Homeರಾಷ್ಟ್ರೀಯರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಸುಪ್ರೀಂಕೋರ್ಟ್‌ ಮೊರೆ ಹೋದ ಝೀ ನ್ಯೂಸ್ ನಿರೂಪಕ

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಸುಪ್ರೀಂಕೋರ್ಟ್‌ ಮೊರೆ ಹೋದ ಝೀ ನ್ಯೂಸ್ ನಿರೂಪಕ

- Advertisement -
- Advertisement -

ಝೀ ನ್ಯೂಸ್‌ನ ನಿರೂಪಕ ರೋಹಿತ್ ರಂಜನ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ಅನೇಕ ಪೊಲೀಸ್ ಪ್ರಕರಣಗಳನ್ನು ದಾಖಲಿಸಿರುವ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಆದರೆ, ರಂಜನ್‌ ಅವರ ಅರ್ಜಿಯನ್ನು ನ್ಯಾಯಾಲಯದ ದಾಖಲೆಗಳಲ್ಲಿ ಪಟ್ಟಿ ಮಾಡದ ಕಾರಣ ಪ್ರೋಟೋಕಾಲ್ ಉಲ್ಲಂಘನೆಯಾಗಿದ್ದಕ್ಕೆ ನ್ಯಾಯಾಲಯದಲ್ಲಿ ಅವರ ಪರವಾಗಿ ಹಾಜರಾಗಿರುವ ಹಿರಿಯ ವಕೀಲ ಸಿದ್ಧಾರ್ಥ್‌ ಲೂತ್ರಾ ಕ್ಷಮೆಯಾಚಿಸಿದ್ದಾರೆ.

“ಇದು ದಾಖಲೆಯಲ್ಲಿಯೂ ಇಲ್ಲ ಮತ್ತು ಇನ್ನೂ ಅರ್ಜಿ ಸಲ್ಲಿಸಲಾಗಿಲ್ಲ. ಪ್ರಕರಣದ ಅರ್ಜಿ ಸಲ್ಲಿಸಲಾಗಿಲ್ಲ ಎಂದು ನಮಗೆ ಹೇಳಬೇಕಾಗಿತ್ತು. ಇದು ಸರಿಯಾದ ರೀತಿಯಲ್ಲ” ಎಂದು ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ರಂಜಿತ್ ರಂಜನ್ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣವನ್ನು ನಾಳೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತಾದರೂ, ಅದರ ನಂತರ ಅಧಿಕೃತವಾಗಿ ನ್ಯಾಯಾಲಯದ ಮುಂದೆ ಅರ್ಜಿ ಪತ್ರಗಳನ್ನು ಸಲ್ಲಿಸಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿದುಬಂದಿದೆ. ನಿಯಮದಂತೆ ದಾಖಲೆಗಳ ಮೂಲಕ ಅರ್ಜಿಯನ್ನು ದಾಖಲಿಸಿದ ನಂತರವೇ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನು ಉಲ್ಲೇಖಿಸಬಹುದು.

“ರಂಜನ್‌ ಅವರನ್ನು ನಿನ್ನೆ ನೋಯ್ಡಾ ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು. ಅವರು ತಮ್ಮ ಕಾರ್ಯಕ್ರಮವೊಂದರಲ್ಲಿ ತಪ್ಪು ಮಾಡಿದ್ದಾರೆ. ಈಗ ಛತ್ತೀಸ್‌ಗಢ ಪೊಲೀಸರು ಅವರನ್ನು ಬಂಧಿಸಲು ಬಯಸಿದ್ದಾರೆ. ದಯವಿಟ್ಟು ಅರ್ಜಿಯನ್ನು ತುರ್ತಾಗಿ ಪಟ್ಟಿ ಮಾಡಿ, ಇಲ್ಲದಿದ್ದರೆ ಅವರು ಪುನರಾವರ್ತಿತ ಬಂಧನದಲ್ಲಿ ಇರಬೇಕಾಗುತ್ತದೆ” ಎಂದು ರಂಜನ್ ಪರ ವಕೀಲರು ತಿಳಿಸಿದ್ದಾರೆ.

