Homeರಾಷ್ಟ್ರೀಯರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಸುಪ್ರೀಂಕೋರ್ಟ್‌ ಮೊರೆ ಹೋದ ಝೀ ನ್ಯೂಸ್ ನಿರೂಪಕ

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಸುಪ್ರೀಂಕೋರ್ಟ್‌ ಮೊರೆ ಹೋದ ಝೀ ನ್ಯೂಸ್ ನಿರೂಪಕ

- Advertisement -
- Advertisement -

ಝೀ ನ್ಯೂಸ್‌ನ ನಿರೂಪಕ ರೋಹಿತ್ ರಂಜನ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಕ್ಕಾಗಿ ಅನೇಕ ಪೊಲೀಸ್ ಪ್ರಕರಣಗಳನ್ನು ದಾಖಲಿಸಿರುವ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಆದರೆ, ರಂಜನ್‌ ಅವರ ಅರ್ಜಿಯನ್ನು ನ್ಯಾಯಾಲಯದ ದಾಖಲೆಗಳಲ್ಲಿ ಪಟ್ಟಿ ಮಾಡದ ಕಾರಣ ಪ್ರೋಟೋಕಾಲ್ ಉಲ್ಲಂಘನೆಯಾಗಿದ್ದಕ್ಕೆ ನ್ಯಾಯಾಲಯದಲ್ಲಿ ಅವರ ಪರವಾಗಿ ಹಾಜರಾಗಿರುವ ಹಿರಿಯ ವಕೀಲ ಸಿದ್ಧಾರ್ಥ್‌ ಲೂತ್ರಾ ಕ್ಷಮೆಯಾಚಿಸಿದ್ದಾರೆ.

“ಇದು ದಾಖಲೆಯಲ್ಲಿಯೂ ಇಲ್ಲ ಮತ್ತು ಇನ್ನೂ ಅರ್ಜಿ ಸಲ್ಲಿಸಲಾಗಿಲ್ಲ. ಪ್ರಕರಣದ ಅರ್ಜಿ ಸಲ್ಲಿಸಲಾಗಿಲ್ಲ ಎಂದು ನಮಗೆ ಹೇಳಬೇಕಾಗಿತ್ತು. ಇದು ಸರಿಯಾದ ರೀತಿಯಲ್ಲ” ಎಂದು ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ರಂಜಿತ್ ರಂಜನ್ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣವನ್ನು ನಾಳೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತಾದರೂ, ಅದರ ನಂತರ ಅಧಿಕೃತವಾಗಿ ನ್ಯಾಯಾಲಯದ ಮುಂದೆ ಅರ್ಜಿ ಪತ್ರಗಳನ್ನು ಸಲ್ಲಿಸಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿದುಬಂದಿದೆ. ನಿಯಮದಂತೆ ದಾಖಲೆಗಳ ಮೂಲಕ ಅರ್ಜಿಯನ್ನು ದಾಖಲಿಸಿದ ನಂತರವೇ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನು ಉಲ್ಲೇಖಿಸಬಹುದು.

“ರಂಜನ್‌ ಅವರನ್ನು ನಿನ್ನೆ ನೋಯ್ಡಾ ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು. ಅವರು ತಮ್ಮ ಕಾರ್ಯಕ್ರಮವೊಂದರಲ್ಲಿ ತಪ್ಪು ಮಾಡಿದ್ದಾರೆ. ಈಗ ಛತ್ತೀಸ್‌ಗಢ ಪೊಲೀಸರು ಅವರನ್ನು ಬಂಧಿಸಲು ಬಯಸಿದ್ದಾರೆ. ದಯವಿಟ್ಟು ಅರ್ಜಿಯನ್ನು ತುರ್ತಾಗಿ ಪಟ್ಟಿ ಮಾಡಿ, ಇಲ್ಲದಿದ್ದರೆ ಅವರು ಪುನರಾವರ್ತಿತ ಬಂಧನದಲ್ಲಿ ಇರಬೇಕಾಗುತ್ತದೆ” ಎಂದು ರಂಜನ್ ಪರ ವಕೀಲರು ತಿಳಿಸಿದ್ದಾರೆ.

