Homeಮುಖಪುಟಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

- Advertisement -
- Advertisement -

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಒಂದನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದ ಕ್ರಿಕೆಟಿಗ ಯಶ್ ದಯಾಳ್ ವ್ಯಾಪಕ ಟೀಕೆ ವ್ಯಕ್ತವಾಗುತ್ತಲೇ ತಮ್ಮ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ.

ಲವ್ ಜಿಹಾದ್ ಎಂಬ ಕಲ್ಪಿತ ಮುಸ್ಲಿಂ ಸಮುದಾಯ ದ್ವೇಷಿ ಕಾರ್ಟೂನ್ ಒಂದನ್ನು ಇತ್ತೀಚೆಗೆ ಗುಜರಾತ್ ಟೈಟನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಹಂಚಿಕೊಂಡಿದ್ದರು. ಅದರಲ್ಲಿ ಮುಸ್ಲಿಂ ಯುವಕನೊಬ್ಬ ತನ್ನ ಗೆಳತಿಯನ್ನು ಕೊಂದು ಮತ್ತೊಬ್ಬ ಹುಡುಗಿಗೆ ಲವ್ ಜಿಹಾದ್ ಇಲ್ಲ, ನನ್ನದು ಪರಿಶುದ್ಧ ಪ್ರೇಮ ಎಂದು ನಿವೇದಿಸಿಕೊಳ್ಳುವಂತೆ ಮತ್ತು ಆ ಹಿಂದೂ ಹುಡುಗಿ ಅದನ್ನು ಒಪ್ಪಿಕೊಳ್ಳುವಂತೆ ಚಿತ್ರಿಸಲಾಗಿತ್ತು. ಆ ಮೂಲಕ ಮುಸ್ಲಿಂ ಯುವಕರೆಲ್ಲ ಹಿಂದೂ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬ ಕೆಟ್ಟ ಅರ್ಥ ಕೊಡುತ್ತಿತ್ತು.

ಯಶ್​ ದಯಾಳ್​ ಶೇರ್ ಮಾಡಿದ್ದ ಪೋಸ್ಟರ್​​​ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಟ್ವಿಟರ್‌ ನಲ್ಲಿ ಹಲವರು, ಬಿಸಿಸಿಐ ಮತ್ತು ಗುಜರಾತ್​ ಟೈಟನ್ಸ್​ ಖಾತೆಗೆ ಟ್ಯಾಗ್​ ಮಾಡಿ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇನ್ನು ಹಲವು ನೆಟ್ಟಿಗರು ಯಶ್ ದಯಾಳ್ ಅವರ ಮನಸ್ಥಿತಿಯನ್ನು ಟೀಕಿಸಿದ್ದರು.

ಮುಸ್ಲಿಮರ ಕುರಿತು ಅಪನಂಬಿಕೆ ಹೊಂದಿರುವ ನೀನು, ಸಹ ಆಟಗಾರರಾದ ಮುಹಮ್ಮದ್‌ ಶಮಿ, ರಶೀದ್‌ ಖಾನ್‌, ನೂರ್‌ ಅಹ್ಮದ್‌ ಜೊತೆ ಎರಡು ತಿಂಗಳು ಜೊತೆಯಾಗಿ ಇದ್ದುದ್ದಾದರೂ ಹೇಗೆ? ಅವರನ್ನು ನೋಡಿ ಏನೂ ಕಲಿಯಲಿಲ್ಲವೇ ಎಂದು ಹಲವರು ಪ್ರಶ್ನಿಸಿದ್ದಾರೆ. ಇದು ವಿವಾದವಾಗುತ್ತಲೇ ಯಶ್ ದಯಾಳ್ ಆ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿ, ಕ್ಷಮೆ ಯಾಚಿಸಿದ್ದಾರೆ.

