Homeಮುಖಪುಟಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

- Advertisement -
- Advertisement -

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಒಂದನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದ ಕ್ರಿಕೆಟಿಗ ಯಶ್ ದಯಾಳ್ ವ್ಯಾಪಕ ಟೀಕೆ ವ್ಯಕ್ತವಾಗುತ್ತಲೇ ತಮ್ಮ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ.

ಲವ್ ಜಿಹಾದ್ ಎಂಬ ಕಲ್ಪಿತ ಮುಸ್ಲಿಂ ಸಮುದಾಯ ದ್ವೇಷಿ ಕಾರ್ಟೂನ್ ಒಂದನ್ನು ಇತ್ತೀಚೆಗೆ ಗುಜರಾತ್ ಟೈಟನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಹಂಚಿಕೊಂಡಿದ್ದರು. ಅದರಲ್ಲಿ ಮುಸ್ಲಿಂ ಯುವಕನೊಬ್ಬ ತನ್ನ ಗೆಳತಿಯನ್ನು ಕೊಂದು ಮತ್ತೊಬ್ಬ ಹುಡುಗಿಗೆ ಲವ್ ಜಿಹಾದ್ ಇಲ್ಲ, ನನ್ನದು ಪರಿಶುದ್ಧ ಪ್ರೇಮ ಎಂದು ನಿವೇದಿಸಿಕೊಳ್ಳುವಂತೆ ಮತ್ತು ಆ ಹಿಂದೂ ಹುಡುಗಿ ಅದನ್ನು ಒಪ್ಪಿಕೊಳ್ಳುವಂತೆ ಚಿತ್ರಿಸಲಾಗಿತ್ತು. ಆ ಮೂಲಕ ಮುಸ್ಲಿಂ ಯುವಕರೆಲ್ಲ ಹಿಂದೂ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬ ಕೆಟ್ಟ ಅರ್ಥ ಕೊಡುತ್ತಿತ್ತು.

ಯಶ್​ ದಯಾಳ್​ ಶೇರ್ ಮಾಡಿದ್ದ ಪೋಸ್ಟರ್​​​ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಟ್ವಿಟರ್‌ ನಲ್ಲಿ ಹಲವರು, ಬಿಸಿಸಿಐ ಮತ್ತು ಗುಜರಾತ್​ ಟೈಟನ್ಸ್​ ಖಾತೆಗೆ ಟ್ಯಾಗ್​ ಮಾಡಿ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇನ್ನು ಹಲವು ನೆಟ್ಟಿಗರು ಯಶ್ ದಯಾಳ್ ಅವರ ಮನಸ್ಥಿತಿಯನ್ನು ಟೀಕಿಸಿದ್ದರು.

ಮುಸ್ಲಿಮರ ಕುರಿತು ಅಪನಂಬಿಕೆ ಹೊಂದಿರುವ ನೀನು, ಸಹ ಆಟಗಾರರಾದ ಮುಹಮ್ಮದ್‌ ಶಮಿ, ರಶೀದ್‌ ಖಾನ್‌, ನೂರ್‌ ಅಹ್ಮದ್‌ ಜೊತೆ ಎರಡು ತಿಂಗಳು ಜೊತೆಯಾಗಿ ಇದ್ದುದ್ದಾದರೂ ಹೇಗೆ? ಅವರನ್ನು ನೋಡಿ ಏನೂ ಕಲಿಯಲಿಲ್ಲವೇ ಎಂದು ಹಲವರು ಪ್ರಶ್ನಿಸಿದ್ದಾರೆ. ಇದು ವಿವಾದವಾಗುತ್ತಲೇ ಯಶ್ ದಯಾಳ್ ಆ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿ, ಕ್ಷಮೆ ಯಾಚಿಸಿದ್ದಾರೆ.

