Homeಮುಖಪುಟಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಹಂಚಿಕೆ; ಕ್ಷಮೆ ಕೇಳಿದ ಕ್ರಿಕೆಟಿಗ ಯಶ್ ದಯಾಳ್

- Advertisement -
- Advertisement -

ಇಸ್ಲಾಮೋಫೋಬಿಯ ಹರಡುವ ಪೋಸ್ಟ್ ಒಂದನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದ ಕ್ರಿಕೆಟಿಗ ಯಶ್ ದಯಾಳ್ ವ್ಯಾಪಕ ಟೀಕೆ ವ್ಯಕ್ತವಾಗುತ್ತಲೇ ತಮ್ಮ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ.

ಲವ್ ಜಿಹಾದ್ ಎಂಬ ಕಲ್ಪಿತ ಮುಸ್ಲಿಂ ಸಮುದಾಯ ದ್ವೇಷಿ ಕಾರ್ಟೂನ್ ಒಂದನ್ನು ಇತ್ತೀಚೆಗೆ ಗುಜರಾತ್ ಟೈಟನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಹಂಚಿಕೊಂಡಿದ್ದರು. ಅದರಲ್ಲಿ ಮುಸ್ಲಿಂ ಯುವಕನೊಬ್ಬ ತನ್ನ ಗೆಳತಿಯನ್ನು ಕೊಂದು ಮತ್ತೊಬ್ಬ ಹುಡುಗಿಗೆ ಲವ್ ಜಿಹಾದ್ ಇಲ್ಲ, ನನ್ನದು ಪರಿಶುದ್ಧ ಪ್ರೇಮ ಎಂದು ನಿವೇದಿಸಿಕೊಳ್ಳುವಂತೆ ಮತ್ತು ಆ ಹಿಂದೂ ಹುಡುಗಿ ಅದನ್ನು ಒಪ್ಪಿಕೊಳ್ಳುವಂತೆ ಚಿತ್ರಿಸಲಾಗಿತ್ತು. ಆ ಮೂಲಕ ಮುಸ್ಲಿಂ ಯುವಕರೆಲ್ಲ ಹಿಂದೂ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬ ಕೆಟ್ಟ ಅರ್ಥ ಕೊಡುತ್ತಿತ್ತು.

ಯಶ್​ ದಯಾಳ್​ ಶೇರ್ ಮಾಡಿದ್ದ ಪೋಸ್ಟರ್​​​ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಟ್ವಿಟರ್‌ ನಲ್ಲಿ ಹಲವರು, ಬಿಸಿಸಿಐ ಮತ್ತು ಗುಜರಾತ್​ ಟೈಟನ್ಸ್​ ಖಾತೆಗೆ ಟ್ಯಾಗ್​ ಮಾಡಿ ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇನ್ನು ಹಲವು ನೆಟ್ಟಿಗರು ಯಶ್ ದಯಾಳ್ ಅವರ ಮನಸ್ಥಿತಿಯನ್ನು ಟೀಕಿಸಿದ್ದರು.

ಮುಸ್ಲಿಮರ ಕುರಿತು ಅಪನಂಬಿಕೆ ಹೊಂದಿರುವ ನೀನು, ಸಹ ಆಟಗಾರರಾದ ಮುಹಮ್ಮದ್‌ ಶಮಿ, ರಶೀದ್‌ ಖಾನ್‌, ನೂರ್‌ ಅಹ್ಮದ್‌ ಜೊತೆ ಎರಡು ತಿಂಗಳು ಜೊತೆಯಾಗಿ ಇದ್ದುದ್ದಾದರೂ ಹೇಗೆ? ಅವರನ್ನು ನೋಡಿ ಏನೂ ಕಲಿಯಲಿಲ್ಲವೇ ಎಂದು ಹಲವರು ಪ್ರಶ್ನಿಸಿದ್ದಾರೆ. ಇದು ವಿವಾದವಾಗುತ್ತಲೇ ಯಶ್ ದಯಾಳ್ ಆ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿ, ಕ್ಷಮೆ ಯಾಚಿಸಿದ್ದಾರೆ.

