Homeಮುಖಪುಟಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

ಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

- Advertisement -
- Advertisement -

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಹಿರಿಯ ಸಹೋದ್ಯೋಗಿಗಳೊಂದಿಗೆ ಹಮಾಸ್ ಆಳ್ವಿಕೆಯಲ್ಲಿರುವ ಗಾಝಾದ ಕರಾವಳಿ ಪಟ್ಟಿಗೆ ತೆರಳಿ ಇಸ್ರೇಲ್‌ ಸೈನಿಕರನ್ನು ಭೇಟಿ ಮಾಡಿದ್ದಾರೆ. ಹಮಾಸ್‌ ಆಳ್ವಿಕೆಯ ಭೂ ಪ್ರದೇಶಕ್ಕೆ ನೆತನ್ಯಾಹು ಭೇಟಿ ಇಸ್ರೇಲ್‌ ಆ ಭೂಪ್ರದೇಶದ ಮೇಲೆ ಹಿಡಿತವನ್ನು ಸಾಧಿಸಿದೆ ಎನ್ನವುದನ್ನು ಸೂಚಿಸುತ್ತದೆ.

ನೆತನ್ಯಾಹು ಅವರು ಕಮಾಂಡರ್‌ಗಳು ಮತ್ತು ಸೈನಿಕರಿಂದ ಭದ್ರತೆಯ ಕುರಿತು ಮಾಹಿತಿಯನ್ನು ಪಡೆದಿದ್ದಾರೆ. ಯುದ್ಧದ ಗುರಿ ತಲುಪುವವರೆಗೂ ಸೈನಿಕರಿಗೆ ಮುಂದುವರಿಯಲು ಸೂಚಿಸಿದ್ದಾರೆ.

ನಾವು ನಮ್ಮ ವೀರ ಸೈನಿಕರೊಂದಿಗೆ ಗಾಝಾ ಪಟ್ಟಿಯಲ್ಲಿದ್ದೇವೆ. ನಮ್ಮ ಒತ್ತೆಯಾಳುಗಳನ್ನು ಹಿಂದಿರುಗಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು ನಾವು ಅವರೆಲ್ಲರನ್ನೂ ಕರೆತಂದೇ ತೀರುತ್ತೇವೆ. ಈ ಯುದ್ಧದಲ್ಲಿ ನಮಗೆ 3 ಗುರಿಗಳಿವೆ. ಒಂದು ಹಮಾಸ್‌ನ್ನು ನಿರ್ನಾಮ ಮಾಡುವುದು. ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಕರೆತರುವುದು ಮತ್ತು ಮುಂದೆಂದೂ ಗಾಝಾ ಇಸ್ರೇಲ್ ರಾಜ್ಯಕ್ಕೆ ಬೆದರಿಕೆಯಾಗುವುದಿಲ್ಲ  ಎಂದು ಖಚಿತಪಡಿಸಿಕೊಳ್ಳುವುದಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ನಾನು ಈ ವಿಚಾರವನ್ನು ಸೈನಿಕರಿಗೆ ಹೇಳಲು ಇಲ್ಲಿ ಬಂದಿದ್ದೇನೆ. ಎಲ್ಲರೂ ನನಗೆ ಈ ವಿಷಯವನ್ನೇ ಹೇಳುತ್ತಾರೆ. ನಾನು ನಿಮಗೆ ಇದನ್ನು ಮತ್ತೆ ಪುನರಾವರ್ತಿಸುತ್ತೇನೆ. ಇಸ್ರೇಲ್ ನಾಗರಿಕರೆ ನಾವು ಕೊನೆಯವರೆಗೂ ಮುಂದುವರಿಯುತ್ತೇವೆ. ವಿಜಯದವರೆಗೆ ಮುಂದುವರಿಯುತ್ತೇವೆ. ಯಾರೂ ನಮ್ಮನ್ನು ತಡೆಯುವುದಿಲ್ಲ. ಯುದ್ಧಕ್ಕಾಗಿ ನಮ್ಮ ಎಲ್ಲಾ ಗುರಿಗಳನ್ನು ಸಾಧಿಸುವ ಶಕ್ತಿ, ಇಚ್ಛೆ ಮತ್ತು ಸಂಕಲ್ಪ ನಮ್ಮಲ್ಲಿದೆ ಮತ್ತು ಇದನ್ನು ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.

