Homeಮುಖಪುಟಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

- Advertisement -
- Advertisement -

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಒಂದನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದ ಕ್ರಿಕೆಟಿಗ ಯಶ್ ದಯಾಳ್ ವ್ಯಾಪಕ ಟೀಕೆ ವ್ಯಕ್ತವಾಗುತ್ತಲೇ ತಮ್ಮ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ.

ಲವ್ ಜಿಹಾದ್ ಎಂಬ ಕಲ್ಪಿತ ಮುಸ್ಲಿಂ ಸಮುದಾಯ ದ್ವೇಷಿ ಕಾರ್ಟೂನ್ ಒಂದನ್ನು ಇತ್ತೀಚೆಗೆ ಗುಜರಾತ್ ಟೈಟನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಹಂಚಿಕೊಂಡಿದ್ದರು. ಅದರಲ್ಲಿ ಮುಸ್ಲಿಂ ಯುವಕನೊಬ್ಬ ತನ್ನ ಗೆಳತಿಯನ್ನು ಕೊಂದು ಮತ್ತೊಬ್ಬ ಹುಡುಗಿಗೆ ಲವ್ ಜಿಹಾದ್ ಇಲ್ಲ, ನನ್ನದು ಪರಿಶುದ್ಧ ಪ್ರೇಮ ಎಂದು ನಿವೇದಿಸಿಕೊಳ್ಳುವಂತೆ ಮತ್ತು ಆ ಹಿಂದೂ ಹುಡುಗಿ ಅದನ್ನು ಒಪ್ಪಿಕೊಳ್ಳುವಂತೆ ಚಿತ್ರಿಸಲಾಗಿತ್ತು. ಆ ಮೂಲಕ ಮುಸ್ಲಿಂ ಯುವಕರೆಲ್ಲ ಹಿಂದೂ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬ ಕೆಟ್ಟ ಅರ್ಥ ಕೊಡುತ್ತಿತ್ತು.

ಯಶ್​ ದಯಾಳ್​ ಶೇರ್ ಮಾಡಿದ್ದ ಪೋಸ್ಟರ್​​​ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಟ್ವಿಟರ್‌ ನಲ್ಲಿ ಹಲವರು, ಬಿಸಿಸಿಐ ಮತ್ತು ಗುಜರಾತ್​ ಟೈಟನ್ಸ್​ ಖಾತೆಗೆ ಟ್ಯಾಗ್​ ಮಾಡಿ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇನ್ನು ಹಲವು ನೆಟ್ಟಿಗರು ಯಶ್ ದಯಾಳ್ ಅವರ ಮನಸ್ಥಿತಿಯನ್ನು ಟೀಕಿಸಿದ್ದರು.

ಮುಸ್ಲಿಮರ ಕುರಿತು ಅಪನಂಬಿಕೆ ಹೊಂದಿರುವ ನೀನು, ಸಹ ಆಟಗಾರರಾದ ಮುಹಮ್ಮದ್‌ ಶಮಿ, ರಶೀದ್‌ ಖಾನ್‌, ನೂರ್‌ ಅಹ್ಮದ್‌ ಜೊತೆ ಎರಡು ತಿಂಗಳು ಜೊತೆಯಾಗಿ ಇದ್ದುದ್ದಾದರೂ ಹೇಗೆ? ಅವರನ್ನು ನೋಡಿ ಏನೂ ಕಲಿಯಲಿಲ್ಲವೇ ಎಂದು ಹಲವರು ಪ್ರಶ್ನಿಸಿದ್ದಾರೆ. ಇದು ವಿವಾದವಾಗುತ್ತಲೇ ಯಶ್ ದಯಾಳ್ ಆ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿ, ಕ್ಷಮೆ ಯಾಚಿಸಿದ್ದಾರೆ.

