Homeಮುಖಪುಟಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

- Advertisement -
- Advertisement -

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಒಂದನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದ ಕ್ರಿಕೆಟಿಗ ಯಶ್ ದಯಾಳ್ ವ್ಯಾಪಕ ಟೀಕೆ ವ್ಯಕ್ತವಾಗುತ್ತಲೇ ತಮ್ಮ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ.

ಲವ್ ಜಿಹಾದ್ ಎಂಬ ಕಲ್ಪಿತ ಮುಸ್ಲಿಂ ಸಮುದಾಯ ದ್ವೇಷಿ ಕಾರ್ಟೂನ್ ಒಂದನ್ನು ಇತ್ತೀಚೆಗೆ ಗುಜರಾತ್ ಟೈಟನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಹಂಚಿಕೊಂಡಿದ್ದರು. ಅದರಲ್ಲಿ ಮುಸ್ಲಿಂ ಯುವಕನೊಬ್ಬ ತನ್ನ ಗೆಳತಿಯನ್ನು ಕೊಂದು ಮತ್ತೊಬ್ಬ ಹುಡುಗಿಗೆ ಲವ್ ಜಿಹಾದ್ ಇಲ್ಲ, ನನ್ನದು ಪರಿಶುದ್ಧ ಪ್ರೇಮ ಎಂದು ನಿವೇದಿಸಿಕೊಳ್ಳುವಂತೆ ಮತ್ತು ಆ ಹಿಂದೂ ಹುಡುಗಿ ಅದನ್ನು ಒಪ್ಪಿಕೊಳ್ಳುವಂತೆ ಚಿತ್ರಿಸಲಾಗಿತ್ತು. ಆ ಮೂಲಕ ಮುಸ್ಲಿಂ ಯುವಕರೆಲ್ಲ ಹಿಂದೂ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬ ಕೆಟ್ಟ ಅರ್ಥ ಕೊಡುತ್ತಿತ್ತು.

ಯಶ್​ ದಯಾಳ್​ ಶೇರ್ ಮಾಡಿದ್ದ ಪೋಸ್ಟರ್​​​ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಟ್ವಿಟರ್‌ ನಲ್ಲಿ ಹಲವರು, ಬಿಸಿಸಿಐ ಮತ್ತು ಗುಜರಾತ್​ ಟೈಟನ್ಸ್​ ಖಾತೆಗೆ ಟ್ಯಾಗ್​ ಮಾಡಿ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇನ್ನು ಹಲವು ನೆಟ್ಟಿಗರು ಯಶ್ ದಯಾಳ್ ಅವರ ಮನಸ್ಥಿತಿಯನ್ನು ಟೀಕಿಸಿದ್ದರು.

ಮುಸ್ಲಿಮರ ಕುರಿತು ಅಪನಂಬಿಕೆ ಹೊಂದಿರುವ ನೀನು, ಸಹ ಆಟಗಾರರಾದ ಮುಹಮ್ಮದ್‌ ಶಮಿ, ರಶೀದ್‌ ಖಾನ್‌, ನೂರ್‌ ಅಹ್ಮದ್‌ ಜೊತೆ ಎರಡು ತಿಂಗಳು ಜೊತೆಯಾಗಿ ಇದ್ದುದ್ದಾದರೂ ಹೇಗೆ? ಅವರನ್ನು ನೋಡಿ ಏನೂ ಕಲಿಯಲಿಲ್ಲವೇ ಎಂದು ಹಲವರು ಪ್ರಶ್ನಿಸಿದ್ದಾರೆ. ಇದು ವಿವಾದವಾಗುತ್ತಲೇ ಯಶ್ ದಯಾಳ್ ಆ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿ, ಕ್ಷಮೆ ಯಾಚಿಸಿದ್ದಾರೆ.

