Homeಮುಖಪುಟಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

ಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

- Advertisement -
- Advertisement -

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಹಿರಿಯ ಸಹೋದ್ಯೋಗಿಗಳೊಂದಿಗೆ ಹಮಾಸ್ ಆಳ್ವಿಕೆಯಲ್ಲಿರುವ ಗಾಝಾದ ಕರಾವಳಿ ಪಟ್ಟಿಗೆ ತೆರಳಿ ಇಸ್ರೇಲ್‌ ಸೈನಿಕರನ್ನು ಭೇಟಿ ಮಾಡಿದ್ದಾರೆ. ಹಮಾಸ್‌ ಆಳ್ವಿಕೆಯ ಭೂ ಪ್ರದೇಶಕ್ಕೆ ನೆತನ್ಯಾಹು ಭೇಟಿ ಇಸ್ರೇಲ್‌ ಆ ಭೂಪ್ರದೇಶದ ಮೇಲೆ ಹಿಡಿತವನ್ನು ಸಾಧಿಸಿದೆ ಎನ್ನವುದನ್ನು ಸೂಚಿಸುತ್ತದೆ.

ನೆತನ್ಯಾಹು ಅವರು ಕಮಾಂಡರ್‌ಗಳು ಮತ್ತು ಸೈನಿಕರಿಂದ ಭದ್ರತೆಯ ಕುರಿತು ಮಾಹಿತಿಯನ್ನು ಪಡೆದಿದ್ದಾರೆ. ಯುದ್ಧದ ಗುರಿ ತಲುಪುವವರೆಗೂ ಸೈನಿಕರಿಗೆ ಮುಂದುವರಿಯಲು ಸೂಚಿಸಿದ್ದಾರೆ.

ನಾವು ನಮ್ಮ ವೀರ ಸೈನಿಕರೊಂದಿಗೆ ಗಾಝಾ ಪಟ್ಟಿಯಲ್ಲಿದ್ದೇವೆ. ನಮ್ಮ ಒತ್ತೆಯಾಳುಗಳನ್ನು ಹಿಂದಿರುಗಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು ನಾವು ಅವರೆಲ್ಲರನ್ನೂ ಕರೆತಂದೇ ತೀರುತ್ತೇವೆ. ಈ ಯುದ್ಧದಲ್ಲಿ ನಮಗೆ 3 ಗುರಿಗಳಿವೆ. ಒಂದು ಹಮಾಸ್‌ನ್ನು ನಿರ್ನಾಮ ಮಾಡುವುದು. ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಕರೆತರುವುದು ಮತ್ತು ಮುಂದೆಂದೂ ಗಾಝಾ ಇಸ್ರೇಲ್ ರಾಜ್ಯಕ್ಕೆ ಬೆದರಿಕೆಯಾಗುವುದಿಲ್ಲ  ಎಂದು ಖಚಿತಪಡಿಸಿಕೊಳ್ಳುವುದಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ನಾನು ಈ ವಿಚಾರವನ್ನು ಸೈನಿಕರಿಗೆ ಹೇಳಲು ಇಲ್ಲಿ ಬಂದಿದ್ದೇನೆ. ಎಲ್ಲರೂ ನನಗೆ ಈ ವಿಷಯವನ್ನೇ ಹೇಳುತ್ತಾರೆ. ನಾನು ನಿಮಗೆ ಇದನ್ನು ಮತ್ತೆ ಪುನರಾವರ್ತಿಸುತ್ತೇನೆ. ಇಸ್ರೇಲ್ ನಾಗರಿಕರೆ ನಾವು ಕೊನೆಯವರೆಗೂ ಮುಂದುವರಿಯುತ್ತೇವೆ. ವಿಜಯದವರೆಗೆ ಮುಂದುವರಿಯುತ್ತೇವೆ. ಯಾರೂ ನಮ್ಮನ್ನು ತಡೆಯುವುದಿಲ್ಲ. ಯುದ್ಧಕ್ಕಾಗಿ ನಮ್ಮ ಎಲ್ಲಾ ಗುರಿಗಳನ್ನು ಸಾಧಿಸುವ ಶಕ್ತಿ, ಇಚ್ಛೆ ಮತ್ತು ಸಂಕಲ್ಪ ನಮ್ಮಲ್ಲಿದೆ ಮತ್ತು ಇದನ್ನು ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.