ಝೀ ಟಿವಿಯು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಬಗ್ಗೆ ತಪ್ಪು ಸುದ್ದಿಯನ್ನು ಪ್ರಸಾರ ಮಾಡಿದ ಕೆಲವು ದಿನಗಳ ನಂತರ ಅದರ ನಿರೂಪಕ ರಂಜನ್ ಅವರನ್ನು ಬಂಧಿಸಲಾಗಿದ್ದು, ತಪ್ಪಿನ ಬಗ್ಗೆ ಚಾನೆಲ್ ಕ್ಷಮೆಯಾಚಿಸಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

ರಂಜನ್ ಅವರು ತಮ್ಮ ಶೋನಲ್ಲಿ, ಕೇರಳದ ವಯನಾಡ್‌ನಲ್ಲಿರುವ ತಮ್ಮ ಕಚೇರಿಯ ಮೇಲೆ ನಡೆದ ದಾಳಿಯ ಕುರಿತ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು, ರಾಜಸ್ಥಾನದಲ್ಲಿ ಕೊಲೆಯಾದ ಟೈಲರ್‌ ಹಂತಕರ ಕುರಿತ ಹೇಳಿಕೆ ಎಂಬಂತೆ ನಿರೂಪಿಸಿದ್ದರು. ಇದರ ನಂತರ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಈ ಬಗ್ಗೆ ನಿನ್ನೆ ನೋಯ್ಡಾದಲ್ಲಿ ರಂಜನ್ ಅವರನ್ನು ಬಂಧಿಸಲು ಛತ್ತೀಸ್‌ಗಢ ಪೊಲೀಸರು ಆಗಮಿಸಿದಾಗ, ಅವರು ಉತ್ತರ ಪ್ರದೇಶ ಪೊಲೀಸರ ಸಹಾಯವನ್ನು ಕೇಳಲು ಟ್ವೀಟ್ ಮಾಡಿದ್ದರು. “ಛತ್ತೀಸ್‌ಗಢ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿಲ್ಲ” ಎಂದು ಅವರು ಹೇಳಿಕೊಂಡಿದ್ದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ತಮ್ಮ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿದ್ದರು.

“ಮಾಹಿತಿ ನೀಡಬೇಕು ಎಂಬ ಯಾವುದೇ ನಿಯಮವಿಲ್ಲ. ಆದರೂ, ಈಗ ಅವರಿಗೆ ತಿಳಿಸಲಾಗಿದೆ. ಪೊಲೀಸ್ ತಂಡವು ನಿಮಗೆ ನ್ಯಾಯಾಲಯದ ಬಂಧನದ ವಾರಂಟ್ ಅನ್ನು ತೋರಿಸಿದೆ. ವಾಸ್ತವವಾಗಿ ನೀವೇ ಸಹಕರಿಸಿ, ತನಿಖೆಯಲ್ಲಿ ಭಾಗವಹಿಸಬೇಕು. ನ್ಯಾಯಾಲಯದಲ್ಲಿ ನಿಮ್ಮ ಪ್ರತಿವಾದವನ್ನು ಮಂಡಿಸಬೇಕು” ಎಂದು ಛತ್ತೀಸ್‌ಗಢ ಪೊಲೀಸರು ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

ಇದರ ನಂತರ ಎರಡು ರಾಜ್ಯಗಳ ಪೊಲೀಸರು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ವಾಗ್ವಾದ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹೊರಹೊಮ್ಮಿತ್ತು. ಅಂತಿಮವಾಗಿ ಯುಪಿ ಪೊಲೀಸರು ಅವರನ್ನು ಕರೆದುಕೊಂಡು ಹೋಗುವುದರೊಂದಿಗೆ ನಾಟಕೀಯ ದೃಶ್ಯ ಕೊನೆಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...