ಬಳಿಕ ಮತ್ತೊಂದು ಪೋಸ್ಟ್ ಮೂಲಕ ಹಿಂದೆ ಪೋಸ್ಟ್​ ಮಾಡಿದ್ದ ಸ್ಟೇಟಸ್​ಗಾಗಿ ಕ್ಷಮೆ ಯಾಚಿಸಿದ್ದಾರೆ ʻಸ್ನೇಹಿತರೇ, ನಾನು ತಪ್ಪಾಗಿ ಈ ಹಿಂದಿನ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೆ. ಇದ್ಕಕಾಗಿ ನಿಮ್ಮಲ್ಲಿ ಕ್ಷಮೆ ಕೋರುತ್ತಿದ್ದೇನೆ. ದಯವಿಟ್ಟು ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ನಾನು ಎಲ್ಲಾ ಸಮುದಾಯಗಳ ಭಾವನೆಗಳನ್ನು ಗೌರವಿಸುತ್ತೇನೆʼ ಎಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ.

ಇತ್ತೀಚಿಗೆ ಪ್ರೇಮಿಗಳು, ಮದುವೆಗಳಲ್ಲಿ ಕಲಹಗಳು ಹೆಚ್ಚಾಗಿ ಕಂಡುಬರುತ್ತಿವೆ. ಅವು ಕೊಲೆ ಮಾಡುವ ಮಟ್ಟಕ್ಕೂ ಬಂದು ನಿಂತಿವೆ. ಆದರೆ ಆ ಗಲಾಟೆ, ಮನಸ್ತಾಪ, ದ್ವೇಷ ಮತ್ತು ಕೊಲೆಗಳಿಗೆ ಧರ್ಮವಾಗಲೀ, ಜಾತಿಯಾಗಲೀ ಕಾರಣವಾಗಿಲ್ಲ. ಬದಲಿಗೆ ಅಹಂಕಾರ, ಹೊಂದಾಣಿಕೆ ಕೊರತೆ, ಸ್ವಾರ್ಥ, ಕೋಪ ಮತ್ತು ಹತಾಶೆಗಳು ಅವರನ್ನು ಆ ಕೃತ್ಯಗಳೆಸಲು ಪ್ರೇರೇಪಿಸತ್ತಿವೆ. ಇದುವರೆಗೆ ಈ ರೀತಿಯ ಕೊಲೆಗೈದವರಲ್ಲಿ ಎಲ್ಲಾ ಜಾತಿ-ಧರ್ಮದವರು ಇದ್ದಾರೆ. ಹಾಗಾಗಿ ಕೇವಲ ಮುಸ್ಲಿಂ ಯುವಕರು ಮತ್ರ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬುದು ಸುಳ್ಳು. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಕೆಟ್ಟ ಹೆಸರು ತರಲು ಕೆಲ ಮತಾಂಧರು ಈ ರೀತಿಯ ಫೇಕ್ ನ್ಯೂಸ್‌ಗಳನ್ನು ಹರಡುತ್ತಿದ್ದಾರೆ. ಅಂತಹುದ್ದೇ ಫೇಕ್ ನ್ಯೂಸ್ ಹರಡಿ ಕ್ರಿಕೆಟಿಗ ಯಶ್ ದಯಾಳ್ ತಮ್ಮ ವರ್ಚಸ್ಸನ್ನು ಹಾಳು ಮಾಡಿಕೊಂಡಿದ್ದಾರೆ. ಹಾಗಾಗಿ ಯಾರೂ ಸಹ ದ್ವೇಷ ಪೂರಿತ ಪೋಸ್ಟ್‌ಗಳನ್ನು ಹಾಕಿ ಸಂಕಷ್ಟಕ್ಕೆ ಸಿಲುಕಬೇಡಿ. ಯಾವುದೇ ಅನ್ಯಾಯ ನಡೆಯುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ದೂರು ನೀಡಿ. ಕಾನೂನನನ್ನು ಗೌರವಿಸಿ.

ಇದನ್ನೂ ಓದಿ; ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...