Homeಮುಖಪುಟಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

ಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

- Advertisement -
- Advertisement -

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಹಿರಿಯ ಸಹೋದ್ಯೋಗಿಗಳೊಂದಿಗೆ ಹಮಾಸ್ ಆಳ್ವಿಕೆಯಲ್ಲಿರುವ ಗಾಝಾದ ಕರಾವಳಿ ಪಟ್ಟಿಗೆ ತೆರಳಿ ಇಸ್ರೇಲ್‌ ಸೈನಿಕರನ್ನು ಭೇಟಿ ಮಾಡಿದ್ದಾರೆ. ಹಮಾಸ್‌ ಆಳ್ವಿಕೆಯ ಭೂ ಪ್ರದೇಶಕ್ಕೆ ನೆತನ್ಯಾಹು ಭೇಟಿ ಇಸ್ರೇಲ್‌ ಆ ಭೂಪ್ರದೇಶದ ಮೇಲೆ ಹಿಡಿತವನ್ನು ಸಾಧಿಸಿದೆ ಎನ್ನವುದನ್ನು ಸೂಚಿಸುತ್ತದೆ.

ನೆತನ್ಯಾಹು ಅವರು ಕಮಾಂಡರ್‌ಗಳು ಮತ್ತು ಸೈನಿಕರಿಂದ ಭದ್ರತೆಯ ಕುರಿತು ಮಾಹಿತಿಯನ್ನು ಪಡೆದಿದ್ದಾರೆ. ಯುದ್ಧದ ಗುರಿ ತಲುಪುವವರೆಗೂ ಸೈನಿಕರಿಗೆ ಮುಂದುವರಿಯಲು ಸೂಚಿಸಿದ್ದಾರೆ.

ನಾವು ನಮ್ಮ ವೀರ ಸೈನಿಕರೊಂದಿಗೆ ಗಾಝಾ ಪಟ್ಟಿಯಲ್ಲಿದ್ದೇವೆ. ನಮ್ಮ ಒತ್ತೆಯಾಳುಗಳನ್ನು ಹಿಂದಿರುಗಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು ನಾವು ಅವರೆಲ್ಲರನ್ನೂ ಕರೆತಂದೇ ತೀರುತ್ತೇವೆ. ಈ ಯುದ್ಧದಲ್ಲಿ ನಮಗೆ 3 ಗುರಿಗಳಿವೆ. ಒಂದು ಹಮಾಸ್‌ನ್ನು ನಿರ್ನಾಮ ಮಾಡುವುದು. ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಕರೆತರುವುದು ಮತ್ತು ಮುಂದೆಂದೂ ಗಾಝಾ ಇಸ್ರೇಲ್ ರಾಜ್ಯಕ್ಕೆ ಬೆದರಿಕೆಯಾಗುವುದಿಲ್ಲ  ಎಂದು ಖಚಿತಪಡಿಸಿಕೊಳ್ಳುವುದಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ನಾನು ಈ ವಿಚಾರವನ್ನು ಸೈನಿಕರಿಗೆ ಹೇಳಲು ಇಲ್ಲಿ ಬಂದಿದ್ದೇನೆ. ಎಲ್ಲರೂ ನನಗೆ ಈ ವಿಷಯವನ್ನೇ ಹೇಳುತ್ತಾರೆ. ನಾನು ನಿಮಗೆ ಇದನ್ನು ಮತ್ತೆ ಪುನರಾವರ್ತಿಸುತ್ತೇನೆ. ಇಸ್ರೇಲ್ ನಾಗರಿಕರೆ ನಾವು ಕೊನೆಯವರೆಗೂ ಮುಂದುವರಿಯುತ್ತೇವೆ. ವಿಜಯದವರೆಗೆ ಮುಂದುವರಿಯುತ್ತೇವೆ. ಯಾರೂ ನಮ್ಮನ್ನು ತಡೆಯುವುದಿಲ್ಲ. ಯುದ್ಧಕ್ಕಾಗಿ ನಮ್ಮ ಎಲ್ಲಾ ಗುರಿಗಳನ್ನು ಸಾಧಿಸುವ ಶಕ್ತಿ, ಇಚ್ಛೆ ಮತ್ತು ಸಂಕಲ್ಪ ನಮ್ಮಲ್ಲಿದೆ ಮತ್ತು ಇದನ್ನು ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.