ಇಸ್ರೇಲ್‌ ಪ್ರಧಾನ ಮಂತ್ರಿಯ ಜೊತೆ ಅವರ ಚೀಫ್ ಆಫ್ ಸ್ಟಾಫ್ ಟ್ಜಾಚಿ ಬ್ರೇವರ್‌ಮನ್, ರಾಷ್ಟ್ರೀಯ ಭದ್ರತಾ ಮಂಡಳಿಯ ನಿರ್ದೇಶಕ ತ್ಜಾಚಿ ಹನೆಗ್ಬಿ, ಮಿಲಿಟರಿ ಕಾರ್ಯದರ್ಶಿ ಮೇಜರ್-ಜನರಲ್ ಅವಿ ಗಿಲ್ ಮತ್ತು ಇಸ್ರೇಲ್ ರಕ್ಷಣಾ ಪಡೆಗಳ ಉಪ ಮುಖ್ಯಸ್ಥ ಮೇಜರ್ ಜನರಲ್ ಅಮೀರ್ ಬರಮ್ ಇದ್ದರು.

ಇಸ್ರೇಲ್‌ನ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಚೀಫ್ ಆಫ್ ಸ್ಟಾಫ್ ಹರ್ಜಿ ಹಲೇವಿ ಮತ್ತು ಇತರ ಹಿರಿಯ ಇಸ್ರೇಲ್‌ ಅಧಿಕಾರಿಗಳು ಯುದ್ಧದ ಸಮಯದಲ್ಲಿ  ಗಾಝಾ ಸ್ಟ್ರಿಪ್‌ನ ಉತ್ತರ ಭಾಗಕ್ಕೆ ಭೇಟಿ ನೀಡಿದ್ದಾರೆ. ಇದು ಈ ಭೂಪ್ರದೇಶದ ಮೇಲೆ ಇಸ್ರೇಲ್‌ ದೊಡ್ಡ ಮಟ್ಟದಲ್ಲಿ ನಿಯಂತ್ರಣ ಸಾಧಿಸಿದೆ ಎನ್ನುವುದನ್ನು ಸೂಚಿಸುತ್ತದೆ.

ಕತಾರ್, ಈಜಿಪ್ಟ್ ಮತ್ತು ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ತಾತ್ಕಾಲಿಕ ನಾಲ್ಕು ದಿನಗಳ ಕದನ ವಿರಾಮದಲ್ಲಿ ಇಸ್ರೇಲ್ ಮತ್ತು ಹಮಾಸ್ ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಂಡಿವೆ. ಇಂಧನ ಸೇರಿದಂತೆ ಮಾನವೀಯ ಸಹಾಯವನ್ನು ಗಾಝಾ ಪಟ್ಟಿಗೆ ಪ್ರವೇಶಿಸಲು ಅನುವು ಮಾಡಿ ಕೊಟ್ಟಿದೆ.

ನಾಲ್ಕು ದಿನಗಳ ಕದನ ವಿರಾಮದ ವೇಳೆ 150 ಪ್ಯಾಲೇಸ್ತೀನ್‌ ಕೈದಿಗಳಿಗೆ ಬದಲಾಗಿ 50 ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ ಕದನ ವಿರಾಮದ ವೇಳೆ ಹಲವು ಬಾರಿ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಇಸ್ರೇಲ್‌ ಮತ್ತು ಹಮಾಸ್‌ ಆರೋಪಿಸಿತ್ತು. ಪಶ್ಚಿಮದಂಡೆಯಲ್ಲಿ ಇಸ್ರೇಲ್ ಕದನ ವಿರಾಮದ ವೇಳೆ ನಡೆಸಿದ ಗುಂಡಿನ ದಾಳಿಯಲ್ಲಿ ಬಾಲಕ ಸಹಿತ 6 ಮಂದಿ ಮೃತಪಟ್ಟಿದ್ದಾರೆ ಮತ್ತು ಇತರ 6 ಮಂದಿ ಗಾಯಗೊಂಡಿದ್ದಾರೆ ಎಂದು ಫೆಲೆಸ್ತೀನಿಯನ್ ಆರೋಗ್ಯ ಇಲಾಖೆ ಹೇಳಿದೆ.

ಇದನ್ನು ಓದಿ: ಮೀರತ್‌: ಶಾಲಾ ಬಾಲಕನನ್ನು ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...