Homeರಾಷ್ಟ್ರೀಯರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಸುಪ್ರೀಂಕೋರ್ಟ್‌ ಮೊರೆ ಹೋದ ಝೀ ನ್ಯೂಸ್ ನಿರೂಪಕ

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಸುಪ್ರೀಂಕೋರ್ಟ್‌ ಮೊರೆ ಹೋದ ಝೀ ನ್ಯೂಸ್ ನಿರೂಪಕ

- Advertisement -
- Advertisement -

ಝೀ ನ್ಯೂಸ್‌ನ ನಿರೂಪಕ ರೋಹಿತ್ ರಂಜನ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ಅನೇಕ ಪೊಲೀಸ್ ಪ್ರಕರಣಗಳನ್ನು ದಾಖಲಿಸಿರುವ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಆದರೆ, ರಂಜನ್‌ ಅವರ ಅರ್ಜಿಯನ್ನು ನ್ಯಾಯಾಲಯದ ದಾಖಲೆಗಳಲ್ಲಿ ಪಟ್ಟಿ ಮಾಡದ ಕಾರಣ ಪ್ರೋಟೋಕಾಲ್ ಉಲ್ಲಂಘನೆಯಾಗಿದ್ದಕ್ಕೆ ನ್ಯಾಯಾಲಯದಲ್ಲಿ ಅವರ ಪರವಾಗಿ ಹಾಜರಾಗಿರುವ ಹಿರಿಯ ವಕೀಲ ಸಿದ್ಧಾರ್ಥ್‌ ಲೂತ್ರಾ ಕ್ಷಮೆಯಾಚಿಸಿದ್ದಾರೆ.

“ಇದು ದಾಖಲೆಯಲ್ಲಿಯೂ ಇಲ್ಲ ಮತ್ತು ಇನ್ನೂ ಅರ್ಜಿ ಸಲ್ಲಿಸಲಾಗಿಲ್ಲ. ಪ್ರಕರಣದ ಅರ್ಜಿ ಸಲ್ಲಿಸಲಾಗಿಲ್ಲ ಎಂದು ನಮಗೆ ಹೇಳಬೇಕಾಗಿತ್ತು. ಇದು ಸರಿಯಾದ ರೀತಿಯಲ್ಲ” ಎಂದು ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ರಂಜಿತ್ ರಂಜನ್ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣವನ್ನು ನಾಳೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತಾದರೂ, ಅದರ ನಂತರ ಅಧಿಕೃತವಾಗಿ ನ್ಯಾಯಾಲಯದ ಮುಂದೆ ಅರ್ಜಿ ಪತ್ರಗಳನ್ನು ಸಲ್ಲಿಸಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿದುಬಂದಿದೆ. ನಿಯಮದಂತೆ ದಾಖಲೆಗಳ ಮೂಲಕ ಅರ್ಜಿಯನ್ನು ದಾಖಲಿಸಿದ ನಂತರವೇ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನು ಉಲ್ಲೇಖಿಸಬಹುದು.

“ರಂಜನ್‌ ಅವರನ್ನು ನಿನ್ನೆ ನೋಯ್ಡಾ ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು. ಅವರು ತಮ್ಮ ಕಾರ್ಯಕ್ರಮವೊಂದರಲ್ಲಿ ತಪ್ಪು ಮಾಡಿದ್ದಾರೆ. ಈಗ ಛತ್ತೀಸ್‌ಗಢ ಪೊಲೀಸರು ಅವರನ್ನು ಬಂಧಿಸಲು ಬಯಸಿದ್ದಾರೆ. ದಯವಿಟ್ಟು ಅರ್ಜಿಯನ್ನು ತುರ್ತಾಗಿ ಪಟ್ಟಿ ಮಾಡಿ, ಇಲ್ಲದಿದ್ದರೆ ಅವರು ಪುನರಾವರ್ತಿತ ಬಂಧನದಲ್ಲಿ ಇರಬೇಕಾಗುತ್ತದೆ” ಎಂದು ರಂಜನ್ ಪರ ವಕೀಲರು ತಿಳಿಸಿದ್ದಾರೆ.

