Homeಮುಖಪುಟಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

- Advertisement -
- Advertisement -

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಒಂದನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದ ಕ್ರಿಕೆಟಿಗ ಯಶ್ ದಯಾಳ್ ವ್ಯಾಪಕ ಟೀಕೆ ವ್ಯಕ್ತವಾಗುತ್ತಲೇ ತಮ್ಮ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ.

ಲವ್ ಜಿಹಾದ್ ಎಂಬ ಕಲ್ಪಿತ ಮುಸ್ಲಿಂ ಸಮುದಾಯ ದ್ವೇಷಿ ಕಾರ್ಟೂನ್ ಒಂದನ್ನು ಇತ್ತೀಚೆಗೆ ಗುಜರಾತ್ ಟೈಟನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಹಂಚಿಕೊಂಡಿದ್ದರು. ಅದರಲ್ಲಿ ಮುಸ್ಲಿಂ ಯುವಕನೊಬ್ಬ ತನ್ನ ಗೆಳತಿಯನ್ನು ಕೊಂದು ಮತ್ತೊಬ್ಬ ಹುಡುಗಿಗೆ ಲವ್ ಜಿಹಾದ್ ಇಲ್ಲ, ನನ್ನದು ಪರಿಶುದ್ಧ ಪ್ರೇಮ ಎಂದು ನಿವೇದಿಸಿಕೊಳ್ಳುವಂತೆ ಮತ್ತು ಆ ಹಿಂದೂ ಹುಡುಗಿ ಅದನ್ನು ಒಪ್ಪಿಕೊಳ್ಳುವಂತೆ ಚಿತ್ರಿಸಲಾಗಿತ್ತು. ಆ ಮೂಲಕ ಮುಸ್ಲಿಂ ಯುವಕರೆಲ್ಲ ಹಿಂದೂ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬ ಕೆಟ್ಟ ಅರ್ಥ ಕೊಡುತ್ತಿತ್ತು.

ಯಶ್​ ದಯಾಳ್​ ಶೇರ್ ಮಾಡಿದ್ದ ಪೋಸ್ಟರ್​​​ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಟ್ವಿಟರ್‌ ನಲ್ಲಿ ಹಲವರು, ಬಿಸಿಸಿಐ ಮತ್ತು ಗುಜರಾತ್​ ಟೈಟನ್ಸ್​ ಖಾತೆಗೆ ಟ್ಯಾಗ್​ ಮಾಡಿ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇನ್ನು ಹಲವು ನೆಟ್ಟಿಗರು ಯಶ್ ದಯಾಳ್ ಅವರ ಮನಸ್ಥಿತಿಯನ್ನು ಟೀಕಿಸಿದ್ದರು.

ಮುಸ್ಲಿಮರ ಕುರಿತು ಅಪನಂಬಿಕೆ ಹೊಂದಿರುವ ನೀನು, ಸಹ ಆಟಗಾರರಾದ ಮುಹಮ್ಮದ್‌ ಶಮಿ, ರಶೀದ್‌ ಖಾನ್‌, ನೂರ್‌ ಅಹ್ಮದ್‌ ಜೊತೆ ಎರಡು ತಿಂಗಳು ಜೊತೆಯಾಗಿ ಇದ್ದುದ್ದಾದರೂ ಹೇಗೆ? ಅವರನ್ನು ನೋಡಿ ಏನೂ ಕಲಿಯಲಿಲ್ಲವೇ ಎಂದು ಹಲವರು ಪ್ರಶ್ನಿಸಿದ್ದಾರೆ. ಇದು ವಿವಾದವಾಗುತ್ತಲೇ ಯಶ್ ದಯಾಳ್ ಆ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿ, ಕ್ಷಮೆ ಯಾಚಿಸಿದ್ದಾರೆ.

