Homeಮುಖಪುಟಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

ಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

- Advertisement -
- Advertisement -

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಹಿರಿಯ ಸಹೋದ್ಯೋಗಿಗಳೊಂದಿಗೆ ಹಮಾಸ್ ಆಳ್ವಿಕೆಯಲ್ಲಿರುವ ಗಾಝಾದ ಕರಾವಳಿ ಪಟ್ಟಿಗೆ ತೆರಳಿ ಇಸ್ರೇಲ್‌ ಸೈನಿಕರನ್ನು ಭೇಟಿ ಮಾಡಿದ್ದಾರೆ. ಹಮಾಸ್‌ ಆಳ್ವಿಕೆಯ ಭೂ ಪ್ರದೇಶಕ್ಕೆ ನೆತನ್ಯಾಹು ಭೇಟಿ ಇಸ್ರೇಲ್‌ ಆ ಭೂಪ್ರದೇಶದ ಮೇಲೆ ಹಿಡಿತವನ್ನು ಸಾಧಿಸಿದೆ ಎನ್ನವುದನ್ನು ಸೂಚಿಸುತ್ತದೆ.

ನೆತನ್ಯಾಹು ಅವರು ಕಮಾಂಡರ್‌ಗಳು ಮತ್ತು ಸೈನಿಕರಿಂದ ಭದ್ರತೆಯ ಕುರಿತು ಮಾಹಿತಿಯನ್ನು ಪಡೆದಿದ್ದಾರೆ. ಯುದ್ಧದ ಗುರಿ ತಲುಪುವವರೆಗೂ ಸೈನಿಕರಿಗೆ ಮುಂದುವರಿಯಲು ಸೂಚಿಸಿದ್ದಾರೆ.

ನಾವು ನಮ್ಮ ವೀರ ಸೈನಿಕರೊಂದಿಗೆ ಗಾಝಾ ಪಟ್ಟಿಯಲ್ಲಿದ್ದೇವೆ. ನಮ್ಮ ಒತ್ತೆಯಾಳುಗಳನ್ನು ಹಿಂದಿರುಗಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು ನಾವು ಅವರೆಲ್ಲರನ್ನೂ ಕರೆತಂದೇ ತೀರುತ್ತೇವೆ. ಈ ಯುದ್ಧದಲ್ಲಿ ನಮಗೆ 3 ಗುರಿಗಳಿವೆ. ಒಂದು ಹಮಾಸ್‌ನ್ನು ನಿರ್ನಾಮ ಮಾಡುವುದು. ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಕರೆತರುವುದು ಮತ್ತು ಮುಂದೆಂದೂ ಗಾಝಾ ಇಸ್ರೇಲ್ ರಾಜ್ಯಕ್ಕೆ ಬೆದರಿಕೆಯಾಗುವುದಿಲ್ಲ  ಎಂದು ಖಚಿತಪಡಿಸಿಕೊಳ್ಳುವುದಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ನಾನು ಈ ವಿಚಾರವನ್ನು ಸೈನಿಕರಿಗೆ ಹೇಳಲು ಇಲ್ಲಿ ಬಂದಿದ್ದೇನೆ. ಎಲ್ಲರೂ ನನಗೆ ಈ ವಿಷಯವನ್ನೇ ಹೇಳುತ್ತಾರೆ. ನಾನು ನಿಮಗೆ ಇದನ್ನು ಮತ್ತೆ ಪುನರಾವರ್ತಿಸುತ್ತೇನೆ. ಇಸ್ರೇಲ್ ನಾಗರಿಕರೆ ನಾವು ಕೊನೆಯವರೆಗೂ ಮುಂದುವರಿಯುತ್ತೇವೆ. ವಿಜಯದವರೆಗೆ ಮುಂದುವರಿಯುತ್ತೇವೆ. ಯಾರೂ ನಮ್ಮನ್ನು ತಡೆಯುವುದಿಲ್ಲ. ಯುದ್ಧಕ್ಕಾಗಿ ನಮ್ಮ ಎಲ್ಲಾ ಗುರಿಗಳನ್ನು ಸಾಧಿಸುವ ಶಕ್ತಿ, ಇಚ್ಛೆ ಮತ್ತು ಸಂಕಲ್ಪ ನಮ್ಮಲ್ಲಿದೆ ಮತ್ತು ಇದನ್ನು ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.

