Homeಮುಖಪುಟಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

- Advertisement -
- Advertisement -

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಒಂದನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದ ಕ್ರಿಕೆಟಿಗ ಯಶ್ ದಯಾಳ್ ವ್ಯಾಪಕ ಟೀಕೆ ವ್ಯಕ್ತವಾಗುತ್ತಲೇ ತಮ್ಮ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ.

ಲವ್ ಜಿಹಾದ್ ಎಂಬ ಕಲ್ಪಿತ ಮುಸ್ಲಿಂ ಸಮುದಾಯ ದ್ವೇಷಿ ಕಾರ್ಟೂನ್ ಒಂದನ್ನು ಇತ್ತೀಚೆಗೆ ಗುಜರಾತ್ ಟೈಟನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಹಂಚಿಕೊಂಡಿದ್ದರು. ಅದರಲ್ಲಿ ಮುಸ್ಲಿಂ ಯುವಕನೊಬ್ಬ ತನ್ನ ಗೆಳತಿಯನ್ನು ಕೊಂದು ಮತ್ತೊಬ್ಬ ಹುಡುಗಿಗೆ ಲವ್ ಜಿಹಾದ್ ಇಲ್ಲ, ನನ್ನದು ಪರಿಶುದ್ಧ ಪ್ರೇಮ ಎಂದು ನಿವೇದಿಸಿಕೊಳ್ಳುವಂತೆ ಮತ್ತು ಆ ಹಿಂದೂ ಹುಡುಗಿ ಅದನ್ನು ಒಪ್ಪಿಕೊಳ್ಳುವಂತೆ ಚಿತ್ರಿಸಲಾಗಿತ್ತು. ಆ ಮೂಲಕ ಮುಸ್ಲಿಂ ಯುವಕರೆಲ್ಲ ಹಿಂದೂ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬ ಕೆಟ್ಟ ಅರ್ಥ ಕೊಡುತ್ತಿತ್ತು.

ಯಶ್​ ದಯಾಳ್​ ಶೇರ್ ಮಾಡಿದ್ದ ಪೋಸ್ಟರ್​​​ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಟ್ವಿಟರ್‌ ನಲ್ಲಿ ಹಲವರು, ಬಿಸಿಸಿಐ ಮತ್ತು ಗುಜರಾತ್​ ಟೈಟನ್ಸ್​ ಖಾತೆಗೆ ಟ್ಯಾಗ್​ ಮಾಡಿ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇನ್ನು ಹಲವು ನೆಟ್ಟಿಗರು ಯಶ್ ದಯಾಳ್ ಅವರ ಮನಸ್ಥಿತಿಯನ್ನು ಟೀಕಿಸಿದ್ದರು.

ಮುಸ್ಲಿಮರ ಕುರಿತು ಅಪನಂಬಿಕೆ ಹೊಂದಿರುವ ನೀನು, ಸಹ ಆಟಗಾರರಾದ ಮುಹಮ್ಮದ್‌ ಶಮಿ, ರಶೀದ್‌ ಖಾನ್‌, ನೂರ್‌ ಅಹ್ಮದ್‌ ಜೊತೆ ಎರಡು ತಿಂಗಳು ಜೊತೆಯಾಗಿ ಇದ್ದುದ್ದಾದರೂ ಹೇಗೆ? ಅವರನ್ನು ನೋಡಿ ಏನೂ ಕಲಿಯಲಿಲ್ಲವೇ ಎಂದು ಹಲವರು ಪ್ರಶ್ನಿಸಿದ್ದಾರೆ. ಇದು ವಿವಾದವಾಗುತ್ತಲೇ ಯಶ್ ದಯಾಳ್ ಆ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿ, ಕ್ಷಮೆ ಯಾಚಿಸಿದ್ದಾರೆ.