ಬಳಿಕ ಮತ್ತೊಂದು ಪೋಸ್ಟ್ ಮೂಲಕ ಹಿಂದೆ ಪೋಸ್ಟ್​ ಮಾಡಿದ್ದ ಸ್ಟೇಟಸ್​ಗಾಗಿ ಕ್ಷಮೆ ಯಾಚಿಸಿದ್ದಾರೆ ʻಸ್ನೇಹಿತರೇ, ನಾನು ತಪ್ಪಾಗಿ ಈ ಹಿಂದಿನ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೆ. ಇದ್ಕಕಾಗಿ ನಿಮ್ಮಲ್ಲಿ ಕ್ಷಮೆ ಕೋರುತ್ತಿದ್ದೇನೆ. ದಯವಿಟ್ಟು ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ನಾನು ಎಲ್ಲಾ ಸಮುದಾಯಗಳ ಭಾವನೆಗಳನ್ನು ಗೌರವಿಸುತ್ತೇನೆʼ ಎಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ.

ಇತ್ತೀಚಿಗೆ ಪ್ರೇಮಿಗಳು, ಮದುವೆಗಳಲ್ಲಿ ಕಲಹಗಳು ಹೆಚ್ಚಾಗಿ ಕಂಡುಬರುತ್ತಿವೆ. ಅವು ಕೊಲೆ ಮಾಡುವ ಮಟ್ಟಕ್ಕೂ ಬಂದು ನಿಂತಿವೆ. ಆದರೆ ಆ ಗಲಾಟೆ, ಮನಸ್ತಾಪ, ದ್ವೇಷ ಮತ್ತು ಕೊಲೆಗಳಿಗೆ ಧರ್ಮವಾಗಲೀ, ಜಾತಿಯಾಗಲೀ ಕಾರಣವಾಗಿಲ್ಲ. ಬದಲಿಗೆ ಅಹಂಕಾರ, ಹೊಂದಾಣಿಕೆ ಕೊರತೆ, ಸ್ವಾರ್ಥ, ಕೋಪ ಮತ್ತು ಹತಾಶೆಗಳು ಅವರನ್ನು ಆ ಕೃತ್ಯಗಳೆಸಲು ಪ್ರೇರೇಪಿಸತ್ತಿವೆ. ಇದುವರೆಗೆ ಈ ರೀತಿಯ ಕೊಲೆಗೈದವರಲ್ಲಿ ಎಲ್ಲಾ ಜಾತಿ-ಧರ್ಮದವರು ಇದ್ದಾರೆ. ಹಾಗಾಗಿ ಕೇವಲ ಮುಸ್ಲಿಂ ಯುವಕರು ಮತ್ರ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬುದು ಸುಳ್ಳು. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಕೆಟ್ಟ ಹೆಸರು ತರಲು ಕೆಲ ಮತಾಂಧರು ಈ ರೀತಿಯ ಫೇಕ್ ನ್ಯೂಸ್‌ಗಳನ್ನು ಹರಡುತ್ತಿದ್ದಾರೆ. ಅಂತಹುದ್ದೇ ಫೇಕ್ ನ್ಯೂಸ್ ಹರಡಿ ಕ್ರಿಕೆಟಿಗ ಯಶ್ ದಯಾಳ್ ತಮ್ಮ ವರ್ಚಸ್ಸನ್ನು ಹಾಳು ಮಾಡಿಕೊಂಡಿದ್ದಾರೆ. ಹಾಗಾಗಿ ಯಾರೂ ಸಹ ದ್ವೇಷ ಪೂರಿತ ಪೋಸ್ಟ್‌ಗಳನ್ನು ಹಾಕಿ ಸಂಕಷ್ಟಕ್ಕೆ ಸಿಲುಕಬೇಡಿ. ಯಾವುದೇ ಅನ್ಯಾಯ ನಡೆಯುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ದೂರು ನೀಡಿ. ಕಾನೂನನನ್ನು ಗೌರವಿಸಿ.

ಇದನ್ನೂ ಓದಿ; ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...