Homeಮುಖಪುಟರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ...

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ತಿರುಚಿದ್ದ ಸುದ್ದಿ ಪ್ರಸಾರ ಮಾಡಿದ್ದ ಝೀ ನ್ಯೂಸ್‌ ನಿರೂಪಕ ರೋಹಿತ್ ರಂಜನ್ ರನ್ನು ನೋಯ್ಡಾ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಮೊದಲು ಛತ್ತೀಸ್‌ಘಡ ರಾಜ್ಯದಲ್ಲಿ ಝೀ ನ್ಯೂಸ್ ಮತ್ತು ಅದರ ನಿರೂಪಕನ ವಿರುದ್ಧ ದೂರು ದಾಖಲಾಗಿತ್ತು. ಹಾಗಾಗಿ ಛತ್ತೀಸ್‌ಘಡ ಪೊಲೀಸರು ಆತನ ಬಂಧನಕ್ಕೆ ಮುಂದಾಗಿದ್ದರು. ಆದರೆ ಆ ಬಂಧನವನ್ನು ತಪ್ಪಿಸಲು ಉತ್ತರ ಪ್ರದೇಶದ ಪೊಲೀಸರು ವಶಕ್ಕೆ ಪಡೆದು ರಕ್ಷಣೆ ನೀಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ನಡೆದ ಹತ್ಯೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮಿಸಿದ್ದು, ಹಂತಕರನ್ನು ‘ಮಕ್ಕಳು’ ಎಂದು ಹೇಳಿದ್ದಾರೆ ಎಂದು ತಿರುಚಿದ ಸುಳ್ಳು ಸುದ್ದಿಯನ್ನು ಝೀ ನ್ಯೂಸ್ ಪ್ರಸಾರ್ ಮಾಡಿತ್ತು. ನಿರೂಪಕ ರೋಹಿತ್ ರಂಜನ್ “ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೊ ಅಥವಾ ಆತಂಕವಾದಿಗಳೊ” ಎಂದು ಹೇಳಿ ದುರುದ್ದೇಶಪೂರಿತವಾಗಿ ಕೇರಳದ ವಯನಾಡ್‌ನ ಸುದ್ದಿಯನ್ನು ಲಿಂಕ್ ಮಾಡಿ ಮಾಧ್ಯಮದಲ್ಲಿ ತಪ್ಪಾಗಿ ವರದಿ ಮಾಡಿದ್ದರು.

ಕನೌಜ್‌ನ ಬಿಜೆಪಿ ಸಂಸದ ಸುಬ್ರತಾ ಪಾಠಕ್, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರಾಜವರ್ಧನ್ ರಾಥೋಡ್, ಬಿಜ್ನೋರ್‌ನ ಚಂದ್‌ಪುರ ವಿಧಾನಸಭೆಯ ಶಾಸಕ ಕಮಲೇಶ್ ಸೈನಿ ಸೇರಿದಂತೆ ಹಲವರು ಈ ವಿಡಿಯೋವನ್ನು ಹಂಚಿಕೊಂಡಿದ್ದರು.

ಇದರ ನಂತರ ಕಾಂಗ್ರೆಸ್‌ ಪಕ್ಷದ ನಾಯಕರು ಮತ್ತು ಸಮಾಜಿಕ ಮಾಧ್ಯಮಗಳ ಬಳಕೆದಾರರು ಝೀ ನ್ಯೂಸ್ ತಪ್ಪಾಗಿ ವರದಿ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೆ ಅಲ್ಲದೆ, ಛತ್ತೀಸ್‌ಗಡದ ರಾಯಪುರದಲ್ಲಿ ಝೀ ನ್ಯೂಸ್ ಮತ್ತು ನಿರೂಪಕ ರಂಜಿತ್ ರಂಜನ್ ವಿರುದ್ಧ ಎಫ್‌ಐಆರ್‌ ಕೂಡಾ ದಾಖಲಾಗಿತ್ತು.

ವಾಸ್ತವದಲ್ಲಿ ರಾಹುಲ್ ಗಾಂಧಿ ಉದಯಪುರದ ಹಂತಕರನ್ನು ಎಲ್ಲಿಯೂ ಮಕ್ಕಳು ಎಂದು ಕರೆದಿಲ್ಲ ಮತ್ತು ಅವರನ್ನು ಕ್ಷಮಿಸಿಲ್ಲ. ಬದಲಿಗೆ “ಉದಯಪುರದಲ್ಲಿ ನಡೆದ ಭೀಕರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ ಕ್ರೌರ್ಯದಿಂದ ಭಯೋತ್ಪಾದನೆಯನ್ನು ಹರಡುವವರಿಗೆ ತಕ್ಷಣ ಶಿಕ್ಷೆಯಾಗಬೇಕು.ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ದಯವಿಟ್ಟು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಿ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

ತಮ್ಮ ತಪ್ಪಿಗೆ ಝೀ ನ್ಯೂಸ್ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದು, ತಪ್ಪಿಗೆ ಕಾರಣರಾದ ಇಬ್ಬರು ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾ ಮಾಡಿದ್ದೇವೆ ಎಂದು ಹೇಳಿದೆ.

ಈ ತಿರುಚಿದ ಸುದ್ದಿಯನ್ನು ಪದೇ ಪದೇ ಪ್ರಸಾರ ಮಾಡಿದ ಆರೋಪಕ್ಕಾಗಿ ಅವರನ್ನು ಛತ್ತೀಸ್‌ಗಡ ಪೊಲೀಸರು ಬಂಧಿಸಲು ಉತ್ತರ ಪ್ರದೇಶದ ಪೊಲೀಸರ ಅಡ್ಡಗಾಲು ಹಾಕಿದ್ದಾರೆ. 2018ರಲ್ಲಿ ಚಲನಚಿತ್ರದ ಫೋಟೊವೊಂದನ್ನು ಟ್ವೀಟ್ ಮಾಡಿದ್ದಕ್ಕಾಗಿ ಮತ್ತೊಬ್ಬ ಪತ್ರಕರ್ತ ಮೊಹಮ್ಮದ್ ಜುಬೇರ್‌ರನ್ನು ಒಂದು ವಾರದಿಂದ ಬಂಧನದಲ್ಲಿಡಲಾಗಿದೆ. ಇಂತಹ ತಾರತಮ್ಯವೇಕೆ ಎಂಬ ಪ್ರಶ್ನೆ ಎದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...