ಬಳಿಕ ಮತ್ತೊಂದು ಪೋಸ್ಟ್ ಮೂಲಕ ಹಿಂದೆ ಪೋಸ್ಟ್​ ಮಾಡಿದ್ದ ಸ್ಟೇಟಸ್​ಗಾಗಿ ಕ್ಷಮೆ ಯಾಚಿಸಿದ್ದಾರೆ ʻಸ್ನೇಹಿತರೇ, ನಾನು ತಪ್ಪಾಗಿ ಈ ಹಿಂದಿನ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೆ. ಇದ್ಕಕಾಗಿ ನಿಮ್ಮಲ್ಲಿ ಕ್ಷಮೆ ಕೋರುತ್ತಿದ್ದೇನೆ. ದಯವಿಟ್ಟು ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ನಾನು ಎಲ್ಲಾ ಸಮುದಾಯಗಳ ಭಾವನೆಗಳನ್ನು ಗೌರವಿಸುತ್ತೇನೆʼ ಎಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ.

ಇತ್ತೀಚಿಗೆ ಪ್ರೇಮಿಗಳು, ಮದುವೆಗಳಲ್ಲಿ ಕಲಹಗಳು ಹೆಚ್ಚಾಗಿ ಕಂಡುಬರುತ್ತಿವೆ. ಅವು ಕೊಲೆ ಮಾಡುವ ಮಟ್ಟಕ್ಕೂ ಬಂದು ನಿಂತಿವೆ. ಆದರೆ ಆ ಗಲಾಟೆ, ಮನಸ್ತಾಪ, ದ್ವೇಷ ಮತ್ತು ಕೊಲೆಗಳಿಗೆ ಧರ್ಮವಾಗಲೀ, ಜಾತಿಯಾಗಲೀ ಕಾರಣವಾಗಿಲ್ಲ. ಬದಲಿಗೆ ಅಹಂಕಾರ, ಹೊಂದಾಣಿಕೆ ಕೊರತೆ, ಸ್ವಾರ್ಥ, ಕೋಪ ಮತ್ತು ಹತಾಶೆಗಳು ಅವರನ್ನು ಆ ಕೃತ್ಯಗಳೆಸಲು ಪ್ರೇರೇಪಿಸತ್ತಿವೆ. ಇದುವರೆಗೆ ಈ ರೀತಿಯ ಕೊಲೆಗೈದವರಲ್ಲಿ ಎಲ್ಲಾ ಜಾತಿ-ಧರ್ಮದವರು ಇದ್ದಾರೆ. ಹಾಗಾಗಿ ಕೇವಲ ಮುಸ್ಲಿಂ ಯುವಕರು ಮತ್ರ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬುದು ಸುಳ್ಳು. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಕೆಟ್ಟ ಹೆಸರು ತರಲು ಕೆಲ ಮತಾಂಧರು ಈ ರೀತಿಯ ಫೇಕ್ ನ್ಯೂಸ್‌ಗಳನ್ನು ಹರಡುತ್ತಿದ್ದಾರೆ. ಅಂತಹುದ್ದೇ ಫೇಕ್ ನ್ಯೂಸ್ ಹರಡಿ ಕ್ರಿಕೆಟಿಗ ಯಶ್ ದಯಾಳ್ ತಮ್ಮ ವರ್ಚಸ್ಸನ್ನು ಹಾಳು ಮಾಡಿಕೊಂಡಿದ್ದಾರೆ. ಹಾಗಾಗಿ ಯಾರೂ ಸಹ ದ್ವೇಷ ಪೂರಿತ ಪೋಸ್ಟ್‌ಗಳನ್ನು ಹಾಕಿ ಸಂಕಷ್ಟಕ್ಕೆ ಸಿಲುಕಬೇಡಿ. ಯಾವುದೇ ಅನ್ಯಾಯ ನಡೆಯುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ದೂರು ನೀಡಿ. ಕಾನೂನನನ್ನು ಗೌರವಿಸಿ.

ಇದನ್ನೂ ಓದಿ; ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...