ಇಸ್ರೇಲ್‌ ಪ್ರಧಾನ ಮಂತ್ರಿಯ ಜೊತೆ ಅವರ ಚೀಫ್ ಆಫ್ ಸ್ಟಾಫ್ ಟ್ಜಾಚಿ ಬ್ರೇವರ್‌ಮನ್, ರಾಷ್ಟ್ರೀಯ ಭದ್ರತಾ ಮಂಡಳಿಯ ನಿರ್ದೇಶಕ ತ್ಜಾಚಿ ಹನೆಗ್ಬಿ, ಮಿಲಿಟರಿ ಕಾರ್ಯದರ್ಶಿ ಮೇಜರ್-ಜನರಲ್ ಅವಿ ಗಿಲ್ ಮತ್ತು ಇಸ್ರೇಲ್ ರಕ್ಷಣಾ ಪಡೆಗಳ ಉಪ ಮುಖ್ಯಸ್ಥ ಮೇಜರ್ ಜನರಲ್ ಅಮೀರ್ ಬರಮ್ ಇದ್ದರು.

ಇಸ್ರೇಲ್‌ನ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಚೀಫ್ ಆಫ್ ಸ್ಟಾಫ್ ಹರ್ಜಿ ಹಲೇವಿ ಮತ್ತು ಇತರ ಹಿರಿಯ ಇಸ್ರೇಲ್‌ ಅಧಿಕಾರಿಗಳು ಯುದ್ಧದ ಸಮಯದಲ್ಲಿ  ಗಾಝಾ ಸ್ಟ್ರಿಪ್‌ನ ಉತ್ತರ ಭಾಗಕ್ಕೆ ಭೇಟಿ ನೀಡಿದ್ದಾರೆ. ಇದು ಈ ಭೂಪ್ರದೇಶದ ಮೇಲೆ ಇಸ್ರೇಲ್‌ ದೊಡ್ಡ ಮಟ್ಟದಲ್ಲಿ ನಿಯಂತ್ರಣ ಸಾಧಿಸಿದೆ ಎನ್ನುವುದನ್ನು ಸೂಚಿಸುತ್ತದೆ.

ಕತಾರ್, ಈಜಿಪ್ಟ್ ಮತ್ತು ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ತಾತ್ಕಾಲಿಕ ನಾಲ್ಕು ದಿನಗಳ ಕದನ ವಿರಾಮದಲ್ಲಿ ಇಸ್ರೇಲ್ ಮತ್ತು ಹಮಾಸ್ ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಂಡಿವೆ. ಇಂಧನ ಸೇರಿದಂತೆ ಮಾನವೀಯ ಸಹಾಯವನ್ನು ಗಾಝಾ ಪಟ್ಟಿಗೆ ಪ್ರವೇಶಿಸಲು ಅನುವು ಮಾಡಿ ಕೊಟ್ಟಿದೆ.

ನಾಲ್ಕು ದಿನಗಳ ಕದನ ವಿರಾಮದ ವೇಳೆ 150 ಪ್ಯಾಲೇಸ್ತೀನ್‌ ಕೈದಿಗಳಿಗೆ ಬದಲಾಗಿ 50 ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ ಕದನ ವಿರಾಮದ ವೇಳೆ ಹಲವು ಬಾರಿ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಇಸ್ರೇಲ್‌ ಮತ್ತು ಹಮಾಸ್‌ ಆರೋಪಿಸಿತ್ತು. ಪಶ್ಚಿಮದಂಡೆಯಲ್ಲಿ ಇಸ್ರೇಲ್ ಕದನ ವಿರಾಮದ ವೇಳೆ ನಡೆಸಿದ ಗುಂಡಿನ ದಾಳಿಯಲ್ಲಿ ಬಾಲಕ ಸಹಿತ 6 ಮಂದಿ ಮೃತಪಟ್ಟಿದ್ದಾರೆ ಮತ್ತು ಇತರ 6 ಮಂದಿ ಗಾಯಗೊಂಡಿದ್ದಾರೆ ಎಂದು ಫೆಲೆಸ್ತೀನಿಯನ್ ಆರೋಗ್ಯ ಇಲಾಖೆ ಹೇಳಿದೆ.

ಇದನ್ನು ಓದಿ: ಮೀರತ್‌: ಶಾಲಾ ಬಾಲಕನನ್ನು ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...