ಬಳಿಕ ಮತ್ತೊಂದು ಪೋಸ್ಟ್ ಮೂಲಕ ಹಿಂದೆ ಪೋಸ್ಟ್​ ಮಾಡಿದ್ದ ಸ್ಟೇಟಸ್​ಗಾಗಿ ಕ್ಷಮೆ ಯಾಚಿಸಿದ್ದಾರೆ ʻಸ್ನೇಹಿತರೇ, ನಾನು ತಪ್ಪಾಗಿ ಈ ಹಿಂದಿನ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೆ. ಇದ್ಕಕಾಗಿ ನಿಮ್ಮಲ್ಲಿ ಕ್ಷಮೆ ಕೋರುತ್ತಿದ್ದೇನೆ. ದಯವಿಟ್ಟು ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ನಾನು ಎಲ್ಲಾ ಸಮುದಾಯಗಳ ಭಾವನೆಗಳನ್ನು ಗೌರವಿಸುತ್ತೇನೆʼ ಎಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ.

ಇತ್ತೀಚಿಗೆ ಪ್ರೇಮಿಗಳು, ಮದುವೆಗಳಲ್ಲಿ ಕಲಹಗಳು ಹೆಚ್ಚಾಗಿ ಕಂಡುಬರುತ್ತಿವೆ. ಅವು ಕೊಲೆ ಮಾಡುವ ಮಟ್ಟಕ್ಕೂ ಬಂದು ನಿಂತಿವೆ. ಆದರೆ ಆ ಗಲಾಟೆ, ಮನಸ್ತಾಪ, ದ್ವೇಷ ಮತ್ತು ಕೊಲೆಗಳಿಗೆ ಧರ್ಮವಾಗಲೀ, ಜಾತಿಯಾಗಲೀ ಕಾರಣವಾಗಿಲ್ಲ. ಬದಲಿಗೆ ಅಹಂಕಾರ, ಹೊಂದಾಣಿಕೆ ಕೊರತೆ, ಸ್ವಾರ್ಥ, ಕೋಪ ಮತ್ತು ಹತಾಶೆಗಳು ಅವರನ್ನು ಆ ಕೃತ್ಯಗಳೆಸಲು ಪ್ರೇರೇಪಿಸತ್ತಿವೆ. ಇದುವರೆಗೆ ಈ ರೀತಿಯ ಕೊಲೆಗೈದವರಲ್ಲಿ ಎಲ್ಲಾ ಜಾತಿ-ಧರ್ಮದವರು ಇದ್ದಾರೆ. ಹಾಗಾಗಿ ಕೇವಲ ಮುಸ್ಲಿಂ ಯುವಕರು ಮತ್ರ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬುದು ಸುಳ್ಳು. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಕೆಟ್ಟ ಹೆಸರು ತರಲು ಕೆಲ ಮತಾಂಧರು ಈ ರೀತಿಯ ಫೇಕ್ ನ್ಯೂಸ್‌ಗಳನ್ನು ಹರಡುತ್ತಿದ್ದಾರೆ. ಅಂತಹುದ್ದೇ ಫೇಕ್ ನ್ಯೂಸ್ ಹರಡಿ ಕ್ರಿಕೆಟಿಗ ಯಶ್ ದಯಾಳ್ ತಮ್ಮ ವರ್ಚಸ್ಸನ್ನು ಹಾಳು ಮಾಡಿಕೊಂಡಿದ್ದಾರೆ. ಹಾಗಾಗಿ ಯಾರೂ ಸಹ ದ್ವೇಷ ಪೂರಿತ ಪೋಸ್ಟ್‌ಗಳನ್ನು ಹಾಕಿ ಸಂಕಷ್ಟಕ್ಕೆ ಸಿಲುಕಬೇಡಿ. ಯಾವುದೇ ಅನ್ಯಾಯ ನಡೆಯುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ದೂರು ನೀಡಿ. ಕಾನೂನನನ್ನು ಗೌರವಿಸಿ.

ಇದನ್ನೂ ಓದಿ; ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...