ಬಳಿಕ ಮತ್ತೊಂದು ಪೋಸ್ಟ್ ಮೂಲಕ ಹಿಂದೆ ಪೋಸ್ಟ್​ ಮಾಡಿದ್ದ ಸ್ಟೇಟಸ್​ಗಾಗಿ ಕ್ಷಮೆ ಯಾಚಿಸಿದ್ದಾರೆ ʻಸ್ನೇಹಿತರೇ, ನಾನು ತಪ್ಪಾಗಿ ಈ ಹಿಂದಿನ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೆ. ಇದ್ಕಕಾಗಿ ನಿಮ್ಮಲ್ಲಿ ಕ್ಷಮೆ ಕೋರುತ್ತಿದ್ದೇನೆ. ದಯವಿಟ್ಟು ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ನಾನು ಎಲ್ಲಾ ಸಮುದಾಯಗಳ ಭಾವನೆಗಳನ್ನು ಗೌರವಿಸುತ್ತೇನೆʼ ಎಂದು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ.

ಇತ್ತೀಚಿಗೆ ಪ್ರೇಮಿಗಳು, ಮದುವೆಗಳಲ್ಲಿ ಕಲಹಗಳು ಹೆಚ್ಚಾಗಿ ಕಂಡುಬರುತ್ತಿವೆ. ಅವು ಕೊಲೆ ಮಾಡುವ ಮಟ್ಟಕ್ಕೂ ಬಂದು ನಿಂತಿವೆ. ಆದರೆ ಆ ಗಲಾಟೆ, ಮನಸ್ತಾಪ, ದ್ವೇಷ ಮತ್ತು ಕೊಲೆಗಳಿಗೆ ಧರ್ಮವಾಗಲೀ, ಜಾತಿಯಾಗಲೀ ಕಾರಣವಾಗಿಲ್ಲ. ಬದಲಿಗೆ ಅಹಂಕಾರ, ಹೊಂದಾಣಿಕೆ ಕೊರತೆ, ಸ್ವಾರ್ಥ, ಕೋಪ ಮತ್ತು ಹತಾಶೆಗಳು ಅವರನ್ನು ಆ ಕೃತ್ಯಗಳೆಸಲು ಪ್ರೇರೇಪಿಸತ್ತಿವೆ. ಇದುವರೆಗೆ ಈ ರೀತಿಯ ಕೊಲೆಗೈದವರಲ್ಲಿ ಎಲ್ಲಾ ಜಾತಿ-ಧರ್ಮದವರು ಇದ್ದಾರೆ. ಹಾಗಾಗಿ ಕೇವಲ ಮುಸ್ಲಿಂ ಯುವಕರು ಮತ್ರ ಹುಡುಗಿಯನ್ನು ಪ್ರೀತಿಸಿ ಕೊಲೆ ಮಾಡುತ್ತಾರೆ ಎಂಬುದು ಸುಳ್ಳು. ಆದರೂ ಮುಸ್ಲಿಂ ಸಮುದಾಯದ ವಿರುದ್ಧ ಕೆಟ್ಟ ಹೆಸರು ತರಲು ಕೆಲ ಮತಾಂಧರು ಈ ರೀತಿಯ ಫೇಕ್ ನ್ಯೂಸ್‌ಗಳನ್ನು ಹರಡುತ್ತಿದ್ದಾರೆ. ಅಂತಹುದ್ದೇ ಫೇಕ್ ನ್ಯೂಸ್ ಹರಡಿ ಕ್ರಿಕೆಟಿಗ ಯಶ್ ದಯಾಳ್ ತಮ್ಮ ವರ್ಚಸ್ಸನ್ನು ಹಾಳು ಮಾಡಿಕೊಂಡಿದ್ದಾರೆ. ಹಾಗಾಗಿ ಯಾರೂ ಸಹ ದ್ವೇಷ ಪೂರಿತ ಪೋಸ್ಟ್‌ಗಳನ್ನು ಹಾಕಿ ಸಂಕಷ್ಟಕ್ಕೆ ಸಿಲುಕಬೇಡಿ. ಯಾವುದೇ ಅನ್ಯಾಯ ನಡೆಯುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ದೂರು ನೀಡಿ. ಕಾನೂನನನ್ನು ಗೌರವಿಸಿ.

ಇದನ್ನೂ ಓದಿ; ಗುಜರಾತ್‌: ದಲಿತ ಬಾಲಕ ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿದ್ರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...