ಇಸ್ರೇಲ್‌ ಪ್ರಧಾನ ಮಂತ್ರಿಯ ಜೊತೆ ಅವರ ಚೀಫ್ ಆಫ್ ಸ್ಟಾಫ್ ಟ್ಜಾಚಿ ಬ್ರೇವರ್‌ಮನ್, ರಾಷ್ಟ್ರೀಯ ಭದ್ರತಾ ಮಂಡಳಿಯ ನಿರ್ದೇಶಕ ತ್ಜಾಚಿ ಹನೆಗ್ಬಿ, ಮಿಲಿಟರಿ ಕಾರ್ಯದರ್ಶಿ ಮೇಜರ್-ಜನರಲ್ ಅವಿ ಗಿಲ್ ಮತ್ತು ಇಸ್ರೇಲ್ ರಕ್ಷಣಾ ಪಡೆಗಳ ಉಪ ಮುಖ್ಯಸ್ಥ ಮೇಜರ್ ಜನರಲ್ ಅಮೀರ್ ಬರಮ್ ಇದ್ದರು.

ಇಸ್ರೇಲ್‌ನ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಚೀಫ್ ಆಫ್ ಸ್ಟಾಫ್ ಹರ್ಜಿ ಹಲೇವಿ ಮತ್ತು ಇತರ ಹಿರಿಯ ಇಸ್ರೇಲ್‌ ಅಧಿಕಾರಿಗಳು ಯುದ್ಧದ ಸಮಯದಲ್ಲಿ  ಗಾಝಾ ಸ್ಟ್ರಿಪ್‌ನ ಉತ್ತರ ಭಾಗಕ್ಕೆ ಭೇಟಿ ನೀಡಿದ್ದಾರೆ. ಇದು ಈ ಭೂಪ್ರದೇಶದ ಮೇಲೆ ಇಸ್ರೇಲ್‌ ದೊಡ್ಡ ಮಟ್ಟದಲ್ಲಿ ನಿಯಂತ್ರಣ ಸಾಧಿಸಿದೆ ಎನ್ನುವುದನ್ನು ಸೂಚಿಸುತ್ತದೆ.

ಕತಾರ್, ಈಜಿಪ್ಟ್ ಮತ್ತು ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ತಾತ್ಕಾಲಿಕ ನಾಲ್ಕು ದಿನಗಳ ಕದನ ವಿರಾಮದಲ್ಲಿ ಇಸ್ರೇಲ್ ಮತ್ತು ಹಮಾಸ್ ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಂಡಿವೆ. ಇಂಧನ ಸೇರಿದಂತೆ ಮಾನವೀಯ ಸಹಾಯವನ್ನು ಗಾಝಾ ಪಟ್ಟಿಗೆ ಪ್ರವೇಶಿಸಲು ಅನುವು ಮಾಡಿ ಕೊಟ್ಟಿದೆ.

ನಾಲ್ಕು ದಿನಗಳ ಕದನ ವಿರಾಮದ ವೇಳೆ 150 ಪ್ಯಾಲೇಸ್ತೀನ್‌ ಕೈದಿಗಳಿಗೆ ಬದಲಾಗಿ 50 ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ ಕದನ ವಿರಾಮದ ವೇಳೆ ಹಲವು ಬಾರಿ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಇಸ್ರೇಲ್‌ ಮತ್ತು ಹಮಾಸ್‌ ಆರೋಪಿಸಿತ್ತು. ಪಶ್ಚಿಮದಂಡೆಯಲ್ಲಿ ಇಸ್ರೇಲ್ ಕದನ ವಿರಾಮದ ವೇಳೆ ನಡೆಸಿದ ಗುಂಡಿನ ದಾಳಿಯಲ್ಲಿ ಬಾಲಕ ಸಹಿತ 6 ಮಂದಿ ಮೃತಪಟ್ಟಿದ್ದಾರೆ ಮತ್ತು ಇತರ 6 ಮಂದಿ ಗಾಯಗೊಂಡಿದ್ದಾರೆ ಎಂದು ಫೆಲೆಸ್ತೀನಿಯನ್ ಆರೋಗ್ಯ ಇಲಾಖೆ ಹೇಳಿದೆ.

ಇದನ್ನು ಓದಿ: ಮೀರತ್‌: ಶಾಲಾ ಬಾಲಕನನ್ನು ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...