ಝೀ ಟಿವಿಯು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಬಗ್ಗೆ ತಪ್ಪು ಸುದ್ದಿಯನ್ನು ಪ್ರಸಾರ ಮಾಡಿದ ಕೆಲವು ದಿನಗಳ ನಂತರ ಅದರ ನಿರೂಪಕ ರಂಜನ್ ಅವರನ್ನು ಬಂಧಿಸಲಾಗಿದ್ದು, ತಪ್ಪಿನ ಬಗ್ಗೆ ಚಾನೆಲ್ ಕ್ಷಮೆಯಾಚಿಸಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

ರಂಜನ್ ಅವರು ತಮ್ಮ ಶೋನಲ್ಲಿ, ಕೇರಳದ ವಯನಾಡ್‌ನಲ್ಲಿರುವ ತಮ್ಮ ಕಚೇರಿಯ ಮೇಲೆ ನಡೆದ ದಾಳಿಯ ಕುರಿತ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು, ರಾಜಸ್ಥಾನದಲ್ಲಿ ಕೊಲೆಯಾದ ಟೈಲರ್‌ ಹಂತಕರ ಕುರಿತ ಹೇಳಿಕೆ ಎಂಬಂತೆ ನಿರೂಪಿಸಿದ್ದರು. ಇದರ ನಂತರ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಈ ಬಗ್ಗೆ ನಿನ್ನೆ ನೋಯ್ಡಾದಲ್ಲಿ ರಂಜನ್ ಅವರನ್ನು ಬಂಧಿಸಲು ಛತ್ತೀಸ್‌ಗಢ ಪೊಲೀಸರು ಆಗಮಿಸಿದಾಗ, ಅವರು ಉತ್ತರ ಪ್ರದೇಶ ಪೊಲೀಸರ ಸಹಾಯವನ್ನು ಕೇಳಲು ಟ್ವೀಟ್ ಮಾಡಿದ್ದರು. “ಛತ್ತೀಸ್‌ಗಢ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿಲ್ಲ” ಎಂದು ಅವರು ಹೇಳಿಕೊಂಡಿದ್ದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ತಮ್ಮ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿದ್ದರು.

“ಮಾಹಿತಿ ನೀಡಬೇಕು ಎಂಬ ಯಾವುದೇ ನಿಯಮವಿಲ್ಲ. ಆದರೂ, ಈಗ ಅವರಿಗೆ ತಿಳಿಸಲಾಗಿದೆ. ಪೊಲೀಸ್ ತಂಡವು ನಿಮಗೆ ನ್ಯಾಯಾಲಯದ ಬಂಧನದ ವಾರಂಟ್ ಅನ್ನು ತೋರಿಸಿದೆ. ವಾಸ್ತವವಾಗಿ ನೀವೇ ಸಹಕರಿಸಿ, ತನಿಖೆಯಲ್ಲಿ ಭಾಗವಹಿಸಬೇಕು. ನ್ಯಾಯಾಲಯದಲ್ಲಿ ನಿಮ್ಮ ಪ್ರತಿವಾದವನ್ನು ಮಂಡಿಸಬೇಕು” ಎಂದು ಛತ್ತೀಸ್‌ಗಢ ಪೊಲೀಸರು ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

ಇದರ ನಂತರ ಎರಡು ರಾಜ್ಯಗಳ ಪೊಲೀಸರು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ವಾಗ್ವಾದ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹೊರಹೊಮ್ಮಿತ್ತು. ಅಂತಿಮವಾಗಿ ಯುಪಿ ಪೊಲೀಸರು ಅವರನ್ನು ಕರೆದುಕೊಂಡು ಹೋಗುವುದರೊಂದಿಗೆ ನಾಟಕೀಯ ದೃಶ್ಯ ಕೊನೆಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...