ಇಸ್ರೇಲ್‌ ಪ್ರಧಾನ ಮಂತ್ರಿಯ ಜೊತೆ ಅವರ ಚೀಫ್ ಆಫ್ ಸ್ಟಾಫ್ ಟ್ಜಾಚಿ ಬ್ರೇವರ್‌ಮನ್, ರಾಷ್ಟ್ರೀಯ ಭದ್ರತಾ ಮಂಡಳಿಯ ನಿರ್ದೇಶಕ ತ್ಜಾಚಿ ಹನೆಗ್ಬಿ, ಮಿಲಿಟರಿ ಕಾರ್ಯದರ್ಶಿ ಮೇಜರ್-ಜನರಲ್ ಅವಿ ಗಿಲ್ ಮತ್ತು ಇಸ್ರೇಲ್ ರಕ್ಷಣಾ ಪಡೆಗಳ ಉಪ ಮುಖ್ಯಸ್ಥ ಮೇಜರ್ ಜನರಲ್ ಅಮೀರ್ ಬರಮ್ ಇದ್ದರು.

ಇಸ್ರೇಲ್‌ನ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಚೀಫ್ ಆಫ್ ಸ್ಟಾಫ್ ಹರ್ಜಿ ಹಲೇವಿ ಮತ್ತು ಇತರ ಹಿರಿಯ ಇಸ್ರೇಲ್‌ ಅಧಿಕಾರಿಗಳು ಯುದ್ಧದ ಸಮಯದಲ್ಲಿ  ಗಾಝಾ ಸ್ಟ್ರಿಪ್‌ನ ಉತ್ತರ ಭಾಗಕ್ಕೆ ಭೇಟಿ ನೀಡಿದ್ದಾರೆ. ಇದು ಈ ಭೂಪ್ರದೇಶದ ಮೇಲೆ ಇಸ್ರೇಲ್‌ ದೊಡ್ಡ ಮಟ್ಟದಲ್ಲಿ ನಿಯಂತ್ರಣ ಸಾಧಿಸಿದೆ ಎನ್ನುವುದನ್ನು ಸೂಚಿಸುತ್ತದೆ.

ಕತಾರ್, ಈಜಿಪ್ಟ್ ಮತ್ತು ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ತಾತ್ಕಾಲಿಕ ನಾಲ್ಕು ದಿನಗಳ ಕದನ ವಿರಾಮದಲ್ಲಿ ಇಸ್ರೇಲ್ ಮತ್ತು ಹಮಾಸ್ ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಂಡಿವೆ. ಇಂಧನ ಸೇರಿದಂತೆ ಮಾನವೀಯ ಸಹಾಯವನ್ನು ಗಾಝಾ ಪಟ್ಟಿಗೆ ಪ್ರವೇಶಿಸಲು ಅನುವು ಮಾಡಿ ಕೊಟ್ಟಿದೆ.

ನಾಲ್ಕು ದಿನಗಳ ಕದನ ವಿರಾಮದ ವೇಳೆ 150 ಪ್ಯಾಲೇಸ್ತೀನ್‌ ಕೈದಿಗಳಿಗೆ ಬದಲಾಗಿ 50 ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ ಕದನ ವಿರಾಮದ ವೇಳೆ ಹಲವು ಬಾರಿ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಇಸ್ರೇಲ್‌ ಮತ್ತು ಹಮಾಸ್‌ ಆರೋಪಿಸಿತ್ತು. ಪಶ್ಚಿಮದಂಡೆಯಲ್ಲಿ ಇಸ್ರೇಲ್ ಕದನ ವಿರಾಮದ ವೇಳೆ ನಡೆಸಿದ ಗುಂಡಿನ ದಾಳಿಯಲ್ಲಿ ಬಾಲಕ ಸಹಿತ 6 ಮಂದಿ ಮೃತಪಟ್ಟಿದ್ದಾರೆ ಮತ್ತು ಇತರ 6 ಮಂದಿ ಗಾಯಗೊಂಡಿದ್ದಾರೆ ಎಂದು ಫೆಲೆಸ್ತೀನಿಯನ್ ಆರೋಗ್ಯ ಇಲಾಖೆ ಹೇಳಿದೆ.

ಇದನ್ನು ಓದಿ: ಮೀರತ್‌: ಶಾಲಾ ಬಾಲಕನನ್ನು ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...