ಝೀ ಟಿವಿಯು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಬಗ್ಗೆ ತಪ್ಪು ಸುದ್ದಿಯನ್ನು ಪ್ರಸಾರ ಮಾಡಿದ ಕೆಲವು ದಿನಗಳ ನಂತರ ಅದರ ನಿರೂಪಕ ರಂಜನ್ ಅವರನ್ನು ಬಂಧಿಸಲಾಗಿದ್ದು, ತಪ್ಪಿನ ಬಗ್ಗೆ ಚಾನೆಲ್ ಕ್ಷಮೆಯಾಚಿಸಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

ರಂಜನ್ ಅವರು ತಮ್ಮ ಶೋನಲ್ಲಿ, ಕೇರಳದ ವಯನಾಡ್‌ನಲ್ಲಿರುವ ತಮ್ಮ ಕಚೇರಿಯ ಮೇಲೆ ನಡೆದ ದಾಳಿಯ ಕುರಿತ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು, ರಾಜಸ್ಥಾನದಲ್ಲಿ ಕೊಲೆಯಾದ ಟೈಲರ್‌ ಹಂತಕರ ಕುರಿತ ಹೇಳಿಕೆ ಎಂಬಂತೆ ನಿರೂಪಿಸಿದ್ದರು. ಇದರ ನಂತರ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಈ ಬಗ್ಗೆ ನಿನ್ನೆ ನೋಯ್ಡಾದಲ್ಲಿ ರಂಜನ್ ಅವರನ್ನು ಬಂಧಿಸಲು ಛತ್ತೀಸ್‌ಗಢ ಪೊಲೀಸರು ಆಗಮಿಸಿದಾಗ, ಅವರು ಉತ್ತರ ಪ್ರದೇಶ ಪೊಲೀಸರ ಸಹಾಯವನ್ನು ಕೇಳಲು ಟ್ವೀಟ್ ಮಾಡಿದ್ದರು. “ಛತ್ತೀಸ್‌ಗಢ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿಲ್ಲ” ಎಂದು ಅವರು ಹೇಳಿಕೊಂಡಿದ್ದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ತಮ್ಮ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿದ್ದರು.

“ಮಾಹಿತಿ ನೀಡಬೇಕು ಎಂಬ ಯಾವುದೇ ನಿಯಮವಿಲ್ಲ. ಆದರೂ, ಈಗ ಅವರಿಗೆ ತಿಳಿಸಲಾಗಿದೆ. ಪೊಲೀಸ್ ತಂಡವು ನಿಮಗೆ ನ್ಯಾಯಾಲಯದ ಬಂಧನದ ವಾರಂಟ್ ಅನ್ನು ತೋರಿಸಿದೆ. ವಾಸ್ತವವಾಗಿ ನೀವೇ ಸಹಕರಿಸಿ, ತನಿಖೆಯಲ್ಲಿ ಭಾಗವಹಿಸಬೇಕು. ನ್ಯಾಯಾಲಯದಲ್ಲಿ ನಿಮ್ಮ ಪ್ರತಿವಾದವನ್ನು ಮಂಡಿಸಬೇಕು” ಎಂದು ಛತ್ತೀಸ್‌ಗಢ ಪೊಲೀಸರು ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

ಇದರ ನಂತರ ಎರಡು ರಾಜ್ಯಗಳ ಪೊಲೀಸರು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ವಾಗ್ವಾದ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹೊರಹೊಮ್ಮಿತ್ತು. ಅಂತಿಮವಾಗಿ ಯುಪಿ ಪೊಲೀಸರು ಅವರನ್ನು ಕರೆದುಕೊಂಡು ಹೋಗುವುದರೊಂದಿಗೆ ನಾಟಕೀಯ ದೃಶ್ಯ ಕೊನೆಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...