ಬಳಿಕ ಮತ್ತೊಂದು ಪೋಸ್ಟ್ ಮೂಲಕ ಹಿಂದೆ ಪೋಸ್ಟ್​ ಮಾಡಿದ್ದ ಸ್ಟೇಟಸ್​ಗಾಗಿ ಕ್ಷಮೆ ಯಾಚಿಸಿದ್ದಾರೆ ʻಸ್ನೇಹಿತರೇ, ನಾನು ತಪ್ಪಾಗಿ ಈ ಹಿಂದಿನ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೆ. ಇದ್ಕಕಾಗಿ ನಿಮ್ಮಲ್ಲಿ ಕ್ಷಮೆ ಕೋರುತ್ತಿದ್ದೇನೆ. ದಯವಿಟ್ಟು ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ನಾನು ಎಲ್ಲಾ ಸಮುದಾಯಗಳ ಭಾವನೆಗಳನ್ನು ಗೌರವಿಸುತ್ತೇನೆʼ ಎಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ.

ಇತ್ತೀಚಿಗೆ ಪ್ರೇಮಿಗಳು, ಮದುವೆಗಳಲ್ಲಿ ಕಲಹಗಳು ಹೆಚ್ಚಾಗಿ ಕಂಡುಬರುತ್ತಿವೆ. ಅವು ಕೊಲೆ ಮಾಡುವ ಮಟ್ಟಕ್ಕೂ ಬಂದು ನಿಂತಿವೆ. ಆದರೆ ಆ ಗಲಾಟೆ, ಮನಸ್ತಾಪ, ದ್ವೇಷ ಮತ್ತು ಕೊಲೆಗಳಿಗೆ ಧರ್ಮವಾಗಲೀ, ಜಾತಿಯಾಗಲೀ ಕಾರಣವಾಗಿಲ್ಲ. ಬದಲಿಗೆ ಅಹಂಕಾರ, ಹೊಂದಾಣಿಕೆ ಕೊರತೆ, ಸ್ವಾರ್ಥ, ಕೋಪ ಮತ್ತು ಹತಾಶೆಗಳು ಅವರನ್ನು ಆ ಕೃತ್ಯಗಳೆಸಲು ಪ್ರೇರೇಪಿಸತ್ತಿವೆ. ಇದುವರೆಗೆ ಈ ರೀತಿಯ ಕೊಲೆಗೈದವರಲ್ಲಿ ಎಲ್ಲಾ ಜಾತಿ-ಧರ್ಮದವರು ಇದ್ದಾರೆ. ಹಾಗಾಗಿ ಕೇವಲ ಮುಸ್ಲಿಂ ಯುವಕರು ಮತ್ರ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬುದು ಸುಳ್ಳು. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಕೆಟ್ಟ ಹೆಸರು ತರಲು ಕೆಲ ಮತಾಂಧರು ಈ ರೀತಿಯ ಫೇಕ್ ನ್ಯೂಸ್‌ಗಳನ್ನು ಹರಡುತ್ತಿದ್ದಾರೆ. ಅಂತಹುದ್ದೇ ಫೇಕ್ ನ್ಯೂಸ್ ಹರಡಿ ಕ್ರಿಕೆಟಿಗ ಯಶ್ ದಯಾಳ್ ತಮ್ಮ ವರ್ಚಸ್ಸನ್ನು ಹಾಳು ಮಾಡಿಕೊಂಡಿದ್ದಾರೆ. ಹಾಗಾಗಿ ಯಾರೂ ಸಹ ದ್ವೇಷ ಪೂರಿತ ಪೋಸ್ಟ್‌ಗಳನ್ನು ಹಾಕಿ ಸಂಕಷ್ಟಕ್ಕೆ ಸಿಲುಕಬೇಡಿ. ಯಾವುದೇ ಅನ್ಯಾಯ ನಡೆಯುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ದೂರು ನೀಡಿ. ಕಾನೂನನನ್ನು ಗೌರವಿಸಿ.

ಇದನ್ನೂ ಓದಿ; ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....