾಡಿದ್ದಕ್ಕಾಗಿ ಮತ್ತೊಬ್ಬ ಪತ್ರಕರ್ತ ಮೊಹಮ್ಮದ್ ಜುಬೇರ್‌ರನ್ನು ಒಂದು ವಾರದಿಂದ ಬಂಧನದಲ್ಲಿಡಲಾಗಿದೆ. ಇಂತಹ ತಾರತಮ್ಯವೇಕೆ ಎಂಬ ಪ್ರಶ್ನೆ ಎದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...