ಬಳಿಕ ಮತ್ತೊಂದು ಪೋಸ್ಟ್ ಮೂಲಕ ಹಿಂದೆ ಪೋಸ್ಟ್​ ಮಾಡಿದ್ದ ಸ್ಟೇಟಸ್​ಗಾಗಿ ಕ್ಷಮೆ ಯಾಚಿಸಿದ್ದಾರೆ ʻಸ್ನೇಹಿತರೇ, ನಾನು ತಪ್ಪಾಗಿ ಈ ಹಿಂದಿನ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೆ. ಇದ್ಕಕಾಗಿ ನಿಮ್ಮಲ್ಲಿ ಕ್ಷಮೆ ಕೋರುತ್ತಿದ್ದೇನೆ. ದಯವಿಟ್ಟು ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ನಾನು ಎಲ್ಲಾ ಸಮುದಾಯಗಳ ಭಾವನೆಗಳನ್ನು ಗೌರವಿಸುತ್ತೇನೆʼ ಎಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ.

ಇತ್ತೀಚಿಗೆ ಪ್ರೇಮಿಗಳು, ಮದುವೆಗಳಲ್ಲಿ ಕಲಹಗಳು ಹೆಚ್ಚಾಗಿ ಕಂಡುಬರುತ್ತಿವೆ. ಅವು ಕೊಲೆ ಮಾಡುವ ಮಟ್ಟಕ್ಕೂ ಬಂದು ನಿಂತಿವೆ. ಆದರೆ ಆ ಗಲಾಟೆ, ಮನಸ್ತಾಪ, ದ್ವೇಷ ಮತ್ತು ಕೊಲೆಗಳಿಗೆ ಧರ್ಮವಾಗಲೀ, ಜಾತಿಯಾಗಲೀ ಕಾರಣವಾಗಿಲ್ಲ. ಬದಲಿಗೆ ಅಹಂಕಾರ, ಹೊಂದಾಣಿಕೆ ಕೊರತೆ, ಸ್ವಾರ್ಥ, ಕೋಪ ಮತ್ತು ಹತಾಶೆಗಳು ಅವರನ್ನು ಆ ಕೃತ್ಯಗಳೆಸಲು ಪ್ರೇರೇಪಿಸತ್ತಿವೆ. ಇದುವರೆಗೆ ಈ ರೀತಿಯ ಕೊಲೆಗೈದವರಲ್ಲಿ ಎಲ್ಲಾ ಜಾತಿ-ಧರ್ಮದವರು ಇದ್ದಾರೆ. ಹಾಗಾಗಿ ಕೇವಲ ಮುಸ್ಲಿಂ ಯುವಕರು ಮತ್ರ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬುದು ಸುಳ್ಳು. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಕೆಟ್ಟ ಹೆಸರು ತರಲು ಕೆಲ ಮತಾಂಧರು ಈ ರೀತಿಯ ಫೇಕ್ ನ್ಯೂಸ್‌ಗಳನ್ನು ಹರಡುತ್ತಿದ್ದಾರೆ. ಅಂತಹುದ್ದೇ ಫೇಕ್ ನ್ಯೂಸ್ ಹರಡಿ ಕ್ರಿಕೆಟಿಗ ಯಶ್ ದಯಾಳ್ ತಮ್ಮ ವರ್ಚಸ್ಸನ್ನು ಹಾಳು ಮಾಡಿಕೊಂಡಿದ್ದಾರೆ. ಹಾಗಾಗಿ ಯಾರೂ ಸಹ ದ್ವೇಷ ಪೂರಿತ ಪೋಸ್ಟ್‌ಗಳನ್ನು ಹಾಕಿ ಸಂಕಷ್ಟಕ್ಕೆ ಸಿಲುಕಬೇಡಿ. ಯಾವುದೇ ಅನ್ಯಾಯ ನಡೆಯುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ದೂರು ನೀಡಿ. ಕಾನೂನನನ್ನು ಗೌರವಿಸಿ.

ಇದನ್ನೂ ಓದಿ; ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...